Homeಮುಖಪುಟನಿರುದ್ಯೋಗ: 8ನೇ ತರಗತಿ ವಿದ್ಯಾರ್ಹತೆಯ ಹುದ್ದೆಗೆ ಪದವೀಧರರಿಂದ ಅರ್ಜಿ!

ನಿರುದ್ಯೋಗ: 8ನೇ ತರಗತಿ ವಿದ್ಯಾರ್ಹತೆಯ ಹುದ್ದೆಗೆ ಪದವೀಧರರಿಂದ ಅರ್ಜಿ!

ಒಪ್ಪಂದದ ಆಧಾರದ ಮೇಲಿನ ಕೆಲಸವಾದರೂ ಸರ್ಕಾರಿ ಉದ್ಯೋಗಕ್ಕೆ ಆದ್ಯತೆ ನೀಡುತ್ತೇನೆ. ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಪ್ರಸ್ತುತ ಪರಿಸ್ಥಿತಿಯಲ್ಲಿ ಕಡಿಮೆ ವಿದ್ಯಾ ಅರ್ಹತೆಯ ಹುದ್ದೆಯಾದರೂ ಪರವಾಗಿಲ್ಲ ಎನ್ನುತ್ತಾರೆ ಪದವೀಧರರು

- Advertisement -
- Advertisement -

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು ಅದರ ಪರಿಣಾಮಗಳು ಹಲವಾರು ರೀತಿಯಲ್ಲಿ ನಮ್ಮ ಮೇಲೆ ಆಗುತ್ತಿವೆ. ಕೊರೊನಾ ಸಾಂಕ್ರಾಮಿಕದಿಂದ ಜಾರಿಗೊಳಿಸಲಾದ ಲಾಕ್‌ಡೌನ್ ಜನರ ಜೀವನವನ್ನು ಮತ್ತಷ್ಟು ಬುಡಮೇಲು ಮಾಡಿದೆ.

ಲಾಖ್‌ಡೌನ್‌ನಲ್ಲಿ ಕೆಲಸ ಕಳೆದುಕೊಂಡವರ ಸಂಖ್ಯೆ, ಉಪವಾಸದಿಂದ ನರಳಿದವರ ಸಂಖ್ಯೆ ನಿಜಕ್ಕೂ ಗಾಬರಿ ಹುಟ್ಟಿಸುವಂತಿದೆ. ಇದರ ಪರಿಣಾಮ ಕೆಲಸ ಏನೇ ಆಗಿರಲಿ ಸರ್ಕಾರಿ ಹುದ್ದೆ ಬೇಕು ಎನ್ನುವವರ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಸಾಕ್ಷಿ ಸದ್ಯಕ್ಕೆ ಪಶ್ಚಿಮ ಬಂಗಾಳದ ಘಟನೆ.

ಇದನ್ನೂ ಓದಿ: ಪ್ರಧಾನಿ ವಿರುದ್ಧ ಹೆಚ್ಚಿದ ಆಕ್ರೋಶ: ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿಯುತ್ತಿರುವ ಯುವಸಮೂಹ!

ಪಶ್ಚಿಮ ಬಂಗಾಳ ಸರ್ಕಾರವು ವನ್ಯಜೀವಿಗಳನ್ನು ರಕ್ಷಿಸಲು ಮತ್ತು ಮನುಷ್ಯ ಹಾಗೂ ಪ್ರಾಣಿಗಳ ಸಂಘರ್ಷವನ್ನು ತಡೆಗಟ್ಟಲು 2,000 ಅರಣ್ಯ ಸಹಾಯಕರನ್ನು (Bana Sahayaks) ಒಪ್ಪಂದದ ಆಧಾರದ ಮೇಲೆ ನೇಮಿಸಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಪಿಎಚ್‌.ಡಿ ಪದವೀಧರರು, ಸ್ನಾತಕೋತ್ತರ ಪದವೀಧರರು, ಎಂಜಿನಿಯರಿಂಗ್‌ ಪದವೀಧರರೂ ಅರ್ಜಿ ಸಲ್ಲಿಸಿದ್ದಾರೆ ಎಂದು ಮಾಲ್ಡಾ ಅರಣ್ಯ ವಿಭಾಗದ ವಲಯ‌ ಅಧಿಕಾರಿ ಸುಭೀರ್‌ ಕುಮಾರ್‌ ಗುಹಾ ನಿಯೋಗಿ ತಿಳಿಸಿದರು.

ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಇತಿಹಾಸದಲ್ಲಿ ಸ್ನಾತಕೋತ್ತರ ಪದವೀಧರರಾದ ಸುದೀಪ್ ಮೊಯಿತ್ರಾ ಹೇಳುವಂತೆ ’ಒಪ್ಪಂದದ ಆಧಾರದ ಮೇಲಿನ ಕೆಲಸವಾದರೂ ಸರ್ಕಾರಿ ಉದ್ಯೋಗಕ್ಕೆ ಆದ್ಯತೆ ನೀಡುತ್ತೇನೆ. ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಪ್ರಸ್ತುತ ಪರಿಸ್ಥಿತಿಯಲ್ಲಿ ಕಡಿಮೆ ವಿದ್ಯಾರ್ಹತೆಯ ಹುದ್ದೆಯಾದರೂ ಪರವಾಗಿಲ್ಲ’ ಎನ್ನುತ್ತಾರೆ.

’ಸದ್ಯ ಮಾರುಕಟ್ಟೆಯಲ್ಲಿ ಉದ್ಯೋಗ ಸಿಗುವುದು ಕಷ್ಟವಾಗಿದೆ. ಸಾಂಕ್ರಾಮಿಕದಿಂದ ಅನೇಕ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಖಾಸಗಿ ಸಂಸ್ಥೆಗಳು ಹೊಸ ನೇಮಕಾತಿಗಳನ್ನು ಮಾಡುತ್ತಿಲ್ಲ. ಹೀಗಾಗಿ ಎಂತಹ ಸರ್ಕಾರಿ ಹುದ್ದೆಯಾದರೂ ನಾನು ಸ್ವೀಕರಿಸುತ್ತೇನೆ’ ಎನ್ನುತ್ತಾರೆ.

ಇದನ್ನೂ ಓದಿ: ಹೆಚ್ಚಿದ ನಿರುದ್ಯೋಗ: ಗುಜರಾತ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾದ ವೈದ್ಯಕೀಯ, ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವೀಧರರು.!

“ಪ್ರಸ್ತುತ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಏನನ್ನೂ ಮಾಡದೆ ಮನೆಯಲ್ಲಿ ಇರುವುದಕ್ಕಿಂತ ಕೆಲವು ಸಾವಿರ ರೂಪಾಯಿಗಳಿಗೆ ಸಂಬಳದೊಂದಿಗೆ ಉದ್ಯೋಗದಲ್ಲಿರುವುದು ಉತ್ತಮ” ಎಂದು ಅರ್ಥಶಾಸ್ತ್ರದಲ್ಲಿ ಎಂಎಸ್ಸಿ ಮಾಡಿರುವ ರಕ್ತೀಮ್ ಚಂದಾ ತಿಳಿಸುತ್ತಾರೆ.

“ಸಂಶೋಧಕರಂತಹ ಉನ್ನತ ವ್ಯಾಸಂಗ ಮಾಡಿದ ಅರ್ಹ ಅಭ್ಯರ್ಥಿಗಳು ಈ ಕೆಲಸಕ್ಕೆ ಅರ್ಜಿ ಸಲ್ಲಿಸಿದರೆ ನಾವು ಏನು ಮಾಡಲು ಸಾಧ್ಯ..? ಈ ಸ್ಥಿತಿಯಲ್ಲಿ ನಾವು ಅವರನ್ನು ತಡೆಯಲು ಸಾಧ್ಯವಿಲ್ಲ” ಎಂದು ಕೋಲ್ಕತ್ತಾದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಜರಾತ್ ಹೈಕೋರ್ಟ್ ಸೇರಿದಂತೆ ಅಧೀನ ನ್ಯಾಯಾಲಯದಲ್ಲಿ ಖಾಲಿ ಇದ್ದ 1,149 ಪಿಯುನ್ (ಜವಾನ) ಬೆಲೀಫ್ ಹಾಗೂ ಬಿಯರರ್ಸ್ ಹುದ್ದೆಗಳಿಗಾಗಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನೇಮಕಗೊಂಡವರ ಪೈಕಿ 7 ಜನ ವೈದ್ಯಕೀಯ ಪದವೀಧರರು, 450 ಎಂಜಿನಿಯರ್‌ಗಳು, 543 ಸ್ನಾತಕೋತ್ತರ ಪದವೀಧರರಿದ್ದಾರೆ.

ಈ ವರ್ಷ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು “ರಾಷ್ಟ್ರೀಯ ನಿರುದ್ಯೋಗ ದಿನ”ವನ್ನಾಗಿ ಯುವಜನತೆ ಆಚರಿಸಿತ್ತು. ನಿರೀಕ್ಷೆಗೂ ಮೀರಿ ನೆಟ್ಟಿಗರು ಈ ಅಭಿಯಾನದಲ್ಲಿ ಪಾಲ್ಗೊಂಡು #NationalUnemploymentDay ಎಂಬ ಹ್ಯಾಶ್‌ಟ್ಯಾಗ್ ಬಳಸಿ ಲಕ್ಷಾಂತರ ಟ್ವೀಟ್‌ಗಳನ್ನು ಮಾಡಿದ್ದರು.


ಇದನ್ನೂ ಓದಿ: ಪ್ರಧಾನಿ ಮೋದಿಯವರ ಜನ್ಮದಿನ: “ರಾಷ್ಟ್ರೀಯ ನಿರುದ್ಯೋಗ ದಿನ” ಎಂದು ಟ್ವಿಟರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...