Homeಕರೋನಾ ತಲ್ಲಣಶಿಕ್ಷಕರಿಗೆ ಮೂರು ವಾರಗಳ ರಜೆ ನೀಡಿದ ರಾಜ್ಯ ಸರ್ಕಾರ

ಶಿಕ್ಷಕರಿಗೆ ಮೂರು ವಾರಗಳ ರಜೆ ನೀಡಿದ ರಾಜ್ಯ ಸರ್ಕಾರ

ನನ್ನ ಭಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಶಿಕ್ಷಕರ ವೃತ್ತಿ ಗೌರವಕ್ಕೆ ಸಮರ್ಪಿಸಿದ ಗುರುದಕ್ಷಿಣೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ

- Advertisement -
- Advertisement -

ಕೋವಿಡ್ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ತೆರೆಯದಿರಲು ಮತ್ತು ವಿದ್ಯಾಗಮ ಸ್ಥಗಿತಗೊಳಿಸಲು ಈಗಾಗಲೇ ಸರ್ಕಾರ ಆದೇಶಿಸಿತ್ತು. ಇದರ ಬೆನ್ನಲ್ಲೇ ಶಿಕ್ಷಕರಿಗೆ ದಸರಾ ರಜೆ ನೀಡಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಶಿಕ್ಷಕರ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಅ.30ರ ವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ಘೋಷಿದೆ.

ಹಲವಾರು ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗಿರುವುದರಿಂದ ಮತ್ತು ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ದಿನಾಂಕ 12-10-2020 ರಿಂದ 30-10-2020 ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ಘೋಷಿಸಲು ಮುಖ್ಯಮಂತ್ರಿ ಗಳು ಆದೇಶಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಅಧಿಕೃತ ಖಾತೆ CM of Karnataka ದಲ್ಲಿ ಆದೇಶದ ಪ್ರತಿಯನ್ನು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ಶಿಕ್ಷಕರಿಗೆ ರಜೆ ನೀಡಿರುವ ರಾಜ್ಯ ಸರ್ಕಾರದ ಆದೇಶವನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

’ಕಳೆದೊಂದು ವಾರದಿಂದ ಶಿಕ್ಷಕ ಸಮುದಾಯದ ನಾನಾ ರೀತಿಯ ಕಷ್ಟ ಕಾರ್ಪಣ್ಯಗಳನ್ನು ಕಂಡು ನನ್ನ ಮನಸು ವಿಹ್ವಲಗೊಂಡಿತ್ತು. ನನ್ನ ಭಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಶಿಕ್ಷಕರ ವೃತ್ತಿ ಗೌರವಕ್ಕೆ ಸಮರ್ಪಿಸಿದ ಗುರುದಕ್ಷಿಣೆ’ ಎಂದಿದ್ದಾರೆ. ಜೊತೆಗೆ ಸರ್ಕರದ ಆದೇಶದ ಪ್ರತಿಯನ್ನು ಶೇರ್‌ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ರಾಜ್ಯದ ಶಿಕ್ಷಕರ ಸಮಸ್ಯೆಗಳನ್ನು ನನ್ನ ಸಮಸ್ಯೆಗಳೆಂದೇ ಸದಾ ಭಾವಿಸುವ ನನ್ನ ನಿಲುವಿಗೆ ರಾಜ್ಯದ ವಿದ್ಯಾರ್ಥಿಗಳು, ಪೋಷಕರು, ಮಾಧ್ಯಮಗಳು ಕೂಡ ನನ್ನ ಬೆಂಬಲಕ್ಕೆ ನಿಂತಿದ್ದು ಅವರಿಗೆಲ್ಲ ಕೃತಜ್ಞನಾಗಿದ್ದೇನೆ ಎಂದಿದ್ದಾರೆ. ಶಿವಶರಣೆ ಅಕ್ಕಮಹಾದೇವಿಯವರ ವಚನವನ್ನು ಟ್ವೀಟ್ ಮಾಡಿ ಗುರುಗಳಿಗೆ ನಮಿಸಿದ್ದಾರೆ.

ಸರಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿಕೆ ಸರಣಿ ಟ್ವೀಟ್‌ಗಳ ಮೂಲಕ ಸರ್ಕಾರವನ್ನು ಟೀಕಿಸಿದ್ದರು.


ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ?; ಕುಮಾರಸ್ವಾಮಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...