Homeಕರ್ನಾಟಕಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

ಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊಸ ಕಾಯಿದೆ ಮೂಲಕ ರೈತರನ್ನು ನಾಶ ಮಾಡುತ್ತಿದೆ.

- Advertisement -
- Advertisement -

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜಾರಿಗೆ ತರುತ್ತಿರುವ ರೈತ ವಿರೋಧ ಮಸೂದೆಗಳ ವಿರುದ್ದ ಮಂಡ್ಯದಲ್ಲಿ ರಾಜ್ಯ ಮಟ್ಟದ ರೈತ ಸಮಾವೇಶ ನಡೆಯಿತು. ಸಮಾವೇಶವನ್ನು ಕಾಂಗ್ರೆಸ್ ಪಕ್ಷ ಆಯೋಜಿಸಿದ್ದು, ಇತರ ರೈತ ಸಂಘಟನೆಗಳು ಮತ್ತು ರೈತ ಹೋರಾಟಗಾರರು ಸಮಾವೇಶದಲ್ಲಿ ಭಾಗವಹಿಸಿದ್ದರು.

ಸಮಾವೇಶವನ್ನು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉದ್ಘಾಟಿಸಿದರು. ನಂತರ ಮಾತನಾಡಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, 50 ವರ್ಷಕ್ಕೂ ಹೆಚ್ಚು ಕಾಲ ಕಾಂಗ್ರೆಸ್ ಆಡಳಿತ ನಡೆಸಿದೆ. ನಿರಂತರ ಬದಲಾವಣೆಗಳನ್ನು ಮಾಡಿಕೊಂಡು ಬಂದಿದ್ದೇವೆ. ಸಮಾಜದ – ರೈತರ ಧ್ವನಿ ಆಗಿದ್ದೇವೆ. ರೈತಪರ ಕೆಲಸ ಮಾಡಿದ್ದೇವೆ. ಆದರೆ ಈಗ ಪರಿಸ್ಥಿತಿ ಏನಾಗಿದೆ? ಈಗ ರೈತ ಮಾತನಾಡಬೇಕು, ಅದನ್ನು ನಾವು ಕೇಳಬೇಕು,‌ ನೋವು ಕೇಳಬೇಕು, ಸಲಹೆ ಕೇಳಬೇಕು ಎಂದು ಹೇಳಿದರು.

ಇದನ್ನೂ ಓದಿ: ವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ರಾಜ್ಯ – ಕೇಂದ್ರ ಬಿಜೆಪಿ ಸರ್ಕಾರಗಳ ನೀತಿಗಳಿಂದ ಯಾರಿಗಾದರೂ ಸಮಾಧಾನ ಇದೆಯಾ?
ರೈತರು, ಕಾರ್ಮಿಕರು, ಮಹಿಳೆಯರು, ಯವಕರು, ವಿದ್ಯಾರ್ಥಿಗಳು ಯಾವ ವರ್ಗಕ್ಕೆ ಸಮಾಧಾನವಿದೆ? ಎಂದು ಪ್ರಶ್ನಿಸಿದ ಅವರು, “ಎಲ್ಲರೂ ನೊಂದು ಬೆಂದು ಹೋಗಿದ್ದಾರೆ. ಎಲ್ಲಾ ವರ್ಗ, ಸಮುದಾಯದವರು ಸಂಕಷ್ಟದಲ್ಲಿದ್ದಾರೆ. ಜನರ ಬದುಕನ್ನ ಗಾಣದಲ್ಲಿ ಹಾಕಲಾಗಿದೆ” ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡಿ, “ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳು ರೈತರ ಮೇಲೆ ಆಕ್ರಮಣ‌ ಮಾಡುತ್ತಿವೆ. ನಮ್ಮ ದಿನ ನಿತ್ಯದ ಆಹಾರದ ಮೇಲೆ ಆಕ್ರಮಣ ಮಾಡಿದ್ದಾರೆ. ಜನರ ಜೀವನ, ಜೀವನೋಪಾಯದ ಮೇಲೆ ಪ್ರಹಾರ ಮಾಡಿ, ರೈತರ ಕತ್ತು ಹಿಸುಕುವಂತಹಾ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು.

“2014 ರಲ್ಲಿ ಮೋದಿಯವರು ಅಧಿಕಾರಕ್ಕೆ ಬಂದಾಗ ಅವರು ಮೊದಲು ಆಕ್ರಮಣ ಮಾಡಿದ್ದೇ ರೈತರ ಮೇಲೆ. ಈ ತಿದ್ದುಪಡಿ ಕಾಯ್ದೆಗಳು ಅನುಷ್ಠಾನಕ್ಕೆ ಬಂದರೆ ರೈತರಿಗೆ ಮರಣ ಶಾಸನವಾಗಲಿವೆ. ಎಪಿಎಂಸಿ ತೆಗೆದು ಬಿಟ್ಟರೆ ಸಣ್ಣ ಕೃಷಿಕರು ಬೆಳೆಯನ್ನು ಯಾರಿಗೆ ಮಾರಾಟ ಮಾಡಬೇಕು? ಅವರಿಗೆ ಬೆಂಬಲ ಬೆಲೆಯ ಭರವಸೆ ಇದೆಯೇ. ನರೇಂದ್ರ ಮೋದಿ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ರದ್ದು ಮಾಡಿ ಕೆಲವೇ ಕೆಲವು ಕೈಗಾರಿಕೋದ್ಯಮಿಗಳಿಗೆ ಅನುಕೂಲ ಆಗುವಂತೆ ಕೆಲಸ ಮಾಡುತ್ತಿದೆ. ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ ಕಬ್ಬು ಬೆಳೆಗಾರರ ಬೆಂಬಲ ಬೆಲೆ ಹೆಚ್ಚಿಸಿತು. ಆದರೆ ಈಗಿನ ಸರ್ಕಾರ ರೈತರಿಗೆ ದ್ರೋಹ ಮಾಡುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ನಂತರ ಮಾತನಾಡಿದ ನ್ಯಾಯಪಥ ಪತ್ರಿಕೆಯ ಸಂಪಾದಕ, ಹೋರಾಟಗಾರ ಡಾ.ವಾಸು ಹೆಚ್‌.ವಿ, “ಪ್ರಸ್ತುತ ನಡೆಯುತ್ತಿರುವ ಹೋರಾಟ ಕಾಂಗ್ರೇಸ್ ಮತ್ತು ಬಿಜೆಪಿಯದ್ದು ಅಲ್ಲ, ಈ ಹೋರಾಟ ಬಿಜೆಪಿ ಮತ್ತು ಭಾರತೀಯರ ನಡುವಿನ ಹೋರಾಟ. ಇದರಲ್ಲಿ ದೇಶದ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಇರಬೇಕಿರುವುದರಿಂದ ನಾವು ಪಕ್ಷಾತೀತವಾಗಿ ಸಮಾವೇಶಕ್ಕೆ ಬಂದಿದ್ದೇವೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ರೈತರ ಭೂಮಿ ವಿಘಟಿತವಾಗುತ್ತಾ ಹೋಗುತ್ತಿರುವ ಈ ಕಾಲದಲ್ಲಿ ಮೋದಿ ಹಾಗೂ ಯಡಿಯೂರಪ್ಪ ಸರ್ಕಾರ ರೈತರ ಪರವಾಗಿ ನಿಲ್ಲುವುದನ್ನು ಬಿಟ್ಟು ಗುಜರಾತಿನ ತಮ್ಮ ಆಪ್ತ ವ್ಯಾಪಾರಿಗಳಿಗೆ ಪರಭಾರೆ ಮಾಡಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಕೃಷಿ ತಜ್ಞ ಡಾ. ಪ್ರಕಾಶ್ ಕಮ್ಮರಡಿ ಮಾತನಾಡಿ, “ಕೇಂದ್ರ ಸರ್ಕಾರ ಸಂಪೂರ್ಣ ರಾಜ್ಯ ಸರ್ಕಾರದ ಅಧಿಕಾರವಿರುವ ಎಪಿಎಂಸಿಯ ಕಾಯ್ದೆಯನ್ನು ಯಾವುದೇ ಚರ್ಚೆಯಿಲ್ಲದೆ ಸುಗ್ರಿವಾಜ್ಞೆ ತಂದಿದೆ” ಎಂದು ಕಿಡಿ ಕಾರಿದರು.

ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷರಾದ ವೀರಸಂಗಯ್ಯ ಮಾತನಾಡಿ, “ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊಸ ಕಾಯಿದೆ ಮೂಲಕ ರೈತರನ್ನು ನಾಶ ಮಾಡುತ್ತಿದೆ. ಈ ಕಾಯಿದೆಯಿಂದ ಸಣ್ಣ ರೈತರು ನಾಶವಾಗುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...