Homeಕರ್ನಾಟಕಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧನ ವಿರೋಧಿಸಿ PUCL ಪ್ರತಿಭಟನೆ

ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧನ ವಿರೋಧಿಸಿ PUCL ಪ್ರತಿಭಟನೆ

ತನಿಖೆಗೆ ಸಹಕರಿಸುತ್ತಿರುವ 83 ವರ್ಷದ ವ್ಯಕ್ತಿಯನ್ನು NIA ಅಕ್ರಮವಾಗಿ ಬಂಧಿಸಿದಾಗ, ಜನರು ಸುಮ್ಮನಿರಬೇಕೇ?

- Advertisement -
- Advertisement -

ಬುಡಕಟ್ಟು ಹಕ್ಕುಗಳಿಗಾಗಿ ಕಳೆದ ಐದು ದಶಕಗಳಿಂದ ಹೋರಾಡುತ್ತಿರುವ ಫಾದರ್ ಸ್ಟ್ಯಾನ್‌ ಸ್ವಾಮಿ ಬಂಧನ ವಿರೋಧಿಸಿ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್(PUCL) ಬೆಂಗಳೂರಿನ ಮೌರ್ಯ ಸರ್ಕಲ್‌‌ನ ಮಹಾತ್ಮಾ ಗಾಂಧಿ ಪ್ರತಿಮೆಯ ಬಳಿ ಶನಿವಾರ ಪ್ರತಿಭಟನೆ ನಡೆಸಿತು.

ತನಿಖೆಗೆ ಸಹಕರಿಸುತ್ತಿರುವ 83 ವರ್ಷದ ವ್ಯಕ್ತಿಯನ್ನು NIA ಅಕ್ರಮವಾಗಿ ಬಂಧಿಸಿದಾಗ, ಜನರು ಸುಮ್ಮನಿರಬೇಕೇ? ಎಂದು ಪ್ರಶ್ನಿಸಿರುವ PUCL, ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ಇತರ ಎಲ್ಲರನ್ನೂ ಬಿಡುಗಡೆ ಮಾಡಬೇಕೆಂದು ಕೂಡಾ ಒತ್ತಾಯಿಸಿದೆ.

ಇದನ್ನೂ ಓದಿ: ’ಬಿಜೆಪಿಯದ್ದು ಕೊಳಕು ರಾಜಕೀಯ’-ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧನಕ್ಕೆ ದೇಶದಾದ್ಯಂತ ಆಕ್ರೋಶ

ಫಾದರ್ ಸ್ಟಾನ್ ಸ್ವಾಮಿ ಬಂಧನವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರೋಧಿಸಿದ್ದು, ಅವರಿಗೆ ನ್ಯಾಯ ಸಿಗಬೇಕು, ಅವರ ಬಂಧನ ಮತ್ತು ಜೈಲುವಾಸ ವಿಷಾದನೀಯ ಎಂದು ಹೇಳಿದ್ದಾರೆ.

“ಬುಡಕಟ್ಟು ಜನಾಂಗದವರ ಪ್ರಜಾಪ್ರಭುತ್ವದ ಮೌಲ್ಯಗಳ ಉಲ್ಲಂಘನೆಯನ್ನು ಅವರು ಪ್ರಶ್ನಿಸಿದ್ದಾರೆ. ಇದನ್ನು ಅಪರಾಧವೆಂದು ಪರಿಗಣಿಸುವುದು ಸಂವಿಧಾನ ವಿರೋಧಿಯಾಗಿದೆ. ಫಾದರ್ ಸ್ಟಾನ್ ಸ್ವಾಮಿ ದಶಕಗಳಿಂದ ಬುಡಕಟ್ಟು ಜನಾಂಗಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಭೂಮಿ ಮತ್ತು ಅರಣ್ಯ ಹಕ್ಕುಗಳಿಗಾಗಿ ನಡೆಸಿದ ಆಂದೋಲನಗಳಲ್ಲಿ ಬೆಂಬಲಿತ ಬುಡಕಟ್ಟು ಜನಾಂಗದವರ ವಿಷಯಗಳ ಬಗ್ಗೆಯೂ ಆಳವಾಗಿ ಅಧ್ಯಯನ ಮಾಡಿದ್ದಾರೆ. ಅವರ ವಿರುದ್ಧದ ಕ್ರಮವು ಭಿನ್ನಾಭಿಪ್ರಾಯದ ದಮನಗಳನ್ನು ಅಡಗಿಸುವುದಾಗಿದೆ. ಅವರ ಬಂಧನ ಮತ್ತು ಜೈಲುವಾಸವು ವಿಷಾದನೀಯವಾಗಿದೆ” ಎಂದು ಪಿಣರಾಯಿ ಹೇಳಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ 83 ವರ್ಷದ ಸ್ಟ್ಯಾನ್ ಸ್ವಾಮಿಯನ್ನು NIA ನಿನ್ನೆ ಜಾಖಂಡ್‌‌ನ ರಾಂಚಿಯಲ್ಲಿ ಬಂಧಿಸಿದ್ದು, ಬುಡಕಟ್ಟು ಜನರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ಸ್ಟ್ಯಾನ್ ಸ್ವಾಮಿಯ ಮೇಲೆ ಭಯೋತ್ಪಾದನೆ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಕಠಿಣ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...