Homeಚಳವಳಿ’ಬಿಜೆಪಿಯದ್ದು ಕೊಳಕು ರಾಜಕೀಯ’-ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧನಕ್ಕೆ ದೇಶದಾದ್ಯಂತ ಆಕ್ರೋಶ

’ಬಿಜೆಪಿಯದ್ದು ಕೊಳಕು ರಾಜಕೀಯ’-ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧನಕ್ಕೆ ದೇಶದಾದ್ಯಂತ ಆಕ್ರೋಶ

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ 83 ವರ್ಷದ ಸ್ಟ್ಯಾನ್ ಸ್ವಾಮಿಯನ್ನು NIA ಬಂಧಿಸಿದೆ.

- Advertisement -
- Advertisement -

ಐದು ದಶಕದಿಂದ ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿರುವ ಫಾದರ್‌ ಸ್ಟ್ಯಾನ್ ಸ್ವಾಮಿಯ ಬಂಧನಕ್ಕೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು ಸಮಾಜಿಕ ಹೋರಾಟಗಾರರು, ಸಾಹಿತಿಗಳು ಸೇರಿದಂತೆ ಹಲವಾರು ಗಣ್ಯರು ಬಂಧನದ ವಿರುದ್ದ ಹೇಳಿಕೆ ನೀಡಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ 83 ವರ್ಷದ ಸ್ಟ್ಯಾನ್ ಸ್ವಾಮಿಯನ್ನು NIA ಬಂಧಿಸಿದೆ. ಬುಡಕಟ್ಟು ಜನರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ಸ್ಟ್ಯಾನ್ ಸ್ವಾಮಿಯ ಮೇಲೆ ಭಯೋತ್ಪಾದನೆ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಕಠಿಣ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ಸ್ಟ್ಯಾನ್ ಅವರನ್ನು NIA ಯಾವುದೇ ವಾರಂಟ್ ಇಲ್ಲದೆ ಬಂಧಿಸಲಾಗಿದೆ ಎಂದು ಅವರ ಆಪ್ತ ಸಿರಾಜ್ ದತ್ತಾ ಆರೋಪಿಸಿದ್ದಾಗಿ ಬಿಬಿಸಿ ವರದಿ ಮಾಡಿದೆ. ಸ್ಟಾನ್ ಸ್ವಾಮಿ ಅಕ್ಟೋಬರ್ 6 ರಂದು ವೀಡಿಯೊವೊಂದನ್ನು ಬಿಡುಗಡೆ ಮಾಡಿ, NAI ಜುಲೈನಲ್ಲಿ 15 ಗಂಟೆ ತನ್ನನ್ನು ವಿಚಾರಣೆ ನಡೆಸಿದ್ದು, ಹೆಚ್ಚಿನ ವಿಚಾರಣೆಗೆ ಮುಂಬೈಗೆ ಬರಲು ಹೇಳಿದ್ದಾರೆ ಎಂದು ಹೇಳಿದ್ದರು.

ಇವರ ಬಂಧನಕ್ಕೆ ದೇಶದಾದ್ಯಂತ ವಿರೋಧ ಎದ್ದಿದ್ದು ಬಿಜೆಪಿ ತಮ್ಮ ವಿರುದ್ದದ ಎಲ್ಲಾ ಧ್ವನಿಗಳನ್ನು ಹತ್ತಿಕ್ಕುವ ಕೊಳಕು ರಾಜಕೀಯ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತಿಹಾಸಕಾರ ರಾಮಚಂದ್ರ ಗುಹ, “ಹೋರಾಟಗಾರ್ತಿ ಸುಧಾ ಭಾರದ್ವಾಜ್ ಅವರಂತೆಯೇ, ಸ್ಟ್ಯಾನ್ ಸ್ವಾಮಿ ಕೂಡಾ ಆದಿವಾಸಿಗಳ ಹಕ್ಕುಗಳಿಗಾಗಿ ಜೀವಮಾನವಿಡೀ ಹೋರಾಡಿದ್ದಾರೆ. ಅದಕ್ಕಾಗಿಯೇ ಮೋದಿ ಆಡಳಿತವು ಅವರನ್ನು ನಿಗ್ರಹಿಸಲು ಹಾಗೂ ಅವರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತದೆ; ಯಾಕೆಂದರೆ ಈ ಆಡಳಿತವು ಆದಿವಾಸಿಗಳ ಜೀವನ ಮತ್ತು ಜೀವನೋಪಾಯಗಳಿಗಿಂತ ಗಣಿಗಾರಿಕಾ ಕಂಪನಿಗಳ ಲಾಭಗಳಿಗೆ ಆದ್ಯತೆ ನೀಡುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

ಸ್ವೀಡನ್ ಉಪ್ಸಲಾ ವಿಶ್ವವಿದ್ಯಾಲಯ ಪ್ರೊಫೆಸರ್‌ ಅಶೋಕ್, “ಮೋದಿಯ ಪೊಲೀಸರು 83 ವರ್ಷ ಹಿರಿಯ ಪಾದ್ರಿ ಸ್ಟ್ಯಾನ್ ಸ್ವಾಮಿಯನ್ನು ಬಂಧಿಸಿದ್ದಾರೆ. ಅವರು ಮಾಡಿರುವ ಏಕೈಕ ತಪ್ಪೆಂದರೆ ಅವರು ತನ್ನ ಜೀವನದುದ್ದಕ್ಕೂ ಬುಡಕಟ್ಟು ಜನಾಂಗದವರಿಗಾಗಿ ಕೆಲಸ ಮಾಡಿದ್ದು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್‌ ಸೊರೆನ್ ಬಂಧನವನ್ನು ಖಂಡಿಸಿದ್ದು, ತಮ್ಮ ವಿರುದ್ದದ ಎಲ್ಲಾ ಧ್ವನಿಯನ್ನು ಹತ್ತಿಕ್ಕುತ್ತಾ ಬಿಜೆಪಿ ಕೊಳಕು ರಾಜಕೀಯ ಮಾಡುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಸ್ವರಾಜ್ ಅಭಿಯಾನದ ಯೋಗೇಂದ್ರ ಯಾದವ್, “ತನ್ನ ಜೀವನವನ್ನೆಲ್ಲಾ ಬಡವರ ಸೇವೆಗಾಗಿ ಕಳೆದ 83 ವರ್ಷದ ಪಾದ್ರಿಯ ಮೇಲಿನ ದಾಳಿ ಆಘಾತಕಾರಿ ಮತ್ತು ಖಂಡನೀಯ” ಎಂದು ಹೇಳಿದ್ದಾರೆ.

ಸಾಹಿತಿ ಸಂಜಯ್ ರಾಯ್, “84 ವರ್ಷ ವಯಸ್ಸಿನಲ್ಲಿ ಸ್ಟ್ಯಾನ್‌ಸ್ವಾಮಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ಯುವುದು ಕಾನೂನಿನ ಹೊರತಾಗಿ ಕೆಲಸ ಮಾಡುವ ಸರ್ಕಾರಗಳಿಗೆ ಮತ್ತೊಂದು ಉದಾಹರಣೆಯಾಗಿದೆ!” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್- ಕೇಂದ್ರದ ಹಸ್ತಕ್ಷೇಪ ದುರುದ್ದೇಶಪೂರಿತ

 

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...