Homeಕರೋನಾ ತಲ್ಲಣಕೊರೊನಾ: ಕಳೆದ 2 ತಿಂಗಳಿನಲ್ಲಿ ಅತ್ಯಂತ ಕಡಿಮೆ ಪ್ರಕರಣ ದಾಖಲಿಸಿದ ಭಾರತ!

ಕೊರೊನಾ: ಕಳೆದ 2 ತಿಂಗಳಿನಲ್ಲಿ ಅತ್ಯಂತ ಕಡಿಮೆ ಪ್ರಕರಣ ದಾಖಲಿಸಿದ ಭಾರತ!

ಪ್ರಸ್ತುತ ಅಮೇರಿಕಾದಲ್ಲಿ 78 ಲಕ್ಷ ಪ್ರಕರಣಗಳಿದ್ದು, 2 ಲಕ್ಷ ಸಾವುಗಳು ದಾಖಲಾಗಿವೆ. ಅಮೇರಿಕಾವನ್ನು ಹಿಂದಿಕ್ಕಿ, ಭಾರತ ಮೊದಲ ಸ್ಥಾನಕ್ಕೇರಲು ಕೇವಲ 6 ಲಕ್ಷ ಪ್ರಕರಣಗಳಷ್ಟೆ ಬಾಕಿಯಿವೆ.

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ 55,342 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕಳೆದ ಎರಡು ತಿಂಗಳಿನಲ್ಲಿಯೇ ಅತ್ಯಂತ ಕಡಿಮೆ ಪ್ರಕರಣಗಳು ನಿನ್ನೆ ದಾಖಲಾಗಿದೆ.

ಹಲವು ದಿನಗಳಿಂದ ಭಾರತದ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಕುಸಿಯುತ್ತಿದೆ ಎಂದು ಆರೋಗ್ಯ ಸಚಿವಾಲಯ ಇಂದು ಬೆಳಿಗಿನ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಸ್ತುತ ಭಾರತದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 71.75 ಲಕ್ಷಕ್ಕೆ ತಲುಪಿದೆ.

ಇದನ್ನೂ ಓದಿ: 6 ಕೊರೊನಾ ಪ್ರಕರಣ ಪತ್ತೆ: ಇಡೀ ನಗರವನ್ನೇ ಪರೀಕ್ಷಿಸುತ್ತಿರುವ ಚೀನಾ ಆಡಳಿತ!

ದೇಶದಲ್ಲಿ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ ಈ ಹಿಂದೆ ಸರಾಸರಿ 90,000 ದಾಖಲಾಗುತ್ತಿತ್ತು. ಈಗ ಇದು ಸರಾಸರಿ 72,000 ರಿಂದ 74,000 ಕ್ಕೆ ಇಳಿದಿದೆ.

24 ಗಂಟೆಗಳಲ್ಲಿ, 77,760 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಕೊರೊನಾ ವೈರಸ್ ಪ್ರಕರಣಗಳು 8.38 ಲಕ್ಷಕ್ಕೆ ಇಳಿದಿದೆ. ಇದು ಭಾರತದ ಚೇತರಿಕೆ ಪ್ರಮಾಣವನ್ನು ಶೇಕಡಾ 86.8 ಕ್ಕೆ ಹೆಚ್ಚಿಸಿದೆ. ಇದುವರೆಗೂ ಸುಮಾರು 62.2 ಲಕ್ಷ ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘನೆ: ಬಿಜೆಪಿ ಸಂಸದೆ ಕಛೇರಿ ಸೀಲ್!

ಇದುವರೆಗೂ ಸೋಂಕಿನಿಂದ ಸಂಭವಿಸಿದ ಒಟ್ಟು ಸಾವುಗಳ ಸಂಖ್ಯೆ 1,09,856 ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 706 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಭಾರತದಲ್ಲಿ ಆಗಸ್ಟ್ ಆರಂಭದಿಂದ ದಿನಕ್ಕೆ 800 ರಿಂದ 900 ಸಾವುಗಳು ವರದಿಯಾಗುತ್ತಿದ್ದು, ಸಾವಿನ ಪ್ರಮಾಣ ಶೇಕಡಾ 1.5 ರಷ್ಟು ಇದೆ.

ಸರ್ಕಾರವು ಸೋಮವಾರ ಒಂದೇ ದಿನ 10.7 ಲಕ್ಷ ಜನರನ್ನು ಪರೀಕ್ಷಿಸಿದ್ದರಿಂದ ಭಾರತದಲ್ಲಿ ದೈನಂದಿನ ಸೋಂಕಿತರ ದರವು ಶೇಕಡಾ 5.2 ರಷ್ಟಿದೆ. ಈವರೆಗೆ ಒಟ್ಟು 8.8 ಕೋಟಿ ಪರೀಕ್ಷೆಗಳನ್ನು ಮಾಡಲಾಗಿದೆ.

ಇದನ್ನೂ ಓದಿ: ಇನ್ನೂ ಹೆಚ್ಚಿನ ಕೊರೊನಾ ಪರಿಹಾರ ಸಾಧ್ಯವಿಲ್ಲ: ಸುಪ್ರೀಂ‌ಗೆ ಕೇಂದ್ರ ಸರ್ಕಾರ

ಗರಿಷ್ಠ ದೈನಂದಿನ ಕೊರೊನಾ ವೈರಸ್ ಪ್ರಕರಣಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ಮೊದಲ ಸ್ಥಾನದಲ್ಲಿದೆ. ಈ ರಾಜ್ಯಗಳು ದೇಶದ ಎಲ್ಲಾ ಪ್ರಕರಣಗಳಲ್ಲಿ ಶೇಕಡಾ 52.5 ರಷ್ಟನ್ನು ಹೊಂದಿದೆ.

ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶಗಳಲ್ಲಿ ಗರಿಷ್ಠ ಸಾವುಗಳು ಸಂಭವಿಸಿವೆ. ಈ ರಾಜ್ಯಗಳು ಒಟ್ಟು ಸಾವುಗಳಲ್ಲಿ ಶೇಕಡಾ 57 ರಷ್ಟನ್ನು ಹೊಂದಿದೆ.

ಇದನ್ನೂ ಓದಿ: ಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಭಾರತ, ಇಡೀ ಜಗತ್ತಿನಲ್ಲಿ ಅತ್ಯಂತ ಹೆಚ್ಚು ಪ್ರಕರಣಗಳನ್ನು ಹೊಂದಿರುವ ದೇಶಗಳ ಪೈಕಿ ಅಮೇರಿಕಾದ ನಂತರದ ಎರಡನೇ ಸ್ಥಾನದಲ್ಲಿದೆ. ಪ್ರಸ್ತುತ ಅಮೇರಿಕಾದಲ್ಲಿ 78 ಲಕ್ಷ ಪ್ರಕರಣಗಳಿದ್ದು, 2 ಲಕ್ಷ ಸಾವುಗಳು ದಾಖಲಾಗಿವೆ. ಅಮೇರಿಕಾವನ್ನು ಹಿಂದಿಕ್ಕಿ, ಭಾರತ ಮೊದಲ ಸ್ಥಾನಕ್ಕೇರಲು ಕೇವಲ 6 ಲಕ್ಷ ಪ್ರಕರಣಗಳಷ್ಟೆ ಬಾಕಿಯಿವೆ.


ಇದನ್ನೂ ಓದಿ: 10 ಕೋಟಿ ಜನರನ್ನು ತೀವ್ರ ಬಡತನಕ್ಕೆ ದೂಡಲಿದೆ ಕೊರೊನಾ: ವಿಶ್ವಬ್ಯಾಂಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...