Homeಮುಖಪುಟವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ನಾವು ನೀಡಿದ ದೂರಿನ ಮೇರೆಗೆ FIR ಇರಲಿ, ಸಣ್ಣ ಪಿಟಿಷನ್ ಕೂಡ ಹಾಕದೇ ದೂರನ್ನು ಮುಕ್ತಾಯಗೊಳಿಸಿದ್ದಾರೆ. ಇದು ಲಿಖಿನ ಕಾನೂನಿನ ಮತ್ತು ಸುಪ್ರೀಂ ಕೋರ್ಟ್‌ ತೀರ್ಪಿನ ವಿರುದ್ಧವಾಗಿದೆ ಎಂಬುದು ದೂರುದಾರರ ಆರೋಪ.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಜಸಂಪ (ಜನಾಧಿಕಾರ ಸಂಘರ್ಷ ಪರಿಷತ್) ಸಲ್ಲಿಸಿದ್ದ ದೂರನ್ನು ಪೊಲೀಸರು ವಜಾಗೊಳಿಸಿದ್ದಾರೆ. ಹಾಗಾಗಿ ಜಸಂಪ ಪದಾಧಿಕಾರಿಗಳು ಕೋರ್ಟ್ ಮೆಟ್ಟಿಲೇರಲು ಸಿದ್ದತೆ ನಡೆಸಿದ್ದಾರೆ.

ಬಿ.ವೈ ವಿಜಯೇಂದ್ರ ಮತ್ತು ಶಶಿಧರ ಮರಡಿಯವರು ರಾಮಲಿಂಗಂ ಕನ್ಸ್‌ಸ್ಟ್ರಕ್ಸನ್‌ನ ಚಂದ್ರಕಾಂತ್ ಎಂಬುವವರಿಂದ ಹಣ ನೀಡದಿದ್ದರೆ ನಿಮ್ಮ ಬಿಡಿಎ ಪ್ರಾಜೆಕ್ಟ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿ ಆರ್‌ಟಿಜಿಎಸ್ ಮೂಲಕ ಅಪಾರ ಪ್ರಮಾಣದ (7 ಕೋಟಿ ರೂಗಳು) ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ಜನಾಧಿಕಾರ ಸಂಘರ್ಷ ಪರಿಷತ್‌ನ ಪದಾಧಿಕಾರಿಗಳಾದ ಆದರ್ಶ್ ಆರ್ ಅಯ್ಯರ್, ಪ್ರಕಾಶ್ ಬಾಬು ಬಿ.ಕೆ, ವಿಶ್ವನಾಥ್‌ ಬಿ.ವಿಯವರು ಸೆಪ್ಟಂಬರ್ 25 ರಂದು ದೂರು ನೀಡಿದ್ದರು.


ಇದನ್ನೂ ಓದಿ: ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!


1860 ರ ಭಾರತೀಯ ದಂಡ ಸಂಹಿತೆಯ 120 ಬಿ, ಸುಲಿಗೆ u/ss 384 r / w 34ರ ಅನ್ವಯ ಸುಲಿಗೆ ಮಾಡುವ ಗಂಭೀರ ಅಪರಾಧವಾಗಿದೆ. ಹಾಗಾಗಿ 1973 ರ ಕ್ರಿಮಿನಲ್ ಅಪರಾಧಗಳ ಆಧಾರದಲ್ಲಿ ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಸಹ ದೂರು ನೀಡಲಾಗಿತ್ತು. ಅಲ್ಲದೇ ತಮ್ಮ ದೂರನ್ನಾಧರಿಸಿ FIR ದಾಖಲಿಸದ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಮತ್ತು ಕೇಂದ್ರ ವಿಭಾಗದ DCP ಎಂ. ಎನ್. ಅನುಚೇತ್ ವಿರುದ್ದ ಅಕ್ಟೋಬರ್ 3 ರಂದು ಮತ್ತೊಂದು ದೂರು ದಾಖಲಿಸಿದ್ದರು.

ಶೇಷಾದ್ರಿಪುರಂ ಪೊಲೀಸರು ಈ ಭ್ರಷ್ಟಾಚಾರದ ಪ್ರಕರಣದಲ್ಲಿ ಲಂಚ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವ ಚಂದ್ರಕಾಂತ್ ಎಂಬುವವರೆ ದೂರುದಾರರು ನನಗೆ ಪರಿಚಯವಿಲ್ಲ. ಹಾಗಾಗಿ ದೂರು ವಜಾಗೊಳಿಸಬೇಕೆಂದು ಮನವಿ ಮಾಡಿದ ಆಧಾರದಲ್ಲಿ ದೂರನ್ನು ಮುಕ್ತಾಯಗೊಳಿಸುತ್ತೇವೆ ಎಂದು ಜಸಂಪ ಪದಾಧಿಕಾರಿಗಳಿಗೆ ನೀಡಿದ ಹಿಂಬರಹದಲ್ಲಿ ತಿಳಿಸಿದ್ದಾರೆ.

“ಚಂದ್ರಕಾಂತ ರಾಮಲಿಂಗಂ ಅವರನ್ನು ವಿಚಾರಣೆ ಮಾಡಿ ಅವರ ಹೇಳಿಕೆಯನ್ನು ಪಡೆದುಕೊಂಡಿದ್ದು ಜನಾಧಿಕಾರ ಸಂಘರ್ಷ ಪರಿಷತ್ ಬಗ್ಗೆ ಚಂದ್ರಕಾಂತ ರಾಮಲಿಂಗಂ ರವರಿಗೆ ಪರಿಚಯವಿಲ್ಲ. ಆದರ್ಶ ಐಯ್ಯರ್, ಪ್ರಕಾಶ್‌ಬಾಬು, ವಿಶ್ವನಾಥ್ ಅವರು ಈ ವಿಚಾರವಾಗಿ ನನ್ನನ್ನು ಸಂಪರ್ಕಿಸಿಲ್ಲ. ಸಂಘರ್ಷ ಪರಿಷತ್‌ರವರು ಕೊಟ್ಟಿರುವ ಅರ್ಜಿ, ಪವರ್ ಟಿವಿಯಲ್ಲಿ ಪ್ರಸಾರವಾದ ಕಾರ್ಯಕ್ರಮದ ಆಧಾರದ ಮೇಲೆ ನೀಡಿರುತ್ತಾರೆ. ಆದರೆ ಅವರು ದೂರಿನಲ್ಲಿ ತಿಳಿಸುವ ಅಂಶಗಳು ಸತ್ಯಕ್ಕೆ ದೂರವಾಗಿರುತ್ತದೆ ಎಂದು ನುಡಿದಿರುತ್ತಾರೆ. ಹಾಗೂ ನನಗೆ ಆದ ತೊಂದರೆ, ಸುಲಿಗೆ ಬಗ್ಗೆ, ಕೆ ಪಿ ಅಗ್ರಹಾರ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು ಪ್ರಕರಣ ತನಿಖೆಯಲ್ಲಿರುತ್ತದೆ. ನನಗೆ ಗೊತ್ತಿಲ್ಲದ ಜನಾಧಿಕಾರ ಸಂಘರ್ಷ ಪರಿಷತ್‌/ರಾಕೇಶ್ ಶೆಟ್ಟಿ ಅವರ ಬೆಂಬಲಿಗರಿಂದ ನನ್ನ ಪರವಾಗಿ ನೀಡಿರುವ ದೂರು ಅರ್ಜಿಯನ್ನು ಮುಕ್ತಾಯ ಮಾಡಬೇಕೆಂದು ಕೋರಿ ಹೇಳಿಕೆಯನ್ನು ನೀಡಿರುತ್ತಾರೆ. ಅಲ್ಲದ ಎಚ್‌ಡಿಎಫ್‌ಸಿ ಬ್ಯಾಂಕ್ ಅಕೌಂಟ್‌ನ ಸ್ಟೇಟ್‌ಮೆಂಟ್‌ಗಳನ್ನು ಪರಿಶೀಲಿಸಿದ್ದು ತಾವು ಆರೋಪಿಸಿರುವ ಅಲ್ಲಿ ವಹಿವಾಟು ಇಲ್ಲದೇ ಇದ್ದು, ಹಾಗೂ ನೊಂದ ಚಂದ್ರಕಾಂತ ರಾಮಲಿಂಗಂ ಅವರು ನೀಡಿರುವ ಹೇಳಿಕೆ ಆಧಾರದ ಮೇರೆಗೆ ನೀವು ನೀಡಿರುವ ಅರ್ಜಿಯ ವಿಚಾರಣೆಯನ್ನು ಮುಕ್ತಾಯ ಮಾಡುತ್ತೇವೆ” ಎಂದು ಹಿಂಬರಹದಲ್ಲಿ ವಿವರಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ದೂರದಾರರಲ್ಲಿ ಒಬ್ಬರಾದ ಆದರ್ಶ್ ಆರ್ ಅಯ್ಯರ್‌ರವರನ್ನು ಸಂಪರ್ಕಿಸಿತು. ಅವರು “ನಾವು ನೀಡಿದ ದೂರಿನ ಮೇರೆಗೆ FIR ಇರಲಿ, ಸಣ್ಣ ಪಿಟಿಷನ್ ಕೂಡ ಹಾಕದೇ ದೂರನ್ನು ಮುಕ್ತಾಯಗೊಳಿಸಿದ್ದಾರೆ. ಇದು ಲಿಖಿನ ಕಾನೂನಿನ ಮತ್ತು ಸುಪ್ರೀಂ ಕೋರ್ಟಿನ ತೀರ್ಪಿನ ವಿರುದ್ಧವಾಗಿದೆ. ಇದು ಬಲಾಢ್ಯರನ್ನು ರಕ್ಷಿಸಲು ಪೊಲೀಸರು ಮಾಡುತ್ತಿರುವ ಪ್ರಯತ್ನವಾಗಿದೆ” ಎಂದರು.

ಈ ಕುರಿತು ನಾವು ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ “ಬಿ.ವೈ ವಿಜಯೇಂದ್ರರವರ ಭ್ರಷ್ಟಾಚಾರದ ತನಿಖೆ ನಡೆಸಲು ಮತ್ತು ನಮ್ಮ ದೂರನ್ನು ಸಮರ್ಪಕವಾಗಿ ತನಿಖೆ ನಡೆಸದೇ ಮುಕ್ತಾಯಗೊಳಿಸಿರುವ ಶೇಷಾದ್ರಿಪುರಂ ಪೊಲೀಸರ ವಿರುದ್ಧ” ಅರ್ಜಿ ಸಲ್ಲಿಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...