Homeಮುಖಪುಟನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ವಿಫಲವಾದ ಪ.ಬಂಗಾಳದ ಬಿಜೆಪಿ ರ್‍ಯಾಲಿ!

ನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ವಿಫಲವಾದ ಪ.ಬಂಗಾಳದ ಬಿಜೆಪಿ ರ್‍ಯಾಲಿ!

ರ್‍ಯಾಲಿಯಲ್ಲಿ ಕಾರ್ಯಕರ್ತರನ್ನು ಸೇರಿಸುವ ಮೂಲ ಗುರಿ 2 ಲಕ್ಷಕ್ಕೆ ಇಟ್ಟುಕೊಳ್ಳಲಾಗಿತ್ತು. ಇದನ್ನು ಒಂದೆರಡು ದಿನಗಳ ಹಿಂದೆ ಅಧಿಕೃತವಾಗಿ 50,000ಕ್ಕೆ ಇಳಿಸಲಾಯಿತು. ಆದರೆ ವಾಸ್ತವದಲ್ಲಿ 15,000 ಜನ ಕೂಡ ಸೇರಲಿಲ್ಲ.

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಅಡಿಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧದ ಹಮ್ಮಿಕೊಂಡಿದ್ದ ಬಿಜೆಪಿ ಯುವ ಮೋರ್ಚಾ ರ್‍ಯಾಲಿ ತನ್ನ ಪ್ರಭಾವ ಬಿರುವಲ್ಲಿ ಸೋತಿದೆ ಎಂದು ಟೆಲಿಗ್ರಾಫ್ ಇಂಡಿಯಾ ಪತ್ರಿಕೆ ವರದಿ ಮಾಡಿದೆ.

ಬಿಜೆಪಿ ಕಾರ್ಯಕರ್ತರ ಹತ್ಯೆ ಆರೋಪದ ಜೊತೆಗೆ ಪಾರದರ್ಶಕ ನೇಮಕಾತಿ ಪ್ರಕ್ರಿಯೆ, ಉದ್ಯೋಗಗಳು ಮತ್ತು ವಿವಿಧ ಪರೀಕ್ಷೆಗಳಿಗೆ ಹೆಚ್ಚಿನ ವಯಸ್ಸಿನ ಮಿತಿಯನ್ನು ಹೆಚ್ಚಿಸುವಂತಹ ಯುವ ಕೇಂದ್ರಿತ ಬೇಡಿಕೆಗಳ ಮೇಲೆ ಆಯೋಜಿಸಲಾಗಿದ್ದ ರ್ಯಾಲಿಯನ್ನು ನಾಲ್ಕು ಬಿಜಪಿ ಮುಖಂಡರ ನೇತೃತ್ವದಲ್ಲಿ ನಾಲ್ಕು ಕಡೆಗಳಲ್ಲಿ ಆಯೋಜಿಸಲಾಗಿತ್ತು.

ರಾಜ್ಯ ಘಟಕದ ಮುಖ್ಯಸ್ಥ ದಿಲೀಪ್ ಘೋಷ್ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೇಂದ್ರ ಕಚೇರಿ ಬಳಿ, ಬಂಗಾಳದ ಕೈಲಾಶ್ ವಿಜಯವರ್ಗಿಯಾ ನೇತೃತ್ವದಲ್ಲಿ ಹೇಸ್ಟಿಂಗ್ಸ್‌ನಲ್ಲಿರುವ ಪಕ್ಷದ ಕಚೇರಿ, ಬಿಜೆಪಿ ಯುವ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದ ಹೌರಾ ಮೈದಾನ ಮತ್ತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ನೇತೃತ್ವದಲ್ಲಿ ಸಂತಾಗಾಚಿಗಳಲ್ಲಿ ರ್‍ಯಾಲಿ ಆಯೋಜಿಸಲಾಗಿತ್ತು.

ನಿನ್ನೆ ನಡೆದ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದ ಭಾರತೀಯ ಜನತಾ ಯುವ ಮೊರ್ಚಾ ರ್‍ಯಾಲಿಗೆ (ನಬನ್ನಾ ಚಲೋ) ತೀವ್ರ ಪ್ರಚಾರ ನೀಡಲಾಗಿತ್ತು. ಆದರೆ ರ್ಯಾಲಿಯಲ್ಲಿ ಬಹಳ ಕಡಿಮೆ ಇದ್ದುದ್ದಲ್ಲದೇ, ನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ಸಫಲವಾಗಿಲ್ಲ ಎಂದು ಪತ್ರಿಕೆ ಹೇಳಿದೆ.

ಇದನ್ನೂ ಓದಿ: ಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಪ.ಬಂಗಾಳ ರಾಜ್ಯ ಬಿಜೆಪಿ ಕೇಂದ್ರ ಕಚೇರಿಯ ಮೂಲವೊಂದರ ಪ್ರಕಾರ ’ಮಧ್ಯಾಹ್ನದ ಹೊತ್ತಿಗೆ ತೇಜಸ್ವಿ ಸೂರ್ಯ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರಿಂದಲೂ ನಬನ್ನಾ ಚಲೋದಂತಹ ಹ್ಯಾಶ್‌ಟ್ಯಾಗ್‌ಗಳನ್ನು ತೀವ್ರಗೊಳಿಸಲು ಸಾಧ್ಯವಿಲ್ಲ ಎಂದು ನಮಗೆ ಸ್ಪಷ್ಟವಾಯಿತು” ಎಂದು ಕಾರ್ಯಕರ್ತರೊಬ್ಬರು ತಿಳಿಸಿದ್ದರು ಎನ್ನಲಾಗಿದೆ.

ಹಲವು ಜಿಲ್ಲೆಗಳಿಂದ ಬರುವ ಕಾರ್ಯಕರ್ತರನ್ನು ಟಿಎಂಸಿ ಕಾರ್ಯಕರ್ತರು ತಡೆದರೂ 46,000 ಕ್ಕಿಂತ ಹೆಚ್ಚಿನ ಜನ ರ್‍ಯಾಲಿಯಲ್ಲಿ ಭಾಗಿಯಾಗಿದ್ದಾರೆ ಎಂದು ಬಂಗಾಳ ಬಿಜೆಪಿ ಯುವ ವಿಭಾಗದ ರಾಜ್ಯ ಘಟಕದ ಮುಖ್ಯಸ್ಥ ಸೌಮಿತ್ರಾ ಖಾನ್ ಹೇಳಿಕೊಂಡಿದ್ದಾರೆ. ಆದರೆ ಪಕ್ಷದ ಇತರರು ಜನರನ್ನು ಸೇರಿಸುವುದು ಒಂದು ದೊಡ್ಡ ಸಮಸ್ಯೆಯೆಂದು ಒಪ್ಪಿಕೊಂಡಿದ್ದಾರೆ.

PC: Doordarshan

”ರ್‍ಯಾಲಿಯಲ್ಲಿ ಕಾರ್ಯಕರ್ತರನ್ನು ಸೇರಿಸುವ ಮೂಲ ಗುರಿ 2 ಲಕ್ಷಕ್ಕೆ ಇಟ್ಟುಕೊಳ್ಳಲಾಗಿತ್ತು. ಇದನ್ನು ಒಂದೆರಡು ದಿನಗಳ ಹಿಂದೆ ಅಧಿಕೃತವಾಗಿ 50,000ಕ್ಕೆ ಇಳಿಸಲಾಯಿತು. ಆದರೆ ವಾಸ್ತವದಲ್ಲಿ 15,000 ಜನ ಕೂಡ ಸೇರಲಿಲ್ಲ” ಎಂದು ರಾಜ್ಯ ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ನಬನ್ನಾ ಚಲೋ ರ್‍ಯಾಲಿ ವಿಫಲವಾಗಲು ಮೂಲ ಕಾರಣ ಅದು ಯೋಜಿತ ಕಾರ್ಯಕ್ರಮವಾಗಿರಲಿಲ್ಲ. ಜೊತೆಗೆ ನಬನ್ನಾವನ್ನು ನಿನ್ನೆ ಮುಚ್ಚಲಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್‌ ಮಾಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಯೂ ಇರುವ ಸಚಿವಾಲಯವನ್ನು ಎರಡು ದಿನಗಳ ಅವಧಿಗೆ ಮುಚ್ಚಲಾಗಿತ್ತು.

ಪಶ್ಚಿಮ ಬಂಗಾಳ ಸಚಿವಾಲಯ ‘ನಬನ್ನಾ’ದ ಹೊರಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ವಿಭಾಗವು ಆಯೋಜಿಸಿದ್ದ ಪ್ರತಿಭಟನಾ ರ್‍ಯಾಲಿ ಹಿಂಸಾತ್ಮಕ ರೂಪ ಪಡೆದಿತ್ತು. ನೂರಾರು ಬಿಜೆಪಿ ಕಾರ್ಯಕರ್ತರು-ಪೊಲೀಸರ ನಡುವೆ ಸಂಘರ್ಷ ಉಂಟಾಗಿ ಪೊಲೀಸರು ಲಾಠೀ ಚಾರ್ಜ್‌ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾದ್ದರು.

ಈ ಘಟನೆಯನ್ನು ತೇಜಸ್ವಿ ಸೂರ್ಯ ಖಂಡಿಸಿದ್ದರು. ’ಟಿಸಿಎಂ ಗೂಂಡಾಗಳು ನಮ್ಮ ಮೇಲೆ ಕಂಟ್ರಿ ಬಾಂಬ್‌ಗಳನ್ನು ಎಸೆದಿದ್ದಾರೆ. ಫ್ಯಾಸಿಸಂ ಅಂದರೆ ಇದೆ’ ಎಂದು ಟ್ವೀಟ್ ಮಾಡಿದ್ದರು. ಇದು ಬ್ಲಾಕ್ ಡೇ, ಪೊಲೀಸ್ ಠಾಣೆಗಳು ಮಮತಾ ಅವರ ಬಂಗಾಳದಲ್ಲಿ ಟಿಎಂಸಿ ಪಕ್ಷದ ಕಚೇರಿಗಳಾಗಿವೆ ಎಂದು  ಟೀಕಿಸಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ತಮ್ಮ ಸರಣಿ ಟ್ವೀಟ್‌ಗಳಲ್ಲಿ “ಪಶ್ಚಿಮ ಬಂಗಾಳದಲ್ಲಿ ತನ್ನ ದಬ್ಬಾಳಿಕೆ ಮತ್ತು ರಕ್ತಸಿಕ್ತ ದುಷ್ಕೃತ್ಯದ ವಿರುದ್ಧ ಪ್ರತಿಭಟನೆ ನಡೆಸದಂತೆ ತಡೆಯುವ ಪ್ರಯತ್ನದಲ್ಲಿ ಮಮತಾ ಬ್ಯಾನರ್ಜಿಯ ಕಾರ್ಯಕರ್ತರು ಮತ್ತು ಅವರ ನೇತೃತ್ವದ ಸರ್ಕಾರದ ’ಯಂತ್ರೋಪಕರಣಗಳು’ ಬಿಜೆಪಿ ಕಾರ್ಯಕರ್ತರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಬಿಚ್ಚಿಟ್ಟಿವೆ’ ಎಂದು ಆರೋಪಿಸಿದ್ದಾರೆ. ಅಧಿಕಾರದ ಇಂತಹ ದುರುಪಯೋಗವು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ಖಂಡನೀಯ ಎಂದಿದ್ದಾರೆ.

ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫಿರ್ಹಾದ್ ಹಕೀಮ್ “ಬಿಜೆಪಿ ರಾಜಕೀಯ ಪಕ್ಷವಲ್ಲ. ಅದು ಭಯೋತ್ಪಾದನೆಯ ಪಕ್ಷ…. ಇದು ಉತ್ತರ ಪ್ರದೇಶದಿಂದ ತನ್ನ ಮಾದರಿಯನ್ನು ಬಂಗಾಳಕ್ಕೆ ಆಮದು ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಒಟ್ಟಾರೆ, ನೂತನವಾಗಿ ಬಿಜೆಪಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿಗಳಾಗಿ ನೇಮಕವಾದವರು ಮೊದಲ ರ್‍ಯಾಲಿಯಲ್ಲೇ ತಮ್ಮ ಪ್ರಭಾವ ಬೀರಲು ವಿಫಲರಾಗಿರುವುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆ ಸಾಕ್ಷಿಯಾಗಿದೆ ಎಂದು ಅಲ್ಲಿಯ ರಾಜ್ಯ ಬಿಜೆಪಿ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ


ಇದನ್ನೂ ಓದಿ: ಭಯೋತ್ಪಾದಕರೆಂದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ 9 ಜನರನ್ನು ಬಂಧಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...