Homeಮುಖಪುಟತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ಮುಖ್ಯಮಂತ್ರಿ ವಿಪ್ಲವ್ ದೇವ್ ಹಲವಾರು ವಿಷಯಗಳ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಪಕ್ಷವನ್ನು ಹಲವಾರು ಬಾರಿ ಮುಜುಗರಕ್ಕೀಡು ಮಾಡಿದ್ದಾರೆ ಎಂದು ಬಂಡಾಯ ಶಾಸಕರು ಹೇಳಿದ್ದಾರೆ.

- Advertisement -
- Advertisement -

ತ್ರಿಪುರ ಮುಖ್ಯಮಂತ್ರಿ ವಿಪ್ಲವ್ ಕುಮಾರ್ ದೇವ್ ವಿರುದ್ಧ ಬಿಜೆಪಿ ಶಾಸಕರ ಒಂದು ಗುಂಪು ದಂಗೆಯೆದ್ದಿದ್ದು, ದೆಹಲಿಗೆ ತಲುಪಿದ್ದಾರೆ. ರಾಜ್ಯದ 12 ಮಂದಿ ಶಾಸಕರು ಪಕ್ಷದ ಉನ್ನತ ನಾಯಕತ್ವವನ್ನು ಭೇಟಿಯಾಗಿ ಮುಖ್ಯಮಂತ್ರಿಯ “ಕಳಪೆ ನಾಯಕತ್ವ” ಮತ್ತು “ದುರಾಡಳಿತ” ಬಗ್ಗೆ ದೂರ ನೀಡಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.

ರಾಜ್ಯದ ಮಾಜಿ ಆರೋಗ್ಯ ಸಚಿವ ಮತ್ತು ಬಿಜೆಪಿ ಶಾಸಕ ಸುದೀಪ್ ರಾಯ್ ಬಾರ್ಮನ್ ನೇತೃತ್ವದ ಗುಂಪು ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಭೇಟಿಗೆ ಸಮಯವನ್ನು ಕೇಳಿದ್ದಾರೆ.

ಇದನ್ನೂ ಓದಿ: ಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಶಕ್ತರು; ಆದರೆ ಅವರಿಗೆ ಮಿದುಳಿಲ್ಲ: ತ್ರಿಪುರ ಸಿಎಂ ವಿಪ್ಲವ್ ದೇವ್ ವಿವಾದ

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಕೂಡಾ ಭೇಟಿಯಾಗಲು ಅವರು ಪ್ರಯತ್ನಿಸುತ್ತಿದ್ದಾರೆಂದು, ನವದೆಹಲಿಯ ತ್ರಿಪುರ ಭವನದಲ್ಲಿರುವ ಶಾಸಕರೊಬ್ಬರು ಹೇಳಿದ್ದಾಗಿ ಎನ್‌ಡಿಟಿವಿ ತಿಳಿಸಿದೆ.

“ಪಕ್ಷದ ಜನಪ್ರಿಯತೆ ಕುಸಿಯುತ್ತಿದ್ದು ನಾವು ಸುಮಾರು 12 ಮಂದಿ ಶಾಸಕರು ಪಕ್ಷದ ನಾಯಕತ್ವದ ಸರ್ವಾಧಿಕಾರ, ಮುಖ್ಯಮಂತ್ರಿಯ ಕಳಪೆ ಆಡಳಿತದ ಬಗ್ಗೆ ಮೌಲ್ಯಮಾಪನ ಮಾಡಬೇಕೆಂದು ನಿರ್ಧರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನಾವೆಲ್ಲರೂ ಪಕ್ಷದ ಬದ್ಧ ಕಾರ್ಯಕರ್ತರು ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತವು ಒಂದಕ್ಕಿಂತ ಹೆಚ್ಚು ಬಾರಿ ತನ್ನ ಅವಧಿಯನ್ನು ಉಳಿಸಿಕೊಳ್ಳಬೇಕೆಂದು ರಾಷ್ಟ್ರೀಯ ನಾಯಕತ್ವಕ್ಕೆ ಹೇಳಲು ನಾವು ಬಯಸುತ್ತೇವೆ. ಆದರೆ ಪ್ರಸ್ತುತ ನಾಯಕತ್ವ ಮುಂದುವರಿದರೆ, ಪ್ರತಿಪಕ್ಷಳಾದ ಎಡಪಕ್ಷಗಳು ಮತ್ತು ಕಾಂಗ್ರೆಸ್ ಇದನ್ನು ಆಕ್ರಮಿಸಿಕೊಳ್ಳುತ್ತದೆ”ಎಂದು ಅವರು ಹೇಳಿದರು.

ಇದನ್ನೂ ಓದಿ: ಹಲವು ರಾಜ್ಯಗಳಲ್ಲಿ ಬಿಜೆಪಿ ಸೋತ ನಂತರ ಮೋದಿ ವರ್ಚಸ್ಸು ಕಡಿಮೆಯಾಗಿದೆಯೆ? – ಡಿ.ಉಮಾಪತಿ

“ಮುಖ್ಯಮಂತ್ರಿ ಹಲವಾರು ವಿಷಯಗಳ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಪಕ್ಷವನ್ನು ಹಲವಾರು ಬಾರಿ ಮುಜುಗರಕ್ಕೀಡು ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಬಿಕ್ಕಟ್ಟಿನ ನಿರ್ವಹಣೆ ಕೂಡಾ ಕಳಪೆಯಾಗಿದೆ ಎಂದು ಭಿನ್ನಮತೀಯ ಶಾಸಕರು ಆರೋಪಿಸಿದ್ದು, ಕೇಂದ್ರವು ತ್ರಿಪುರಕ್ಕೆ ತಂಡವನ್ನು ಕಳುಹಿಸುವಂತೆ ಒತ್ತಾಯಿಸಿದೆ. “ಸಾಂಕ್ರಾಮಿಕ ಸಮಯದಲ್ಲಿ, ರಾಜ್ಯದಲ್ಲಿ ಸರಿಯಾದ ಆರೋಗ್ಯ ಸಚಿವರು ಇಲ್ಲ” ಎಂದು ಒಬ್ಬ ಭಿನ್ನಮತೀಯ ಶಾಸಕ ಹೇಳಿದ್ದಾರೆ.

“ಅನುಭವಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಮುಖ್ಯಮಂತ್ರಿಯ ಸರ್ವಾಧಿಕಾರದ ಸ್ವರೂಪವನ್ನು ನಿಭಾಯಿಸಲು ಸಾಧ್ಯವಾಗದ ಕಾರಣ ಸ್ವಯಂಪ್ರೇರಿತ ನಿವೃತ್ತಿಯ ಮೇಲೆ ರಾಜ್ಯವನ್ನು ತೊರೆಯುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಪಕ್ಷದ ಬಹುಪಾಲು ಶಾಸಕರು ನಾಯಕತ್ವ ಬದಲಾವಣೆಯನ್ನು ಬಯಸುತ್ತಿದ್ದಾರೆ” ಎಂದು ಶಾಸಕರು ಹೇಳಿದ್ದಾರೆ.

ಇದನ್ನೂ ಓದಿ: “ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” : ಕೇಂದ್ರಕ್ಕೆ ಸುಪ್ರೀಂ ತರಾಟೆ

ಆದರೆ, ಮುಖ್ಯಮಂತ್ರಿ ವಿಪ್ಲವ್ ದೇವ್ ಅವರ ಆಪ್ತ ಸಹಾಯಕರು ಭಿನ್ನಮತೀಯ ಶಾಸಕರ ಪ್ರಮಾಣವನ್ನು ಅತೀ ಕಡಿಮೆ ಎಂದು ಹೇಳಿದ್ದಾರೆ. “ಕೇವಲ ಏಳು-ಎಂಟು ಶಾಸಕರು ಮಾತ್ರ ಸರ್ಕಾರದ ಸುಗಮ ಕಾರ್ಯಚಟುವಟಿಕೆಯಲ್ಲಿ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಬಹುಷಃ ಅವರು ಕಾಂಗ್ರೆಸ್‌‌ನಿಂದ ಬಂದವರು” ಎಂದು ಹೇಳಿದ್ದಾರೆ.

ಹಳೆಯ ಬಿಜೆಪಿಗರಿಗೆ, ಪಕ್ಷದ ಹೆಚ್ಚಿನ ಕಾರ್ಯಕರ್ತರಿಗೆ ಮತ್ತು ವಿವಿಧ ಹಂತಗಳಲ್ಲಿರುವ ನಾಯಕರಿಗೆ ವಿಪ್ಲವ್ ದೇವ್ ನಾಯಕತ್ವದ ಬಗ್ಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಮಿತ್ರಪಕ್ಷ ಇಂಡೀಜಿನಿಯಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ (ಐಪಿಎಫ್‌ಟಿ) 2018 ರಲ್ಲಿ ತ್ರಿಪುರದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ, 25 ವರ್ಷದ ಎಡಪಂಥೀಯ ಸರ್ಕಾರವನ್ನು ಕೆಳಗಿಳಿಸಿತ್ತು. 60 ಸದಸ್ಯರಿರುವ ವಿಧಾನಸಭೆಯಲ್ಲಿ ಬಿಜೆಪಿ 36 ಶಾಸಕರನ್ನು ಹೊಂದಿದ್ದು, 8 ಐಪಿಎಫ್‌ಟಿ ಶಾಸಕರ ಬೆಂಬಲವನ್ನು ಹೊಂದಿದೆ.

ಇದನ್ನೂ ಓದಿ: ಥ್ಯಾಂಕ್ಯೂ ಅಮೀರ್ ಖಾನ್ ಎಂದ ಪ್ರಧಾನಿ ನರೇಂದ್ರ ಮೋದಿ

ವಿಡಿಯೋ ನೋಡಿ: ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...