Homeಎಕಾನಮಿಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ಆದರೆ, ಲಾಕ್‌ಡೌನ್‌ ಸಂದರ್ಭದಲ್ಲಿ ದೇಶದ ಜಿಡಿಪಿ ಕುಸಿದು, ಇತ್ತೀಚಿನ ವರ್ತಮಾನದ ಪ್ರಕಾರ ಅದು ಶೇ. -23ರಷ್ಟು ಕುಸಿದಿತ್ತು. ನಿರುದ್ಯೋಗ ದಾಖಲೆ ಪ್ರಮಾಣದಲ್ಲಿ ಏರಿತ್ತು.

- Advertisement -
- Advertisement -

2050ರ ವೇಳೆಗೆ ಅಮೇರಿಕಾ ಮತ್ತು ಚೀನಾದ ನಂತರ, ಭಾರತವು ವಿಶ್ವದಲ್ಲಿ 3ನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿರುವ ರಾಷ್ಟ್ರವಾಗಲಿದೆ ಎಂದು ಲ್ಯಾನ್ಸೆಟ್‌ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನ ತಿಳಿಸಿದೆ. ಪ್ರಸ್ತುತ ಭಾರತ 5ನೇ ಸ್ಥಾನದಲ್ಲಿದ್ದು, ಫ್ರಾನ್ಸ್‌ ಮತ್ತು ಇಂಗ್ಲೆಂಡ್‌ನ ನಂತರದ ಸ್ಥಾನದಲ್ಲಿದೆ.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

2017 ರಲ್ಲಿ ಭಾರತವು ವಿಶ್ವದ ಏಳನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿರುವ ದೇಶವಾಗಿತ್ತು. ಈ ಅಧ್ಯಯನವು ಆ ಮೂಲ ವರ್ಷವನ್ನು ಆಧಾರವಾಗಿಟ್ಟುಕೊಂಡು ದೇಶದ ಬೆಳವಣಿಗೆಯನ್ನು ಅಧ್ಯಯನಿಸಿದೆ. ಈ ಅಧ್ಯಯನದ ಪ್ರಕಾರ, ಭಾರತವು 2030 ರ ವೇಳೆಗೆ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಲಿದ್ದು, 2050 ರ ವೇಳೆಗೆ ಮೂರನೇ ಸ್ಥಾನಕ್ಕೆ ತಲುಪಲಿದೆ ಎಂದು ತಿಳಿದುಬಂದಿದೆ. ಇದು ಸಂಭವಿಸಿದರೆ, ಪ್ರಸ್ತುತ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಜಪಾನ್‌ ಅನ್ನು ಭಾರತವು ಹಿಂದಿಕ್ಕಲಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಆದರೆ, ಲಾಕ್‌ಡೌನ್‌ ಸಂದರ್ಭದಲ್ಲಿ ದೇಶದ ಜಿಡಿಪಿ ಕುಸಿದು, ಇತ್ತೀಚಿನ ವರ್ತಮಾನದ ಪ್ರಕಾರ ಅದು ಶೇ. -23ರಷ್ಟು ಕುಸಿದಿತ್ತು. ನಿರುದ್ಯೋಗ ದಾಖಲೆ ಪ್ರಮಾಣದಲ್ಲಿ ಏರಿತ್ತು. ಕೃಷಿಯೊಂದನ್ನು ಹೊರತುಪಡಿಸಿದರೆ ಉತ್ಪಾದನೆ, ಸೇವಾ ವಲಯ, ನಿರ್ಮಾಣ ವಲಯ ಸೇರಿದಂತೆ ಮಿಕ್ಕೆಲ್ಲಾ ಕ್ಷೇತ್ರಗಳು ತೀವ್ರ ಸಂಕಷ್ಟ ಅನುಭವಿಸಿದ್ದವು.

ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಹಿಂದೆಂದಿಗಿಂತಲೂ ಇಂದು ದೇಶದ ಆರ್ಥಿಕತೆ ಪಾತಾಳ ಸೇರಿದೆ ಎಂದು ಭಾರತದ ಅರ್ಥಶಾಸ್ತ್ರಜ್ಮರಿಂದ ಹಿಡಿದು ಅಂತರಾಷ್ಟ್ರೀಯ ತಜ್ಞರವರೆಗೆ ಬಹುತೇಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಈ ಅಧ್ಯಯನ ಸ್ವಲ್ಪಮಟ್ಟಿಗೆ ಆಶಾಭಾವನೆಯನ್ನು ಮೂಡಿಸುತ್ತದಾದರೂ, ಅನುಮಾನಕ್ಕೂ ಎಡೆ ಮಾಡಿಕೊಡುತ್ತದೆ?!

ದೇಶದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಆರ್ಥಿಕ ತಜ್ಞರೂ ಆದ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಸರ್ಕಾರದ ಅಸಮರ್ಪಕ ನೀತಿಗಳ ವಿರುದ್ಧ ತೀವ್ರವಾಗಿ ಟೀಕೆ ಮಾಡಿದ್ದರು.

ಇದನ್ನೂ ಓದಿ: ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

“2014-15 ರ ಆರ್ಥಿಕ ವರ್ಷದಲ್ಲಿ ದೇಶದ ಅಭಿವೃದ್ಧಿ ದರ ಶೇ.8 ರಷ್ಟಿತ್ತು. ನಂತರದ ವರ್ಷಗಳಲ್ಲಿ ಅದು ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಬಂದಿದೆ. 2019-20 ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಅಭಿವೃದ್ಧಿ ದರ 3.1 ಕ್ಕೆ ಕುಸಿದಿತ್ತು. ಕೊರೊನಾ ನಂತರದಲ್ಲಿ ಮತ್ತಷ್ಟು ಕುಸಿತ ಕಂಡಿದೆ. ಲಾಕ್‌ಡೌನ್‌ ಹೇರಿಕೆಯಿಂದಾಗಿ ವ್ಯಾಪಾರ, ವಹಿವಾಟು, ಉತ್ಪಾದನಾ ಕ್ಷೇತ್ರ ಎಲ್ಲವೂ ಸ್ಥಗಿತಗೊಂಡಿದ್ದು, ಅಭಿವೃದ್ಧಿ ಸೂಚ್ಯಂಕ ಬಿದ್ದಿದೆ. ಜಿಡಿಪಿ ದರ ಗಣನೀಯವಾಗಿ ಕುಸಿಯುತ್ತಿದೆ ಎಂದು ನಾನು ಹೇಳುತ್ತಲೇ ಇದ್ದೆ. ಆದರೆ, ಎಲ್ಲರೂ ನನಗೆ ಬೈದು ಬಾಯಿಮುಚ್ಚಿಸುತ್ತಿದ್ದರು. ಈಗ, 2020-2021 ರ ಹಣಕಾಸು ವರ್ಷದ ಆರಂಭದಲ್ಲಿ (ಏಪ್ರಿಲ್‌-ಜೂನ್‌ 30)  ದೇಶದ ಜಿಡಿಪಿ ಶೇಕಡಾ 23.9 ರಷ್ಟು ಕುಸಿದಿದೆ. ಈ ವರ್ಷದ ಅಂತ್ಯದ ವೇಳೆಗೆ ದೇಶದ ಅಭಿವೃದ್ಧಿ ದರ -15% ಗೆ ಇಳಿಯಬಹುದು. ಕೊನೆಗೆ ಒಟ್ಟಾರೆ ದೇಶದ ಬೆಳವಣಿಗೆ ಶೇಕಡಾ 15 ರಷ್ಟಾಗಬಹುದು” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

“ಕಳೆದ ನಾಲ್ಕೈದು ವರ್ಷಗಳಿಂದ ವಿತ್ತೀಯ ಕೊರತೆಯುಂಟಾಗಿದೆ. ನೋಟು ಅನಾಣ್ಯೀಕರಣ ಮತ್ತು ಜಿಎಸ್‌ಟಿಯಿಂದ ಇದು ಸಂಭವಿಸಿದೆ. ಇದನ್ನು ತೆರಿಗೆ ಭಯೋತ್ಪಾದನೆ ಎಂದು ನಾವು ಕರೆಯಬಹುದು. ಆದಾಯ ತೆರಿಗೆ ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ. ಸರ್ಕಾರ ಜನರ ಕೈಗೆ ಹೇಗೆ ಹಣ ತಲುಪಬೇಕು ಎಂಬುದರ ಬಗ್ಗೆ ಯೋಚಿಸಬೇಕು. ಕೊರೊನಾ ಪರಿಸ್ಥಿತಿಯನ್ನು ಸರ್ಕಾರ ಉತ್ತಮವಾಗಿ ನಿಭಾಯಿಸಿದೆ. ಆದರೆ, ದೇಶಾದ್ಯಂತ ಲಾಕ್‌ಡೌನ್‌ ಹೇರುವ ಮುನ್ನ ಜನರಿಗೆ ತಮ್ಮ ಜೀವನೋಪಾಯಕ್ಕೆ ಬೇಕಾದ ತಯಾರಿ ಮಾಡಿಕೊಳ್ಳಲು ಕಾಲಾವಕಾಶ ನೀಡಬೇಕಾಗಿತ್ತು. ಆದರೆ, ಅದು ಆಗಲಿಲ್ಲ ಹಾಗಾಗಿ ಜನರು ಸಂಕಷ್ಟಗಳನ್ನು ಎದುರಿಸಬೇಕಾಯಿತು” ಎಂದು ವಿವರಿಸಿದ್ದರು


ಇದನ್ನೂ ಓದಿ: ಕೋವಿಡ್‌ನಿಂದ ನೆಲಕಚ್ಚಿರುವ ಆರ್ಥಿಕತೆಯನ್ನು ಮೇಲೆತ್ತಲು ಸರ್ಕಾರ ಮಾಡಬೇಕಾದುದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...