Homeಮುಖಪುಟಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಬಿಜೆಪಿ ಕಾರ್ಯಕರ್ತರು ಮತ್ತು ಅವರ ಬಾಡಿಗೆ ಗೂಂಡಾಗಳು ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟವುಂಟು ಮಾಡುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.

- Advertisement -
- Advertisement -

ಪಶ್ಚಿಮ ಬಂಗಾಳ ಸಚಿವಾಲಯ ‘ನಬನ್ನಾ’ದ ಹೊರಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ವಿಭಾಗವು ಆಯೋಜಿಸಿದ್ದ ಪ್ರತಿಭಟನಾ ರ್‍ಯಾಲಿ ಹಿಂಸಾತ್ಮಕ ರೂಪ ಪಡೆದಿದೆ. ನೂರಾರು ಬಿಜೆಪಿ ಕಾರ್ಯಕರ್ತರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದಾಗ, ಕಲ್ಲು ತೂರಾಟ ನಡೆಸಿದಾಗ ಗುಂಪು ಚದುರಿಸಲು ಪೊಲೀಸರು ಲಾಠೀ ಚಾರ್ಜ್‌ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಅಡಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಬಿಜೆಪಿ ‘ನಬನ್ನಾ ಚಲೋ’ ರ್‍ಯಾಲಿ ಆಯೋಜಿಸಿತ್ತು.

ಕೊರೊನಾ ಸಾಂಕ್ರಾಮಿಕ ಹೆಚ್ಚಾಗುತ್ತಿದ್ದು, ಜನರು ಗುಂಪು ಸೇರುವಂತಿಲ್ಲ ಎಂದು ಸೂಚಿಸಿದ್ದ ರಾಜ್ಯ ಸರ್ಕಾರ ಬಿಜೆಪಿ ಆಯೋಜಿಸಿದ್ದ ‘ನಬನ್ನಾ ಚಲೋ’ ಪ್ರತಿಭಟನೆಗೆ ಅನುಮತಿ ನಿರಾಕರಿಸಿತ್ತು. ಬಿಜೆಪಿ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲೆಂದು ಕೊಲ್ಕತ್ತಾಗೆ ಬಂದಿದ್ದರು.

ಇದನ್ನೂ ಓದಿ: ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

“ನಾವು ಶಾಂತಿಯುವಾಗಿ ಪ್ರತಿಭಟಿಸುತ್ತಿದ್ದೇವೆ, ಆದರೆ ಮಮತಾ ಜಿ ನಮ್ಮ ಶಾಂತಿಯುತ ಪ್ರದರ್ಶನವನ್ನು ಹಿಂಸಾತ್ಮಕ ಪ್ರತಿಭಟನೆಯನ್ನಾಗಿ ಮಾಡಲು ಪ್ರಯತ್ನಿಸಿದ್ದಾರೆ. ಗೂಂಡಾಗಳು, ಪೊಲೀಸರೊಂದಿಗೆ ನಮ್ಮ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ” ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.

‘ಪೊಲೀಸರು ಬಿಜೆಪಿ ಕಾರ್ಯಕರ್ತರನ್ನೇ ಗುರಿಯಾಗಿಸಿಕೊಂಡು ಲಾಠೀ ಚಾರ್ಜ್ ಮಾಡುತ್ತಿದ್ದಾರೆ. ಕಲ್ಲುತೂರಾಟದಲ್ಲಿ ನಮ್ಮ ಕಾರ್ಯಕರ್ತರು ಪಾಲ್ಗೊಂಡಿಲ್ಲ. ಖಿದಿರ್ಪುರ ಕಡೆಯಿಂದ ಕಲ್ಲು ತೂರಾಟ ನಡೆಸಲಾಗುತ್ತಿದೆ. ಪೊಲೀಸರು ಅದನ್ನು ಯಾಕೆ ನೋಡುತ್ತಿಲ್ಲ’ ಎಂದು ಬಿಜೆಪಿ ನಾಯಕ ಲೋಕೆತ್ ಚಟರ್ಜಿ ಆಕ್ರೋಶ ವ್ಯಕ್ತಪಡಿಸಿದರು.

ಘಟನೆಯನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾದ ಮುಖ್ಯಸ್ಥ, ’ ಟಿಸಿಎಂ ಗೂಂಡಾಗಳು ನಮ್ಮ ಮೇಲೆ ಕಂಟ್ರಿ ಬಾಂಬ್‌ಗಳನ್ನು ಎಸೆದಿದ್ದಾರೆ. ಫ್ಯಾಸಿಸಂ ಅಂದರೆ ಇದೆ’ ಎಂದು ಟ್ವೀಟ್ ಮಾಡಿದ್ದಾರೆ.

ರ್‍ಯಾಲಿಯಲ್ಲಿ ಬಿಜೆಪಿ ವರ್ತನೆ ಬಗ್ಗೆ ಕಿಡಿಕಾರಿರುವ ಟಿಎಂಸಿ ಮುಖಂಡ ಬರ್ತ್ಯಾ ಬಸು ’ನಿಮ್ಮ ಗೂಂಡಾಗಿರಿಯಿಂದಾಗಿ ಪ್ರತಿ ಬಾರಿ ಎಷ್ಟು ಸಾರ್ವಜನಿಕ ಆಸ್ತಿ ನಾಶವಾಗುತ್ತದೆ ಎಂಬುದರ ಬಗ್ಗೆ ಕಾಳಜಿ ವಹಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿಗೆ ಟ್ಯಾಗ್ ಮಾಡಿ ’ನಿಮ್ಮ ಬಾಡಿಗೆ ಗೂಂಡಾಗಳು ಮತ್ತು ಹೊರಗಿನವರು ಮಾಡಿದ ಈ ಹಾನಿಗಳಿಗೆ ಯಾರು ಹಣ ಪಾವತಿಸುತ್ತಾರೆ..?’ ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್‌ ಮಾಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಯೂ ಇರುವ ಸಚಿವಾಲಯವನ್ನು ಎರಡು ದಿನಗಳ ಅವಧಿಗೆ ಮುಚ್ಚಲಾಗಿದೆ. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಖಂಡಿಸಿದೆ. “ನೈರ್ಮಲ್ಯೀಕರಣದ ಉದ್ದೇಶಕ್ಕಾಗಿ” ಸಚಿವಾಲಯದ ಕಟ್ಟಡದ ಎಲ್ಲಾ ಕಚೇರಿಗಳನ್ನು ಎರಡು ದಿನಗಳವರೆಗೆ ಮುಚ್ಚಲಾಗುವುದು ಎಂದು ರಾಜ್ಯ ಸರ್ಕಾರ ನಿನ್ನೆ ಸಂಜೆಯೇ  ಘೋಷಿಸಿತ್ತು.


ಇದನ್ನೂ ಓದಿ: ತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...