Homeಮುಖಪುಟಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ನಾವು ಹೆಮ್ಮೆಯಿಂದ ನಮ್ಮ ವಾಸ್ತವದಲ್ಲಿ ಜೀವಿಸಲು ನಿರ್ಧರಿಸಿದ್ದೇವೆ. ಭಿನ್ನಮತೀಯರು ಇದನ್ನು ಅರ್ಥಮಾಡಿಕೊಳ್ಳಲು ಪ್ರೋತ್ಸಾಹಿಸುತ್ತೇವೆ. ಎಲ್ಲಾ ಮಾನವರು ಸಮಾನವಾಗಿ ಸೃಷ್ಟಿಯಾಗಿದ್ದೇವೆ. ಜೊತೆಗೆ ಎಲ್ಲರೂ ಗೌರವ ಮತ್ತು ಪ್ರೀತಿಗೆ ಅರ್ಹರು- ಶರತ್ ಪೊನ್ನಪ್ಪ

- Advertisement -
- Advertisement -

ಕರ್ನಾಟಕದ ಕೊಡವ ಜನಾಂಗದ ಯುವಕ ಮತ್ತು ಉತ್ತರ ಭಾರತ ಮೂಲದ ಮತ್ತೊಬ್ಬ ಯುವಕ ಸೇರಿ ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ಸಲಿಂಗ ವಿವಾಹ ಮಾಡಿಕೊಂಡಿದ್ದು, ವಿವಾಹಿತನನ್ನು ತಮ್ಮ ಸಮಾಜದಿಂದ ಹೊರಗಿಡಲು ಕೊಡವ ಸಮಾಜ ಮುಂದಾಗಿದೆ.

ಇತ್ತೀಚಿನ ದಿನಗಳಲ್ಲಿ ಸಲಿಂಗ ವಿವಾಹಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಈ ಸಾಲಿಗೆ ಈಗ ಈ ಘಟನೆಯೂ ಕೂಡ ಸೇರ್ಪಡೆಯಾಗಿದ್ದು, ಭಾರತೀಯ ಶೈಲಿಯಲ್ಲೇ ವಿವಾಹವಾಗಿರುವುದು ವಿಶೇಷವಾಗಿದೆ.

ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ಇದನ್ನು ವಿರೋಧಿಸಿ ಕೊಡವ ಸಮಾಜವು, ಶರತ್ ಪೊನ್ನಪ್ಪ ಎಂಬ ಕನ್ನಡಿಗನಿಗೆ ಬಹಿಷ್ಕಾರ ಹಾಕಲು ಮುಂದಾಗಿದೆ. ಶರತ್ ಪೊನ್ನಪ್ಪ ಮೂಲತಃ ಕೊಡಗಿನ ಸಮುದಾಯಕ್ಕೆ ಸೇರಿದ್ದು, ಈತ ಮನೆಯನ್ನು ಬಿಟ್ಟು ವಿದೇಶದಲ್ಲಿ ನೆಲೆಸಿ ಹಲವು ವರ್ಷಗಳಾಗಿವೆ. ಅಲ್ಲಿ ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬ ಯುವಕನೊಟ್ಟಿಗೆ ಪರಿಚಯವಾಗಿ, ಪ್ರೀತಿ ಬೆಳೆದು, ಇದೇ ಸೆ.26ರಂದು ಕೊಡಗಿನ ಸಂಪ್ರದಾಯದ ಶೈಲಿಯಲ್ಲಿಯೇ ವಿವಾಹ ಮಾಡಿಕೊಂಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಲಿಂಗ ಮದುವೆ ಸಮಾರಂಭದಲ್ಲಿ ಮದುಮಕ್ಕಳ ಸ್ನೇಹಿತರು ಭಾಗಿಯಾಗಿ ಶುಭ ಕೋರುತ್ತಿರುವ ಮದುವೆ ವಿಡಿಯೋ, ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದು ಕೊಡವರ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದ್ದು, ಇದರಿಂದ ನಮ್ಮ ಜನಾಂಗಕ್ಕೆ ಅವಮಾನವಾಗಿದೆ ಮತ್ತು ಕೊಡವರ ಇತಿಹಾಸದಲ್ಲಿ ಇಂಥ ಘಟನೆ ನಡೆದಿರಲಿಲ್ಲ ಎಂದು ಇದನ್ನು ಖಂಡಿಸಿದೆ. ಈ ಬಗ್ಗೆ ಅಮೆರಿಕಾ ಕೊಡವ ಕೂಟಕ್ಕೆ ಪತ್ರ ಬರೆದು ವಿಚಾರ ಮಾಡಿ ಸ್ಪಷ್ಟನೆ ನೀಡುವಂತೆ ಮಡಿಕೇರಿ ಕೊಡವ ಸಮಾಜ ಕೇಳಿಕೊಂಡಿದೆ. ಕಂಡಕಂಡಲ್ಲಿ ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ಬಳಕೆ ಮಾಡುವುದಕ್ಕೆ ಕೊಡವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಎಲ್ಜಿಬಿಟಿಕ್ಯು ಸಮುದಾಯಕ್ಕೆ ವಿಶ್ವದಾದ್ಯಂತ ಬೆಂಬಲ ಹೆಚ್ಚಾಗುತ್ತಿದೆ: ಸಮೀಕ್ಷೆ

ಕೊಡವ ಜನಾಂಗದಿಂದಲೇ ಆತನನ್ನು ಹೊರಗಿಡುವಂತೆ ಕೊಡವ ಸಮಾಜದ ಒಕ್ಕೂಟಕ್ಕೆ ಮನವಿ ಮಾಡಲಾಗುವುದು ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್. ದೇವಯ್ಯ ಹೇಳಿದ್ದು, ಈ ಬಗ್ಗೆ ಈಗಾಗಲೇ ಮಡಿಕೇರಿ ಕೊಡವ ಸಮಾಜದಿಂದ ತುರ್ತು ಸಭೆಯನ್ನೂ ನಡೆಸಲಾಗಿದೆ.

“ಭಿನ್ನಮತೀಯರು ಇರುತ್ತಾರೆ ಎಂದು ನಮಗೆ ತಿಳಿದಿತ್ತು. ಆದರೆ ನಾವು ಹುಟ್ಟಿದ ದಿನದಿಂದ ನಮ್ಮನ್ನು ಸಮಾಜ ಅಕ್ಷರಶಃ ಸ್ವೀಕರಿಸಲಿ ಎಂದು ಹೋರಾಡುತ್ತಿದ್ದೇವೆ. ಬದುಕಲು ಹೋರಾಡುತ್ತಿದ್ದೇವೆ. ಅದಾಗ್ಯೂ, ನಾವು ಹೆಮ್ಮೆಯಿಂದ ನಮ್ಮ ವಾಸ್ತವದಲ್ಲಿ ಜೀವಿಸಲು ನಿರ್ಧರಿಸಿದ್ದೇವೆ. ಈ ಸಂಭ್ರಮವನ್ನು ನಾವು ಸಂತೋಷದಿಂದ ಆಚರಿಸಿದ್ದೇವೆ. ಭಿನ್ನಮತೀಯರು ಇದನ್ನು ಅರ್ಥಮಾಡಿಕೊಳ್ಳಲು ಪ್ರೋತ್ಸಾಹಿಸುತ್ತೇವೆ. ಎಲ್ಲಾ ಮಾನವರು ಸಮಾನವಾಗಿ ಸೃಷ್ಟಿಯಾಗಿದ್ದೇವೆ. ಜೊತೆಗೆ ಎಲ್ಲರೂ ಗೌರವ ಮತ್ತು ಪ್ರೀತಿಗೆ ಅರ್ಹರು ಎಂಬುದನ್ನು ಅರ್ಥಮಾಡಿಕೊಳ್ಳಲು ಸಕಾರಾತ್ಮಕ ಸಂವಾದದಲ್ಲಿ ತೊಡಗುತ್ತೇವೆ” ಶರತ್ ಪೊನ್ನಪ್ಪ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

ಶರತ್​ ಪೊನ್ನಪ್ಪ ಮೈಸೂರಿನ ರಾಮಕೃಷ್ಣಾಶ್ರಮದಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಉನ್ನತ ಶಿಕ್ಷಣಕ್ಕಾಗಿ 13 ವರ್ಷಗಳ ಹಿಂದೆ ಅಮೇರಿಕಕ್ಕೆ ತೆರಳಿದ್ದರು. ಅವರ ತಂದೆ ಜಯಕುಮಾರ್​ ಇಂಜಿನಿಯರ್​ ಆಗಿ, ತಾಯಿ ನಳಿನಿ ವೈದ್ಯರಾಗಿ ದುಬೈನಲ್ಲಿ 30 ವರ್ಷ ಕಾರ್ಯ ನಿರ್ವಹಿಸಿದ್ದಾರೆ. ಬಳಿಕ ಅಲ್ಲಿಂದ ಬೆಂಗಳೂರಿಗೆ ಬಂದು ನೆಲೆಸಿದ್ದರು. ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದಾರೆ.

2018 ರಲ್ಲಿ ಭಾರತ ದಂಡ ಸಂಹಿತೆಯ ಸಕ್ಷನ್ 377 ನ್ನು ಭಾರತದ ನ್ಯಾಯಾಲಯವು ರದ್ದುಗೊಳಿಸಿತ್ತು. ಈ ಸೆಕ್ಷನ್ ಅಸಹಜ ಲೈಂಗಿಕ ಕ್ರಿಯೆಯನ್ನು ನಿಷೇದಿಸಿತ್ತು. ಹಾಗಾಗಿ ಸಲಿಂಗ ವಿವಾಹಗಳಿಗೆ ಭಾರತದಲ್ಲಿ ಅನುಮತಿಯಿರಲಿಲ್ಲ. ಆದರೆ ಈಗ ಈ ಸೆಕ್ಷನ್‌ ಅನ್ನು ತೆಗೆದುಹಾಕಿದ್ದರೂ, ಭಾರತದಲ್ಲಿ ಸಲಿಂಗ ವಿವಾಹಗಳನ್ನು ಇನ್ನೂ ಕಾನೂನುಬದ್ದವಾಗಿ ಗುರುತಿಸಲಾಗಿಲ್ಲ.


ಇದನ್ನೂ ಓದಿ: ಭಾರತೀಯ ಗಣತಂತ್ರದ ಬಹುದೊಡ್ಡ ಹಬ್ಬಕ್ಕೆ ಸ್ತ್ರೀ ದ್ವೇಷಿ, ಮತಾಂಧ, ಸರ್ವಾಧಿಕಾರಿ ಪ್ರವೃತ್ತಿಯ ಮುಖ್ಯ ಅತಿಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...