Homeಮುಖಪುಟಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಬಿಜೆಪಿ ಕಾರ್ಯಕರ್ತರು ಮತ್ತು ಅವರ ಬಾಡಿಗೆ ಗೂಂಡಾಗಳು ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟವುಂಟು ಮಾಡುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.

- Advertisement -
- Advertisement -

ಪಶ್ಚಿಮ ಬಂಗಾಳ ಸಚಿವಾಲಯ ‘ನಬನ್ನಾ’ದ ಹೊರಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ವಿಭಾಗವು ಆಯೋಜಿಸಿದ್ದ ಪ್ರತಿಭಟನಾ ರ್‍ಯಾಲಿ ಹಿಂಸಾತ್ಮಕ ರೂಪ ಪಡೆದಿದೆ. ನೂರಾರು ಬಿಜೆಪಿ ಕಾರ್ಯಕರ್ತರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದಾಗ, ಕಲ್ಲು ತೂರಾಟ ನಡೆಸಿದಾಗ ಗುಂಪು ಚದುರಿಸಲು ಪೊಲೀಸರು ಲಾಠೀ ಚಾರ್ಜ್‌ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಅಡಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಬಿಜೆಪಿ ‘ನಬನ್ನಾ ಚಲೋ’ ರ್‍ಯಾಲಿ ಆಯೋಜಿಸಿತ್ತು.

ಕೊರೊನಾ ಸಾಂಕ್ರಾಮಿಕ ಹೆಚ್ಚಾಗುತ್ತಿದ್ದು, ಜನರು ಗುಂಪು ಸೇರುವಂತಿಲ್ಲ ಎಂದು ಸೂಚಿಸಿದ್ದ ರಾಜ್ಯ ಸರ್ಕಾರ ಬಿಜೆಪಿ ಆಯೋಜಿಸಿದ್ದ ‘ನಬನ್ನಾ ಚಲೋ’ ಪ್ರತಿಭಟನೆಗೆ ಅನುಮತಿ ನಿರಾಕರಿಸಿತ್ತು. ಬಿಜೆಪಿ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲೆಂದು ಕೊಲ್ಕತ್ತಾಗೆ ಬಂದಿದ್ದರು.

ಇದನ್ನೂ ಓದಿ: ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

“ನಾವು ಶಾಂತಿಯುವಾಗಿ ಪ್ರತಿಭಟಿಸುತ್ತಿದ್ದೇವೆ, ಆದರೆ ಮಮತಾ ಜಿ ನಮ್ಮ ಶಾಂತಿಯುತ ಪ್ರದರ್ಶನವನ್ನು ಹಿಂಸಾತ್ಮಕ ಪ್ರತಿಭಟನೆಯನ್ನಾಗಿ ಮಾಡಲು ಪ್ರಯತ್ನಿಸಿದ್ದಾರೆ. ಗೂಂಡಾಗಳು, ಪೊಲೀಸರೊಂದಿಗೆ ನಮ್ಮ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ” ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.

‘ಪೊಲೀಸರು ಬಿಜೆಪಿ ಕಾರ್ಯಕರ್ತರನ್ನೇ ಗುರಿಯಾಗಿಸಿಕೊಂಡು ಲಾಠೀ ಚಾರ್ಜ್ ಮಾಡುತ್ತಿದ್ದಾರೆ. ಕಲ್ಲುತೂರಾಟದಲ್ಲಿ ನಮ್ಮ ಕಾರ್ಯಕರ್ತರು ಪಾಲ್ಗೊಂಡಿಲ್ಲ. ಖಿದಿರ್ಪುರ ಕಡೆಯಿಂದ ಕಲ್ಲು ತೂರಾಟ ನಡೆಸಲಾಗುತ್ತಿದೆ. ಪೊಲೀಸರು ಅದನ್ನು ಯಾಕೆ ನೋಡುತ್ತಿಲ್ಲ’ ಎಂದು ಬಿಜೆಪಿ ನಾಯಕ ಲೋಕೆತ್ ಚಟರ್ಜಿ ಆಕ್ರೋಶ ವ್ಯಕ್ತಪಡಿಸಿದರು.

ಘಟನೆಯನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾದ ಮುಖ್ಯಸ್ಥ, ’ ಟಿಸಿಎಂ ಗೂಂಡಾಗಳು ನಮ್ಮ ಮೇಲೆ ಕಂಟ್ರಿ ಬಾಂಬ್‌ಗಳನ್ನು ಎಸೆದಿದ್ದಾರೆ. ಫ್ಯಾಸಿಸಂ ಅಂದರೆ ಇದೆ’ ಎಂದು ಟ್ವೀಟ್ ಮಾಡಿದ್ದಾರೆ.

ರ್‍ಯಾಲಿಯಲ್ಲಿ ಬಿಜೆಪಿ ವರ್ತನೆ ಬಗ್ಗೆ ಕಿಡಿಕಾರಿರುವ ಟಿಎಂಸಿ ಮುಖಂಡ ಬರ್ತ್ಯಾ ಬಸು ’ನಿಮ್ಮ ಗೂಂಡಾಗಿರಿಯಿಂದಾಗಿ ಪ್ರತಿ ಬಾರಿ ಎಷ್ಟು ಸಾರ್ವಜನಿಕ ಆಸ್ತಿ ನಾಶವಾಗುತ್ತದೆ ಎಂಬುದರ ಬಗ್ಗೆ ಕಾಳಜಿ ವಹಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿಗೆ ಟ್ಯಾಗ್ ಮಾಡಿ ’ನಿಮ್ಮ ಬಾಡಿಗೆ ಗೂಂಡಾಗಳು ಮತ್ತು ಹೊರಗಿನವರು ಮಾಡಿದ ಈ ಹಾನಿಗಳಿಗೆ ಯಾರು ಹಣ ಪಾವತಿಸುತ್ತಾರೆ..?’ ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್‌ ಮಾಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಯೂ ಇರುವ ಸಚಿವಾಲಯವನ್ನು ಎರಡು ದಿನಗಳ ಅವಧಿಗೆ ಮುಚ್ಚಲಾಗಿದೆ. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಖಂಡಿಸಿದೆ. “ನೈರ್ಮಲ್ಯೀಕರಣದ ಉದ್ದೇಶಕ್ಕಾಗಿ” ಸಚಿವಾಲಯದ ಕಟ್ಟಡದ ಎಲ್ಲಾ ಕಚೇರಿಗಳನ್ನು ಎರಡು ದಿನಗಳವರೆಗೆ ಮುಚ್ಚಲಾಗುವುದು ಎಂದು ರಾಜ್ಯ ಸರ್ಕಾರ ನಿನ್ನೆ ಸಂಜೆಯೇ  ಘೋಷಿಸಿತ್ತು.


ಇದನ್ನೂ ಓದಿ: ತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...