Homeಮುಖಪುಟನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆ: ಮೋದಿಗೆ ಸಂಕಷ್ಟ ತಂದಿಟ್ಟ ಸಿಎಂಇಐ ವರದಿ

- Advertisement -
- Advertisement -

ಭಾರತೀಯ ಆರ್ಥಿಕ ಉಸ್ತುವಾರಿ ಕೇಂದ್ರವು (ಸಿ.ಎಂ.ಐ.ಇ) ಸಂಗ್ರಹಿಸಿರುವ ದತ್ತಾಂಶಗಳ ಪ್ರಕಾರ ಫೆಬ್ರವರಿ 2019ರಲ್ಲಿ ಭಾರತದ ನಿರುದ್ಯೋಗ ದರ ಶೇ.7.2ಕ್ಕೆ ಏರಿಕೆಯಾಗಿದೆ. ಸೆಪ್ಟೆಂಬರ್ 2016ರಿಂದ ಈಚೆಗಿನ ಅತಿ ಹೆಚ್ಚಿನ ನಿರುದ್ಯೋಗ ದರ ಇದಾಗಿದೆ ಎಂದು ನಿನ್ನೆಯಷ್ಟೇ (ಮಾರ್ಚ್ 5, 2019) ಬಿಡುಗಡೆಯಾದ ಸಿಎಂಇಐ ವರದಿಯನ್ನು ರಾಯಿಟರ್ಸ್  ಸುದ್ದಿಸಂಸ್ಥೆ ವಿಶ್ಲೇಷಿಸಿದೆ. 2018ರ ಫೆಬ್ರವರಿಯಲ್ಲಿ ಈ ದರ ಶೇ.5.8ರಷ್ಟಿತ್ತು. ಭಾರತದಾದ್ಯಂತ ನಡೆಸಲಾದ ಲಕ್ಷಾಂತರ ಕುಟುಂಬಗಳ ಸಮೀಕ್ಷೆಯನ್ನು ಈ ವರದಿ ಒಳಗೊಂಡಿದೆ.

ಮೇನಲ್ಲಿ ಲೋಕಸಭಾ ಚುನಾವಣೆಗೆ ಅಣಿಯಾಗುತ್ತಿರುವ ಪ್ರಧಾನಿ ಮೋದಿಯವರಿಗೆ ಈ ವರದಿ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇದೆ. ಯಾಕೆಂದರೆ ಈಗಾಗಲೇ ವಿರೋಧ ಪಕ್ಷಗಳು ರೈತರಿಗೆ ಸಿಗುತ್ತಿರುವ ಕಡಿಮೆ ಬೆಲೆ ಮತ್ತು ಕುಸಿತಗೊಂಡಿರುವ ಉದ್ಯೋಗ ಸೃಷ್ಟಿಯನ್ನು ತಮ್ಮ ಮುಖ್ಯ ಚುನಾವಣಾ ವಿಷಯಗಳಾಗಿ ಪ್ರಸ್ತಾಪಿಸುತ್ತಿವೆ. ಇಂತಹ ಸಂದರ್ಭದಲ್ಲಿ ಬಿಡುಗಡೆಯಾಗಿರುವ ವರದಿ ನಿರುದ್ಯೋಗ ನಿಯಂತ್ರಣದಲ್ಲಿ ಮೋದಿಯವರ ವೈಫಲ್ಯವನ್ನು ಎತ್ತಿ ತೋಸಿರುತ್ತಿದೆ.

ಈಗಾಗಲೇ ನ್ಯಾಶನಲ್ ಸ್ಯಾಂಪಲ್ ಸರ್ವೇ ಆಫೀಸಸ್ (ಎನ್‌ಎಸ್‌ಎಸ್‌ಒ) ವರದಿಯಲ್ಲಿ, ನಿಯಮಿತ ಕಾರ್ಮಿಕ ವರ್ಗ ಸಮೀಕ್ಷೆಯ ಪ್ರಕಾರ 2017-18ರಲ್ಲಿ ಶೇ.6.1 ತಲುಪಿದ್ದ ನಿರುದ್ಯೋಗ ದರವು ಕಳೆದ 45 ವರ್ಷಗಳ ಇತಿಹಾಸದಲ್ಲಿ ಅತಿಹೆಚ್ಚು ನಿರುದ್ಯೋಗ ದರವಾಗಿದೆ ಎಂದು ಉಲ್ಲೇಖಿಸಿರುವುದಾಗಿ Business Standard ವರದಿ ಮಾಡಿತ್ತು. ತನಗೆ ಲಭ್ಯವಾದ ದಾಖಲೆಪತ್ರಗಳ ಪ್ರಕಾರ, ಉದ್ಯೋಗಕ್ಕೆ ಸಂಬಂಧಿಸಿದ ಅಂಕಿಅಂಶಗಳನ್ನು ಸಂಗ್ರಹಿಸಲು ಶುರು ಮಾಡಲಾದ 1972-73ರಿಂದ ಈಚೆಗೆ 2017-18ರ ನಿರುದ್ಯೋಗ ದರವೇ ದಾಖಲೆಯ ಏರಿಕೆಯದ್ದು ಎಂದು ಅದು ತಿಳಿಸಿತ್ತು.

ಎನ್.ಎಸ್.ಎಸ್.ಒ ವರದಿಯಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲೇ ಹೆಚ್ಚು ನಿರುದ್ಯೋಗ ಪ್ರಮಾಣವಿದೆ ಎಂದು Business Standard ಉಲ್ಲೇಖಿಸಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಶೇ.5.3ರಷ್ಟಿದ್ದರೆ ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ಶೇ.7.8 ರಷ್ಟಿದೆ ಎಂಬುದು ವರದಿಯಿಂದ ತಿಳಿದುಬಂದಿದೆ. ಪ್ರಸ್ತುತ 201-18ನೇ ಸಾಲಿನಲ್ಲಿ ನಿರುದ್ಯೋಗ ದರವು ನಗರ ಪ್ರದೇಶದ 15 ರಿಂದ 29 ವರ್ಷ ವಯೋಮಾನದ ಪುರುಷರಲ್ಲಿ ಶೇ.18.7ರಷ್ಟು (2011ರಲ್ಲಿ ಈ ಪ್ರಮಾಣ ಶೇ.8.1ರಷ್ಟಿತ್ತು) ಹಾಗೂ ನಗರವಾಸಿ ಮಹಿಳೆಯರಲ್ಲಿ ಶೇ.27.2ರಷ್ಟು (2011ರಲ್ಲಿ ಈ ಪ್ರಮಾಣ ಶೇ.13.1ರಷ್ಟಿತ್ತು) ಇದೆ ಎಂದು Business Standard ವರದಿ ಮಾಡಿತ್ತು.

ವಿಪರ್ಯಾಸವೆಂದರೆ, ಮೊದಲಿನಿಂದಲೂ ಬಿಜೆಪಿ ನಗರ ಪ್ರದೇಶಗಳಲ್ಲೇ ತನ್ನ ವೋಟ್‌ಬ್ಯಾಂಕ್ ಸಾಮರ್ಥ್ಯವನ್ನು ಬಲವಾಗಿ ನಂಬಿಕೊಂಡು ಬಂದಿದೆ. ಈಗಲೂ ಅದಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಹೇಳಿಕೊಳ್ಳುವಂತಹ ಬಲವಿಲ್ಲ. ಹೀಗಿರುವಾಗ ನಗರ ಪ್ರದೇಶಗಳಲ್ಲೇ ನಿರುದ್ಯೋಗ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿರುವುದು ಚುನಾವಣಾ ದೃಷ್ಟಿಯಿಂದ ಮೋದಿಯವರಿಗೆ ಶುಭ ಸೂಚಕವಂತೂ ಅಲ್ಲ.

ಈ ಹಿಂದೆ ಇದೇ ಸರ್ಕಾರ ಉದ್ಯೋಗಕ್ಕೆ ಸಂಬಂಧಿಸಿದ ವರದಿಗಳನ್ನು ಬಿಡುಗಡೆ ಮಾಡಿದಾಗ ಅವು ಔಟ್-ಆಫ್-ಡೇಟ್ ಆಗಿರುತ್ತಿದ್ದವು ಎಂಬ ಅಪವಾದಗಳು ಕೇಳಿಬರುತ್ತಿದ್ದವು. ಆದರೆ ಚುನಾವಣಾ ಸಿದ್ಧತೆಯ ಈ ವರ್ಷದಲ್ಲಿ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಬೇಕಿದ್ದ ಎನ್.ಎಸ್.ಎಸ್.ಒ ವರದಿಯನ್ನು ಅಧಿಕಾರಿಗಳು ಅಂಕಿಅಂಶಗಳನ್ನು ಪುನರ್‌ಪರಿಶೀಲಿಸಬೇಕು ಎಂಬ ನೆಪ ನೀಡಿ ಬಿಡುಗಡೆಯನ್ನೇ ಮಾಡಲಿಲ್ಲ. ನಿರುದ್ಯೋಗ ಪ್ರಮಾಣ ಈ ಪರಿಯಲ್ಲಿ ಏರಿಕೆಯಾಗಿರುವುದು ಬಹಿರಂಗಗೊಂಡರೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬ ಅಂದಾಜಿನಿಂದಲೇ ವರದಿಯನ್ನು ಬಿಡುಗಡೆ ಮಾಡದಂತೆ ಸರ್ಕಾರದಿಂದ ತಡೆಹಿಡಿಯಲಾಗಿದೆ ಎಂಬ ಹೇಳಿಕೆಗಳು ಕೇಳಿ ಬಂದ ಬೆನ್ನಲ್ಲೇ Business Standard ಪತ್ರಿಕೆಯು ತನಗೆ ಎನ್.ಎಸ್.ಎಸ್.ಒ ವರದಿ ಅದರ ಸದಸ್ಯರೊಬ್ಬರಿಂದಲೇ ಸೋರಿಕೆಯಾಗಿದೆ ಎಂದು ಅಂಕಿಅಂಶಗಳನ್ನು ಬಹಿರಂಗಗೊಳಿಸಿತ್ತು.

ಆದಾಗ್ಯೂ ಸರ್ಕಾರ ಅದನ್ನು ತಿರಸ್ಕರಿಸಿ ಅವು ಸತ್ಯಕ್ಕೆ ದೂರವಾದ ಸಂಗತಿಗಳು ಎಂದು ಆರೋಪಿಸಿತ್ತೇ ವಿನಾಃ ಯಾವ ಕಾರಣಕ್ಕೆ ಎನ್‌ಎಸ್‌ಎಸ್‌ಒ ವರದಿ ತಡೆಹಿಡಿಯಲಾಗಿದೆ ಎಂಬ ಪ್ರಶ್ನೆಗೆ ಸಮರ್ಪಕ ಉತ್ತರ ನೀಡಿರಲಿಲ್ಲ. ಇದೀಗ ಸಿ.ಎಂ.ಐ.ಇ ವರದಿ ನಿನ್ನೆ ಬಿಡುಗಡೆಗೊಂಡಿದ್ದು ನಿರುದ್ಯೋಗ ದರವನ್ನು ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯವನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ತೆರೆದಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...