Homeಕರ್ನಾಟಕರಾಯಚೂರು ನಗರಸಭೆ: ಸರ್ಕಾರದ ಅನುದಾನ ಬಳಕೆ ಮಾರ್ಗಸೂಚಿ ಉಲ್ಲಂಘನೆ - ಭ್ರಷ್ಟಾಚಾರದ ವಾಸನೆ!

ರಾಯಚೂರು ನಗರಸಭೆ: ಸರ್ಕಾರದ ಅನುದಾನ ಬಳಕೆ ಮಾರ್ಗಸೂಚಿ ಉಲ್ಲಂಘನೆ – ಭ್ರಷ್ಟಾಚಾರದ ವಾಸನೆ!

ಅನುದಾನವನ್ನು ರಸ್ತೆ ನಿರ್ಮಾಣಕ್ಕೆಂದು ಬಳಸಿದರೆ, ಗುತ್ತಿಗೆದಾರರಿಂದ ದೊಡ್ಡ ಮೊತ್ತದ ಕಮಿಷನ್ ಸಿಗುತ್ತದೆ ಎಂಬ ಕಾರಣದಿಂದ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

- Advertisement -
- Advertisement -

15ನೇ ಹಣಕಾಸು ಯೋಜನೆ ಅನುದಾನ ಬಳಕೆಗೆಂದು ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಉಲ್ಲಂಘಿಸಿ ರಾಯಚೂರು ನಗರಸಭೆಯು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದೆ. ಇದರ ಹಿಂದೆ ಭ್ರಷ್ಟಾಚಾರ ನಡೆದಿದೆಯೆಂಬ ವ್ಯಾಪಕ ಆರೋಪ ಕೇಳಿಬಂದಿದೆ.

ರಾಯಚೂರು ನಗರಸಭೆ 2020-21ನೇ ಸಾಲಿನ 15ನೇ ಹಣಕಾಸು ಯೋಜನೆ ಅನುದಾನ ಬಳಕೆಯ ಮಾರ್ಗಸೂಚಿಯನ್ನು ಉಲ್ಲಂಘಿಸಿ ಕ್ರಿಯಾ ಯೋಜನೆಯನ್ನು ತಯಾರಿಸಿದ್ದು, ನಗರದಲ್ಲಿನ ಘನತ್ಯಾಜ್ಯ ನಿರ್ವಹಣೆಗೆ ಕಡ್ಡಾಯವಾಗಿ ಮೀಸಲಿಡಬೇಕಾದ ಹಣವನ್ನು ರಸ್ತೆ ನಿರ್ಮಾಣ ಮತ್ತು ರಸ್ತೆ ಅಭಿವೃದ್ಧಿಗೆ ಬಳುಸುತ್ತಿದೆ ಎಂದು ಹೋರಾಟಗಾರರಾದ ರಝಾಕ್ ಉಸ್ತಾದ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

 

“ರಾಯಚೂರು ನಗರಸಭೆ 15ನೇ ಹಣಕಾಸು ಯೋಜನೆಯ ಅನುದಾನ ಬಳಕೆಯ ಮಾರ್ಗಸೂಚಿಯನ್ನು ಉಲ್ಲಂಘಿಸಿ ಕ್ರಿಯಾ ಯೋಜನೆಯನ್ನು ರೂಪಿಸಿದ್ದು, ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ನಗರಸಭೆಯ ಆಡಳಿತಾಧಿಕಾರಿಗಳು ಈಗಾಗಲೇ ಅನುಮೋದನೆಯನ್ನು ನೀಡಿದ್ದಾರೆ. ಈ ಮಾರ್ಗಸೂಚಿಯನ್ವಯ, ನಿರ್ಬಂಧಿತ ಅನುದಾನದ ಶೇ 25ರಷ್ಟನ್ನು ಕಡ್ಡಾಯವಾಗಿ ಘನತಾಜ್ಯ ನಿರ್ವಹಣೆಗೆ ಬಳಸಬೇಕಾದ 395.50 ಲಕ್ಷ ಅನುದಾನವನ್ನು ರಸ್ತೆಗಳ ನಿರ್ಮಾಣಕ್ಕೆ ಬಳಸಲು ಕ್ರಿಯಾ ಯೋಜನೆ ತಯಾರು ಮಾಡಲಾಗಿದೆ. ಇದರಿಂದ ರಾಯಚೂರು ನಗರದ ಘನತ್ಯಾಜ್ಯ ನಿರ್ವಹಣೆಗೆ ಹಿನ್ನಡೆಯಾಗಿ, ಅಸ್ವಚ್ಛ ವಾತಾವರಣದಲ್ಲಿ ನಗರದ ಜನತೆ ಬದುಕುವಂತಹ ಪರಿಸ್ಥಿತಿ ಬರಬಹುದು. ಈಗಾಗಲೇ ನಗರ ಪ್ರದೇಶದ ರಸ್ತೆಗಳು, ತಗ್ಗು ಗುಂಡಿಗಳು, ಮಳೆನೀರು ಚರಂಡಿಗಳು ಘನತಾಜ್ಯಗಳಿಂದ ತುಂಬಿ ಗಬ್ಬೆದ್ದು ನಾರುತ್ತಿದ್ದರೂ ಅದನ್ನು ಸೂಕ್ತ ಸ್ಥಳಗಳಿಗೆ ವಿಲೇವಾರಿ ಮಾಡದೇ ಇರುವುದರಿಂದ ಜನತೆ ನೋವನ್ನು ಅನುಭವಿಸುತ್ತಿದ್ದಾರೆ” ಎಂದು ಅವರು ಹೇಳಿದರು.

“ಮಾರ್ಗಸೂಚಿ ಉಲ್ಲಂಘಿಸುವುದಾದರೆ ಅವುಗಳನ್ನು ಹೊರಡಿಸುವ ಅಗತ್ಯವಾದರೂ ಏನಿದೆ. ಇದರ ಬಗ್ಗೆ ನಾವು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದೆವು. ಪೌರಾಡಳಿತದ ನಿರ್ದೇಶಕರಿಗೂ ದೂರು ನೀಡಿದ್ದೆವು. ಆದರೆ ಇವರಿಬ್ಬರೂ ಸಹ ಇದನ್ನು ದೊಡ್ಡ ಸಮಸ್ಯೆ ಎಂದು ಪರಿಗಣಿಸಿದೆ ನಿರ್ಲಕ್ಷಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಎಲ್ಲಿ ನೋಡಿದರೂ ಕಸದ ರಾಶಿ ಕಾಣಿಸುತ್ತಿದೆ. ಇದನ್ನು ವಿಲೇವಾರಿ ಮಾಡಲು ಸರಿಯಾದ ವ್ಯಸ್ಥೆಯಿಲ್ಲ. ಇಂತಹ ಸಂದರ್ಭದಲ್ಲಿ ಇದು ನಗರದ ಸ್ವಚ್ಚತೆ, ಪರಿಸರ ಮತ್ತು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರಜಾಕ್‌ ಉಸ್ತಾದ್

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

“ನಗರದ ಶಾಸಕರು ಆಡಳಿತ ಪಕ್ಷದವರಾಗಿದ್ದು, ಅವರಿಗೆ ತಕ್ಕಂತೆ ಆಡಳಿತಾಂಗ ಕೆಲಸ ಮಾಡುತ್ತಿದೆ. ಮೀಸಲಿಟ್ಟಿರುವ ಹಣವನ್ನು ಘನತ್ಯಾಜ್ಯ ನಿರ್ವಹಣೆಗೆ ಬಳಸಿದರೆ ಅದರಲ್ಲಿ ರಾಜಕಾರಣಿಗಳಿಗೆ ಮತ್ತು ಅಧೀನ ಅಧಿಕಾರಿಗಳಿಗೆ ಹೆಚ್ಚಿನ ಲಾಭವೇನೂ ಸಿಗುವುದಿಲ್ಲ. ಹಾಗಾಗಿ ಈ ಹಣವನ್ನು ರಸ್ತೆ ನಿರ್ಮಾಣಕ್ಕೆಂದು ಬಳಸಿದರೆ, ಅದನ್ನು ಗುತ್ತಿಗೆ ಪಡೆಯುವವರಿಗೆ 50/50 ಕಮಿಷನ್ ಎಂದು ಒಪ್ಪಂದವಾಗುತ್ತದೆ. ಇದರಿಂದ ಕಮಿಷನ್ ಹಣ ಪಡೆಯಬಹುದು. ಹಾಗಾಗಿಯೇ ಇಂತಹ ರಾಜ್ಯದ್ರೋಹಿ ಕೆಲಸಗಳನ್ನು ಮಾಡುತ್ತಿದ್ದಾರೆ. ಕೇವಲ ರಾಯಚೂರಿನಲ್ಲಿಯೇ ಇಂತಹ ಪರಿಸ್ಥಿತಿಯಾದರೆ, ಇನ್ನು ರಾಜ್ಯದ ವಿವಿಧ ಜಿಲ್ಲೆಗಳ ಪರಿಸ್ಥಿತಿ ಏನಿದೆಯೋ? ಒಟ್ಟಿನಲ್ಲಿ ಈ ಸಮಸ್ಯೆಯನ್ನು ಈಗಲೇ ನಿವಾರಿಸದಿದ್ದರೆ ಭವಿಷ್ಯದಲ್ಲಿ ಇದರ ಕೆಟ್ಟ ಪರಿಣಾಮವನ್ನು ನಾವೆಲ್ಲರೂ ಎದುರಿಸಬೇಕಾಗುತ್ತದೆ” ಎಂದು ರಜಾಕ್ ಉಸ್ತಾದ್ ಹೇಳಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರದ ಆರೋಪ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ಬಿಜೆಪಿಯಿಂದ ಲೀಗಲ್ ನೋಟಿಸ್

 

ಭ್ರಷ್ಟ ಜನಪ್ರತಿನಿಧಿಗಳು ಮತ್ತು ಅದಕ್ಷ ಅಧಿಕಾರಿಗಳು ಶಾಮೀಲಾಗಿರುವ ಇಂತಹ ಕೃತ್ಯಗಳು ಇನ್ನೂ ಬೆಳಕಿಗೆ ಬಾರದಿರುವುದು ದುರದೃಷ್ಟಕರ. ರಾಜ್ಯ ಸರ್ಕಾರ ಈ ಕೂಡಲೇ ಇತ್ತ ಗಮನಹರಿಸಿ ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ಈ ಸಮಸ್ಯೆ ಮತ್ತು ಕಸದ ರಾಶಿ ಹೆಮ್ಮರವಾಗಿ ಬೆಳೆಯಬಹುದು.

ಒಂದು ನಗರ ಸ್ವಚ್ಚವಾಗಿದೆ ಎಂದರೆ, ಅಲ್ಲಿ ಚರಂಡಿ ವ್ಯವಸ್ಥೆ ಮತ್ತು ಘನತ್ಯಾಜ್ಯ ನಿರ್ವಹಣೆ ಉತ್ತಮವಾಗಿರಬೇಕು. ಹಾಗಾಗಿಯೇ ಸರ್ಕಾರ ಬಿಡುಗಡೆ ಮಾಡುವ ಹಣದಲ್ಲಿ ಶೇ 25ರಷ್ಟನ್ನು ಇದರ ನಿರ್ವಹಣೆಗೆ ಬಳಸಬೇಕು ಎಂದು ನಿಯಮಾವಳಿಗಳು ಹೇಳುತ್ತವೆ. ಆದರೆ, ಇಂತಹ ನಿರ್ಲಕ್ಷಿತ ಮನೋಭಾವನೆಯ ಅಧಿಕಾರಿಗಳು ಮತ್ತು ಭ್ರಷ್ಟ ಜನಪ್ರತಿನಿಧಿಗಳಿಂದ ಇದು ಪಾಲನೆಯಾಗುತ್ತಿಲ್ಲ.

ಇದನ್ನೂ ಓದಿ: ಭ್ರಷ್ಟಾಚಾರ ತನಿಖೆಗೆ ಅಡ್ಡಿ ಏಕೆ? : ಹೆಚ್.ಕೆ.ಪಾಟೀಲ್‍ರವರ ಸಂದರ್ಶನ

ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತೊಗೆಯುತ್ತೇನೆ ಎನ್ನುವವರು ಇದನ್ನು ಕಂಡರೂ ಕಾಣದಂತೆ ಕುಳಿತಿರುವುದು, ಇಂತಹ ಹೀನ ಕೆಲಸಗಳಿಗೆ ಅವರು ಸಮ್ಮತಿಯನ್ನು ಸೂಚಿಸುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ. ಇದು ಕೇವಲ ಒಂದು ಉದಾಹರಣೆಯಷ್ಟೆ. ಸರ್ಕಾರ ಬಿಡುಗಡೆ ಮಾಡುವ ಅನುದಾನವನ್ನು ದಿಕ್ಕುತಪ್ಪಿಸಿ, ಉದ್ದೇಶಿತ ಯೋಜನೆಗೆ ಬಳಸದೇ ಹೆಚ್ಚಿನ ಲಾಭ ಬರುವ ಅಥವಾ ಹೆಚ್ಚಿನ ಪಾಲು ಬರುವ ಯೋಜನೆಗಳಿಗೆ ತೊಡಗಿಸಿಕೊಂಡು ರಾಜ್ಯ ಮತ್ತು ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸಲಾಗುತ್ತಿದೆ. ವಿಪರ್ಯಾಸವೆಂದರೆ, ಇದರಲ್ಲಿ ತಳಮಟ್ಟದ ಅಧಿಕಾರಿಗಳಿಂದ ಹಿಡಿದು, ಉನ್ನತ ಅಧಿಕಾರಿಗಳು ಮತ್ತು ರಾಜಕಾರಣಿಗಳವರೆಗೆ ಪಾಲು ಹಂಚಿಕೆಯಾಗುತ್ತದೆ. ಇದು ಎಲ್ಲರಿಗೂ ಗೊತ್ತಿರುವ ನಗ್ನ ಸತ್ಯ. ಈ ಹಿನ್ನೆಲೆ ಸದರಿ ಪ್ರಕರಣದ ಕುರಿತು ಸಮರ್ಪಕ ತನಿಖೆಯಾಗಬೇಕು. ಭ್ರಷ್ಟರಿಗೆ ಶಿಕ್ಷೆಯಾಗಬೇಕೆಂಬುದು ಪ್ರಜ್ಞಾವಂತರ ಆಗ್ರಹವಾಗಿದೆ.


ಇದನ್ನೂ ಓದಿ: ಕೊರೋನಾ ಕಾಲದ ಭ್ರಷ್ಟಾಚಾರದ ತನಿಖೆಗೆ ಸ್ಪೀಕರ್ ಅಡ್ಡಿ: ದಾಖಲೆಗಳೇನು ಹೇಳುತ್ತವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...