Homeಕರೋನಾ ತಲ್ಲಣಶಿಕ್ಷಕರಿಗೆ ಮೂರು ವಾರಗಳ ರಜೆ ನೀಡಿದ ರಾಜ್ಯ ಸರ್ಕಾರ

ಶಿಕ್ಷಕರಿಗೆ ಮೂರು ವಾರಗಳ ರಜೆ ನೀಡಿದ ರಾಜ್ಯ ಸರ್ಕಾರ

ನನ್ನ ಭಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಶಿಕ್ಷಕರ ವೃತ್ತಿ ಗೌರವಕ್ಕೆ ಸಮರ್ಪಿಸಿದ ಗುರುದಕ್ಷಿಣೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ

- Advertisement -
- Advertisement -

ಕೋವಿಡ್ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ತೆರೆಯದಿರಲು ಮತ್ತು ವಿದ್ಯಾಗಮ ಸ್ಥಗಿತಗೊಳಿಸಲು ಈಗಾಗಲೇ ಸರ್ಕಾರ ಆದೇಶಿಸಿತ್ತು. ಇದರ ಬೆನ್ನಲ್ಲೇ ಶಿಕ್ಷಕರಿಗೆ ದಸರಾ ರಜೆ ನೀಡಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಶಿಕ್ಷಕರ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಅ.30ರ ವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ಘೋಷಿದೆ.

ಹಲವಾರು ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗಿರುವುದರಿಂದ ಮತ್ತು ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ದಿನಾಂಕ 12-10-2020 ರಿಂದ 30-10-2020 ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ಘೋಷಿಸಲು ಮುಖ್ಯಮಂತ್ರಿ ಗಳು ಆದೇಶಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಅಧಿಕೃತ ಖಾತೆ CM of Karnataka ದಲ್ಲಿ ಆದೇಶದ ಪ್ರತಿಯನ್ನು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ಶಿಕ್ಷಕರಿಗೆ ರಜೆ ನೀಡಿರುವ ರಾಜ್ಯ ಸರ್ಕಾರದ ಆದೇಶವನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

’ಕಳೆದೊಂದು ವಾರದಿಂದ ಶಿಕ್ಷಕ ಸಮುದಾಯದ ನಾನಾ ರೀತಿಯ ಕಷ್ಟ ಕಾರ್ಪಣ್ಯಗಳನ್ನು ಕಂಡು ನನ್ನ ಮನಸು ವಿಹ್ವಲಗೊಂಡಿತ್ತು. ನನ್ನ ಭಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಶಿಕ್ಷಕರ ವೃತ್ತಿ ಗೌರವಕ್ಕೆ ಸಮರ್ಪಿಸಿದ ಗುರುದಕ್ಷಿಣೆ’ ಎಂದಿದ್ದಾರೆ. ಜೊತೆಗೆ ಸರ್ಕರದ ಆದೇಶದ ಪ್ರತಿಯನ್ನು ಶೇರ್‌ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ರಾಜ್ಯದ ಶಿಕ್ಷಕರ ಸಮಸ್ಯೆಗಳನ್ನು ನನ್ನ ಸಮಸ್ಯೆಗಳೆಂದೇ ಸದಾ ಭಾವಿಸುವ ನನ್ನ ನಿಲುವಿಗೆ ರಾಜ್ಯದ ವಿದ್ಯಾರ್ಥಿಗಳು, ಪೋಷಕರು, ಮಾಧ್ಯಮಗಳು ಕೂಡ ನನ್ನ ಬೆಂಬಲಕ್ಕೆ ನಿಂತಿದ್ದು ಅವರಿಗೆಲ್ಲ ಕೃತಜ್ಞನಾಗಿದ್ದೇನೆ ಎಂದಿದ್ದಾರೆ. ಶಿವಶರಣೆ ಅಕ್ಕಮಹಾದೇವಿಯವರ ವಚನವನ್ನು ಟ್ವೀಟ್ ಮಾಡಿ ಗುರುಗಳಿಗೆ ನಮಿಸಿದ್ದಾರೆ.

ಸರಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿಕೆ ಸರಣಿ ಟ್ವೀಟ್‌ಗಳ ಮೂಲಕ ಸರ್ಕಾರವನ್ನು ಟೀಕಿಸಿದ್ದರು.


ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ?; ಕುಮಾರಸ್ವಾಮಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...