Homeಕರ್ನಾಟಕ‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ನೆಟ್‌ವರ್ಕ್ ಸಿಗುವ ದೇವಳಮಕ್ಕಿ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದ ತಂಗುದಾಣ, ಅಂಗಡಿಗಳು, ತಮ್ಮ ಸ್ನೇಹಿತರ ಮನೆಯಲ್ಲಿ ಕುಳಿತು ವಿದ್ಯಾರ್ಥಿಗಳು ಪಾಠ ಕೇಳಿಸಿಕೊಳ್ಳುತ್ತಾರೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ಹೋಗಲು ನಿರ್ಬಂಧವಿರುವ ಕಾರಣ ಆನ್‌ಲೈನ್ ತರಗತಿಗಳನ್ನು ಜಾರಿ ಮಾಡಲಾಗಿದೆ. ನಗರ ಪ್ರದೇಶಗಳಿಂದ ಅನತಿ ದೂರದಲ್ಲಿರುವ ವಿದ್ಯಾರ್ಥಿಗಳಿಗೆ ಇದು ಉಪಯೋಗವಾದರೂ, ಹಳ್ಳಿಗಳಲ್ಲಿ ವಾಸಿಸುವವರಿಗೆ, ಆರ್ಥಿಕ ಪರಿಸ್ಥಿತಿ ಸರಿಯಿಲ್ಲದಿರುವವರಿಗೆ, ‌ನೆಟ್‌ವರ್ಕ್‌ ಸಿಗದ ಪ್ರದೇಶಗಳಲ್ಲಿ ವಾಸಿಸುವವರಿಗೆ ಶಾಪವಾಗಿ ಪರಿಣಮಿಸಿದೆ.

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ದೇವಳಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಗೆ, ಶಿರ್ವೆ, ಹಾಗೂ ಕೋವೆ ಗ್ರಾಮಗಳ ವಿದ್ಯಾರ್ಥಿಗಳು ನಿತ್ಯವೂ ಆನ್‌ಲೈನ್ ತರಗತಿಗಳಿ ಹಾಜರಾಗಲು 5 ಕಿಲೋಮೀಟರ್‌ ನಡೆಯಬೇಕಾಗಿದೆ.

ಈ ಹಳ್ಳಿಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಿಗದ ಕಾರಣ ಇಲ್ಲಿನ ವಿದ್ಯಾರ್ಥಿಗಳು ತಮ್ಮ ಊರಿನಿಂದ ಐದಾರು ಕಿ.ಮೀ ನಡೆದುಕೊಂಡು ಬರುತ್ತಾರೆ. ಕೆಲವರು ಸೈಕಲ್‌ನಲ್ಲಿ ಬರುತ್ತಾರೆ. ‌ನೆಟ್‌ವರ್ಕ್ ಸಿಗುವ ದೇವಳಮಕ್ಕಿ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದ ತಂಗುದಾಣ, ಅಂಗಡಿ, ತಮ್ಮ ಸ್ನೇಹಿತರ ಮನೆಯಲ್ಲಿ ಕುಳಿತು ಪಾಠ ಕೇಳಿಸಿಕೊಳ್ಳುತ್ತಾರೆ.

ಇದನ್ನೂ ಓದಿ: ಆನ್‌ಲೈನ್‌ ತರಗತಿಗೆ ಹಾಜರಾಗಲು ಅಸಾಧ್ಯ: 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಕಾರವಾರದಲ್ಲಿರುವ ಕಾಮಧೇನು ಕಾಲೇಜಿನಲ್ಲಿ ಬಿಸಿಎ (ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್) ಓದುತ್ತಿರುವ ಪವಿತ್ರಾ ಹೇಳುವಂತೆ, ’ಕಾಲೇಜು ಆಡಳಿತ ಮಂಡಳಿ ಆನ್‌ಲೈನ್ ತರಗತಿಗಳಿಗೆ ಹಾಜರಾಗುವಂತೆ ಹೇಳಿದಾಗ ನಾವು ಗೊಂದಲಕ್ಕೆ ಒಳಗಾದೆವು. ಏಕೆಂದರೆ ನಮ್ಮ ಊರಿನಲ್ಲಿ ಯಾವುದೇ ಮೋಬೈಲ್ ‌ನೆಟ್‌ವರ್ಕ್ ಇಲ್ಲ. ನಂತರ ನಾವು ದೇವಳಮಕ್ಕಿ ಬಸ್ ನಿಲ್ದಾಣದಲ್ಲಿ ಕುಳಿತು ಆನ್‌ಲೈನ್ ತರಗತಿಗಳಿಗೆ ಹಾಜರಾಗುತ್ತೇವೆ. ಅಲ್ಲಿ ಬೇರೆ ಸ್ಥಳಗಳಿಗಿಂತ ನೆಟ್‌ವರ್ಕ್ ಉತ್ತಮವಾಗಿದೆ ಮತ್ತು ನಮಗೆ ಕುಳಿತುಕೊಳ್ಳಲು ಸ್ಥಳವಿದೆ’ ಎನ್ನುತ್ತಾರೆ.

“ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಅಧ್ಯಯನ ಮಾಡುತ್ತೇವೆ ಮತ್ತು ಉಪನ್ಯಾಸಕರು ಟಿಪ್ಪಣಿಗಳನ್ನು ಕಳುಹಿಸಿದ್ದರೆ, ಅದನ್ನು ಅಲ್ಲಿ ಡೌನ್‌ಲೋಡ್ ಮಾಡಿಕೊಂಡು ನಂತರ ಮನೆಗೆ ಹಿಂತಿರುಗುತ್ತೆವೆ” ಎಂದು ವಿದ್ಯಾರ್ಥಿನಿ ಪವಿತ್ರಾ ಹೇಳಿದ್ದಾರೆ.

In Uttara Kannada, students travel miles for cell signal to take online classes | The News Minute
PC: The News Minute

ಈ ಮೂರು ಗ್ರಾಮಗಳಲ್ಲಿ 1,500 ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಇಲ್ಲಿ ಪ್ರಸ್ತುತ ಆನ್‌ಲೈನ್ ತರಗತಿಗಳಿಗೆ ಹಾಜರಾಗುತ್ತಿರುವ 15 ವಿದ್ಯಾರ್ಥಿಗಳಿದ್ದಾರೆ.

ದೇವಳಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಂಟು ಗ್ರಾಮಗಳಿದ್ದು, ಅವುಗಳಲ್ಲಿ ಐದು ಗ್ರಾಮಗಳಿಗೆ ನೆಟ್‌ವರ್ಕ್ ಸಂಪರ್ಕವಿದೆ. ಆದರೆ, ದೇವಳಮಕ್ಕಿ ಸಮೀಪವೇ ಇರುವ ನಗೆ, ಶಿರ್ವೆ, ಕೋವೆ ಗ್ರಾಮಗಳಿಗೆ ಈವರೆಗೆ ನೆಟ್‌ವರ್ಕ್ ಸಂಪರ್ಕ ಏರ್ಪಟ್ಟಿಲ್ಲ. ದೇವಳಮಕ್ಕಿಯಲ್ಲಿ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್) ನ ಒಂದೇ ಒಂದು ಮೊಬೈಲ್ ಟವರ್ ಇದೆ.

ಇದನ್ನೂ ಓದಿ: LKG ಯಿಂದ 7 ನೇ ತರಗತಿಯವರೆಗೆ ಆನ್‌ಲೈನ್‌ ಕ್ಲಾಸ್‌ ರದ್ದು: ಸಚಿವ ಸಂಪುಟ ತೀರ್ಮಾನ

ಕಠಿಣ ತುರ್ತು ಪರಿಸ್ಥಿತಿಯಲ್ಲಿಯೂ ಸಹ, ನಾವು ಮೊಬೈಲ್ ಸಿಗ್ನಲ್‌ಗಾಗಿ ಕಿಲೋಮೀಟರ್‌ಗಟ್ಟಲೆ  ಪ್ರಯಾಣಿಸಬೇಕಾಗಿದೆ. ಇಲ್ಲೂ ಬಿಎಸ್ಎನ್ಎಲ್ ನೆಟ್ವರ್ಕ್ ಮಾತ್ರ ಲಭ್ಯವಿದೆ. ಪವರ್ ಕಟ್ ಇದ್ದಾಗ ಯಾವುದೇ ನೆಟ್ವರ್ಕ್ ದೊರೆಯುವುದಿಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಅಭ್ಯಸಿಸುತ್ತಿರುವ ದೇವಳಮಕ್ಕಿ ಗ್ರಾಮದ ವಿದ್ಯಾರ್ಥಿ ಪ್ರಜ್ವಲ್ ಹೇಳುವಂತೆ ’ ನನಗೆ ಆನ್‌ಲೈನ್ ತರಗತಿಗಳಿಲ್ಲ. ಆದರೆ ನೆಟ್ವರ್ಕ್ ಸಿಗದೆ ಸಮಸ್ಯೆ ಅನುಭವಿಸುತ್ತಯಿರುವ ವಿದ್ಯಾರ್ಥಿಗಳನ್ನು ನೋಡುತ್ತಿದ್ದೇನೆ. ಆನ್‌ಲೈನ್ ತರಗತಿಗಳು ನಡೆಯಲೇಬೇಕೆಂಬ ನಿಯಮಗಳಿದ್ದರೇ, ನಮ್ಮ ಹಳ್ಳಿಗಳಲ್ಲಿ ಸಂಪರ್ಕವು ಸುಧಾರಿಸಬೇಕು’ ಎಂದಿದ್ದಾರೆ ಎಂದು ಟಿಎನ್‌ಎಂ ವರದಿ ಮಾಡಿದೆ.

PC: The News Minute

ಶಿಕ್ಷಣದ 2017-18ರ ರಾಷ್ಟ್ರೀಯ ಮಾದರಿ ಸಮೀಕ್ಷೆಯ ವರದಿಯ ಪ್ರಕಾರ, ಕೇವಲ 24% ಭಾರತೀಯ ಕುಟುಂಬಗಳು ಮಾತ್ರ ಇಂಟರ್ನೆಟ್ ಸೌಲಭ್ಯವನ್ನು ಹೊಂದಿದ್ದರೆ, ಕೇವಲ 15% ರಷ್ಟು ಗ್ರಾಮೀಣ ಕುಟುಂಬಗಳು ಮಾತ್ರ ಇಂಟರ್ನೆಟ್ ಸೇವೆಗಳನ್ನು ಹೊಂದಿದ್ದಾರೆ. ಖಾಸಗಿ ನೆಟ್‌ವರ್ಕ್ ಪೂರೈಕೆದಾರರು ಚಂದಾದಾರರಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕವನ್ನು ಖಾತರಿಪಡಿಸಿಲ್ಲ ಎಂದು ಶಿಕ್ಷಣ ಸಂಸ್ಥೆಗಳಿಗೆ ಜಾಗತಿಕ ಶ್ರೇಯಾಂಕವನ್ನು ಪ್ರಕಟಿಸುವ ಕ್ಯೂಎಸ್(Quacquarelli Symonds) ವರದಿ ಮಾಡಿದೆ.

ರಾಜ್ಯದ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಕರ್ನಾಟಕ ಸರ್ಕಾರ ಇನ್ನೂ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಶಾಲೆ ತೆರೆಯುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.


ಇದನ್ನೂ ಓದಿ: ಮಕ್ಕಳಿರುವಲ್ಲೇ ಶಾಲೆ!: ಛತ್ತಿಸ್‌ಘಡ ಶಿಕ್ಷಕನ ಮನಮೆಚ್ಚುವ ಕಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...