Homeಅಂತರಾಷ್ಟ್ರೀಯ'ಕಮಲಾ ಹ್ಯಾರಿಸ್ ಕಮ್ಯುನಿಸ್ಟ್‌' - ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್

‘ಕಮಲಾ ಹ್ಯಾರಿಸ್ ಕಮ್ಯುನಿಸ್ಟ್‌’ – ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್

- Advertisement -
- Advertisement -

ಕಮಲಾ ಹ್ಯಾರಿಸ್ ಕಮ್ಯೂನಿಷ್ಟ್ ಆಗಿದ್ದು, ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡನ್ ಚುನಾವಣೆಯಲ್ಲಿ ಗೆದ್ದರೆ, ಕಮಲಾ ಒಂದು ತಿಂಗಳಲ್ಲಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಪ್ರಾಯ ಪಟ್ಟಿದ್ದಾರೆ.

ಅಮೆರಿಕಾದಲ್ಲಿ ನವೆಂಬರ್‌ 3 ರಂದು ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರಟಿಕ್ ಪಕ್ಷದಿಂದ ಅಮೆರಿಕಾದ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಸ್ಫರ್ಧಿಸುತ್ತಿದ್ದಾರೆ.

ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್

ಡೆಮಾಕ್ರಟಿಕ್‌ ಪಕ್ಷದ ಕಮಲಾ ಮತ್ತು ಅವರ ಪ್ರತಿಸ್ಪರ್ಧಿಯಾದ ರಿಪಬ್ಲಿಕನ್‌ ಪಕ್ಷದ ಮೈಕ್‌ ಪೆನ್ಸ್ ಜೊತೆ‌ ಬುಧವಾರ ಚರ್ಚೆಯಲ್ಲಿ ಮುಖಾಮುಖಿಯಾಗಿದ್ದರು. ಅಮೆರಿಕಾದ ಆಡಳಿತ ಪಕ್ಷವಾದ ರಿಪಬ್ಲಿಕನ್ ಸರ್ಕಾರ ಕೊರೊನಾ ಸೋಂಕನ್ನು ನಿರ್ವಹಿಸಿದ ರೀತಿ, ದೇಶದ ನಿರುದ್ಯೋಗ ಸಮಸ್ಯೆ, ಚೀನಾದೊಂದಿಗಿನ ಸಂಬಂಧ, ದೇಶದಲ್ಲಿ ಹೊಗೆಯಾಡುತ್ತಿರುವ ಜನಾಂಗೀಯ ಆಕ್ರೋಶ ಹಾಗೂ ಹವಾಮಾನ ಬದಲಾವಣೆಗಳ ಕುರಿತು ಕಮಲಾ ಹ್ಯಾರಿಸ್ ತೀವ್ರ ವಾಗ್ದಾಳಿ ನಡೆಸಿದ್ದರು.

PC: : Biden Campaign/IANS

ಇದಕ್ಕೆ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಜೋ ಬೈಡೆನ್‌ ಕಮಲಾ ಹ್ಯಾರಿಸ್‌ ಅವರನ್ನು ಪ್ರಶಂಸಿಸಿದ್ದರು. ಇದಕ್ಕೆ ಪ್ರತಿದಾಳಿ ನಡೆಸಿದ ಟ್ರಂಪ್, ”ಕಮಲಾ ಒಬ್ಬ ಕಮ್ಯುನಿಸ್ಟ್‌. ಜೋ ಬೈಡನ್ ಅಧ್ಯಕ್ಷರಾಗಿ ಆಯ್ಕೆಯಾದರೆ ನಾವು ಕಮ್ಯುನಿಸ್ಟ್‌ವೊಬ್ಬರನ್ನು ಪಡೆಯಲಿದ್ದೇವೆ, ಜೊ ಬೈಡನ್ ಆಧ್ಯಕ್ಷರಾಗಿ ಎರಡು ತಿಂಗಳೂ ಉಳಿಯುವುದಿಲ್ಲ ಎಂದು ನನ್ನ ಅಭಿಪ್ರಾಯ” ಎಂದು ಹೇಳಿದ್ದಾರೆ.

”ಕಮಲಾ ಹ್ಯಾರಿಸ್ ಸಮಾಜವಾದಿ ಅಲ್ಲ. ಸಮಾಜವಾದವನ್ನು ಮೀರಿದವರು. ಅವರ ಚಿಂತನೆಗಳನ್ನು ಒಮ್ಮೆ ಗಮನಿಸಿ. ಕೊಲೆಗಾರರು, ಅತ್ಯಾಚಾರಿಗಳು ನಮ್ಮ ದೇಶಕ್ಕೆ ಬಂದು ಸೇರಿಕೊಳ್ಳಲು ಅವರು ಗಡಿಗಳನ್ನು ತೆರೆಯಲಿದ್ದಾರೆ” ಎಂದು ಟ್ರಂಪ್ ತೀಕ್ಷ್ಣವಾಗಿ ದಾಳಿ ಮಾಡಿದ್ದಾರೆ.

ಈ ಹಿಂದೆ ಕಮಲಾ ಮೇಲೆ ನಡೆಯುತ್ತಿರುವ ಜನಾಂಗೀಯ ದಾಳಿಯ ಕುರಿತು, “ಅವರು ಸುಳ್ಳಿನಲ್ಲಿ, ಮೋಸದಲ್ಲಿ ತೊಡಗಲಿದ್ದಾರೆ. ಅವರು ಅಮೆರಿಕಾದ ಜನರ ಮೇಲೆ ಪರಿಣಾಮ ಬೀರುವ ನೈಜ ಸಮಸ್ಯೆಗಳಿಂದ ದೂರವಿರಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದರು.

ಇದನ್ನೂ ಓದಿ: ಕೊರೊನಾ ಬಗ್ಗೆ ತಪ್ಪು ಮಾಹಿತಿ: ಟ್ರಂಪ್ ಟ್ವೀಟ್‌ ಅನ್ನು ನಿರ್ಬಂಧಿಸಿದ ಟ್ವಿಟ್ಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...