Homeಮುಖಪುಟಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

ಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

ಆಜ್ ತಕ್ ಎಲ್ಲಾ ನಿಯಮಗಳನ್ನು ಮೀರಿತ್ತು. ಸುಶಾಂತ್ ಸಿಂಗ್ ಮನೆಯಲ್ಲಿ ತೀವ್ರ ದುಃಖದಲ್ಲಿರುವ ಅವರ ತಂದೆಯನ್ನು ಸಂದರ್ಶಿಸಲು ಪ್ರಯತ್ನಿಸಿದ್ದರು ಎಂದು ಪ್ರಾಧಿಕಾರ ತಿಳಿಸಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್‌ಗೆ ಸಂಬಂಧಿಸಿದ ನಕಲಿ ಟ್ವೀಟ್‌ಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿಯು ನ್ಯೂಸ್ ಚಾನೆಲ್ ಆಜ್ ತಕ್ ಗೆ 1 ಲಕ್ಷ ರೂ.ಗಳ ದಂಡ ವಿಧಿಸಿದೆ ಎಂದು ಲೈವ್ ಲಾ ಗುರುವಾರ ವರದಿ ಮಾಡಿದೆ. ದಂಡದ ಜೊತೆಗೆ ತಾನು ಮಾಡಿದ ತಪ್ಪಿಗೆ ಕ್ಷಮೆಯಾಚನೆಯನ್ನೂ ಪ್ರಸಾರ ಮಾಡಬೇಕೆಂದು ಸೂಚಿಸಿದೆ.

ಸುಶಾಂತ್ ಅವರ ಮೃತದೇಹದ ಚಿತ್ರಗಳನ್ನು ಪ್ರಸಾರ ಮಾಡಿ ನಿಯಮಾವಳಿಗಳನ್ನು ಉಲ್ಲಂಘಿಸಿದ ‘ಇಂಡಿಯಾ ಟಿವಿ’ ನ್ಯೂಸ್ ಕೂಡ ಕ್ಷಮೆಯಾಚಿಸಬೇಕು ಎಂದು NBSA ಹೇಳಿದೆ. ‘ಝೀ ನ್ಯೂಸ್’ ಹಾಗೂ ‘ನ್ಯೂಸ್ 24’ಗೆ ಕೂಡ ಕೆಲವೊಂದು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ  ಕ್ಷಮೆಯಾಚಿಸಲು ಸೂಚಿಸಲಾಗಿದೆ.

ಎಬಿಪಿ ನ್ಯೂಸ್ ವಾಹಿನಿ ನಟನ ದೇಹದ ಕ್ಲೋಸ್ ಅಪ್ ಫೋಟೋಗಳನ್ನು ತೋರಿಸಿಲ್ಲ ಎಂದು ಪ್ರಾಧಿಕಾರ ಗಮನಿಸಿದ್ದರಿಂದ ಎಬಿಪಿಗೆ ಬರೀ ಎಚ್ಚರಿಕೆ ನೀಡಲಾಯಿತು.

ಇದನ್ನೂ ಓದಿ: ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

NBSA ತನ್ನ ಆದೇಶದಲ್ಲಿ, ಆಜ್ ತಕ್ ಕಾರ್ಯಕ್ರಮ ಪ್ರಸಾರದ ವೇಳೆ ಟ್ವೀಟ್‍ಗಳನ್ನು ತೋರಿಸುವ ಮುನ್ನ ವಾಹಿನಿಯು ಸೂಕ್ತ ಪರಾಮರ್ಶೆ ನಡೆಸಿಲ್ಲ ಎಂದು ಹೇಳಿದೆ. ಅದೇ ಕಾರ್ಯಕ್ರಮಗಳ ವಿಡಿಯೋಗಳನ್ನು  ವೆಬ್‌ಸೈಟ್‌ನಲ್ಲಿ, ಯೂಟ್ಯೂಬ್ ಅಥವಾ ಇತರ ಲಿಂಕ್‌ಗಳನ್ನು ಅಪ್ಲೋಡ್ ಮಾಡಲಾಗಿದ್ದರೆ ತಕ್ಷಣ ತೆಗೆದುಹಾಕಬೇಕು ಎಂದು ಸೂಚಿಸಿದೆ.

ಕ್ಷಮಾಯಾಚನೆಯ ಪಠ್ಯ ಹೇಗಿರಬೇಕು, ಯಾವ ದಿನ ಯಾವ ಸಮಯದಲ್ಲಿ ಈ ಕ್ಷಮಾಯಾಚನೆಯನ್ನು ಪ್ರಸಾರ ಮಾಡಬೇಕೆಂದು ಪ್ರಾಧಿಕಾರವೇ ನಿರ್ಣಯಿಸಲಿದ್ದು, ಸೂಚನೆಯನ್ನು ಪಾಲಿಸಿರುವ ಕುರಿತಂತೆ ಆಜ್ ತಕ್ ಸಿಡಿಯಲ್ಲಿ ಸೂಕ್ತ ಆಧಾರದೊಂದಿಗೆ ಪ್ರಸಾರವಾದ ಏಳು ದಿನಗಳೊಳಗೆ ಪ್ರಾಧಿಕಾರಕ್ಕೆ ಸಲ್ಲಿಸಬೇಕಿದೆ.

“ಸುದ್ದಿಯನ್ನು ವರದಿ ಮಾಡುವುದು ಸುದ್ದಿ ವಾಹಿನಿಯ ಕರ್ತವ್ಯವಾಗಿದ್ದರೂ, ಅದು ಸಾರ್ವಜನಿಕ ಹಿತಾಸಕ್ತಿಯಾಗಿರಬಹುದು ಮತ್ತು ವರದಿಯಾಗುವ ವ್ಯಕ್ತಿಗಳು ಅಂತಹ ಮಾಧ್ಯಮ ವರದಿಗಳಿಂದ ನ್ಯಾಯ ಪಡೆಯಬಹುದು. ಆದರೆ ಸುದ್ದಿಯನ್ನು ಪ್ರಸ್ತುತಪಡಿಸುವಾಗ ಸತ್ತವರ ಗೌಪ್ಯತೆ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಸತ್ತವರನ್ನು ಅನಗತ್ಯ ಮಾಧ್ಯಮ ಪ್ರಜ್ವಲಿಸುವಿಕೆಗೆ ಒಳಪಡಿಸಬಾರದು ಎಂಬುದು ಮುಖ್ಯ” ಎಂದು ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ ಹೇಳಿದೆ.

ಆಜ್ ತಕ್ ಎಲ್ಲಾ ನಿಯಮಗಳನ್ನು ಮೀರಿತ್ತು. ಸುಶಾಂತ್ ಸಿಂಗ್ ಮನೆಯಲ್ಲಿ ತೀವ್ರ ದುಃಖದಲ್ಲಿರುವ ಅವರ ತಂದೆಯನ್ನು ಸಂದರ್ಶಿಸಲು ಪ್ರಯತ್ನಿಸಿದ್ದರು ಎಂದು ಪ್ರಾಧಿಕಾರ ತಿಳಿಸಿದೆ.

ಸೆಪ್ಟೆಂಬರ್ 3 ರಂದು, ಬಾಂಬೆ ಹೈಕೋರ್ಟ್ ಸುದ್ದಿ ಚಾನೆಲ್‌ಗಳಿಗೆ ಪ್ರಕರಣವನ್ನು ವರದಿ ಮಾಡುವಲ್ಲಿ ಸಂಯಮವನ್ನು ತೋರಿಸಬೇಕೆಂದು ಕೇಳಿತ್ತು. ಸೆಪ್ಟೆಂಬರ್ 11 ರಂದು ಈ ವಿಷಯ ಮತ್ತೆ ನ್ಯಾಯಾಲಯದ ಮುಂದೆ ಬಂದಾಗ, ಎಲೆಕ್ಟ್ರಾನಿಕ್ ಮಾಧ್ಯಮದ ಮೇಲೆ ರಾಜ್ಯದ ನಿಯಂತ್ರಣವಿಲ್ಲ ಎಂದು ನ್ಯಾಯಾಲಯ ಆಶ್ಚರ್ಯ ವ್ಯಕ್ತಪಡಿಸಿತು.


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...