Homeಮುಖಪುಟಜಾತಿ ದೌರ್ಜನ್ಯ: ವೈದ್ಯಕೀಯ ವಿದ್ಯಾರ್ಥಿ ಅಸಹಜ ಸಾವು!

ಜಾತಿ ದೌರ್ಜನ್ಯ: ವೈದ್ಯಕೀಯ ವಿದ್ಯಾರ್ಥಿ ಅಸಹಜ ಸಾವು!

ಜಾತಿವಾದಿ ಕಿರುಕುಳ ಹಾಗೂ ಆಡಳಿತ ಮಂಡಳಿಯ ಉದ್ದೇಶಪೂರ್ವಕ ನಿರ್ಲಕ್ಷ್ಯಕ್ಕಾಗಿ ಅನೇಕರು ಇದನ್ನು ’ಸಾಂಸ್ಥಿಕ ಕೊಲೆ’ ಎಂದು ಕರೆದಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ಜಬಲ್ಪುರದಲ್ಲಿ ಅಕ್ಟೋಬರ್ 1 ರಂದು ಹಿಂದುಳಿದ ವರ್ಗದ ಡಾ.ಭಾಗವತ್ ದೇವಾಂಗನ್ ಎಂಬ 28 ​​ವರ್ಷ ವಯಸ್ಸಿನ ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರನ್ನು “ಮೇಲ್ಜಾತಿ” (ಸವರ್ಣ)ಯ ಸೀನಿಯರ್‌ ವಿದ್ಯಾರ್ಥಿಗಳು ಕೆಲವು ತಿಂಗಳುಗಳಿಂದ ಮಾನಸಿಕವಾಗಿ ಹಿಂಸಿಸುತ್ತಿದ್ದರು ಮತ್ತು ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ಭಾಗವತ್ ದೇವಾಂಗನ್ ಜಂಜಗೀರ್ ಚಂಪಾದ ಸಣ್ಣ ಪಟ್ಟಣವಾದ ರಹೌದ್ ನಿವಾಸಿಯಾಗಿದ್ದು, ಅವರ ತಂದೆ ತಮ್ಮ ಊರಿನಲ್ಲಿ ಪಾತ್ರೆಗಳನ್ನು ಮಾರಾಟ ಮಾಡಿ ಜೀವನ ದೂಡುತ್ತಿದ್ದರು. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭಾಗವತ್ ಆರನೆ ತರಗತಿಯ ತನಕ ಸ್ಥಳೀಯ ಶಾಲೆಯಲ್ಲಿ ಅಧ್ಯಯನ ಮಾಡಿದ್ದರು. ನಂತರ ನವೋದಯ ವಿದ್ಯಾಲಯದಲ್ಲಿ 12 ನೇ ತನಕ ಅಧ್ಯಯನ ಮಾಡಿ ಪುಣೆಯ ಬೈರಂಜಿ ಜೀಜೀಭಾಯ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮುಗಿಸಿದ್ದರು.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ವೈದ್ಯಕೀಯ ವಿದ್ಯಾರ್ಥಿಯಾಗಿ ಭಾಗವತ್ | ಬಿಬಿಸಿ ಹಿಂದಿ

ಐದು ಸೀನಿಯರ್‌ ವಿದ್ಯಾರ್ಥಿಗಳು ನಿರಂತರ ಕಿರುಕುಳ ನೀಡುತ್ತಿರುವುದೇ ಇದಕ್ಕೆ ಕಾರಣ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಜುಲೈ 1 ರಂದು ಕಾಲೇಜಿಗೆ ಸೇರಿದ ಹದಿನೈದು ದಿನಗಳ ನಂತರ, ಭಾಗವತ್ ತಮ್ಮ ಜಾತಿ ಮತ್ತು ಆರ್ಥಿಕ ಹಿನ್ನೆಲೆಯ ಕಾರಣಕ್ಕಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳಕ್ಕೊಳಗಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

“ನಮ್ಮ ಸೀನಿಯರ್ಸ್‌‌‌ ನಮ್ಮ ಜಾತಿ ಮತ್ತು ಬಡತನವನ್ನು ಉಲ್ಲೇಖಿಸಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಭಾಗವತ್ ನನಗೆ ಪ್ರತಿಭಾರಿಯೂ ಹೇಳುತ್ತಿದ್ದ, ಆಡಳಿತ ಮಂಡಳಿಗೆ ಇದು ತಿಳಿದಿತ್ತು. ಆದರೆ ಮಧ್ಯಪ್ರವೇಶಿಸಿಲ್ಲ” ಎಂದು ಮೃತ ಭಾಗವತ್ ಸಹೋದರ ಪ್ರಹ್ಲಾದ್ ಹೇಳಿದ್ದಾರೆ.

“ಸರಿಯಾದ ಅಧ್ಯಯನವಿಲ್ಲದೆ ಮೀಸಲಾತಿ ಆಧಾರದಲ್ಲಿ ಪ್ರವೇಶ ಪಡೆದ್ದಾಗಿ, ತನ್ನನ್ನು ಪದೇ ಪದೇ ’ಅರ್ಹನಲ್ಲದವ’ ಎಂದು ಸೀನಿಯರ್‌ಗಳು ಕರೆಯುತ್ತಾರೆ” ಎಂದು ಹೇಳಿದ್ದಾಗಿ ಪ್ರಹ್ಲಾದ್ ಹೇಳುತ್ತಾರೆ.

ಇದನ್ನೂ ಓದಿ: ದಲಿತ ಚಳವಳಿಯಲ್ಲಿ ಯುವ ನಾಯಕತ್ವ ಅರಳುವ ಸಮಯ

ಕಿರುಕುಳದಿಂದಾಗಿ ಭಾಗವತ್ ಜುಲೈ 24 ರಂದು ಆತ್ಮಹತ್ಯೆಗೆ ಯತ್ನಿಸಿದ್ದರು, ಇದಕ್ಕಾಗಿ ಒಂದು ತಿಂಗಳ ಕಾಲ ಅವರನ್ನು ಮನೆಗೆ ಕಳುಹಿಸಲಾಯಿತ್ತು. ಇದಾಗಿ ಅವರ HOD ಕೋರಿಕೆಯ ಮೇರೆಗೆ ಅವರು ಮರಳಿದ್ದರು ಎನ್ನಲಾಗಿದ್ದು, ಆದರೂ ಕಿರುಕುಳ ನಿಲ್ಲಲಿಲ್ಲ. ವಿಕಾಸ್ ದ್ವಿವೇದಿ, ಸಲ್ಮಾನ್ ಖಾನ್, ಅಮನ್ ಗೌತಮ್, ಶುಭಮ್ ಶಿಂಧೆ ಮತ್ತು ಅಭಿಷೇಕ್ ಗ್ಯಾಮೆ ಮುಂತಾದವರ ವಿರುದ್ಧ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಕುಟುಂಬವು ದೂರು ದಾಖಲಿಸಿದೆ.

ವೈದ್ಯಕೀಯ ಕಾಲೇಜು ಹಾಸ್ಟೆಲ್‌ನ ವಾರ್ಡನ್ ಮತ್ತು ಕಾಲೇಜಿನ ಆಂಟಿ ರ‍್ಯಾಗಿಂಗ್ ಸಮಿತಿಯ ಸದಸ್ಯರಾದ ಡಾ.ಅರವಿಂದ್ ಶರ್ಮಾ ಹಾಸ್ಟೆಲ್ ಒಳಗೆ ರ‍್ಯಾಗಿಂಗ್ ಅಥವಾ ಯಾವುದೇ ರೀತಿಯ ಕಿರುಕುಳ ನಡೆದಿಲ್ಲ ಎಂದು ಹೇಳಿದ್ದಾರೆ.

ಅಕ್ಟೋಬರ್ 7 ರಿಂದ, ಕುಟುಂಬ ಮತ್ತು ಸಮುದಾಯದ ಸದಸ್ಯರು ಪೊಲೀಸ್ ನಿಷ್ಕ್ರಿಯತೆಗಾಗಿ ಕ್ಯಾಂಡಲ್ ಮಾರ್ಚ್ ಮಾಡಿದ್ದು, ಒಂದು ವಾರದಿಂದ ತನಿಖೆ ನಡೆಸುತ್ತಿದ್ದರೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಉದ್ದೇಶಪೂರ್ವಕವಾಗಿ ವಿಷಯವನ್ನು ಮುಂದೂಡಲು ಪ್ರಯತ್ನಿಸುತ್ತಿದೆ ಎಂದು ಅವರ ಸಮುದಾಯ ಆರೋಪಿಸುತ್ತಿದೆ. ಭಾಗವತ್ ಅವರ ಬಾಲ್ಯ ಸ್ನೇಹಿತ ದಿಲೀಪ್ ದೇವಾಂಗನ್ “ಜಸ್ಟಿಸ್ ಫಾರ್ ಭಾಗವತ್ ದೇವಾಂಗನ್” ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದಾರೆ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿಗೆ 1000 ಪೋಸ್ಟ್‌ಕಾರ್ಡ್‌ಗಳನ್ನು ಕಳುಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಛತ್ತೀಸ್‌ಗಡ ಆರೋಗ್ಯ ಸಚಿವ ಟಿ.ಎಸ್.ಸಿಂಗ್‌ದೇವ್ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಗುರುವಾರ ಪತ್ರವೊಂದನ್ನು ಬರೆದಿದ್ದು, ಕಠಿಣವಾದ ರಾಗಿಂಗ್ ವಿರೋಧಿ ನಿಯಮಗಳ ಹೊರತಾಗಿಯೂ, ರ‍್ಯಾಗಿಂಗ್‌ನಿಂದಾಗಿ ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕ ಕಿರುಕುಳ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಸಾಂಸ್ಥಿಕ ಕೊಲೆ

ತಳಸಮುದಾಯದ ವಿದ್ಯಾರ್ಥಿಗಳನ್ನು ಆತ್ಮಹತ್ಯೆಗೆ ತಳ್ಳುವ ವ್ಯವಸ್ಥಿತ ವಿಧಾನದ ಒಂದು ಭಾಗವಾಗಿ ಸೀನಿಯರ್‌ ವಿದ್ಯಾರ್ಥಿಗಳಿಂದ ದೈಹಿಕ ಮತ್ತು ಮಾನಸಿಕವಾಗಿ ನಡೆಯುವ ಜಾತಿವಾದಿ ಕಿರುಕುಳ ಹಾಗೂ ಆಡಳಿತ ಮಂಡಳಿಯ ಉದ್ದೇಶಪೂರ್ವಕ ನಿರ್ಲಕ್ಷ್ಯಕ್ಕಾಗಿ ಈ ಆತ್ಮಹತ್ಯೆಯನ್ನು ಅನೇಕ ಜನರು “ಸಾಂಸ್ಥಿಕ ಕೊಲೆ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

ಭಾರತದ ಪ್ರತಿಯೊಂದು ವಿಶ್ವವಿದ್ಯಾನಿಲಯದಲ್ಲೂ ಜಾತಿವಾದಿ ಹಿಂಸಾಚಾರವನ್ನು ಸಾಂಸ್ಥೀಕರಣಗೊಳಿಸಲಾಗಿದ್ದರೂ, ಇದು ಪಿಜಿ ವೈದ್ಯಕೀಯ ಕಾಲೇಜುಗಳಲ್ಲಿ ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿದೆ. ಹಿಂದುಳಿದ ವರ್ಗಗಳ ಮಾನಸಿಕ ಆರೋಗ್ಯಕ್ಕೋಸ್ಕರ ಕೆಲಸ ಮಾಡುತ್ತಿರುವ ’ದಿ ಬ್ಲೂ ಡಾನ್’ ಈ ವಿಷಯದ ಬಗ್ಗೆ ಬರೆದಿದೆ,

2010 ರಲ್ಲಿ ಏಮ್ಸ್‌ನ ದಲಿತ ವೈದ್ಯಕೀಯ ವಿದ್ಯಾರ್ಥಿ ಡಾ.ಬಾಲಮುಕುಂದ್ ಭಾರತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಡಳಿತ ಮಂಡಳಿಯು ಅವರು ಖಿನ್ನತೆಗೊಳಗಾಗಿದ್ದರು ಎಂದು ಹೇಳಿಕೊಂಡಿದೆ. ಹಾಗಾಗಿ ಅವರ ಮಾನಸಿಕ ಆರೋಗ್ಯವು ಜಾತಿ ಆಧಾರಿತ ಹಿಂಸೆಯಿಂದ ಹೀಗಾಗಿದೆ ಎಂದು ಒಪ್ಪಿಕೊಳ್ಳಲು ನಿರಾಕರಿಸಿತು.

ರೋಹಿತ್ ವೆಮುಲ ಆತ್ಮಹತ್ಯೆ ಪ್ರಕರಣದಲ್ಲೂ ಸರ್ಕಾರ ಸೇರಿದಂತೆ ಆಡಳಿತ ಮಂಡಳಿ ಇದನ್ನೇ ಹೇಳಿದ್ದವು. 2019 ರಲ್ಲಿ ಡಾ. ಪಾಯಲ್ ತಡ್ವಿ ಆತ್ಮಹತ್ಯೆ ಮಾಡಿಕೊಂಡಾಗ, ಆಕೆಯ ಪೋಷಕರು ದೌರ್ಜನ್ಯಕ್ಕೀಡು ಮಾಡಿದ ಮೇಲ್ಜಾತಿಯವರ ವಿರುದ್ಧ ದೂರು ನೀಡಿದರೂ ಮುಂಬೈನ ನಾಯರ್ ಕಾಲೇಜು ಕೂಡ ಇದನ್ನೇ ಹೇಳಿತ್ತು.

Members of Vanchit Bahujan Aghadi protest against Nair Hospital’s management. They sought immediate arrest of culprits responsible for death of Payal Tadvi at Nair Hospital Gate in Mumbai Central. (Photo: Debasish Dey)

ಡಾ. ಪಾಯಲ್ ತಡ್ವಿ ಪ್ರಕರಣದಲ್ಲಿ, ಪ್ರತಿಭಟನಾಕಾರರು ಮತ್ತು ಅವರ ಕುಟುಂಬವು ಪೊಲೀಸರು ಮತ್ತು ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ಹೇರಿತ್ತಾದರೂ, ಪ್ರಕರಣವನ್ನು ಮುಂದೆ ತೆಗೆದುಕೊಳ್ಳಲಾಗಿಲ್ಲ. ಅಕ್ಟೋಬರ್ 8 ರಂದು ಆರೋಪಿಗಳಿಗೆ ಜಾಮೀನು ನೀಡಲಾಯಿತು. ಸವರ್ಣರಿಂದ ಹಿಂದುಳಿದ ವರ್ಗಗಳ ಮೇಲೆ ಹಿಂಸಾಚಾರ ನಡೆದಾಗೆಲ್ಲ ಪೊಲೀಸರು ಮತ್ತು ಸರ್ಕಾರ ನಿರ್ಲಕ್ಷ್ಯ ವಹಿಸಿ ಸವರ್ಣರನ್ನು ರಕ್ಷಿಸಲು ಪ್ರಯತ್ನಿಸುತ್ತದೆ. ಹತ್ರಾಸ್ ಘಟನೆ ಇದಕ್ಕೆ ಉತ್ತಮ ಉದಾಹರಣೆಯಾಗಿದೆ.

ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...