Homeಕರೋನಾ ತಲ್ಲಣಇನ್ನೂ ಹೆಚ್ಚಿನ ಕೊರೊನಾ ಪರಿಹಾರ ಸಾಧ್ಯವಿಲ್ಲ: ಸುಪ್ರೀಂ‌ಗೆ ಕೇಂದ್ರ ಸರ್ಕಾರ

ಇನ್ನೂ ಹೆಚ್ಚಿನ ಕೊರೊನಾ ಪರಿಹಾರ ಸಾಧ್ಯವಿಲ್ಲ: ಸುಪ್ರೀಂ‌ಗೆ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಹಲವಾರು ಸಮಸ್ಯೆಗಳನ್ನು ಎದುರಿಸಲು ವಿಫಲವಾಗಿದೆ ಎಂದು ಸುಪ್ರೀಂಕೊರ್ಟ್ ಹೇಳಿದೆ.

- Advertisement -
- Advertisement -

ಹಣಕಾಸಿನ ನೀತಿಯಲ್ಲಿ ನ್ಯಾಯಾಲಯಗಳು ಹಸ್ತಕ್ಷೇಪ ಮಾಡಬಾರದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿದ್ದು, ಕೊರೊನಾ ಸಾಂಕ್ರಮಿಕದ ಹಿನ್ನಲೆಯಲ್ಲಿ “ವಿವಿಧ ಕ್ಷೇತ್ರಗಳಿಗೆ ಇನ್ನೂ ಹೆಚ್ಚಿನ ಪರಿಹಾರ ನೀಡಲು ಸಾಧ್ಯವಿಲ್ಲ” ಎಂದು ಮಾಹಿತಿ ನೀಡಿದೆ.

ರಿಯಲ್ ಎಸ್ಟೇಸ್ ಸೇರಿದಂತೆ ಇನ್ನೂ ಹೆಚ್ಚಿನ ವಲಯಗಳಿಗೆ ನೆರವು ನೀಡಬೇಕು ಎಂಬ ಬೇಡಿಕೆಗೆ ಕೇಂದ್ರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, “ಆರ್ಥಿಕ ನೀತಿಯು ಸರ್ಕಾರದ ನಿಯಂತ್ರಣದ್ದಾಗಿದ್ದು, ನ್ಯಾಯಾಲಯ ಇದರಲ್ಲಿ ಹಸ್ತಕ್ಷೇಪ ಮಾಡಬಾರದು. 2 ಕೋಟಿವರೆಗಿನ ಚಕ್ರ ಬಡ್ಡಿಯನ್ನು ಮನ್ನಾ ಮಾಡುವುದರ ಜೊತೆಗೆ ಇನ್ನೂ ಹೆಚ್ಚಿನ ಪರಿಹಾರ ನೀಡಿದರೆ ಅದು ರಾಷ್ಟ್ರದ ಆರ್ಥಿಕತೆ ಮತ್ತು ಬ್ಯಾಂಕಿಂಗ್ ಕ್ಷೇತ್ರಕ್ಕೆ ಹಾನಿಯುಂಟು ಮಾಡುತ್ತದೆ” ಎಂದು ಹೇಳಿದೆ.

ಆದರೆ ಕೇಂದ್ರ ಸರ್ಕಾರ ಸಲ್ಲಿಸಿರುವ ಅಫಿಡವಿಟ್ ’’ತೃಪ್ತಿಕರವಾಗಿಲ್ಲ” ಎಂದು ಸುಪ್ರೀಂಕೋರ್ಟ್ ಹೇಳಿದ್ದು, ಒಂದು ವಾರದಲ್ಲಿ ಹೊಸ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಿದೆ.

ಇದನ್ನೂ ಓದಿ: ಕೊರೊನಾದಿಂದ 551 ವೈದ್ಯರ ಸಾವು: ಭಾರತೀಯ ವೈದ್ಯಕೀಯ ಸಂಘಟನೆಯ ದತ್ತಾಂಶ
2 ಕೋಟಿವರೆಗಿನ ಸಾಲದ ಮರುಪಾವತಿ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲು ಸಿದ್ಧ ಎಂದು ಸರ್ಕಾರ ಕಳೆದ ವಾರ ಸುಪ್ರೀಂಕೋರ್ಟ್ ತಿಳಿಸಿತ್ತು. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ತೆಗೆದುಕೊಂಡ ಸಾಲಗಳಿಗೆ, ಶೈಕ್ಷಣಿಕ, ವಸತಿ, ಗ್ರಾಹಕ ವಸ್ತುಗಳು ಮತ್ತು ವಾಹನ ಸಾಲಗಳಿಗೆ ಮತ್ತು ಕ್ರೆಡಿಟ್ ಕಾರ್ಡ್ ಬಾಕಿಗಾಗಿ ಈ ಬಡ್ಡಿ ಮನ್ನಾ ಅನ್ವಯಿಸುತ್ತದೆ.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಸಣ್ಣ ಸಾಲಗಾರರಿಗೆ ಸಹಾಯ ಮಾಡಲು ಮುಂದೂಡಲ್ಪಟ್ಟ ಇಎಂಐಗಳ ಮೇಲಿನ ಬಡ್ಡಿ ಮನ್ನಾದ ವಿಚಾರಣೆ ಆಲಿಸುತ್ತಿದ್ದ ಸುಪ್ರೀಂಕಕೋರ್ಟ್, “ಅರ್ಜಿದಾರರು ಎತ್ತಿದ ಹಲವಾರು ಸಮಸ್ಯೆಗಳನ್ನು ಎದುರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ” ಎಂದು ಹೇಳಿದೆ.

ರಿಯಲ್ ಎಸ್ಟೇಟ್ ಮತ್ತು ವಿದ್ಯುತ್ ಉತ್ಪಾದಕರ ಕಳವಳಗಳನ್ನು ಹೊಸ ಅಫಿಡವಿಟ್‌ಗಳಲ್ಲಿ ಪರಿಗಣಿಸಲು ಸರ್ಕಾರವನ್ನು ಕೇಳಲಾಯಿತು.

ಇದನ್ನೂ ಓದಿ: 10 ಕೋಟಿ ಜನರನ್ನು ತೀವ್ರ ಬಡತನಕ್ಕೆ ದೂಡಲಿದೆ ಕೊರೊನಾ: ವಿಶ್ವಬ್ಯಾಂಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...