Homeಕರ್ನಾಟಕರಾಯಚೂರು ನಗರಸಭೆ: ಸರ್ಕಾರದ ಅನುದಾನ ಬಳಕೆ ಮಾರ್ಗಸೂಚಿ ಉಲ್ಲಂಘನೆ - ಭ್ರಷ್ಟಾಚಾರದ ವಾಸನೆ!

ರಾಯಚೂರು ನಗರಸಭೆ: ಸರ್ಕಾರದ ಅನುದಾನ ಬಳಕೆ ಮಾರ್ಗಸೂಚಿ ಉಲ್ಲಂಘನೆ – ಭ್ರಷ್ಟಾಚಾರದ ವಾಸನೆ!

ಅನುದಾನವನ್ನು ರಸ್ತೆ ನಿರ್ಮಾಣಕ್ಕೆಂದು ಬಳಸಿದರೆ, ಗುತ್ತಿಗೆದಾರರಿಂದ ದೊಡ್ಡ ಮೊತ್ತದ ಕಮಿಷನ್ ಸಿಗುತ್ತದೆ ಎಂಬ ಕಾರಣದಿಂದ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

- Advertisement -
- Advertisement -

15ನೇ ಹಣಕಾಸು ಯೋಜನೆ ಅನುದಾನ ಬಳಕೆಗೆಂದು ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಉಲ್ಲಂಘಿಸಿ ರಾಯಚೂರು ನಗರಸಭೆಯು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದೆ. ಇದರ ಹಿಂದೆ ಭ್ರಷ್ಟಾಚಾರ ನಡೆದಿದೆಯೆಂಬ ವ್ಯಾಪಕ ಆರೋಪ ಕೇಳಿಬಂದಿದೆ.

ರಾಯಚೂರು ನಗರಸಭೆ 2020-21ನೇ ಸಾಲಿನ 15ನೇ ಹಣಕಾಸು ಯೋಜನೆ ಅನುದಾನ ಬಳಕೆಯ ಮಾರ್ಗಸೂಚಿಯನ್ನು ಉಲ್ಲಂಘಿಸಿ ಕ್ರಿಯಾ ಯೋಜನೆಯನ್ನು ತಯಾರಿಸಿದ್ದು, ನಗರದಲ್ಲಿನ ಘನತ್ಯಾಜ್ಯ ನಿರ್ವಹಣೆಗೆ ಕಡ್ಡಾಯವಾಗಿ ಮೀಸಲಿಡಬೇಕಾದ ಹಣವನ್ನು ರಸ್ತೆ ನಿರ್ಮಾಣ ಮತ್ತು ರಸ್ತೆ ಅಭಿವೃದ್ಧಿಗೆ ಬಳುಸುತ್ತಿದೆ ಎಂದು ಹೋರಾಟಗಾರರಾದ ರಝಾಕ್ ಉಸ್ತಾದ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

 

“ರಾಯಚೂರು ನಗರಸಭೆ 15ನೇ ಹಣಕಾಸು ಯೋಜನೆಯ ಅನುದಾನ ಬಳಕೆಯ ಮಾರ್ಗಸೂಚಿಯನ್ನು ಉಲ್ಲಂಘಿಸಿ ಕ್ರಿಯಾ ಯೋಜನೆಯನ್ನು ರೂಪಿಸಿದ್ದು, ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ನಗರಸಭೆಯ ಆಡಳಿತಾಧಿಕಾರಿಗಳು ಈಗಾಗಲೇ ಅನುಮೋದನೆಯನ್ನು ನೀಡಿದ್ದಾರೆ. ಈ ಮಾರ್ಗಸೂಚಿಯನ್ವಯ, ನಿರ್ಬಂಧಿತ ಅನುದಾನದ ಶೇ 25ರಷ್ಟನ್ನು ಕಡ್ಡಾಯವಾಗಿ ಘನತಾಜ್ಯ ನಿರ್ವಹಣೆಗೆ ಬಳಸಬೇಕಾದ 395.50 ಲಕ್ಷ ಅನುದಾನವನ್ನು ರಸ್ತೆಗಳ ನಿರ್ಮಾಣಕ್ಕೆ ಬಳಸಲು ಕ್ರಿಯಾ ಯೋಜನೆ ತಯಾರು ಮಾಡಲಾಗಿದೆ. ಇದರಿಂದ ರಾಯಚೂರು ನಗರದ ಘನತ್ಯಾಜ್ಯ ನಿರ್ವಹಣೆಗೆ ಹಿನ್ನಡೆಯಾಗಿ, ಅಸ್ವಚ್ಛ ವಾತಾವರಣದಲ್ಲಿ ನಗರದ ಜನತೆ ಬದುಕುವಂತಹ ಪರಿಸ್ಥಿತಿ ಬರಬಹುದು. ಈಗಾಗಲೇ ನಗರ ಪ್ರದೇಶದ ರಸ್ತೆಗಳು, ತಗ್ಗು ಗುಂಡಿಗಳು, ಮಳೆನೀರು ಚರಂಡಿಗಳು ಘನತಾಜ್ಯಗಳಿಂದ ತುಂಬಿ ಗಬ್ಬೆದ್ದು ನಾರುತ್ತಿದ್ದರೂ ಅದನ್ನು ಸೂಕ್ತ ಸ್ಥಳಗಳಿಗೆ ವಿಲೇವಾರಿ ಮಾಡದೇ ಇರುವುದರಿಂದ ಜನತೆ ನೋವನ್ನು ಅನುಭವಿಸುತ್ತಿದ್ದಾರೆ” ಎಂದು ಅವರು ಹೇಳಿದರು.

“ಮಾರ್ಗಸೂಚಿ ಉಲ್ಲಂಘಿಸುವುದಾದರೆ ಅವುಗಳನ್ನು ಹೊರಡಿಸುವ ಅಗತ್ಯವಾದರೂ ಏನಿದೆ. ಇದರ ಬಗ್ಗೆ ನಾವು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದೆವು. ಪೌರಾಡಳಿತದ ನಿರ್ದೇಶಕರಿಗೂ ದೂರು ನೀಡಿದ್ದೆವು. ಆದರೆ ಇವರಿಬ್ಬರೂ ಸಹ ಇದನ್ನು ದೊಡ್ಡ ಸಮಸ್ಯೆ ಎಂದು ಪರಿಗಣಿಸಿದೆ ನಿರ್ಲಕ್ಷಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಎಲ್ಲಿ ನೋಡಿದರೂ ಕಸದ ರಾಶಿ ಕಾಣಿಸುತ್ತಿದೆ. ಇದನ್ನು ವಿಲೇವಾರಿ ಮಾಡಲು ಸರಿಯಾದ ವ್ಯಸ್ಥೆಯಿಲ್ಲ. ಇಂತಹ ಸಂದರ್ಭದಲ್ಲಿ ಇದು ನಗರದ ಸ್ವಚ್ಚತೆ, ಪರಿಸರ ಮತ್ತು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರಜಾಕ್‌ ಉಸ್ತಾದ್

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

“ನಗರದ ಶಾಸಕರು ಆಡಳಿತ ಪಕ್ಷದವರಾಗಿದ್ದು, ಅವರಿಗೆ ತಕ್ಕಂತೆ ಆಡಳಿತಾಂಗ ಕೆಲಸ ಮಾಡುತ್ತಿದೆ. ಮೀಸಲಿಟ್ಟಿರುವ ಹಣವನ್ನು ಘನತ್ಯಾಜ್ಯ ನಿರ್ವಹಣೆಗೆ ಬಳಸಿದರೆ ಅದರಲ್ಲಿ ರಾಜಕಾರಣಿಗಳಿಗೆ ಮತ್ತು ಅಧೀನ ಅಧಿಕಾರಿಗಳಿಗೆ ಹೆಚ್ಚಿನ ಲಾಭವೇನೂ ಸಿಗುವುದಿಲ್ಲ. ಹಾಗಾಗಿ ಈ ಹಣವನ್ನು ರಸ್ತೆ ನಿರ್ಮಾಣಕ್ಕೆಂದು ಬಳಸಿದರೆ, ಅದನ್ನು ಗುತ್ತಿಗೆ ಪಡೆಯುವವರಿಗೆ 50/50 ಕಮಿಷನ್ ಎಂದು ಒಪ್ಪಂದವಾಗುತ್ತದೆ. ಇದರಿಂದ ಕಮಿಷನ್ ಹಣ ಪಡೆಯಬಹುದು. ಹಾಗಾಗಿಯೇ ಇಂತಹ ರಾಜ್ಯದ್ರೋಹಿ ಕೆಲಸಗಳನ್ನು ಮಾಡುತ್ತಿದ್ದಾರೆ. ಕೇವಲ ರಾಯಚೂರಿನಲ್ಲಿಯೇ ಇಂತಹ ಪರಿಸ್ಥಿತಿಯಾದರೆ, ಇನ್ನು ರಾಜ್ಯದ ವಿವಿಧ ಜಿಲ್ಲೆಗಳ ಪರಿಸ್ಥಿತಿ ಏನಿದೆಯೋ? ಒಟ್ಟಿನಲ್ಲಿ ಈ ಸಮಸ್ಯೆಯನ್ನು ಈಗಲೇ ನಿವಾರಿಸದಿದ್ದರೆ ಭವಿಷ್ಯದಲ್ಲಿ ಇದರ ಕೆಟ್ಟ ಪರಿಣಾಮವನ್ನು ನಾವೆಲ್ಲರೂ ಎದುರಿಸಬೇಕಾಗುತ್ತದೆ” ಎಂದು ರಜಾಕ್ ಉಸ್ತಾದ್ ಹೇಳಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರದ ಆರೋಪ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ಬಿಜೆಪಿಯಿಂದ ಲೀಗಲ್ ನೋಟಿಸ್

 

ಭ್ರಷ್ಟ ಜನಪ್ರತಿನಿಧಿಗಳು ಮತ್ತು ಅದಕ್ಷ ಅಧಿಕಾರಿಗಳು ಶಾಮೀಲಾಗಿರುವ ಇಂತಹ ಕೃತ್ಯಗಳು ಇನ್ನೂ ಬೆಳಕಿಗೆ ಬಾರದಿರುವುದು ದುರದೃಷ್ಟಕರ. ರಾಜ್ಯ ಸರ್ಕಾರ ಈ ಕೂಡಲೇ ಇತ್ತ ಗಮನಹರಿಸಿ ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ಈ ಸಮಸ್ಯೆ ಮತ್ತು ಕಸದ ರಾಶಿ ಹೆಮ್ಮರವಾಗಿ ಬೆಳೆಯಬಹುದು.

ಒಂದು ನಗರ ಸ್ವಚ್ಚವಾಗಿದೆ ಎಂದರೆ, ಅಲ್ಲಿ ಚರಂಡಿ ವ್ಯವಸ್ಥೆ ಮತ್ತು ಘನತ್ಯಾಜ್ಯ ನಿರ್ವಹಣೆ ಉತ್ತಮವಾಗಿರಬೇಕು. ಹಾಗಾಗಿಯೇ ಸರ್ಕಾರ ಬಿಡುಗಡೆ ಮಾಡುವ ಹಣದಲ್ಲಿ ಶೇ 25ರಷ್ಟನ್ನು ಇದರ ನಿರ್ವಹಣೆಗೆ ಬಳಸಬೇಕು ಎಂದು ನಿಯಮಾವಳಿಗಳು ಹೇಳುತ್ತವೆ. ಆದರೆ, ಇಂತಹ ನಿರ್ಲಕ್ಷಿತ ಮನೋಭಾವನೆಯ ಅಧಿಕಾರಿಗಳು ಮತ್ತು ಭ್ರಷ್ಟ ಜನಪ್ರತಿನಿಧಿಗಳಿಂದ ಇದು ಪಾಲನೆಯಾಗುತ್ತಿಲ್ಲ.

ಇದನ್ನೂ ಓದಿ: ಭ್ರಷ್ಟಾಚಾರ ತನಿಖೆಗೆ ಅಡ್ಡಿ ಏಕೆ? : ಹೆಚ್.ಕೆ.ಪಾಟೀಲ್‍ರವರ ಸಂದರ್ಶನ

ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತೊಗೆಯುತ್ತೇನೆ ಎನ್ನುವವರು ಇದನ್ನು ಕಂಡರೂ ಕಾಣದಂತೆ ಕುಳಿತಿರುವುದು, ಇಂತಹ ಹೀನ ಕೆಲಸಗಳಿಗೆ ಅವರು ಸಮ್ಮತಿಯನ್ನು ಸೂಚಿಸುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ. ಇದು ಕೇವಲ ಒಂದು ಉದಾಹರಣೆಯಷ್ಟೆ. ಸರ್ಕಾರ ಬಿಡುಗಡೆ ಮಾಡುವ ಅನುದಾನವನ್ನು ದಿಕ್ಕುತಪ್ಪಿಸಿ, ಉದ್ದೇಶಿತ ಯೋಜನೆಗೆ ಬಳಸದೇ ಹೆಚ್ಚಿನ ಲಾಭ ಬರುವ ಅಥವಾ ಹೆಚ್ಚಿನ ಪಾಲು ಬರುವ ಯೋಜನೆಗಳಿಗೆ ತೊಡಗಿಸಿಕೊಂಡು ರಾಜ್ಯ ಮತ್ತು ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸಲಾಗುತ್ತಿದೆ. ವಿಪರ್ಯಾಸವೆಂದರೆ, ಇದರಲ್ಲಿ ತಳಮಟ್ಟದ ಅಧಿಕಾರಿಗಳಿಂದ ಹಿಡಿದು, ಉನ್ನತ ಅಧಿಕಾರಿಗಳು ಮತ್ತು ರಾಜಕಾರಣಿಗಳವರೆಗೆ ಪಾಲು ಹಂಚಿಕೆಯಾಗುತ್ತದೆ. ಇದು ಎಲ್ಲರಿಗೂ ಗೊತ್ತಿರುವ ನಗ್ನ ಸತ್ಯ. ಈ ಹಿನ್ನೆಲೆ ಸದರಿ ಪ್ರಕರಣದ ಕುರಿತು ಸಮರ್ಪಕ ತನಿಖೆಯಾಗಬೇಕು. ಭ್ರಷ್ಟರಿಗೆ ಶಿಕ್ಷೆಯಾಗಬೇಕೆಂಬುದು ಪ್ರಜ್ಞಾವಂತರ ಆಗ್ರಹವಾಗಿದೆ.


ಇದನ್ನೂ ಓದಿ: ಕೊರೋನಾ ಕಾಲದ ಭ್ರಷ್ಟಾಚಾರದ ತನಿಖೆಗೆ ಸ್ಪೀಕರ್ ಅಡ್ಡಿ: ದಾಖಲೆಗಳೇನು ಹೇಳುತ್ತವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...