Homeಮುಖಪುಟತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ಮುಖ್ಯಮಂತ್ರಿ ವಿಪ್ಲವ್ ದೇವ್ ಹಲವಾರು ವಿಷಯಗಳ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಪಕ್ಷವನ್ನು ಹಲವಾರು ಬಾರಿ ಮುಜುಗರಕ್ಕೀಡು ಮಾಡಿದ್ದಾರೆ ಎಂದು ಬಂಡಾಯ ಶಾಸಕರು ಹೇಳಿದ್ದಾರೆ.

- Advertisement -
- Advertisement -

ತ್ರಿಪುರ ಮುಖ್ಯಮಂತ್ರಿ ವಿಪ್ಲವ್ ಕುಮಾರ್ ದೇವ್ ವಿರುದ್ಧ ಬಿಜೆಪಿ ಶಾಸಕರ ಒಂದು ಗುಂಪು ದಂಗೆಯೆದ್ದಿದ್ದು, ದೆಹಲಿಗೆ ತಲುಪಿದ್ದಾರೆ. ರಾಜ್ಯದ 12 ಮಂದಿ ಶಾಸಕರು ಪಕ್ಷದ ಉನ್ನತ ನಾಯಕತ್ವವನ್ನು ಭೇಟಿಯಾಗಿ ಮುಖ್ಯಮಂತ್ರಿಯ “ಕಳಪೆ ನಾಯಕತ್ವ” ಮತ್ತು “ದುರಾಡಳಿತ” ಬಗ್ಗೆ ದೂರ ನೀಡಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.

ರಾಜ್ಯದ ಮಾಜಿ ಆರೋಗ್ಯ ಸಚಿವ ಮತ್ತು ಬಿಜೆಪಿ ಶಾಸಕ ಸುದೀಪ್ ರಾಯ್ ಬಾರ್ಮನ್ ನೇತೃತ್ವದ ಗುಂಪು ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಭೇಟಿಗೆ ಸಮಯವನ್ನು ಕೇಳಿದ್ದಾರೆ.

ಇದನ್ನೂ ಓದಿ: ಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಶಕ್ತರು; ಆದರೆ ಅವರಿಗೆ ಮಿದುಳಿಲ್ಲ: ತ್ರಿಪುರ ಸಿಎಂ ವಿಪ್ಲವ್ ದೇವ್ ವಿವಾದ

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಕೂಡಾ ಭೇಟಿಯಾಗಲು ಅವರು ಪ್ರಯತ್ನಿಸುತ್ತಿದ್ದಾರೆಂದು, ನವದೆಹಲಿಯ ತ್ರಿಪುರ ಭವನದಲ್ಲಿರುವ ಶಾಸಕರೊಬ್ಬರು ಹೇಳಿದ್ದಾಗಿ ಎನ್‌ಡಿಟಿವಿ ತಿಳಿಸಿದೆ.

“ಪಕ್ಷದ ಜನಪ್ರಿಯತೆ ಕುಸಿಯುತ್ತಿದ್ದು ನಾವು ಸುಮಾರು 12 ಮಂದಿ ಶಾಸಕರು ಪಕ್ಷದ ನಾಯಕತ್ವದ ಸರ್ವಾಧಿಕಾರ, ಮುಖ್ಯಮಂತ್ರಿಯ ಕಳಪೆ ಆಡಳಿತದ ಬಗ್ಗೆ ಮೌಲ್ಯಮಾಪನ ಮಾಡಬೇಕೆಂದು ನಿರ್ಧರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನಾವೆಲ್ಲರೂ ಪಕ್ಷದ ಬದ್ಧ ಕಾರ್ಯಕರ್ತರು ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತವು ಒಂದಕ್ಕಿಂತ ಹೆಚ್ಚು ಬಾರಿ ತನ್ನ ಅವಧಿಯನ್ನು ಉಳಿಸಿಕೊಳ್ಳಬೇಕೆಂದು ರಾಷ್ಟ್ರೀಯ ನಾಯಕತ್ವಕ್ಕೆ ಹೇಳಲು ನಾವು ಬಯಸುತ್ತೇವೆ. ಆದರೆ ಪ್ರಸ್ತುತ ನಾಯಕತ್ವ ಮುಂದುವರಿದರೆ, ಪ್ರತಿಪಕ್ಷಳಾದ ಎಡಪಕ್ಷಗಳು ಮತ್ತು ಕಾಂಗ್ರೆಸ್ ಇದನ್ನು ಆಕ್ರಮಿಸಿಕೊಳ್ಳುತ್ತದೆ”ಎಂದು ಅವರು ಹೇಳಿದರು.

ಇದನ್ನೂ ಓದಿ: ಹಲವು ರಾಜ್ಯಗಳಲ್ಲಿ ಬಿಜೆಪಿ ಸೋತ ನಂತರ ಮೋದಿ ವರ್ಚಸ್ಸು ಕಡಿಮೆಯಾಗಿದೆಯೆ? – ಡಿ.ಉಮಾಪತಿ

“ಮುಖ್ಯಮಂತ್ರಿ ಹಲವಾರು ವಿಷಯಗಳ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಪಕ್ಷವನ್ನು ಹಲವಾರು ಬಾರಿ ಮುಜುಗರಕ್ಕೀಡು ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಬಿಕ್ಕಟ್ಟಿನ ನಿರ್ವಹಣೆ ಕೂಡಾ ಕಳಪೆಯಾಗಿದೆ ಎಂದು ಭಿನ್ನಮತೀಯ ಶಾಸಕರು ಆರೋಪಿಸಿದ್ದು, ಕೇಂದ್ರವು ತ್ರಿಪುರಕ್ಕೆ ತಂಡವನ್ನು ಕಳುಹಿಸುವಂತೆ ಒತ್ತಾಯಿಸಿದೆ. “ಸಾಂಕ್ರಾಮಿಕ ಸಮಯದಲ್ಲಿ, ರಾಜ್ಯದಲ್ಲಿ ಸರಿಯಾದ ಆರೋಗ್ಯ ಸಚಿವರು ಇಲ್ಲ” ಎಂದು ಒಬ್ಬ ಭಿನ್ನಮತೀಯ ಶಾಸಕ ಹೇಳಿದ್ದಾರೆ.

“ಅನುಭವಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಮುಖ್ಯಮಂತ್ರಿಯ ಸರ್ವಾಧಿಕಾರದ ಸ್ವರೂಪವನ್ನು ನಿಭಾಯಿಸಲು ಸಾಧ್ಯವಾಗದ ಕಾರಣ ಸ್ವಯಂಪ್ರೇರಿತ ನಿವೃತ್ತಿಯ ಮೇಲೆ ರಾಜ್ಯವನ್ನು ತೊರೆಯುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಪಕ್ಷದ ಬಹುಪಾಲು ಶಾಸಕರು ನಾಯಕತ್ವ ಬದಲಾವಣೆಯನ್ನು ಬಯಸುತ್ತಿದ್ದಾರೆ” ಎಂದು ಶಾಸಕರು ಹೇಳಿದ್ದಾರೆ.

ಇದನ್ನೂ ಓದಿ: “ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” : ಕೇಂದ್ರಕ್ಕೆ ಸುಪ್ರೀಂ ತರಾಟೆ

ಆದರೆ, ಮುಖ್ಯಮಂತ್ರಿ ವಿಪ್ಲವ್ ದೇವ್ ಅವರ ಆಪ್ತ ಸಹಾಯಕರು ಭಿನ್ನಮತೀಯ ಶಾಸಕರ ಪ್ರಮಾಣವನ್ನು ಅತೀ ಕಡಿಮೆ ಎಂದು ಹೇಳಿದ್ದಾರೆ. “ಕೇವಲ ಏಳು-ಎಂಟು ಶಾಸಕರು ಮಾತ್ರ ಸರ್ಕಾರದ ಸುಗಮ ಕಾರ್ಯಚಟುವಟಿಕೆಯಲ್ಲಿ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಬಹುಷಃ ಅವರು ಕಾಂಗ್ರೆಸ್‌‌ನಿಂದ ಬಂದವರು” ಎಂದು ಹೇಳಿದ್ದಾರೆ.

ಹಳೆಯ ಬಿಜೆಪಿಗರಿಗೆ, ಪಕ್ಷದ ಹೆಚ್ಚಿನ ಕಾರ್ಯಕರ್ತರಿಗೆ ಮತ್ತು ವಿವಿಧ ಹಂತಗಳಲ್ಲಿರುವ ನಾಯಕರಿಗೆ ವಿಪ್ಲವ್ ದೇವ್ ನಾಯಕತ್ವದ ಬಗ್ಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಮಿತ್ರಪಕ್ಷ ಇಂಡೀಜಿನಿಯಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ (ಐಪಿಎಫ್‌ಟಿ) 2018 ರಲ್ಲಿ ತ್ರಿಪುರದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ, 25 ವರ್ಷದ ಎಡಪಂಥೀಯ ಸರ್ಕಾರವನ್ನು ಕೆಳಗಿಳಿಸಿತ್ತು. 60 ಸದಸ್ಯರಿರುವ ವಿಧಾನಸಭೆಯಲ್ಲಿ ಬಿಜೆಪಿ 36 ಶಾಸಕರನ್ನು ಹೊಂದಿದ್ದು, 8 ಐಪಿಎಫ್‌ಟಿ ಶಾಸಕರ ಬೆಂಬಲವನ್ನು ಹೊಂದಿದೆ.

ಇದನ್ನೂ ಓದಿ: ಥ್ಯಾಂಕ್ಯೂ ಅಮೀರ್ ಖಾನ್ ಎಂದ ಪ್ರಧಾನಿ ನರೇಂದ್ರ ಮೋದಿ

ವಿಡಿಯೋ ನೋಡಿ: ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....