Homeಮುಖಪುಟಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಬಿಜೆಪಿ ಕಾರ್ಯಕರ್ತರು ಮತ್ತು ಅವರ ಬಾಡಿಗೆ ಗೂಂಡಾಗಳು ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟವುಂಟು ಮಾಡುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.

- Advertisement -
- Advertisement -

ಪಶ್ಚಿಮ ಬಂಗಾಳ ಸಚಿವಾಲಯ ‘ನಬನ್ನಾ’ದ ಹೊರಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ವಿಭಾಗವು ಆಯೋಜಿಸಿದ್ದ ಪ್ರತಿಭಟನಾ ರ್‍ಯಾಲಿ ಹಿಂಸಾತ್ಮಕ ರೂಪ ಪಡೆದಿದೆ. ನೂರಾರು ಬಿಜೆಪಿ ಕಾರ್ಯಕರ್ತರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದಾಗ, ಕಲ್ಲು ತೂರಾಟ ನಡೆಸಿದಾಗ ಗುಂಪು ಚದುರಿಸಲು ಪೊಲೀಸರು ಲಾಠೀ ಚಾರ್ಜ್‌ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಅಡಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಬಿಜೆಪಿ ‘ನಬನ್ನಾ ಚಲೋ’ ರ್‍ಯಾಲಿ ಆಯೋಜಿಸಿತ್ತು.

ಕೊರೊನಾ ಸಾಂಕ್ರಾಮಿಕ ಹೆಚ್ಚಾಗುತ್ತಿದ್ದು, ಜನರು ಗುಂಪು ಸೇರುವಂತಿಲ್ಲ ಎಂದು ಸೂಚಿಸಿದ್ದ ರಾಜ್ಯ ಸರ್ಕಾರ ಬಿಜೆಪಿ ಆಯೋಜಿಸಿದ್ದ ‘ನಬನ್ನಾ ಚಲೋ’ ಪ್ರತಿಭಟನೆಗೆ ಅನುಮತಿ ನಿರಾಕರಿಸಿತ್ತು. ಬಿಜೆಪಿ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲೆಂದು ಕೊಲ್ಕತ್ತಾಗೆ ಬಂದಿದ್ದರು.

ಇದನ್ನೂ ಓದಿ: ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

“ನಾವು ಶಾಂತಿಯುವಾಗಿ ಪ್ರತಿಭಟಿಸುತ್ತಿದ್ದೇವೆ, ಆದರೆ ಮಮತಾ ಜಿ ನಮ್ಮ ಶಾಂತಿಯುತ ಪ್ರದರ್ಶನವನ್ನು ಹಿಂಸಾತ್ಮಕ ಪ್ರತಿಭಟನೆಯನ್ನಾಗಿ ಮಾಡಲು ಪ್ರಯತ್ನಿಸಿದ್ದಾರೆ. ಗೂಂಡಾಗಳು, ಪೊಲೀಸರೊಂದಿಗೆ ನಮ್ಮ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ” ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.

‘ಪೊಲೀಸರು ಬಿಜೆಪಿ ಕಾರ್ಯಕರ್ತರನ್ನೇ ಗುರಿಯಾಗಿಸಿಕೊಂಡು ಲಾಠೀ ಚಾರ್ಜ್ ಮಾಡುತ್ತಿದ್ದಾರೆ. ಕಲ್ಲುತೂರಾಟದಲ್ಲಿ ನಮ್ಮ ಕಾರ್ಯಕರ್ತರು ಪಾಲ್ಗೊಂಡಿಲ್ಲ. ಖಿದಿರ್ಪುರ ಕಡೆಯಿಂದ ಕಲ್ಲು ತೂರಾಟ ನಡೆಸಲಾಗುತ್ತಿದೆ. ಪೊಲೀಸರು ಅದನ್ನು ಯಾಕೆ ನೋಡುತ್ತಿಲ್ಲ’ ಎಂದು ಬಿಜೆಪಿ ನಾಯಕ ಲೋಕೆತ್ ಚಟರ್ಜಿ ಆಕ್ರೋಶ ವ್ಯಕ್ತಪಡಿಸಿದರು.

ಘಟನೆಯನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾದ ಮುಖ್ಯಸ್ಥ, ’ ಟಿಸಿಎಂ ಗೂಂಡಾಗಳು ನಮ್ಮ ಮೇಲೆ ಕಂಟ್ರಿ ಬಾಂಬ್‌ಗಳನ್ನು ಎಸೆದಿದ್ದಾರೆ. ಫ್ಯಾಸಿಸಂ ಅಂದರೆ ಇದೆ’ ಎಂದು ಟ್ವೀಟ್ ಮಾಡಿದ್ದಾರೆ.

ರ್‍ಯಾಲಿಯಲ್ಲಿ ಬಿಜೆಪಿ ವರ್ತನೆ ಬಗ್ಗೆ ಕಿಡಿಕಾರಿರುವ ಟಿಎಂಸಿ ಮುಖಂಡ ಬರ್ತ್ಯಾ ಬಸು ’ನಿಮ್ಮ ಗೂಂಡಾಗಿರಿಯಿಂದಾಗಿ ಪ್ರತಿ ಬಾರಿ ಎಷ್ಟು ಸಾರ್ವಜನಿಕ ಆಸ್ತಿ ನಾಶವಾಗುತ್ತದೆ ಎಂಬುದರ ಬಗ್ಗೆ ಕಾಳಜಿ ವಹಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿಗೆ ಟ್ಯಾಗ್ ಮಾಡಿ ’ನಿಮ್ಮ ಬಾಡಿಗೆ ಗೂಂಡಾಗಳು ಮತ್ತು ಹೊರಗಿನವರು ಮಾಡಿದ ಈ ಹಾನಿಗಳಿಗೆ ಯಾರು ಹಣ ಪಾವತಿಸುತ್ತಾರೆ..?’ ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್‌ ಮಾಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಯೂ ಇರುವ ಸಚಿವಾಲಯವನ್ನು ಎರಡು ದಿನಗಳ ಅವಧಿಗೆ ಮುಚ್ಚಲಾಗಿದೆ. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಖಂಡಿಸಿದೆ. “ನೈರ್ಮಲ್ಯೀಕರಣದ ಉದ್ದೇಶಕ್ಕಾಗಿ” ಸಚಿವಾಲಯದ ಕಟ್ಟಡದ ಎಲ್ಲಾ ಕಚೇರಿಗಳನ್ನು ಎರಡು ದಿನಗಳವರೆಗೆ ಮುಚ್ಚಲಾಗುವುದು ಎಂದು ರಾಜ್ಯ ಸರ್ಕಾರ ನಿನ್ನೆ ಸಂಜೆಯೇ  ಘೋಷಿಸಿತ್ತು.


ಇದನ್ನೂ ಓದಿ: ತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...