Homeಮುಖಪುಟನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ವಿಫಲವಾದ ಪ.ಬಂಗಾಳದ ಬಿಜೆಪಿ ರ್‍ಯಾಲಿ!

ನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ವಿಫಲವಾದ ಪ.ಬಂಗಾಳದ ಬಿಜೆಪಿ ರ್‍ಯಾಲಿ!

ರ್‍ಯಾಲಿಯಲ್ಲಿ ಕಾರ್ಯಕರ್ತರನ್ನು ಸೇರಿಸುವ ಮೂಲ ಗುರಿ 2 ಲಕ್ಷಕ್ಕೆ ಇಟ್ಟುಕೊಳ್ಳಲಾಗಿತ್ತು. ಇದನ್ನು ಒಂದೆರಡು ದಿನಗಳ ಹಿಂದೆ ಅಧಿಕೃತವಾಗಿ 50,000ಕ್ಕೆ ಇಳಿಸಲಾಯಿತು. ಆದರೆ ವಾಸ್ತವದಲ್ಲಿ 15,000 ಜನ ಕೂಡ ಸೇರಲಿಲ್ಲ.

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಅಡಿಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧದ ಹಮ್ಮಿಕೊಂಡಿದ್ದ ಬಿಜೆಪಿ ಯುವ ಮೋರ್ಚಾ ರ್‍ಯಾಲಿ ತನ್ನ ಪ್ರಭಾವ ಬಿರುವಲ್ಲಿ ಸೋತಿದೆ ಎಂದು ಟೆಲಿಗ್ರಾಫ್ ಇಂಡಿಯಾ ಪತ್ರಿಕೆ ವರದಿ ಮಾಡಿದೆ.

ಬಿಜೆಪಿ ಕಾರ್ಯಕರ್ತರ ಹತ್ಯೆ ಆರೋಪದ ಜೊತೆಗೆ ಪಾರದರ್ಶಕ ನೇಮಕಾತಿ ಪ್ರಕ್ರಿಯೆ, ಉದ್ಯೋಗಗಳು ಮತ್ತು ವಿವಿಧ ಪರೀಕ್ಷೆಗಳಿಗೆ ಹೆಚ್ಚಿನ ವಯಸ್ಸಿನ ಮಿತಿಯನ್ನು ಹೆಚ್ಚಿಸುವಂತಹ ಯುವ ಕೇಂದ್ರಿತ ಬೇಡಿಕೆಗಳ ಮೇಲೆ ಆಯೋಜಿಸಲಾಗಿದ್ದ ರ್ಯಾಲಿಯನ್ನು ನಾಲ್ಕು ಬಿಜಪಿ ಮುಖಂಡರ ನೇತೃತ್ವದಲ್ಲಿ ನಾಲ್ಕು ಕಡೆಗಳಲ್ಲಿ ಆಯೋಜಿಸಲಾಗಿತ್ತು.

ರಾಜ್ಯ ಘಟಕದ ಮುಖ್ಯಸ್ಥ ದಿಲೀಪ್ ಘೋಷ್ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೇಂದ್ರ ಕಚೇರಿ ಬಳಿ, ಬಂಗಾಳದ ಕೈಲಾಶ್ ವಿಜಯವರ್ಗಿಯಾ ನೇತೃತ್ವದಲ್ಲಿ ಹೇಸ್ಟಿಂಗ್ಸ್‌ನಲ್ಲಿರುವ ಪಕ್ಷದ ಕಚೇರಿ, ಬಿಜೆಪಿ ಯುವ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದ ಹೌರಾ ಮೈದಾನ ಮತ್ತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ನೇತೃತ್ವದಲ್ಲಿ ಸಂತಾಗಾಚಿಗಳಲ್ಲಿ ರ್‍ಯಾಲಿ ಆಯೋಜಿಸಲಾಗಿತ್ತು.

ನಿನ್ನೆ ನಡೆದ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದ ಭಾರತೀಯ ಜನತಾ ಯುವ ಮೊರ್ಚಾ ರ್‍ಯಾಲಿಗೆ (ನಬನ್ನಾ ಚಲೋ) ತೀವ್ರ ಪ್ರಚಾರ ನೀಡಲಾಗಿತ್ತು. ಆದರೆ ರ್ಯಾಲಿಯಲ್ಲಿ ಬಹಳ ಕಡಿಮೆ ಇದ್ದುದ್ದಲ್ಲದೇ, ನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ಸಫಲವಾಗಿಲ್ಲ ಎಂದು ಪತ್ರಿಕೆ ಹೇಳಿದೆ.

ಇದನ್ನೂ ಓದಿ: ಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಪ.ಬಂಗಾಳ ರಾಜ್ಯ ಬಿಜೆಪಿ ಕೇಂದ್ರ ಕಚೇರಿಯ ಮೂಲವೊಂದರ ಪ್ರಕಾರ ’ಮಧ್ಯಾಹ್ನದ ಹೊತ್ತಿಗೆ ತೇಜಸ್ವಿ ಸೂರ್ಯ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರಿಂದಲೂ ನಬನ್ನಾ ಚಲೋದಂತಹ ಹ್ಯಾಶ್‌ಟ್ಯಾಗ್‌ಗಳನ್ನು ತೀವ್ರಗೊಳಿಸಲು ಸಾಧ್ಯವಿಲ್ಲ ಎಂದು ನಮಗೆ ಸ್ಪಷ್ಟವಾಯಿತು” ಎಂದು ಕಾರ್ಯಕರ್ತರೊಬ್ಬರು ತಿಳಿಸಿದ್ದರು ಎನ್ನಲಾಗಿದೆ.

ಹಲವು ಜಿಲ್ಲೆಗಳಿಂದ ಬರುವ ಕಾರ್ಯಕರ್ತರನ್ನು ಟಿಎಂಸಿ ಕಾರ್ಯಕರ್ತರು ತಡೆದರೂ 46,000 ಕ್ಕಿಂತ ಹೆಚ್ಚಿನ ಜನ ರ್‍ಯಾಲಿಯಲ್ಲಿ ಭಾಗಿಯಾಗಿದ್ದಾರೆ ಎಂದು ಬಂಗಾಳ ಬಿಜೆಪಿ ಯುವ ವಿಭಾಗದ ರಾಜ್ಯ ಘಟಕದ ಮುಖ್ಯಸ್ಥ ಸೌಮಿತ್ರಾ ಖಾನ್ ಹೇಳಿಕೊಂಡಿದ್ದಾರೆ. ಆದರೆ ಪಕ್ಷದ ಇತರರು ಜನರನ್ನು ಸೇರಿಸುವುದು ಒಂದು ದೊಡ್ಡ ಸಮಸ್ಯೆಯೆಂದು ಒಪ್ಪಿಕೊಂಡಿದ್ದಾರೆ.

PC: Doordarshan

”ರ್‍ಯಾಲಿಯಲ್ಲಿ ಕಾರ್ಯಕರ್ತರನ್ನು ಸೇರಿಸುವ ಮೂಲ ಗುರಿ 2 ಲಕ್ಷಕ್ಕೆ ಇಟ್ಟುಕೊಳ್ಳಲಾಗಿತ್ತು. ಇದನ್ನು ಒಂದೆರಡು ದಿನಗಳ ಹಿಂದೆ ಅಧಿಕೃತವಾಗಿ 50,000ಕ್ಕೆ ಇಳಿಸಲಾಯಿತು. ಆದರೆ ವಾಸ್ತವದಲ್ಲಿ 15,000 ಜನ ಕೂಡ ಸೇರಲಿಲ್ಲ” ಎಂದು ರಾಜ್ಯ ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ನಬನ್ನಾ ಚಲೋ ರ್‍ಯಾಲಿ ವಿಫಲವಾಗಲು ಮೂಲ ಕಾರಣ ಅದು ಯೋಜಿತ ಕಾರ್ಯಕ್ರಮವಾಗಿರಲಿಲ್ಲ. ಜೊತೆಗೆ ನಬನ್ನಾವನ್ನು ನಿನ್ನೆ ಮುಚ್ಚಲಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್‌ ಮಾಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಯೂ ಇರುವ ಸಚಿವಾಲಯವನ್ನು ಎರಡು ದಿನಗಳ ಅವಧಿಗೆ ಮುಚ್ಚಲಾಗಿತ್ತು.

ಪಶ್ಚಿಮ ಬಂಗಾಳ ಸಚಿವಾಲಯ ‘ನಬನ್ನಾ’ದ ಹೊರಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ವಿಭಾಗವು ಆಯೋಜಿಸಿದ್ದ ಪ್ರತಿಭಟನಾ ರ್‍ಯಾಲಿ ಹಿಂಸಾತ್ಮಕ ರೂಪ ಪಡೆದಿತ್ತು. ನೂರಾರು ಬಿಜೆಪಿ ಕಾರ್ಯಕರ್ತರು-ಪೊಲೀಸರ ನಡುವೆ ಸಂಘರ್ಷ ಉಂಟಾಗಿ ಪೊಲೀಸರು ಲಾಠೀ ಚಾರ್ಜ್‌ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾದ್ದರು.

ಈ ಘಟನೆಯನ್ನು ತೇಜಸ್ವಿ ಸೂರ್ಯ ಖಂಡಿಸಿದ್ದರು. ’ಟಿಸಿಎಂ ಗೂಂಡಾಗಳು ನಮ್ಮ ಮೇಲೆ ಕಂಟ್ರಿ ಬಾಂಬ್‌ಗಳನ್ನು ಎಸೆದಿದ್ದಾರೆ. ಫ್ಯಾಸಿಸಂ ಅಂದರೆ ಇದೆ’ ಎಂದು ಟ್ವೀಟ್ ಮಾಡಿದ್ದರು. ಇದು ಬ್ಲಾಕ್ ಡೇ, ಪೊಲೀಸ್ ಠಾಣೆಗಳು ಮಮತಾ ಅವರ ಬಂಗಾಳದಲ್ಲಿ ಟಿಎಂಸಿ ಪಕ್ಷದ ಕಚೇರಿಗಳಾಗಿವೆ ಎಂದು  ಟೀಕಿಸಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ತಮ್ಮ ಸರಣಿ ಟ್ವೀಟ್‌ಗಳಲ್ಲಿ “ಪಶ್ಚಿಮ ಬಂಗಾಳದಲ್ಲಿ ತನ್ನ ದಬ್ಬಾಳಿಕೆ ಮತ್ತು ರಕ್ತಸಿಕ್ತ ದುಷ್ಕೃತ್ಯದ ವಿರುದ್ಧ ಪ್ರತಿಭಟನೆ ನಡೆಸದಂತೆ ತಡೆಯುವ ಪ್ರಯತ್ನದಲ್ಲಿ ಮಮತಾ ಬ್ಯಾನರ್ಜಿಯ ಕಾರ್ಯಕರ್ತರು ಮತ್ತು ಅವರ ನೇತೃತ್ವದ ಸರ್ಕಾರದ ’ಯಂತ್ರೋಪಕರಣಗಳು’ ಬಿಜೆಪಿ ಕಾರ್ಯಕರ್ತರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಬಿಚ್ಚಿಟ್ಟಿವೆ’ ಎಂದು ಆರೋಪಿಸಿದ್ದಾರೆ. ಅಧಿಕಾರದ ಇಂತಹ ದುರುಪಯೋಗವು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ಖಂಡನೀಯ ಎಂದಿದ್ದಾರೆ.

ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫಿರ್ಹಾದ್ ಹಕೀಮ್ “ಬಿಜೆಪಿ ರಾಜಕೀಯ ಪಕ್ಷವಲ್ಲ. ಅದು ಭಯೋತ್ಪಾದನೆಯ ಪಕ್ಷ…. ಇದು ಉತ್ತರ ಪ್ರದೇಶದಿಂದ ತನ್ನ ಮಾದರಿಯನ್ನು ಬಂಗಾಳಕ್ಕೆ ಆಮದು ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಒಟ್ಟಾರೆ, ನೂತನವಾಗಿ ಬಿಜೆಪಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿಗಳಾಗಿ ನೇಮಕವಾದವರು ಮೊದಲ ರ್‍ಯಾಲಿಯಲ್ಲೇ ತಮ್ಮ ಪ್ರಭಾವ ಬೀರಲು ವಿಫಲರಾಗಿರುವುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆ ಸಾಕ್ಷಿಯಾಗಿದೆ ಎಂದು ಅಲ್ಲಿಯ ರಾಜ್ಯ ಬಿಜೆಪಿ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ


ಇದನ್ನೂ ಓದಿ: ಭಯೋತ್ಪಾದಕರೆಂದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ 9 ಜನರನ್ನು ಬಂಧಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...