Homeಕರ್ನಾಟಕಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

ಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊಸ ಕಾಯಿದೆ ಮೂಲಕ ರೈತರನ್ನು ನಾಶ ಮಾಡುತ್ತಿದೆ.

- Advertisement -
- Advertisement -

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜಾರಿಗೆ ತರುತ್ತಿರುವ ರೈತ ವಿರೋಧ ಮಸೂದೆಗಳ ವಿರುದ್ದ ಮಂಡ್ಯದಲ್ಲಿ ರಾಜ್ಯ ಮಟ್ಟದ ರೈತ ಸಮಾವೇಶ ನಡೆಯಿತು. ಸಮಾವೇಶವನ್ನು ಕಾಂಗ್ರೆಸ್ ಪಕ್ಷ ಆಯೋಜಿಸಿದ್ದು, ಇತರ ರೈತ ಸಂಘಟನೆಗಳು ಮತ್ತು ರೈತ ಹೋರಾಟಗಾರರು ಸಮಾವೇಶದಲ್ಲಿ ಭಾಗವಹಿಸಿದ್ದರು.

ಸಮಾವೇಶವನ್ನು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉದ್ಘಾಟಿಸಿದರು. ನಂತರ ಮಾತನಾಡಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, 50 ವರ್ಷಕ್ಕೂ ಹೆಚ್ಚು ಕಾಲ ಕಾಂಗ್ರೆಸ್ ಆಡಳಿತ ನಡೆಸಿದೆ. ನಿರಂತರ ಬದಲಾವಣೆಗಳನ್ನು ಮಾಡಿಕೊಂಡು ಬಂದಿದ್ದೇವೆ. ಸಮಾಜದ – ರೈತರ ಧ್ವನಿ ಆಗಿದ್ದೇವೆ. ರೈತಪರ ಕೆಲಸ ಮಾಡಿದ್ದೇವೆ. ಆದರೆ ಈಗ ಪರಿಸ್ಥಿತಿ ಏನಾಗಿದೆ? ಈಗ ರೈತ ಮಾತನಾಡಬೇಕು, ಅದನ್ನು ನಾವು ಕೇಳಬೇಕು,‌ ನೋವು ಕೇಳಬೇಕು, ಸಲಹೆ ಕೇಳಬೇಕು ಎಂದು ಹೇಳಿದರು.

ಇದನ್ನೂ ಓದಿ: ವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ರಾಜ್ಯ – ಕೇಂದ್ರ ಬಿಜೆಪಿ ಸರ್ಕಾರಗಳ ನೀತಿಗಳಿಂದ ಯಾರಿಗಾದರೂ ಸಮಾಧಾನ ಇದೆಯಾ?
ರೈತರು, ಕಾರ್ಮಿಕರು, ಮಹಿಳೆಯರು, ಯವಕರು, ವಿದ್ಯಾರ್ಥಿಗಳು ಯಾವ ವರ್ಗಕ್ಕೆ ಸಮಾಧಾನವಿದೆ? ಎಂದು ಪ್ರಶ್ನಿಸಿದ ಅವರು, “ಎಲ್ಲರೂ ನೊಂದು ಬೆಂದು ಹೋಗಿದ್ದಾರೆ. ಎಲ್ಲಾ ವರ್ಗ, ಸಮುದಾಯದವರು ಸಂಕಷ್ಟದಲ್ಲಿದ್ದಾರೆ. ಜನರ ಬದುಕನ್ನ ಗಾಣದಲ್ಲಿ ಹಾಕಲಾಗಿದೆ” ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡಿ, “ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳು ರೈತರ ಮೇಲೆ ಆಕ್ರಮಣ‌ ಮಾಡುತ್ತಿವೆ. ನಮ್ಮ ದಿನ ನಿತ್ಯದ ಆಹಾರದ ಮೇಲೆ ಆಕ್ರಮಣ ಮಾಡಿದ್ದಾರೆ. ಜನರ ಜೀವನ, ಜೀವನೋಪಾಯದ ಮೇಲೆ ಪ್ರಹಾರ ಮಾಡಿ, ರೈತರ ಕತ್ತು ಹಿಸುಕುವಂತಹಾ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು.

“2014 ರಲ್ಲಿ ಮೋದಿಯವರು ಅಧಿಕಾರಕ್ಕೆ ಬಂದಾಗ ಅವರು ಮೊದಲು ಆಕ್ರಮಣ ಮಾಡಿದ್ದೇ ರೈತರ ಮೇಲೆ. ಈ ತಿದ್ದುಪಡಿ ಕಾಯ್ದೆಗಳು ಅನುಷ್ಠಾನಕ್ಕೆ ಬಂದರೆ ರೈತರಿಗೆ ಮರಣ ಶಾಸನವಾಗಲಿವೆ. ಎಪಿಎಂಸಿ ತೆಗೆದು ಬಿಟ್ಟರೆ ಸಣ್ಣ ಕೃಷಿಕರು ಬೆಳೆಯನ್ನು ಯಾರಿಗೆ ಮಾರಾಟ ಮಾಡಬೇಕು? ಅವರಿಗೆ ಬೆಂಬಲ ಬೆಲೆಯ ಭರವಸೆ ಇದೆಯೇ. ನರೇಂದ್ರ ಮೋದಿ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ರದ್ದು ಮಾಡಿ ಕೆಲವೇ ಕೆಲವು ಕೈಗಾರಿಕೋದ್ಯಮಿಗಳಿಗೆ ಅನುಕೂಲ ಆಗುವಂತೆ ಕೆಲಸ ಮಾಡುತ್ತಿದೆ. ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ ಕಬ್ಬು ಬೆಳೆಗಾರರ ಬೆಂಬಲ ಬೆಲೆ ಹೆಚ್ಚಿಸಿತು. ಆದರೆ ಈಗಿನ ಸರ್ಕಾರ ರೈತರಿಗೆ ದ್ರೋಹ ಮಾಡುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ನಂತರ ಮಾತನಾಡಿದ ನ್ಯಾಯಪಥ ಪತ್ರಿಕೆಯ ಸಂಪಾದಕ, ಹೋರಾಟಗಾರ ಡಾ.ವಾಸು ಹೆಚ್‌.ವಿ, “ಪ್ರಸ್ತುತ ನಡೆಯುತ್ತಿರುವ ಹೋರಾಟ ಕಾಂಗ್ರೇಸ್ ಮತ್ತು ಬಿಜೆಪಿಯದ್ದು ಅಲ್ಲ, ಈ ಹೋರಾಟ ಬಿಜೆಪಿ ಮತ್ತು ಭಾರತೀಯರ ನಡುವಿನ ಹೋರಾಟ. ಇದರಲ್ಲಿ ದೇಶದ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಇರಬೇಕಿರುವುದರಿಂದ ನಾವು ಪಕ್ಷಾತೀತವಾಗಿ ಸಮಾವೇಶಕ್ಕೆ ಬಂದಿದ್ದೇವೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ರೈತರ ಭೂಮಿ ವಿಘಟಿತವಾಗುತ್ತಾ ಹೋಗುತ್ತಿರುವ ಈ ಕಾಲದಲ್ಲಿ ಮೋದಿ ಹಾಗೂ ಯಡಿಯೂರಪ್ಪ ಸರ್ಕಾರ ರೈತರ ಪರವಾಗಿ ನಿಲ್ಲುವುದನ್ನು ಬಿಟ್ಟು ಗುಜರಾತಿನ ತಮ್ಮ ಆಪ್ತ ವ್ಯಾಪಾರಿಗಳಿಗೆ ಪರಭಾರೆ ಮಾಡಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಕೃಷಿ ತಜ್ಞ ಡಾ. ಪ್ರಕಾಶ್ ಕಮ್ಮರಡಿ ಮಾತನಾಡಿ, “ಕೇಂದ್ರ ಸರ್ಕಾರ ಸಂಪೂರ್ಣ ರಾಜ್ಯ ಸರ್ಕಾರದ ಅಧಿಕಾರವಿರುವ ಎಪಿಎಂಸಿಯ ಕಾಯ್ದೆಯನ್ನು ಯಾವುದೇ ಚರ್ಚೆಯಿಲ್ಲದೆ ಸುಗ್ರಿವಾಜ್ಞೆ ತಂದಿದೆ” ಎಂದು ಕಿಡಿ ಕಾರಿದರು.

ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷರಾದ ವೀರಸಂಗಯ್ಯ ಮಾತನಾಡಿ, “ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊಸ ಕಾಯಿದೆ ಮೂಲಕ ರೈತರನ್ನು ನಾಶ ಮಾಡುತ್ತಿದೆ. ಈ ಕಾಯಿದೆಯಿಂದ ಸಣ್ಣ ರೈತರು ನಾಶವಾಗುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...