Homeಮುಖಪುಟನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

- Advertisement -
- Advertisement -

ಭಾರತೀಯ ಆರ್ಥಿಕ ಉಸ್ತುವಾರಿ ಕೇಂದ್ರವು (ಸಿ.ಎಂ.ಐ.ಇ) ಸಂಗ್ರಹಿಸಿರುವ ದತ್ತಾಂಶಗಳ ಪ್ರಕಾರ ಫೆಬ್ರವರಿ 2019ರಲ್ಲಿ ಭಾರತದ ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆಯಾಗಿದೆ. ಸೆಪ್ಟೆಂಬರ್ 2016ರಿಂದ ಈಚೆಗಿನ ಅತಿ ಹೆಚ್ಚಿನ ನಿರುದ್ಯೋಗ ದರ ಇದಾಗಿದೆ ಎಂದು ನಿನ್ನೆಯಷ್ಟೇ (ಮಾರ್ಚ್ 5, 2019) ಬಿಡುಗಡೆಯಾದ ಸಿಎಂಇಐ ವರದಿಯನ್ನು ರಾಯಿಟರ್ಸ್  ಸುದ್ದಿಸಂಸ್ಥೆ ವಿಶ್ಲೇಷಿಸಿದೆ. 2018ರ ಫೆಬ್ರವರಿಯಲ್ಲಿ ಈ ದರ ಶೇ.5.8ರಷ್ಟಿತ್ತು. ಭಾರತದಾದ್ಯಂತ ನಡೆಸಲಾದ ಲಕ್ಷಾಂತರ ಕುಟುಂಬಗಳ ಸಮೀಕ್ಷೆಯನ್ನು ಈ ವರದಿ ಒಳಗೊಂಡಿದೆ.

ಮೇನಲ್ಲಿ ಲೋಕಸಭಾ ಚುನಾವಣೆಗೆ ಅಣಿಯಾಗುತ್ತಿರುವ ಪ್ರಧಾನಿ ಮೋದಿಯವರಿಗೆ ಈ ವರದಿ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇದೆ. ಯಾಕೆಂದರೆ ಈಗಾಗಲೇ ವಿರೋಧ ಪಕ್ಷಗಳು ರೈತರಿಗೆ ಸಿಗುತ್ತಿರುವ ಕಡಿಮೆ ಬೆಲೆ ಮತ್ತು ಕುಸಿತಗೊಂಡಿರುವ ಉದ್ಯೋಗ ಸೃಷ್ಟಿಯನ್ನು ತಮ್ಮ ಮುಖ್ಯ ಚುನಾವಣಾ ವಿಷಯಗಳಾಗಿ ಪ್ರಸ್ತಾಪಿಸುತ್ತಿವೆ. ಇಂತಹ ಸಂದರ್ಭದಲ್ಲಿ ಬಿಡುಗಡೆಯಾಗಿರುವ ವರದಿ ನಿರುದ್ಯೋಗ ನಿಯಂತ್ರಣದಲ್ಲಿ ಮೋದಿಯವರ ವೈಫಲ್ಯವನ್ನು ಎತ್ತಿ ತೋಸಿರುತ್ತಿದೆ.

ಈಗಾಗಲೇ ನ್ಯಾಶನಲ್ ಸ್ಯಾಂಪಲ್ ಸರ್ವೇ ಆಫೀಸಸ್ (ಎನ್‌ಎಸ್‌ಎಸ್‌ಒ) ವರದಿಯಲ್ಲಿ, ನಿಯಮಿತ ಕಾರ್ಮಿಕ ವರ್ಗ ಸಮೀಕ್ಷೆಯ ಪ್ರಕಾರ 2017-18ರಲ್ಲಿ ಶೇ.6.1 ತಲುಪಿದ್ದ ನಿರುದ್ಯೋಗ ದರವು ಕಳೆದ 45 ವರ್ಷಗಳ ಇತಿಹಾಸದಲ್ಲಿ ಅತಿಹೆಚ್ಚು ನಿರುದ್ಯೋಗ ದರವಾಗಿದೆ ಎಂದು ಉಲ್ಲೇಖಿಸಿರುವುದಾಗಿ Business Standard ವರದಿ ಮಾಡಿತ್ತು. ತನಗೆ ಲಭ್ಯವಾದ ದಾಖಲೆಪತ್ರಗಳ ಪ್ರಕಾರ, ಉದ್ಯೋಗಕ್ಕೆ ಸಂಬಂಧಿಸಿದ ಅಂಕಿಅಂಶಗಳನ್ನು ಸಂಗ್ರಹಿಸಲು ಶುರು ಮಾಡಲಾದ 1972-73ರಿಂದ ಈಚೆಗೆ 2017-18ರ ನಿರುದ್ಯೋಗ ದರವೇ ದಾಖಲೆಯ ಏರಿಕೆಯದ್ದು ಎಂದು ಅದು ತಿಳಿಸಿತ್ತು.

ಎನ್.ಎಸ್.ಎಸ್.ಒ ವರದಿಯಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲೇ ಹೆಚ್ಚು ನಿರುದ್ಯೋಗ ಪ್ರಮಾಣವಿದೆ ಎಂದು Business Standard ಉಲ್ಲೇಖಿಸಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಶೇ.5.3ರಷ್ಟಿದ್ದರೆ ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ಶೇ.7.8 ರಷ್ಟಿದೆ ಎಂಬುದು ವರದಿಯಿಂದ ತಿಳಿದುಬಂದಿದೆ. ಪ್ರಸ್ತುತ 201-18ನೇ ಸಾಲಿನಲ್ಲಿ ನಿರುದ್ಯೋಗ ದರವು ನಗರ ಪ್ರದೇಶದ 15 ರಿಂದ 29 ವರ್ಷ ವಯೋಮಾನದ ಪುರುಷರಲ್ಲಿ ಶೇ.18.7ರಷ್ಟು (2011ರಲ್ಲಿ ಈ ಪ್ರಮಾಣ ಶೇ.8.1ರಷ್ಟಿತ್ತು) ಹಾಗೂ ನಗರವಾಸಿ ಮಹಿಳೆಯರಲ್ಲಿ ಶೇ.27.2ರಷ್ಟು (2011ರಲ್ಲಿ ಈ ಪ್ರಮಾಣ ಶೇ.13.1ರಷ್ಟಿತ್ತು) ಇದೆ ಎಂದು Business Standard ವರದಿ ಮಾಡಿತ್ತು.

ವಿಪರ್ಯಾಸವೆಂದರೆ, ಮೊದಲಿನಿಂದಲೂ ಬಿಜೆಪಿ ನಗರ ಪ್ರದೇಶಗಳಲ್ಲೇ ತನ್ನ ವೋಟ್‌ಬ್ಯಾಂಕ್ ಸಾಮರ್ಥ್ಯವನ್ನು ಬಲವಾಗಿ ನಂಬಿಕೊಂಡು ಬಂದಿದೆ. ಈಗಲೂ ಅದಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಹೇಳಿಕೊಳ್ಳುವಂತಹ ಬಲವಿಲ್ಲ. ಹೀಗಿರುವಾಗ ನಗರ ಪ್ರದೇಶಗಳಲ್ಲೇ ನಿರುದ್ಯೋಗ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿರುವುದು ಚುನಾವಣಾ ದೃಷ್ಟಿಯಿಂದ ಮೋದಿಯವರಿಗೆ ಶುಭ ಸೂಚಕವಂತೂ ಅಲ್ಲ.

ಈ ಹಿಂದೆ ಇದೇ ಸರ್ಕಾರ ಉದ್ಯೋಗಕ್ಕೆ ಸಂಬಂಧಿಸಿದ ವರದಿಗಳನ್ನು ಬಿಡುಗಡೆ ಮಾಡಿದಾಗ ಅವು ಔಟ್-ಆಫ್-ಡೇಟ್ ಆಗಿರುತ್ತಿದ್ದವು ಎಂಬ ಅಪವಾದಗಳು ಕೇಳಿಬರುತ್ತಿದ್ದವು. ಆದರೆ ಚುನಾವಣಾ ಸಿದ್ಧತೆಯ ಈ ವರ್ಷದಲ್ಲಿ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಬೇಕಿದ್ದ ಎನ್.ಎಸ್.ಎಸ್.ಒ ವರದಿಯನ್ನು ಅಧಿಕಾರಿಗಳು ಅಂಕಿಅಂಶಗಳನ್ನು ಪುನರ್‌ಪರಿಶೀಲಿಸಬೇಕು ಎಂಬ ನೆಪ ನೀಡಿ ಬಿಡುಗಡೆಯನ್ನೇ ಮಾಡಲಿಲ್ಲ. ನಿರುದ್ಯೋಗ ಪ್ರಮಾಣ ಈ ಪರಿಯಲ್ಲಿ ಏರಿಕೆಯಾಗಿರುವುದು ಬಹಿರಂಗಗೊಂಡರೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬ ಅಂದಾಜಿನಿಂದಲೇ ವರದಿಯನ್ನು ಬಿಡುಗಡೆ ಮಾಡದಂತೆ ಸರ್ಕಾರದಿಂದ ತಡೆಹಿಡಿಯಲಾಗಿದೆ ಎಂಬ ಹೇಳಿಕೆಗಳು ಕೇಳಿ ಬಂದ ಬೆನ್ನಲ್ಲೇ Business Standard ಪತ್ರಿಕೆಯು ತನಗೆ ಎನ್.ಎಸ್.ಎಸ್.ಒ ವರದಿ ಅದರ ಸದಸ್ಯರೊಬ್ಬರಿಂದಲೇ ಸೋರಿಕೆಯಾಗಿದೆ ಎಂದು ಅಂಕಿಅಂಶಗಳನ್ನು ಬಹಿರಂಗಗೊಳಿಸಿತ್ತು.

ಆದಾಗ್ಯೂ ಸರ್ಕಾರ ಅದನ್ನು ತಿರಸ್ಕರಿಸಿ ಅವು ಸತ್ಯಕ್ಕೆ ದೂರವಾದ ಸಂಗತಿಗಳು ಎಂದು ಆರೋಪಿಸಿತ್ತೇ ವಿನಾಃ ಯಾವ ಕಾರಣಕ್ಕೆ ಎನ್‌ಎಸ್‌ಎಸ್‌ಒ ವರದಿ ತಡೆಹಿಡಿಯಲಾಗಿದೆ ಎಂಬ ಪ್ರಶ್ನೆಗೆ ಸಮರ್ಪಕ ಉತ್ತರ ನೀಡಿರಲಿಲ್ಲ. ಇದೀಗ ಸಿ.ಎಂ.ಐ.ಇ ವರದಿ ನಿನ್ನೆ ಬಿಡುಗಡೆಗೊಂಡಿದ್ದು ನಿರುದ್ಯೋಗ ದರವನ್ನು ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯವನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ತೆರೆದಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...