Homeಕರೋನಾ ತಲ್ಲಣಕೊರೊನಾ ಮಾರ್ಗಸೂಚಿ ಉಲ್ಲಂಘನೆ: ಬಿಜೆಪಿ ಸಂಸದೆ ಕಛೇರಿ ಸೀಲ್!

ಕೊರೊನಾ ಮಾರ್ಗಸೂಚಿ ಉಲ್ಲಂಘನೆ: ಬಿಜೆಪಿ ಸಂಸದೆ ಕಛೇರಿ ಸೀಲ್!

ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ಅಪರಾಜಿತಾ ಸಾರಂಗಿಯನ್ನು ಹಲವು ಮಹಿಳೆಯರು ಸುತ್ತುವರೆದಿದ್ದು, ಅವರು ಮಾಸ್ಕ್‌ಗಳನ್ನು ಧರಿಸಲಿಲ್ಲ, ಮತ್ತು ಸಾಮಾಜಿಕ ಅಂತರವನ್ನು ಪಾಲಿಸಿರಲಿಲ್ಲ ಎಂಬುದು ಸ್ಪಷ್ಟವಾಗಿ ದಾಖಲಾಗಿದೆ

- Advertisement -
- Advertisement -

ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಒಡಿಶಾ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದ ಒಂದು ದಿನದ ನಂತರ ಬಿಜೆಪಿ ರಾಷ್ಟ್ರೀಯ ವಕ್ತಾರರಾದ, ಸಂಸದೆ ಅಪರಾಜಿತಾ ಸಾರಂಗಿ ಅವರ ಕಚೇರಿಯನ್ನು ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್ (BMC) ಸೀಲ್ ಮಾಡಿದೆ.

BMC ವಲಯ ಉಪ ಆಯುಕ್ತ (ನೈರುತ್ಯ) ರಬಿನಾರಾಯಣ್ ಜೆಥಿ ನೇತೃತ್ವದ ತಂಡವು ಕಚೇರಿಯನ್ನು 15 ದಿನಗಳ ಕಾಲ ಸೀಲ್ ಮಾಡಿದೆ.

ಇದನ್ನೂ ಓದಿ: ಕಂಟೈನ್ಮೆಂಟ್ ಪ್ರದೇಶಗಳ ಸೀಲ್‌ಡೌನ್‌ಗೆ 20-25 ಕೋಟಿ ರೂ. ಖರ್ಚು ಮಾಡಿದ ಬಿಬಿಎಂಪಿ!

“ಕೋವಿಡ್ ಮಾನದಂಡಗಳ ಉಲ್ಲಂಘನೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. 15 ದಿನಗಳ ನಂತರ ಕಛೇರಿಯನ್ನು ಮತ್ತೆ ತೆರೆಯುವ ಮೊದಲು ಸ್ವಚ್ಚಗೊಳಿಸಲಾಗುವುದು” ಎಂದು ರಬಿನಾರಾಯಣ್ ಜೆಥಿ ಹೇಳಿದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಕ್ಟೋಬರ್ 8 ರಂದು ನಗರದಲ್ಲಿ ನಡೆದ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಭುವನೇಶ್ವರದ ಸಂಸದರು ಕೋವಿಡ್ -19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ರಾಜ್ಯ ಸಚಿವ (ಗೃಹ) ದಿಬ್ಯಾ ಶಂಕರ್ ಮಿಶ್ರಾ ಆರೋಪಿಸಿ, ಕೇಂದ್ರ ರಾಜ್ಯ ಸಚಿವ (ಗೃಹ) ನಿತ್ಯಾನಂದ್ ರೈ ಅವರಿಗೆ ಪತ್ರ ಬರೆದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಬಿಜೆಪಿ ಲಜ್ಜೆಗೆಟ್ಟ, ಕರೆಪ್ಟ್ ಪೊಲಿಟಿಕಲ್ ಪಾರ್ಟಿ: ಸಿದ್ದರಾಮಯ್ಯ ಟೀಕೆ

ಈ ಘಟನೆಯ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ಅಪರಾಜಿತಾ ಸಾರಂಗಿಯನ್ನು ಹಲವು ಮಹಿಳೆಯರು ಸುತ್ತುವರೆದಿದ್ದು, ಅವರು ಮಾಸ್ಕ್‌ಗಳನ್ನು ಧರಿಸಲಿಲ್ಲ, ಮತ್ತು ಸಾಮಾಜಿಕ ಅಂತರವನ್ನು ಪಾಲಿಸಿರಲಿಲ್ಲ ಎಂಬುದು ಸ್ಪಷ್ಟವಾಗಿ ದಾಖಲಾಗಿದೆ. ಇದನ್ನು ತನಿಖೆಗೆ ಒಳಪಡಿಸಿದಾಗ, ಈ ಸ್ಥಳವು ಪಾಲಸ್‌ಪಲ್ಲಿಯ ಸಂಸದರ ಕಛೇರಿ ಎಂದು ತಿಳಿಯಿತು ಎಂದು ರಬಿನಾರಾಯಣ್ ಜೆಥಿ

ಆದರೆ ಈ ಕ್ರಮವನ್ನು ಸಂಸದೆ, ‘ಪ್ರತೀಕಾರಕ’ ಎಂದು ಹೇಳಿದ್ದಾರೆ. ಶೀಘ್ರದಲ್ಲೇ ಅವರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಇದನ್ನೂ ಓದಿ: ಒಂದು ಭಾರತದೊಳಗೆ ಹಲವು ಭಾರತಗಳಿವೆ; ಇದು ಬಿಜೆಪಿಯವರಿಗೆ ಗೊತ್ತಿಲ್ಲ

ದಿವಂಗತ ಪ್ರದೀಪ್ ಮಹಾರಾತಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ, ಶಾಲಾ ಶಿಕ್ಷಣ ಸಚಿವ ಸಮೀರ್ ದಾಶ್ ಮತ್ತು ಬಿಜೆಡಿ ಶಾಸಕ ಉಮಾಕಾಂತ್ ಸಮಂತ್ರೇ ಅವರ ವಿಷಯದಲ್ಲಿ ರಾಜ್ಯ ಸರ್ಕಾರ ಏಕೆ ಮೌನವಾಗಿದೆ. ಮಾನದಂಡಗಳು ಎಲ್ಲರಿಗೂ ಒಂದೇ ಇರಬೇಕು” ಎಂದು ತಮ್ಮ ವಿರುದ್ಧದ ದೂರಿಗೆ ಪ್ರತಿಕ್ರಿಯೆಯಾಗಿ ಹೇಳಿದ್ದಾರೆ.

ಕುತೂಹಲಕಾರಿಯೆಂಬಂತೆ, ಸಂಸದೆ ಈ ವಿಷಯವನ್ನು ಪ್ರಸ್ತಾಪಿಸಿದ ನಂತರ, ಬಿಜೆಡಿ ಶಾಸಕ ಉಮಾಕಾಂತ್ ಸಮಂತ್ರೇ ಅವರು ಶನಿವಾರ ವೀಡಿಯೊ ಸಂದೇಶವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪ್ರದೀಪ್ ಮಹಾರಾತಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ.

“ಇದು ಭಾವನಾತ್ಮಕ ಪ್ರತಿಕ್ರಿಯೆಯಾಗಿದೆ. ಆದರೆ ಕಾನೂನಿನ ಪ್ರಕಾರ ಯಾವುದೇ ಕ್ರಮವನ್ನು ಸ್ವೀಕರಿಸಲು ನಾನು ಸಿದ್ಧನಿದ್ದೇನೆ. ಕಾನೂನಿನ ದೃಷ್ಟಿಯಲ್ಲಿ ಯಾರೂ ಮೇಲಲ್ಲ. ನಾನು ಕಾನೂನಿನ ನಿಯಮಕ್ಕೆ ಬದ್ಧನಾಗಿರುತ್ತೇನೆ” ಎಂದು ವೀಡಿಯೋದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ’ಬಿಜೆಪಿಯದ್ದು ಕೊಳಕು ರಾಜಕೀಯ’-ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧನಕ್ಕೆ ದೇಶದಾದ್ಯಂತ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...