Homeಮುಖಪುಟಜಾತಿ ದೌರ್ಜನ್ಯ: ವೈದ್ಯಕೀಯ ವಿದ್ಯಾರ್ಥಿ ಅಸಹಜ ಸಾವು!

ಜಾತಿ ದೌರ್ಜನ್ಯ: ವೈದ್ಯಕೀಯ ವಿದ್ಯಾರ್ಥಿ ಅಸಹಜ ಸಾವು!

ಜಾತಿವಾದಿ ಕಿರುಕುಳ ಹಾಗೂ ಆಡಳಿತ ಮಂಡಳಿಯ ಉದ್ದೇಶಪೂರ್ವಕ ನಿರ್ಲಕ್ಷ್ಯಕ್ಕಾಗಿ ಅನೇಕರು ಇದನ್ನು ’ಸಾಂಸ್ಥಿಕ ಕೊಲೆ’ ಎಂದು ಕರೆದಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ಜಬಲ್ಪುರದಲ್ಲಿ ಅಕ್ಟೋಬರ್ 1 ರಂದು ಹಿಂದುಳಿದ ವರ್ಗದ ಡಾ.ಭಾಗವತ್ ದೇವಾಂಗನ್ ಎಂಬ 28 ​​ವರ್ಷ ವಯಸ್ಸಿನ ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರನ್ನು “ಮೇಲ್ಜಾತಿ” (ಸವರ್ಣ)ಯ ಸೀನಿಯರ್‌ ವಿದ್ಯಾರ್ಥಿಗಳು ಕೆಲವು ತಿಂಗಳುಗಳಿಂದ ಮಾನಸಿಕವಾಗಿ ಹಿಂಸಿಸುತ್ತಿದ್ದರು ಮತ್ತು ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ಭಾಗವತ್ ದೇವಾಂಗನ್ ಜಂಜಗೀರ್ ಚಂಪಾದ ಸಣ್ಣ ಪಟ್ಟಣವಾದ ರಹೌದ್ ನಿವಾಸಿಯಾಗಿದ್ದು, ಅವರ ತಂದೆ ತಮ್ಮ ಊರಿನಲ್ಲಿ ಪಾತ್ರೆಗಳನ್ನು ಮಾರಾಟ ಮಾಡಿ ಜೀವನ ದೂಡುತ್ತಿದ್ದರು. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭಾಗವತ್ ಆರನೆ ತರಗತಿಯ ತನಕ ಸ್ಥಳೀಯ ಶಾಲೆಯಲ್ಲಿ ಅಧ್ಯಯನ ಮಾಡಿದ್ದರು. ನಂತರ ನವೋದಯ ವಿದ್ಯಾಲಯದಲ್ಲಿ 12 ನೇ ತನಕ ಅಧ್ಯಯನ ಮಾಡಿ ಪುಣೆಯ ಬೈರಂಜಿ ಜೀಜೀಭಾಯ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮುಗಿಸಿದ್ದರು.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ವೈದ್ಯಕೀಯ ವಿದ್ಯಾರ್ಥಿಯಾಗಿ ಭಾಗವತ್ | ಬಿಬಿಸಿ ಹಿಂದಿ

ಐದು ಸೀನಿಯರ್‌ ವಿದ್ಯಾರ್ಥಿಗಳು ನಿರಂತರ ಕಿರುಕುಳ ನೀಡುತ್ತಿರುವುದೇ ಇದಕ್ಕೆ ಕಾರಣ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಜುಲೈ 1 ರಂದು ಕಾಲೇಜಿಗೆ ಸೇರಿದ ಹದಿನೈದು ದಿನಗಳ ನಂತರ, ಭಾಗವತ್ ತಮ್ಮ ಜಾತಿ ಮತ್ತು ಆರ್ಥಿಕ ಹಿನ್ನೆಲೆಯ ಕಾರಣಕ್ಕಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳಕ್ಕೊಳಗಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

“ನಮ್ಮ ಸೀನಿಯರ್ಸ್‌‌‌ ನಮ್ಮ ಜಾತಿ ಮತ್ತು ಬಡತನವನ್ನು ಉಲ್ಲೇಖಿಸಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಭಾಗವತ್ ನನಗೆ ಪ್ರತಿಭಾರಿಯೂ ಹೇಳುತ್ತಿದ್ದ, ಆಡಳಿತ ಮಂಡಳಿಗೆ ಇದು ತಿಳಿದಿತ್ತು. ಆದರೆ ಮಧ್ಯಪ್ರವೇಶಿಸಿಲ್ಲ” ಎಂದು ಮೃತ ಭಾಗವತ್ ಸಹೋದರ ಪ್ರಹ್ಲಾದ್ ಹೇಳಿದ್ದಾರೆ.

“ಸರಿಯಾದ ಅಧ್ಯಯನವಿಲ್ಲದೆ ಮೀಸಲಾತಿ ಆಧಾರದಲ್ಲಿ ಪ್ರವೇಶ ಪಡೆದ್ದಾಗಿ, ತನ್ನನ್ನು ಪದೇ ಪದೇ ’ಅರ್ಹನಲ್ಲದವ’ ಎಂದು ಸೀನಿಯರ್‌ಗಳು ಕರೆಯುತ್ತಾರೆ” ಎಂದು ಹೇಳಿದ್ದಾಗಿ ಪ್ರಹ್ಲಾದ್ ಹೇಳುತ್ತಾರೆ.

ಇದನ್ನೂ ಓದಿ: ದಲಿತ ಚಳವಳಿಯಲ್ಲಿ ಯುವ ನಾಯಕತ್ವ ಅರಳುವ ಸಮಯ

ಕಿರುಕುಳದಿಂದಾಗಿ ಭಾಗವತ್ ಜುಲೈ 24 ರಂದು ಆತ್ಮಹತ್ಯೆಗೆ ಯತ್ನಿಸಿದ್ದರು, ಇದಕ್ಕಾಗಿ ಒಂದು ತಿಂಗಳ ಕಾಲ ಅವರನ್ನು ಮನೆಗೆ ಕಳುಹಿಸಲಾಯಿತ್ತು. ಇದಾಗಿ ಅವರ HOD ಕೋರಿಕೆಯ ಮೇರೆಗೆ ಅವರು ಮರಳಿದ್ದರು ಎನ್ನಲಾಗಿದ್ದು, ಆದರೂ ಕಿರುಕುಳ ನಿಲ್ಲಲಿಲ್ಲ. ವಿಕಾಸ್ ದ್ವಿವೇದಿ, ಸಲ್ಮಾನ್ ಖಾನ್, ಅಮನ್ ಗೌತಮ್, ಶುಭಮ್ ಶಿಂಧೆ ಮತ್ತು ಅಭಿಷೇಕ್ ಗ್ಯಾಮೆ ಮುಂತಾದವರ ವಿರುದ್ಧ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಕುಟುಂಬವು ದೂರು ದಾಖಲಿಸಿದೆ.

ವೈದ್ಯಕೀಯ ಕಾಲೇಜು ಹಾಸ್ಟೆಲ್‌ನ ವಾರ್ಡನ್ ಮತ್ತು ಕಾಲೇಜಿನ ಆಂಟಿ ರ‍್ಯಾಗಿಂಗ್ ಸಮಿತಿಯ ಸದಸ್ಯರಾದ ಡಾ.ಅರವಿಂದ್ ಶರ್ಮಾ ಹಾಸ್ಟೆಲ್ ಒಳಗೆ ರ‍್ಯಾಗಿಂಗ್ ಅಥವಾ ಯಾವುದೇ ರೀತಿಯ ಕಿರುಕುಳ ನಡೆದಿಲ್ಲ ಎಂದು ಹೇಳಿದ್ದಾರೆ.

ಅಕ್ಟೋಬರ್ 7 ರಿಂದ, ಕುಟುಂಬ ಮತ್ತು ಸಮುದಾಯದ ಸದಸ್ಯರು ಪೊಲೀಸ್ ನಿಷ್ಕ್ರಿಯತೆಗಾಗಿ ಕ್ಯಾಂಡಲ್ ಮಾರ್ಚ್ ಮಾಡಿದ್ದು, ಒಂದು ವಾರದಿಂದ ತನಿಖೆ ನಡೆಸುತ್ತಿದ್ದರೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಉದ್ದೇಶಪೂರ್ವಕವಾಗಿ ವಿಷಯವನ್ನು ಮುಂದೂಡಲು ಪ್ರಯತ್ನಿಸುತ್ತಿದೆ ಎಂದು ಅವರ ಸಮುದಾಯ ಆರೋಪಿಸುತ್ತಿದೆ. ಭಾಗವತ್ ಅವರ ಬಾಲ್ಯ ಸ್ನೇಹಿತ ದಿಲೀಪ್ ದೇವಾಂಗನ್ “ಜಸ್ಟಿಸ್ ಫಾರ್ ಭಾಗವತ್ ದೇವಾಂಗನ್” ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದಾರೆ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿಗೆ 1000 ಪೋಸ್ಟ್‌ಕಾರ್ಡ್‌ಗಳನ್ನು ಕಳುಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಛತ್ತೀಸ್‌ಗಡ ಆರೋಗ್ಯ ಸಚಿವ ಟಿ.ಎಸ್.ಸಿಂಗ್‌ದೇವ್ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಗುರುವಾರ ಪತ್ರವೊಂದನ್ನು ಬರೆದಿದ್ದು, ಕಠಿಣವಾದ ರಾಗಿಂಗ್ ವಿರೋಧಿ ನಿಯಮಗಳ ಹೊರತಾಗಿಯೂ, ರ‍್ಯಾಗಿಂಗ್‌ನಿಂದಾಗಿ ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕ ಕಿರುಕುಳ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಸಾಂಸ್ಥಿಕ ಕೊಲೆ

ತಳಸಮುದಾಯದ ವಿದ್ಯಾರ್ಥಿಗಳನ್ನು ಆತ್ಮಹತ್ಯೆಗೆ ತಳ್ಳುವ ವ್ಯವಸ್ಥಿತ ವಿಧಾನದ ಒಂದು ಭಾಗವಾಗಿ ಸೀನಿಯರ್‌ ವಿದ್ಯಾರ್ಥಿಗಳಿಂದ ದೈಹಿಕ ಮತ್ತು ಮಾನಸಿಕವಾಗಿ ನಡೆಯುವ ಜಾತಿವಾದಿ ಕಿರುಕುಳ ಹಾಗೂ ಆಡಳಿತ ಮಂಡಳಿಯ ಉದ್ದೇಶಪೂರ್ವಕ ನಿರ್ಲಕ್ಷ್ಯಕ್ಕಾಗಿ ಈ ಆತ್ಮಹತ್ಯೆಯನ್ನು ಅನೇಕ ಜನರು “ಸಾಂಸ್ಥಿಕ ಕೊಲೆ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

ಭಾರತದ ಪ್ರತಿಯೊಂದು ವಿಶ್ವವಿದ್ಯಾನಿಲಯದಲ್ಲೂ ಜಾತಿವಾದಿ ಹಿಂಸಾಚಾರವನ್ನು ಸಾಂಸ್ಥೀಕರಣಗೊಳಿಸಲಾಗಿದ್ದರೂ, ಇದು ಪಿಜಿ ವೈದ್ಯಕೀಯ ಕಾಲೇಜುಗಳಲ್ಲಿ ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿದೆ. ಹಿಂದುಳಿದ ವರ್ಗಗಳ ಮಾನಸಿಕ ಆರೋಗ್ಯಕ್ಕೋಸ್ಕರ ಕೆಲಸ ಮಾಡುತ್ತಿರುವ ’ದಿ ಬ್ಲೂ ಡಾನ್’ ಈ ವಿಷಯದ ಬಗ್ಗೆ ಬರೆದಿದೆ,

2010 ರಲ್ಲಿ ಏಮ್ಸ್‌ನ ದಲಿತ ವೈದ್ಯಕೀಯ ವಿದ್ಯಾರ್ಥಿ ಡಾ.ಬಾಲಮುಕುಂದ್ ಭಾರತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಡಳಿತ ಮಂಡಳಿಯು ಅವರು ಖಿನ್ನತೆಗೊಳಗಾಗಿದ್ದರು ಎಂದು ಹೇಳಿಕೊಂಡಿದೆ. ಹಾಗಾಗಿ ಅವರ ಮಾನಸಿಕ ಆರೋಗ್ಯವು ಜಾತಿ ಆಧಾರಿತ ಹಿಂಸೆಯಿಂದ ಹೀಗಾಗಿದೆ ಎಂದು ಒಪ್ಪಿಕೊಳ್ಳಲು ನಿರಾಕರಿಸಿತು.

ರೋಹಿತ್ ವೆಮುಲ ಆತ್ಮಹತ್ಯೆ ಪ್ರಕರಣದಲ್ಲೂ ಸರ್ಕಾರ ಸೇರಿದಂತೆ ಆಡಳಿತ ಮಂಡಳಿ ಇದನ್ನೇ ಹೇಳಿದ್ದವು. 2019 ರಲ್ಲಿ ಡಾ. ಪಾಯಲ್ ತಡ್ವಿ ಆತ್ಮಹತ್ಯೆ ಮಾಡಿಕೊಂಡಾಗ, ಆಕೆಯ ಪೋಷಕರು ದೌರ್ಜನ್ಯಕ್ಕೀಡು ಮಾಡಿದ ಮೇಲ್ಜಾತಿಯವರ ವಿರುದ್ಧ ದೂರು ನೀಡಿದರೂ ಮುಂಬೈನ ನಾಯರ್ ಕಾಲೇಜು ಕೂಡ ಇದನ್ನೇ ಹೇಳಿತ್ತು.

Members of Vanchit Bahujan Aghadi protest against Nair Hospital’s management. They sought immediate arrest of culprits responsible for death of Payal Tadvi at Nair Hospital Gate in Mumbai Central. (Photo: Debasish Dey)

ಡಾ. ಪಾಯಲ್ ತಡ್ವಿ ಪ್ರಕರಣದಲ್ಲಿ, ಪ್ರತಿಭಟನಾಕಾರರು ಮತ್ತು ಅವರ ಕುಟುಂಬವು ಪೊಲೀಸರು ಮತ್ತು ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ಹೇರಿತ್ತಾದರೂ, ಪ್ರಕರಣವನ್ನು ಮುಂದೆ ತೆಗೆದುಕೊಳ್ಳಲಾಗಿಲ್ಲ. ಅಕ್ಟೋಬರ್ 8 ರಂದು ಆರೋಪಿಗಳಿಗೆ ಜಾಮೀನು ನೀಡಲಾಯಿತು. ಸವರ್ಣರಿಂದ ಹಿಂದುಳಿದ ವರ್ಗಗಳ ಮೇಲೆ ಹಿಂಸಾಚಾರ ನಡೆದಾಗೆಲ್ಲ ಪೊಲೀಸರು ಮತ್ತು ಸರ್ಕಾರ ನಿರ್ಲಕ್ಷ್ಯ ವಹಿಸಿ ಸವರ್ಣರನ್ನು ರಕ್ಷಿಸಲು ಪ್ರಯತ್ನಿಸುತ್ತದೆ. ಹತ್ರಾಸ್ ಘಟನೆ ಇದಕ್ಕೆ ಉತ್ತಮ ಉದಾಹರಣೆಯಾಗಿದೆ.

ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...