Homeಮುಖಪುಟಹತ್ರಾಸ್ ಸಂತ್ರಸ್ತೆಯನ್ನೇ ಬಲಿಪಶುಮಾಡುವ ಹುನ್ನಾರ: ಸುಪ್ರೀಂ ಮೆಟ್ಟಿಲೇರಿದ ಸಿಜೆಪಿ

ಹತ್ರಾಸ್ ಸಂತ್ರಸ್ತೆಯನ್ನೇ ಬಲಿಪಶುಮಾಡುವ ಹುನ್ನಾರ: ಸುಪ್ರೀಂ ಮೆಟ್ಟಿಲೇರಿದ ಸಿಜೆಪಿ

ಸುಪ್ರೀಂ ನೇತೃತ್ವದಲ್ಲಿ ಸಿಬಿಐ ತನಿಖೆ, ಸಾಕ್ಷಿಗಳ ರಕ್ಷಣೆ ಮತ್ತು ಸಂತ್ರಸ್ತೆಯ ಶವ ದಹನದ ಬಗ್ಗೆ ನ್ಯಾಯಾಂಗ ವಿಚಾರಣೆಗಾಗಿ ಸಿಜೆಪಿ ಮನವಿ ಮಾಡಿದೆ.

- Advertisement -
- Advertisement -

ಹತ್ರಾಸ್‌ನಲ್ಲಿ ಇತ್ತೀಚೆಗೆ ನಡೆದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ (ಸಿಜೆಪಿ) ಸಂಘಟನೆಯು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಸ್ಥಿಕೆ ಅರ್ಜಿಯನ್ನು (ಐಎ) ಸಲ್ಲಿಸಿದೆ.

ಇಡೀ ಉತ್ತರ ಪ್ರದೇಶ ಸರ್ಕಾರವೇ ಸಂತ್ರಸ್ತ ಕುಟುಂಬದ ವಿರುದ್ಧವಿದೆ. ಅತ್ಯಾಚಾರವೇ ನಡೆದಿಲ್ಲ ಎಂದು ಹಲವರು ಹೇಳುತ್ತಿದ್ದಾರೆ. ಆರೋಪಿಯೊಬ್ಬ ಪೊಲೀಸರಿಗೆ ಪತ್ರ ಬರೆದು ಆಕೆಯೊಂದಿಗೆ ನನಗೆ ಸಂಬಂಧವಿತ್ತು, ಅವರ ಪೋಷಕರೆ ಕೊಂದಿದ್ದಾರೆ ಎಂದಿದ್ದಾನೆ. ಹಲವರು ಇದನ್ನು ಮರ್ಯಾದಹೀನ ಹತ್ಯೆ ಎಂದು ಕರೆದಿದ್ದಾರೆ. ಕುಟುಂಬಕ್ಕೆ ಹಣ ನೀಡಲಾಗಿದೆ ಎಂದು ಇಡಿ ತನಿಖೆ ನಡೆಸುತ್ತಿದೆ. ಇತರ ಕೆಲ ಸಂಘಟನೆಗಳ ಮೇಲೆ ಪೊಲೀಸರು ಗೂಬೆ ಕೂರಿಸುತ್ತಿದ್ದಾರೆ. ಒಟ್ಟಾರೆ ಈ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಬಲಿಪಶು ಮಾಡುತ್ತಿರುವ ಹುನ್ನಾರದ ಹಿನ್ನೆಲೆಯಲ್ಲಿ ಸಿಜೆಪಿ ಸುಪ್ರೀಂನಲ್ಲಿ ಸಲ್ಲಿಸಿದ ಅರ್ಜಿಗೆ ಮಹತ್ವ ಬಂದಿದೆ.

ಮಾನವ ಹಕ್ಕುಗಳ ರಕ್ಷಣೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುವಲ್ಲಿ ನ್ಯಾಯಾಂಗದಲ್ಲಿ ಮತ್ತು ನ್ಯಾಯಾಂಗದ ಹೊರಗೆ ಹೋರಾಟ ನಡೆಸುತ್ತಿರುವ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಯು ಹತ್ರಾಸ್ ಘಟನೆಯಲ್ಲಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯಕ್ಕಾಗಿ ವಕೀಲರಾದ ಅಪರ್ಣ ಭಟ್‌ರವರ ಮೂಲಕ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ಹೇಳಿದ್ದಾರೆ. ಆಕೆ ಆರೋಪಿಯೊಂದಿಗೆ ಫೋನ್ ಸಂಪರ್ಕದಲ್ಲಿದ್ದಳು ಎಂದು ಮತ್ತೊಬ್ಬ ಪೊಲೀಸ್ ಹೇಳಿದ್ದಾರೆ. “ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಆ ಮಟ್ಟದ ಅಧಿಕಾರಿಯೊಬ್ಬರು ಈ ರೀತಿ ಸಾರ್ವಜನಿಕ ಹೇಳಿಕೆಗಳನ್ನು ನೀಡುತ್ತಿರುವುದು ಆತಂಕಕಾರಿಯಾಗಿದೆ ಮತ್ತು ಇದು ಫಲಿತಾಂಶದ ಮೇಲೆ ಪ್ರಭಾವ ಬೀರುತ್ತದೆ. ಲೈಂಗಿಕ ದೌರ್ಜನ್ಯದ ಪ್ರಕರಣಗಳನ್ನು ಅತ್ಯಂತ ಸೂಕ್ಷ್ಮತೆಯಿಂದ ನಿರ್ವಹಿಸಬೇಕಾಗಿದೆ ಎಂದು ಈ ಮಾನ್ಯ ನ್ಯಾಯಾಲಯವು ಪದೇ ಪದೇ ಹೇಳಿದಾಗ್ಯೂ, ಈ ರೀತಿಯ ಸಂತ್ರಸ್ತೆಯ ವಿರುದ್ಧದ ಲಜ್ಜೆಗೆಟ್ಟ ಹೇಳಿಕೆಗಳು ಹೊರಬರುತ್ತಿವೆ. ಇದನ್ನು ಸುಪ್ರೀಂ ಕೋರ್ಟ್ ಪರೀಶಿಲಿಸಬೇಕು” ಎಂದು ಸಿಜೆಪಿಯ ಅರ್ಜಿಯಲ್ಲಿ ತಿಳಿಸಿದೆ.

ಇನ್ನು ಈ ಪ್ರಕರಣದಲ್ಲಿ ಸಂತ್ರಸ್ತೆಯ ಶವವನ್ನು ಕುಟುಂಬಕ್ಕೆ ಏಕೆ ನೀಡಲಾಗಿಲ್ಲ? ಪೊಲೀಸರು ಮಧ್ಯರಾತ್ರಿ ಏಕೆ ಪೆಟ್ರೋಲ್ ಹಾಕಿ ಸುಟ್ಟರು? ಇಲ್ಲಿ ಆ ಕುಟುಂಬದ ಹಕ್ಕು ಚ್ಯುತಿಯಾಗಿದೆ. ಕುಟುಂಬವು ಐತಿಹಾಸಿಕವಾಗಿ ತುಳಿತಕ್ಕೊಳಗಾದ ದಲಿತ ಸಮುದಾಯದಕ್ಕೆ ಸೇರಿದ್ದು ಅವರಿಗೆ ಬಲಾಢ್ಯ ಬಹುಸಂಖ್ಯಾತರಾದ ಠಾಕೂರರು ದಿನನಿತ್ಯ ಬೆದರಿಕೆ ಹಾಕುತ್ತಿದ್ದಾರೆ. ಹಲವಾರು ‘ಮೇಲ್ಜಾತಿ’ ಗುಂಪುಗಳು ಸಭೆ ಸೇರಿ ತಮ್ಮ ಪರವಾದ ನಿರೂಪಣೆಯನ್ನು ಹರಿಯಬಿಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕುಟುಂಬದ ಸುರಕ್ಷತೆಯೂ ಸಹ ಮಹತ್ವದ್ದಾಗಿದೆ. ಜೊತೆಗೆ ಪ್ರಕರಣದ ಮತ್ತೊಂದು ಪ್ರಮುಖ ಅಂಶವೆಂದರೆ ಸಾಕ್ಷಿ ರಕ್ಷಣೆ. ಇದಕ್ಕಾಗಿ ಯುಪಿ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ಸಿಜೆಪಿ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

ಸಂತ್ರಸ್ತ ಕುಟುಂಬದ ನಾರ್ಕೊ ಅನಾಲಿಸಿಸ್ ಪರೀಕ್ಷೆ ಮಾಡಿಸಲು ಯುಪಿ ಸರ್ಕಾರ ಮುಂದಾಗಿದ್ದು ಏಕೆ? ಸಂತ್ರಸ್ತ ಯುವತಿ ಸಾವಿನ ಮುನ್ನ ನೀಡಿದ ಹೇಳಿಕೆಗೆ ಬೆಲೆಯಿಲ್ಲವೇ?
ಅತ್ಯಾಚಾರ ಪ್ರಕರಣಗಳಲ್ಲಿ ವಿಧಿವಿಜ್ಞಾನ ವರದಿಗಳು ಮತ್ತು ಇತರ ವೈದ್ಯಕೀಯ ಸಾಕ್ಷ್ಯಗಳ ಪ್ರಸ್ತುತತೆ ಏನು? ಪುರಾವೆಗಳನ್ನು ಸಂರಕ್ಷಿಸುವುದು ರಾಜ್ಯದ ಕರ್ತವ್ಯವಲ್ಲವೇ? ಮಹಿಳೆಯರ ಮೇಲಿನ ಅಪರಾಧಗಳು ಮತ್ತು ದಲಿತರ ವಿರುದ್ಧದ ಅಪರಾಧಗಳ ಬಗ್ಗೆ ಎನ್‌ಸಿಆರ್‌ಬಿ ದತ್ತಾಂಶಗಳ ಹಿನ್ನೆಲೆಯಲ್ಲಿ ತನಿಖೆಯ ವರ್ಗಾವಣೆ ಆಗಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಸಿಜೆಪಿ ಮೂರು ಪ್ರಮುಖ ವಿಷಯಗಳ ಬಗ್ಗೆ ತನ್ನ ಹಕ್ಕೊತ್ತಾಯ ಮಂಡಿಸಿದೆ.

  1. ಅತ್ಯಾಚಾರ, ಹತ್ಯೆಯ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ನಡೆಸಬೇಕು.
  2. ಕೇಂದ್ರ ಅರೆಸೈನಿಕ ಪಡೆಗಳಿಂದ ಸಾಕ್ಷಿಗಳಿಗೆ ಮತ್ತು ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು.
  3. ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ, ಕುಟುಂಬದ ಒಪ್ಪಿಗೆಯಿಲ್ಲದೆ ಸಂತ್ರಸ್ತೆಯ ಶವವನ್ನು ಮಧ್ಯರಾತ್ರಿಯಲ್ಲಿ ಸುಟ್ಟಿದ್ದರ ಬಗ್ಗೆ ನ್ಯಾಯಾಂಗ ವಿಚಾರಣೆ ನಡೆಸಬೇಕು.

ಇದನ್ನೂ ಓದಿ: ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...