Homeಮುಖಪುಟನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

- Advertisement -
- Advertisement -

ಭಾರತೀಯ ಆರ್ಥಿಕ ಉಸ್ತುವಾರಿ ಕೇಂದ್ರವು (ಸಿ.ಎಂ.ಐ.ಇ) ಸಂಗ್ರಹಿಸಿರುವ ದತ್ತಾಂಶಗಳ ಪ್ರಕಾರ ಫೆಬ್ರವರಿ 2019ರಲ್ಲಿ ಭಾರತದ ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆಯಾಗಿದೆ. ಸೆಪ್ಟೆಂಬರ್ 2016ರಿಂದ ಈಚೆಗಿನ ಅತಿ ಹೆಚ್ಚಿನ ನಿರುದ್ಯೋಗ ದರ ಇದಾಗಿದೆ ಎಂದು ನಿನ್ನೆಯಷ್ಟೇ (ಮಾರ್ಚ್ 5, 2019) ಬಿಡುಗಡೆಯಾದ ಸಿಎಂಇಐ ವರದಿಯನ್ನು ರಾಯಿಟರ್ಸ್  ಸುದ್ದಿಸಂಸ್ಥೆ ವಿಶ್ಲೇಷಿಸಿದೆ. 2018ರ ಫೆಬ್ರವರಿಯಲ್ಲಿ ಈ ದರ ಶೇ.5.8ರಷ್ಟಿತ್ತು. ಭಾರತದಾದ್ಯಂತ ನಡೆಸಲಾದ ಲಕ್ಷಾಂತರ ಕುಟುಂಬಗಳ ಸಮೀಕ್ಷೆಯನ್ನು ಈ ವರದಿ ಒಳಗೊಂಡಿದೆ.

ಮೇನಲ್ಲಿ ಲೋಕಸಭಾ ಚುನಾವಣೆಗೆ ಅಣಿಯಾಗುತ್ತಿರುವ ಪ್ರಧಾನಿ ಮೋದಿಯವರಿಗೆ ಈ ವರದಿ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇದೆ. ಯಾಕೆಂದರೆ ಈಗಾಗಲೇ ವಿರೋಧ ಪಕ್ಷಗಳು ರೈತರಿಗೆ ಸಿಗುತ್ತಿರುವ ಕಡಿಮೆ ಬೆಲೆ ಮತ್ತು ಕುಸಿತಗೊಂಡಿರುವ ಉದ್ಯೋಗ ಸೃಷ್ಟಿಯನ್ನು ತಮ್ಮ ಮುಖ್ಯ ಚುನಾವಣಾ ವಿಷಯಗಳಾಗಿ ಪ್ರಸ್ತಾಪಿಸುತ್ತಿವೆ. ಇಂತಹ ಸಂದರ್ಭದಲ್ಲಿ ಬಿಡುಗಡೆಯಾಗಿರುವ ವರದಿ ನಿರುದ್ಯೋಗ ನಿಯಂತ್ರಣದಲ್ಲಿ ಮೋದಿಯವರ ವೈಫಲ್ಯವನ್ನು ಎತ್ತಿ ತೋಸಿರುತ್ತಿದೆ.

ಈಗಾಗಲೇ ನ್ಯಾಶನಲ್ ಸ್ಯಾಂಪಲ್ ಸರ್ವೇ ಆಫೀಸಸ್ (ಎನ್‌ಎಸ್‌ಎಸ್‌ಒ) ವರದಿಯಲ್ಲಿ, ನಿಯಮಿತ ಕಾರ್ಮಿಕ ವರ್ಗ ಸಮೀಕ್ಷೆಯ ಪ್ರಕಾರ 2017-18ರಲ್ಲಿ ಶೇ.6.1 ತಲುಪಿದ್ದ ನಿರುದ್ಯೋಗ ದರವು ಕಳೆದ 45 ವರ್ಷಗಳ ಇತಿಹಾಸದಲ್ಲಿ ಅತಿಹೆಚ್ಚು ನಿರುದ್ಯೋಗ ದರವಾಗಿದೆ ಎಂದು ಉಲ್ಲೇಖಿಸಿರುವುದಾಗಿ Business Standard ವರದಿ ಮಾಡಿತ್ತು. ತನಗೆ ಲಭ್ಯವಾದ ದಾಖಲೆಪತ್ರಗಳ ಪ್ರಕಾರ, ಉದ್ಯೋಗಕ್ಕೆ ಸಂಬಂಧಿಸಿದ ಅಂಕಿಅಂಶಗಳನ್ನು ಸಂಗ್ರಹಿಸಲು ಶುರು ಮಾಡಲಾದ 1972-73ರಿಂದ ಈಚೆಗೆ 2017-18ರ ನಿರುದ್ಯೋಗ ದರವೇ ದಾಖಲೆಯ ಏರಿಕೆಯದ್ದು ಎಂದು ಅದು ತಿಳಿಸಿತ್ತು.

ಎನ್.ಎಸ್.ಎಸ್.ಒ ವರದಿಯಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲೇ ಹೆಚ್ಚು ನಿರುದ್ಯೋಗ ಪ್ರಮಾಣವಿದೆ ಎಂದು Business Standard ಉಲ್ಲೇಖಿಸಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಶೇ.5.3ರಷ್ಟಿದ್ದರೆ ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ಶೇ.7.8 ರಷ್ಟಿದೆ ಎಂಬುದು ವರದಿಯಿಂದ ತಿಳಿದುಬಂದಿದೆ. ಪ್ರಸ್ತುತ 201-18ನೇ ಸಾಲಿನಲ್ಲಿ ನಿರುದ್ಯೋಗ ದರವು ನಗರ ಪ್ರದೇಶದ 15 ರಿಂದ 29 ವರ್ಷ ವಯೋಮಾನದ ಪುರುಷರಲ್ಲಿ ಶೇ.18.7ರಷ್ಟು (2011ರಲ್ಲಿ ಈ ಪ್ರಮಾಣ ಶೇ.8.1ರಷ್ಟಿತ್ತು) ಹಾಗೂ ನಗರವಾಸಿ ಮಹಿಳೆಯರಲ್ಲಿ ಶೇ.27.2ರಷ್ಟು (2011ರಲ್ಲಿ ಈ ಪ್ರಮಾಣ ಶೇ.13.1ರಷ್ಟಿತ್ತು) ಇದೆ ಎಂದು Business Standard ವರದಿ ಮಾಡಿತ್ತು.

ವಿಪರ್ಯಾಸವೆಂದರೆ, ಮೊದಲಿನಿಂದಲೂ ಬಿಜೆಪಿ ನಗರ ಪ್ರದೇಶಗಳಲ್ಲೇ ತನ್ನ ವೋಟ್‌ಬ್ಯಾಂಕ್ ಸಾಮರ್ಥ್ಯವನ್ನು ಬಲವಾಗಿ ನಂಬಿಕೊಂಡು ಬಂದಿದೆ. ಈಗಲೂ ಅದಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಹೇಳಿಕೊಳ್ಳುವಂತಹ ಬಲವಿಲ್ಲ. ಹೀಗಿರುವಾಗ ನಗರ ಪ್ರದೇಶಗಳಲ್ಲೇ ನಿರುದ್ಯೋಗ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿರುವುದು ಚುನಾವಣಾ ದೃಷ್ಟಿಯಿಂದ ಮೋದಿಯವರಿಗೆ ಶುಭ ಸೂಚಕವಂತೂ ಅಲ್ಲ.

ಈ ಹಿಂದೆ ಇದೇ ಸರ್ಕಾರ ಉದ್ಯೋಗಕ್ಕೆ ಸಂಬಂಧಿಸಿದ ವರದಿಗಳನ್ನು ಬಿಡುಗಡೆ ಮಾಡಿದಾಗ ಅವು ಔಟ್-ಆಫ್-ಡೇಟ್ ಆಗಿರುತ್ತಿದ್ದವು ಎಂಬ ಅಪವಾದಗಳು ಕೇಳಿಬರುತ್ತಿದ್ದವು. ಆದರೆ ಚುನಾವಣಾ ಸಿದ್ಧತೆಯ ಈ ವರ್ಷದಲ್ಲಿ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಬೇಕಿದ್ದ ಎನ್.ಎಸ್.ಎಸ್.ಒ ವರದಿಯನ್ನು ಅಧಿಕಾರಿಗಳು ಅಂಕಿಅಂಶಗಳನ್ನು ಪುನರ್‌ಪರಿಶೀಲಿಸಬೇಕು ಎಂಬ ನೆಪ ನೀಡಿ ಬಿಡುಗಡೆಯನ್ನೇ ಮಾಡಲಿಲ್ಲ. ನಿರುದ್ಯೋಗ ಪ್ರಮಾಣ ಈ ಪರಿಯಲ್ಲಿ ಏರಿಕೆಯಾಗಿರುವುದು ಬಹಿರಂಗಗೊಂಡರೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬ ಅಂದಾಜಿನಿಂದಲೇ ವರದಿಯನ್ನು ಬಿಡುಗಡೆ ಮಾಡದಂತೆ ಸರ್ಕಾರದಿಂದ ತಡೆಹಿಡಿಯಲಾಗಿದೆ ಎಂಬ ಹೇಳಿಕೆಗಳು ಕೇಳಿ ಬಂದ ಬೆನ್ನಲ್ಲೇ Business Standard ಪತ್ರಿಕೆಯು ತನಗೆ ಎನ್.ಎಸ್.ಎಸ್.ಒ ವರದಿ ಅದರ ಸದಸ್ಯರೊಬ್ಬರಿಂದಲೇ ಸೋರಿಕೆಯಾಗಿದೆ ಎಂದು ಅಂಕಿಅಂಶಗಳನ್ನು ಬಹಿರಂಗಗೊಳಿಸಿತ್ತು.

ಆದಾಗ್ಯೂ ಸರ್ಕಾರ ಅದನ್ನು ತಿರಸ್ಕರಿಸಿ ಅವು ಸತ್ಯಕ್ಕೆ ದೂರವಾದ ಸಂಗತಿಗಳು ಎಂದು ಆರೋಪಿಸಿತ್ತೇ ವಿನಾಃ ಯಾವ ಕಾರಣಕ್ಕೆ ಎನ್‌ಎಸ್‌ಎಸ್‌ಒ ವರದಿ ತಡೆಹಿಡಿಯಲಾಗಿದೆ ಎಂಬ ಪ್ರಶ್ನೆಗೆ ಸಮರ್ಪಕ ಉತ್ತರ ನೀಡಿರಲಿಲ್ಲ. ಇದೀಗ ಸಿ.ಎಂ.ಐ.ಇ ವರದಿ ನಿನ್ನೆ ಬಿಡುಗಡೆಗೊಂಡಿದ್ದು ನಿರುದ್ಯೋಗ ದರವನ್ನು ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯವನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ತೆರೆದಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...