Homeಕರ್ನಾಟಕಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

ಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊಸ ಕಾಯಿದೆ ಮೂಲಕ ರೈತರನ್ನು ನಾಶ ಮಾಡುತ್ತಿದೆ.

- Advertisement -
- Advertisement -

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜಾರಿಗೆ ತರುತ್ತಿರುವ ರೈತ ವಿರೋಧ ಮಸೂದೆಗಳ ವಿರುದ್ದ ಮಂಡ್ಯದಲ್ಲಿ ರಾಜ್ಯ ಮಟ್ಟದ ರೈತ ಸಮಾವೇಶ ನಡೆಯಿತು. ಸಮಾವೇಶವನ್ನು ಕಾಂಗ್ರೆಸ್ ಪಕ್ಷ ಆಯೋಜಿಸಿದ್ದು, ಇತರ ರೈತ ಸಂಘಟನೆಗಳು ಮತ್ತು ರೈತ ಹೋರಾಟಗಾರರು ಸಮಾವೇಶದಲ್ಲಿ ಭಾಗವಹಿಸಿದ್ದರು.

ಸಮಾವೇಶವನ್ನು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉದ್ಘಾಟಿಸಿದರು. ನಂತರ ಮಾತನಾಡಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, 50 ವರ್ಷಕ್ಕೂ ಹೆಚ್ಚು ಕಾಲ ಕಾಂಗ್ರೆಸ್ ಆಡಳಿತ ನಡೆಸಿದೆ. ನಿರಂತರ ಬದಲಾವಣೆಗಳನ್ನು ಮಾಡಿಕೊಂಡು ಬಂದಿದ್ದೇವೆ. ಸಮಾಜದ – ರೈತರ ಧ್ವನಿ ಆಗಿದ್ದೇವೆ. ರೈತಪರ ಕೆಲಸ ಮಾಡಿದ್ದೇವೆ. ಆದರೆ ಈಗ ಪರಿಸ್ಥಿತಿ ಏನಾಗಿದೆ? ಈಗ ರೈತ ಮಾತನಾಡಬೇಕು, ಅದನ್ನು ನಾವು ಕೇಳಬೇಕು,‌ ನೋವು ಕೇಳಬೇಕು, ಸಲಹೆ ಕೇಳಬೇಕು ಎಂದು ಹೇಳಿದರು.

ಇದನ್ನೂ ಓದಿ: ವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ರಾಜ್ಯ – ಕೇಂದ್ರ ಬಿಜೆಪಿ ಸರ್ಕಾರಗಳ ನೀತಿಗಳಿಂದ ಯಾರಿಗಾದರೂ ಸಮಾಧಾನ ಇದೆಯಾ?
ರೈತರು, ಕಾರ್ಮಿಕರು, ಮಹಿಳೆಯರು, ಯವಕರು, ವಿದ್ಯಾರ್ಥಿಗಳು ಯಾವ ವರ್ಗಕ್ಕೆ ಸಮಾಧಾನವಿದೆ? ಎಂದು ಪ್ರಶ್ನಿಸಿದ ಅವರು, “ಎಲ್ಲರೂ ನೊಂದು ಬೆಂದು ಹೋಗಿದ್ದಾರೆ. ಎಲ್ಲಾ ವರ್ಗ, ಸಮುದಾಯದವರು ಸಂಕಷ್ಟದಲ್ಲಿದ್ದಾರೆ. ಜನರ ಬದುಕನ್ನ ಗಾಣದಲ್ಲಿ ಹಾಕಲಾಗಿದೆ” ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡಿ, “ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳು ರೈತರ ಮೇಲೆ ಆಕ್ರಮಣ‌ ಮಾಡುತ್ತಿವೆ. ನಮ್ಮ ದಿನ ನಿತ್ಯದ ಆಹಾರದ ಮೇಲೆ ಆಕ್ರಮಣ ಮಾಡಿದ್ದಾರೆ. ಜನರ ಜೀವನ, ಜೀವನೋಪಾಯದ ಮೇಲೆ ಪ್ರಹಾರ ಮಾಡಿ, ರೈತರ ಕತ್ತು ಹಿಸುಕುವಂತಹಾ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು.

“2014 ರಲ್ಲಿ ಮೋದಿಯವರು ಅಧಿಕಾರಕ್ಕೆ ಬಂದಾಗ ಅವರು ಮೊದಲು ಆಕ್ರಮಣ ಮಾಡಿದ್ದೇ ರೈತರ ಮೇಲೆ. ಈ ತಿದ್ದುಪಡಿ ಕಾಯ್ದೆಗಳು ಅನುಷ್ಠಾನಕ್ಕೆ ಬಂದರೆ ರೈತರಿಗೆ ಮರಣ ಶಾಸನವಾಗಲಿವೆ. ಎಪಿಎಂಸಿ ತೆಗೆದು ಬಿಟ್ಟರೆ ಸಣ್ಣ ಕೃಷಿಕರು ಬೆಳೆಯನ್ನು ಯಾರಿಗೆ ಮಾರಾಟ ಮಾಡಬೇಕು? ಅವರಿಗೆ ಬೆಂಬಲ ಬೆಲೆಯ ಭರವಸೆ ಇದೆಯೇ. ನರೇಂದ್ರ ಮೋದಿ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ರದ್ದು ಮಾಡಿ ಕೆಲವೇ ಕೆಲವು ಕೈಗಾರಿಕೋದ್ಯಮಿಗಳಿಗೆ ಅನುಕೂಲ ಆಗುವಂತೆ ಕೆಲಸ ಮಾಡುತ್ತಿದೆ. ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ ಕಬ್ಬು ಬೆಳೆಗಾರರ ಬೆಂಬಲ ಬೆಲೆ ಹೆಚ್ಚಿಸಿತು. ಆದರೆ ಈಗಿನ ಸರ್ಕಾರ ರೈತರಿಗೆ ದ್ರೋಹ ಮಾಡುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ನಂತರ ಮಾತನಾಡಿದ ನ್ಯಾಯಪಥ ಪತ್ರಿಕೆಯ ಸಂಪಾದಕ, ಹೋರಾಟಗಾರ ಡಾ.ವಾಸು ಹೆಚ್‌.ವಿ, “ಪ್ರಸ್ತುತ ನಡೆಯುತ್ತಿರುವ ಹೋರಾಟ ಕಾಂಗ್ರೇಸ್ ಮತ್ತು ಬಿಜೆಪಿಯದ್ದು ಅಲ್ಲ, ಈ ಹೋರಾಟ ಬಿಜೆಪಿ ಮತ್ತು ಭಾರತೀಯರ ನಡುವಿನ ಹೋರಾಟ. ಇದರಲ್ಲಿ ದೇಶದ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಇರಬೇಕಿರುವುದರಿಂದ ನಾವು ಪಕ್ಷಾತೀತವಾಗಿ ಸಮಾವೇಶಕ್ಕೆ ಬಂದಿದ್ದೇವೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ರೈತರ ಭೂಮಿ ವಿಘಟಿತವಾಗುತ್ತಾ ಹೋಗುತ್ತಿರುವ ಈ ಕಾಲದಲ್ಲಿ ಮೋದಿ ಹಾಗೂ ಯಡಿಯೂರಪ್ಪ ಸರ್ಕಾರ ರೈತರ ಪರವಾಗಿ ನಿಲ್ಲುವುದನ್ನು ಬಿಟ್ಟು ಗುಜರಾತಿನ ತಮ್ಮ ಆಪ್ತ ವ್ಯಾಪಾರಿಗಳಿಗೆ ಪರಭಾರೆ ಮಾಡಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಕೃಷಿ ತಜ್ಞ ಡಾ. ಪ್ರಕಾಶ್ ಕಮ್ಮರಡಿ ಮಾತನಾಡಿ, “ಕೇಂದ್ರ ಸರ್ಕಾರ ಸಂಪೂರ್ಣ ರಾಜ್ಯ ಸರ್ಕಾರದ ಅಧಿಕಾರವಿರುವ ಎಪಿಎಂಸಿಯ ಕಾಯ್ದೆಯನ್ನು ಯಾವುದೇ ಚರ್ಚೆಯಿಲ್ಲದೆ ಸುಗ್ರಿವಾಜ್ಞೆ ತಂದಿದೆ” ಎಂದು ಕಿಡಿ ಕಾರಿದರು.

ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷರಾದ ವೀರಸಂಗಯ್ಯ ಮಾತನಾಡಿ, “ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊಸ ಕಾಯಿದೆ ಮೂಲಕ ರೈತರನ್ನು ನಾಶ ಮಾಡುತ್ತಿದೆ. ಈ ಕಾಯಿದೆಯಿಂದ ಸಣ್ಣ ರೈತರು ನಾಶವಾಗುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...