Homeಮುಖಪುಟತಮಿಳುನಾಡು: ಕೃಷ್ಣಗಿರಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ!

ತಮಿಳುನಾಡು: ಕೃಷ್ಣಗಿರಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ!

ಗ್ರಾಮದ ದಲಿತ ಜನರಿಗೆ ದಿನಸಿ, ಹಾಲು ಮತ್ತು ನೀರು ನೀಡುವ ಜನರಿಂದ 5,000 ರೂ.ಗಳ ದಂಡವನ್ನು ವಸೂಲಿ ಮಾಡಬೇಕೆಂದು ಗ್ರಾಮದ ಜಾತಿ ಪಂಚಾಯತ್ ಆದೇಶಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

- Advertisement -
- Advertisement -

ದೌರ್ಜನ್ಯ ತಡೆ (ಎಸ್‌ಸಿ /ಎಸ್‌ಟಿ)  ಕಾಯ್ದೆಯಡಿ ಜಾತಿ ಹಿಂದೂಗಳ( ಅತಿ ಹಿಂದುಳಿದ ಸಮುದಾಯ) ವಿರುದ್ಧ ದಾಖಲಾದ ಪ್ರಕರಣವನ್ನು ಹಿಂತೆಗೆದುಕೊಳ್ಳದ ಕಾರಣ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉಲಗಂ ಹಳ್ಳಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಲಾಗಿದೆ.

ದಲಿತ ಕಾಲೋನಿಗೆ ಬರುತ್ತಿದ್ದ ಹಾಲು, ನೀರು ನಿಲ್ಲಿಸಲಾಗಿದೆ. ದಿನಸಿ ಅಂಗಡಿಯವರು ದಿನಸಿ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಅಲ್ಲಿನ ದಲಿತರು ಆರೋಪಿಸಿದ್ದಾರೆ.

“ಏನಾಗುತ್ತಿದೆ ಎಂಬುದೇ ನಮಗೆ ತಿಳಿಯುತ್ತಿಲ್ಲ. ಅಂಗಡಿಯವರು ಇದ್ದಕ್ಕಿದ್ದಂತೆ ನಮಗೆ ದಿನಸಿ ನೀಡಲು ನಿರಾಕರಿಸಿದ್ದಾರೆ. ಅಕ್ಟೋಬರ್ 2 ರಿಂದ ನಮ್ಮ ಮನೆಗಳಿಗೆ ಹಾಲು ನೀಡುತ್ತಿದ್ದವರು ಬಂದಿಲ್ಲ.  ಹಳ್ಳಿಯ ಕೊಳಾಯಿಗಳಿಂದ ನಮಗೆ ನೀರು ಬಂದಿಲ್ಲ’ ಎಂದು ಹೊಸೂರಿನ ಉಲಗಂ ಗ್ರಾಮದ ದಲಿತ ಕಾಲೋನಿ ಮಹಿಳೆ ಆತಂಕ ವ್ಯಕ್ತಪಡಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಉಲಗಂ ಹಳ್ಳಿಯ 22 ವರ್ಷದ ದಲಿತ ಯುವಕ ಸೂರ್ಯಕುಮಾರ್, ಅತಿ ಹಿಂದುಳಿದ ಸಮುದಾಯಕ್ಕೆ (MBC) ಸೇರಿದ ಕುರುಂಬಾರ್ ಜಾತಿಗೆ ಸೇರಿದ ಹೊಸೂರಿನ ಮಣಿಯಂಗಲ್ ಗ್ರಾಮದ 17 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಓಡಿಹೋಗಿದ್ದರು.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಘಟನೆ ನಡೆದ ಕೂಡಲೇ ಬಾಲಕಿಯ ಪೋಷಕರು ಅಪಹರಣದ ಆರೋಪ ಮತ್ತು ಪೊಕ್ಸೊ ಕಾಯ್ದೆಯಡಿ ಸೂರ್ಯ ಕುಮಾರ್ ವಿರುದ್ಧ ಪೊಲೀಸ್ ದೂರು ದಾಖಲಿಸಿದರೆ, ಇತ್ತ ಸೂರ್ಯಕುಮಾರ್ ಅವರ ಕುಟುಂಬ ವಾಸಿಸುವ ಉಲಗಂ ಗ್ರಾಮದಲ್ಲಿ ಕುರುಂಬಾರ್ ಸಮುದಾಯದ ಜನ ದಲಿತ ಕಾಲೋನಿ ಮತ್ತು ಅಲ್ಲಿನ ಜನರ ಮೇಲೆ ಹಲ್ಲೆ ನಡೆಸಿದ್ದರು. ಗ್ರಾಮದ ದಲಿತ ಜನರ ದೂರಿನ ಆಧಾರದ ಮೇಲೆ ಪೊಲೀಸರು 30 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆರು ತಿಂಗಳ ನಂತರ ಕುರುಂಬಾರ್‌ ಸಮುದಾಯದ ಹುಡುಗಿಗೆ 18 ವರ್ಷ ಆದಾಗ, ಎರಡೂ ಕುಟುಂಬಗಳು ಸೇರಿ ಸೂರ್ಯಕುಮಾರ್ ಅವರೊಂದಿಗೆ ಆಕೆಯ ಮದುವೆ ಮಾಡಿದ್ದಾರೆ. ನಂತರ ಹುಡುಗಿಯ ಕುಟುಂಬ ಸೂರ್ಯಕುಮಾರ್ ವಿರುದ್ಧ ಸಲ್ಲಿಸಿದ್ದ ಪ್ರಕರಣವನ್ನು ಹಿಂತೆಗೆದುಕೊಂಡರು. ಆದರೆ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿದ್ದವರರ ಮೇಲೆ ದಲಿತರು  ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದಾಖಲಿಸಿದ್ದ ದೂರನ್ನು ವಾಪಾಸ್ ಪಡೆದಿರಲ್ಲ. ಈ ಪ್ರಕರಣ ಅಕ್ಟೋಬರ್ 1 ರಂದು ವಿಚಾರಣೆಗೆ ಬಂದಿತ್ತು.

“ಅವರು ಪ್ರಕರಣವನ್ನು ಹಿಂಪಡೆಯಲು ನಮಗೆ ಅನೇಕ ಬಾರಿ ಹೇಳಿದರು. ಅವರ್‍ಯಾರು ಹುಡುಗಿಯ ಸಂಬಂಧಿಗಳಲ್ಲ ಅಥವಾ ಅವರು ಹುಡುಗಿಯ ಹಳ್ಳಿಗೆ ಸೇರಿದವರಲ್ಲದ ಕಾರಣ ನಾವು ಪ್ರಕರಣವನ್ನು ಹಿಂತೆಗೆದುಕೊಳ್ಳಲು ಇಷ್ಟಪಡಲಿಲ್ಲ” ಎಂದು ಉಲಗಂ ಗ್ರಾಮಸ್ಥ ಟಿ.ಸೇತು ಹೇಳುತ್ತಾರೆ.

ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ಅಕ್ಟೋಬರ್‌ 1ರಂದು ವಿಚಾರಣೆ ಎದುರಿಸಿ ಗ್ರಾಮಕ್ಕೆ ಹಿಂತಿರುಗಿದಾಗ, ಡಂಗೂರ ಬಾರಿಸುವ ಮೂಲಕ ನಮ್ಮನ್ನು ಬಹಿಷ್ಕರಿಸಲಾಗಿದೆ.  ಗ್ರಾಮದ ದಲಿತ ಜನರಿಗೆ ದಿನಸಿ, ಹಾಲು ಮತ್ತು ನೀರು ನೀಡುವ ಜನರಿಂದ 5,000 ರೂ.ಗಳ ದಂಡವನ್ನು ವಸೂಲಿ ಮಾಡಬೇಕೆಂದು ಗ್ರಾಮ ಜಾತಿ ಪಂಚಾಯತ್ ಆದೇಶಿಸಿದೆ ಎಂದು ಸೇತು ತಿಳಿಸಿದ್ದಾರೆ.

ಗ್ರಾಮದಲ್ಲಿ ನಮ್ಮ ಸಮುದಾಯದವರು 29 ಕುಟುಂಬಗಳಿವೆ. ಕುರುಂಬಾರ್‌ ಸಮುದಾಯದ 300 ಕುಟುಂಬಗಳಿವೆ. ಹಾಗಾಗಿ ಅವರು ನಮಗೆ ಕಿರುಕುಳ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ ಈಗ ಬಹಿಷ್ಕಾರ ಹಾಕಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಕಂದಾಯ ಅಧಿಕಾರಿ ಗುಣಶೇಖರನ್ ಘಟನೆಯ ಬಗ್ಗೆ ತಿಳಿದಿಲ್ಲ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.


ಇದನ್ನೂ ಓದಿ: ’ಜಾತ್ಯಾತೀತರು’ ಎಂದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣಪತ್ರ ನಿರಾಕರಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...