Homeಮುಖಪುಟಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ತನಿಷ್ಕ್ ಜಾಹೀರಾತು ತೆಗೆದುಹಾಕಿದರೂ ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಟೈಮ್‌ಲೈನ್‌ಗಳಲ್ಲಿ ಆ ಜಾಹೀರಾತನ್ನು ಹಂಚಿಕೊಂಡು, ಈ ಸುಂದರ ಜಾಹೀರಾತನ್ನು ಇಷ್ಟಪಟ್ಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಅಂತರ್-ಧರ್ಮೀಯ ಕುಟುಂಬಗಳ ನಡುವಿನ ಸೌಹಾರ್ದತೆ ಬಿಂಬಿಸುವ ಟೈಟನ್ ಗ್ರೂಪ್‍ನ ತನಿಷ್ಕ್ ಜುವೆಲ್ಲರಿಯ ಏಕತ್ವಂ’ ಜಾಹೀರಾತು ಬಹುಚರ್ಚಿತ ಸುದ್ದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಯ ನಡುವೆ ಕಂಪನಿಯು ಜಾಹೀರಾತನ್ನು ತೆಗೆದುಹಾಕಲಾಗಿದೆ.

ಟ್ವಿಟ್ಟರ್‌ನಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆಯಲ್ಲದೆ‍ ನಿನ್ನೆ #BoycottTanishq ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿ, ಈ ನಿರ್ದಿಷ್ಟ ತನಿಷ್ಕ್ ಜಾಹೀರಾತನ್ನು ನಿಷೇಧಿಸಬೇಕು ಎಂದು ಟ್ರೋಲ್ ಮಾಡಲಾಗಿತ್ತು. ಈ ಜಾಹೀರಾತಿನ ಮೂಲಕ ತನಿಷ್ಕ್ ‘ಲವ್ ಜಿಹಾದ್’ ಹಾಗೂ ‘ನಕಲಿ ಜಾತ್ಯತೀತತೆ’ಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಹಲವು ಟ್ವಿಟ್ಟಿರಿಗರು ಆರೋಪಿಸಿದ್ದರು.

ಅದೇ ಸಮಯದಲ್ಲಿ ಬಹಳಷ್ಟು ಮಂದಿ ತನಿಷ್ಕ್ ಪರ ನಿಂತಿದ್ದಾರೆ. ಸೌಹಾರ್ದತೆ ಸಾರುವ ಆ ಜಾಹೀರಾತಿನಲ್ಲಿ ಆಕ್ಷೇಪಾರ್ಹವಾದುದು ಯಾವುದು ಇಲ್ಲ. ಇನ್ನು ಲವ್ ಜಿಹಾದ್ ಎಂಬ ಪರಿಕಲ್ಪನೆ ಅಸ್ತಿತ್ವದಲ್ಲಿಲ್ಲ ಎಂದು ಕೇಂದ್ರ ಸರ್ಕಾರವೇ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಹೀಗಿರುವಾಗ ಮತಾಂಧವಾದಿಗಳ ಟ್ರೋಲ್‌ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ ಎಂಬಂತಹ ಅಭಿಪ್ರಾಯಗಳು ವ್ಯಕ್ತವಾಗಿವೆ.

ಏಕತ್ವಂ ಎಂಬ ಶೀರ್ಷಿಕೆಯೊಂದಿಗೆ ತನಿಷ್ಕ್ ತನ್ನ ಹೊಸ ಆಭರಣವನ್ನು ಬಿಡುಗಡೆ ಮಾಡಿತ್ತು. ಅ.9ರಂದು ಬಿಡುಗಡೆಯಾದ 45 ಸೆಕೆಂಡ್‌ನ ಈ ಜಾಹೀರಾತಿನಲ್ಲಿ ಅಂತರ್‌-ಧರ್ಮೀಯ ಕುಟುಂಬಗಳನ್ನು ಒಳಗೊಂಡ ಸೌಹಾರ್ದತೆ ಸಾರುವುದಾಗಿದೆ.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ತನಿಷ್ಕ್ ಹೊಸ ಜಾಹೀರಾತಿನಲ್ಲಿ ಇರುವುದೇನು..?

ಮುಸ್ಲಿಂ ಕುಟುಂಬದ ವರನನ್ನು ಮದುವೆಯಾದ ಹಿಂದೂ ಮಹಿಳೆಯ ಕಥೆಯನ್ನು ಸುಂದರವಾದ ಜಾಹೀರಾತಾಗಿ ತನಿಷ್ಕ್ ಚಿತ್ರಿಸಿದ್ದಾರೆ. ಜಾಹೀರಾತಿನಲ್ಲಿ, ಹಿಂದೂ ಮಹಿಳೆಯು ಬಸುರಿಯಾಗಿದ್ದು, ತನ್ನ ಮೊದಲ ಮಗುವಿನ ನಿರೀಕ್ಷೆಯಲ್ಲಿರುತ್ತಾರೆ.  ಸೀಮಂತ ಸಮಾರಂಭಕ್ಕಾಗಿ ಅತ್ತೆ ಆಕೆಯನ್ನು ಕೈಹಿಡಿದು ಕರೆದೊಯ್ಯುತ್ತಾರೆ. ಸಂಭ್ರಮಾಚರಣೆಯ ಸ್ಥಳವನ್ನು ನೋಡಿ ಗರ್ಭಿಣಿ ಆಶ್ಚರ್ಯಪಡುತ್ತಾಳೆ. ಏಕೆಂದರೆ ಸಮಾರಂಭವನ್ನು ಹಿಂದೂ ಸಂಪ್ರದಾಯಗಳ ಪ್ರಕಾರ ಆಯೋಜಿಸಲಾಗಿರುತ್ತದೆ. ಗರ್ಭಿಣಿ ಅದರ ಬಗ್ಗೆ ತನ್ನ ಅತ್ತೆಯನ್ನು ’ಈ ರೀತಿಯ ಸಮಾರಂಭವನ್ನು ನಿಮ್ಮ ಮನೆಗಳಲ್ಲಿ ಆಚರಿಸಲಾಗುವುದಿಲ್ಲ, ಅಲ್ಲವೇ? ಎಂದು ಕೇಳುತ್ತಾಳೆ. ಆಗ ಆಕೆಯ ಅತ್ತೆ ’ಮಗಳನ್ನು ಸಂತೋಷಪಡಿಸುವ ಸಮಾರಂಭವನ್ನು ಪ್ರತಿ ಮನೆಯಲ್ಲಿಯೂ ನಡೆಸಲಾಗುತ್ತದೆ, ಅಲ್ಲವೇ..?’ ಎಂದು ಉತ್ತರಿಸುತ್ತಾರೆ.

ತನಿಷ್ಕ್ ಹೊಸ ಆಭರಣ ‘ಏಕತ್ವಂ’ಗಾಗಿ ಈ ವೀಡಿಯೋ ಜಾಹೀರಾತು ತಯಾರಿಸಲಾಗಿದೆ. ಯುಟ್ಯೂಬ್‍ನಲ್ಲಿ ವೀಡಿಯೊದ ವಿವರಣೆಯಲ್ಲಿ “ಆಕೆಯನ್ನು ತನ್ನ ಸ್ವಂತ ಮಗಳಂತೆ ಪ್ರೀತಿಸುವ ಕುಟುಂಬದಲ್ಲಿ ಆಕೆಯ ವಿವಾಹ ಮಾಡಿಕೊಡಲಾಗಿದೆ. ಆಕೆಗಾಗಿಯೇ ಅವರು  ತಾವು ಸಾಮಾನ್ಯವಾಗಿ ಆಚರಿಸದ ಪದ್ಧತಿಯನ್ನು ಅನುಸರಿಸಿ ಸಂಭ್ರಮಿಸುತ್ತಿದ್ದಾರೆ. ಎರಡು ಧರ್ಮಗಳು, ಪದ್ಧತಿಗಳು ಹಾಗೂ ಸಂಸ್ಕೃತಿಗಳ ಸುಂದರವಾದ ಸಂಗಮ ಎಂದು ಬರೆಯಲಾಗಿದೆ.

ತನಿಷ್ಕ್ ಜಾಹೀರಾತು ತೆಗೆದುಹಾಕಿದರೂ ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಟೈಮ್‌ಲೈನ್‌ಗಳಲ್ಲಿ ಆ ಜಾಹೀರಾತನ್ನು ಹಂಚಿಕೊಂಡು, ಈ ಸುಂದರ ಜಾಹೀರಾತನ್ನು ಇಷ್ಟಪಟ್ಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಜಾಹೀರಾತು ಬಹಳ ಇಷ್ಟವಾಯಿತು. ತಲೆಯಿಲ್ಲದ ದ್ವೇಷ ತುಂಬಿಕೊಂಡವರು ಮಾತ್ರ ಇದನ್ನು ಹಿಂದೂ ಮುಸ್ಲಿಂ ಕುಟುಂಬ ಎಂದು ನೋಡುತ್ತಾರೆ. ಆಭರಣ ಕಂಪನಿ ಜಾಹೀರಾತನ್ನು ಹಿಂತೆಗೆದುಕೊಂಡಿರುವುದು ವಿಷಕಾರುವವರಿಗೆ ಬೆಲೆ ಕೊಟ್ಟಂತೆ ಕಾಣುತ್ತದೆ. ಜೀವನ ಪೂರ್ತಿ ಟೈಟನ್ ವಾಚ್ ಧರಿಸಿರುವ ನಾನು ನಿಮ್ಮಿಂದ ಇದಕ್ಕಿಂತ ಉತ್ತಮವಾಗಿರುವುದನ್ನು ನಿರೀಕ್ಷಿಸಿದ್ದೆ. ಬನ್ನಿ ದ್ವೇಷದ ವಿರುದ್ಧ ಸೌಹಾರ್ದತೆಯಿಂದ ಹೋರಾಡೋಣ ಎಂದು ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಟ್ವೀಟ್ ಮಾಡಿದ್ದಾರೆ.

 

’ಈ ಸುಂದರವಾದ ಜಾಹೀರಾತಿನ ಮೂಲಕ ಹಿಂದೂ-ಮುಸ್ಲಿಂ ಐಕ್ಯತೆಯನ್ನು ಎತ್ತಿ ತೋರಿಸುವುದಕ್ಕಾಗಿ ಹಿಂದುತ್ವವಾದಿಗಳು ಜಾಹೀರಾತು ಬಹಿಷ್ಕಾರಕ್ಕೆ ಕರೆ ನೀಡಿದ್ದಾರೆ.  ಹಿಂದೂ-ಮುಸ್ಲಿಂ “ಏಕತ್ವಂ” ಜಾಹೀರಾತು ಅವರನ್ನು ಇಷ್ಟು ಕೆರಳಿಸುವುದಾದರೆ ಹಿಂದೂ ಮುಸ್ಲಿಂ ಏಕತೆಯ ಪ್ರತೀಕವಾಗಿರುವ ಭಾರತವನ್ನೇಕೆ ಅವರು ಬಾಯ್ಕಾಟ್ ಮಾಡಬಾರದು” ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್


ಇದನ್ನೂ ಓದಿ: ವಿಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಪಾರ್ಲೆ-ಜಿ ನಿರ್ಧಾರಕ್ಕೆ ನೆಟ್ಟಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...