Homeಮುಖಪುಟಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ಇನ್ನು ಮುಂದೆ ಸಾತ್ವಿಕ ಹುಲಿಗಳಿಗೆ ಹಸುವಿನ ಸಗಣಿ ಮತ್ತು ಗೋಮೂತ್ರ ನೀಡಿ, ಹುಲಿಗಳಿಗೆ ಏಕಾದಶಿ ವ್ರತ ಮಾಡಿಸಿ, ಪಾರ್ಲೇಜಿ ಬಿಸ್ಕೆಟ್ ಕೊಡಿ" ಎನ್ನುವ ತರಾವರಿ ಕಮೆಂಟ್‌ಗಳು ವ್ಯಕ್ತವಾಗಿವೆ.

- Advertisement -
- Advertisement -

ಮೃಗಾಲಯಗಳಲ್ಲಿರುವ ಮಾಂಸಾಹಾರಿ ಪ್ರಾಣಿಗಳಿಗೆ, ಅದರಲ್ಲೂ ವಿಶೇಷವಾಗಿ ಹುಲಿಗಳಿಗೆ ಗೋಮಾಂಸ ನೀಡಬಾರದೆಂದು ಅಸ್ಸಾಂನ ಬಿಜೆಪಿ ನಾಯಕ ಸತ್ಯರಂಜನ್ ಬೋರಾ ಪ್ರತಿಭಟಿಸುತ್ತಿದ್ದಾರೆ.

ಸೋಮವಾರ, ಗುವಾಹಟಿ ಮೃಗಾಲಯದ ಮುಖ್ಯ ದ್ವಾರದಲ್ಲಿ, ಹುಲಿಗಳಿಗೆ ಗೋಮಾಂಸವನ್ನು ಸಾಗಿಸುವ ವಾಹನಗಳನ್ನು ಸತ್ಯರಂಜನ್ ಬೋರಾ ನೇತೃತ್ವದ ಪ್ರತಿಭಟನಾಕಾರರ ಸಣ್ಣ ಗುಂಪೊಂದು ಗೋಮಾಂಸ ವಿರೋಧಿ ಕಾರ್ಯಕರ್ತರು ಎಂದು ಹೇಳಿಕೊಂಡು ತಡೆದಿದ್ದರು. ಆದರೆ, ಮೃಗಾಲಯದ ಅಧಿಕಾರಿಗಳು ಪೊಲೀಸರ ಸಹಾಯದಿಂದ ಅವರನ್ನು ಚದುರಿಸುವಲ್ಲಿ ಯಶಸ್ವಿಯಾದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಗೋಹತ್ಯೆಯನ್ನು ನಿಷೇಧಿಸುವಂತೆ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದ್ದಾರೆ.

ಮೃಗಾಲಯದ ಹುಲಿಗಳಿಗೆ ಗೋಮಾಂಸ ನೀಡಬಾರದು: ಅಸ್ಸಾಂ ಬಿಜೆಪಿಗರ ಪ್ರತಿಭಟನೆ
PC: Guwahati Plus

ಇದನ್ನೂ ಓದಿ: ಅದು ಗೋಮಾಂಸವಲ್ಲ ಎಂದು ಬೇಡಿಕೊಂಡೆ, ಆದರೂ ಹೊಡೆದರು: ಲುಕ್ಮನ್ ಖಾನ್

“ಹಿಂದೂ ಸಮಾಜದಲ್ಲಿ ನಾವು ಹಸುವಿನ ರಕ್ಷಣೆಗೆ ಪ್ರಾಮುಖ್ಯತೆ ನೀಡುತ್ತೇವೆ. ಆದರೆ ಮೃಗಾಲಯದಲ್ಲಿನ ಮಾಂಸಾಹಾರಿ ಪ್ರಾಣಿಗಳಿಗೆ ಪ್ರಧಾನ ಆಹಾರ ಗೋಮಾಂಸವಾಗಿದ್ದು ಸರ್ಕಾರವೇ ಪೂರೈಸುತ್ತಿದೆ. ನಮ್ಮ ಆಕ್ಷೇಪವೆಂದರೆ, ಗೋಮಾಂಸವನ್ನೇ ಏಕೆ ನೀಡಬೇಕು? ಬೇರೆ ಮಾಂಸ ಏಕಿಲ್ಲ?” ಎಂದು ಸತ್ಯರಂಜನ್ ಬೋರಾ ಸುದ್ದಿಗಾರರನ್ನು ಪ್ರಶ್ನಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: Fact Check: ಭಾರತದ ಮ್ಯಾಗಿ ನೂಡಲ್ಸ್ ನಲ್ಲಿ ಗೋಮಾಂಸವಿದೆಯೆ?

ಇದಕ್ಕೆ ಪರಿಹಾರ ನೀಡಿದ ಬಿಜೆಪಿ ಕಾರ್ಯಕರ್ತರು, “ಮೃಗಾಲಯದಲ್ಲಿರುವ ಸಾಂಬಾರ್ ಜಿಂಕೆಗಳನ್ನು ಮಾಂಸಾಹಾರಿ ಪ್ರಾಣಿಗಳಿಗೆ ಆಹಾರಕ್ಕಾಗಿ ಬಳಸಿದರೆ ಮೃಗಾಲಯವು ಸ್ವಯಂಪೂರ್ಣತೆಯನ್ನು ಸಾಧಿಸಬಹುದು” ಎಂದು ಹೇಳಿದರು.

“ಮಾಂಸವನ್ನು ಸಾಗಿಸುವ ವಾಹನಗಳನ್ನು ದುಷ್ಕರ್ಮಿಗಳು ತಡೆದಿದ್ದರು. ಅವರನ್ನು ಚದುರಿಸಲು ನಾವು ಪೊಲೀಸರನ್ನು ಕರೆಸಿದ್ದೇವೆ. ಮಾಂಸಾಹಾರಿ ಪ್ರಾಣಿಗಳಿಗೆ ಆಹಾರವನ್ನು ಕೇಂದ್ರ ಮೃಗಾಲಯ ಪ್ರಾಧಿಕಾರವು ಶಿಫಾರಸು ಮಾಡಿದೆ. ಕಾನೂನಿನ ಪ್ರಕಾರ ನಾವು ಮೃಗಾಲಯದ ಪ್ರಾಣಿಗಳ ಮಾಂಸವನ್ನು ಮಾಂಸಾಹಾರಿ ಪ್ರಾಣಿಗಳಿಗೆ ನೀಡಲು ಸಾಧ್ಯವಿಲ್ಲ. ಅಲ್ಲದೆ, ಸಾಂಬಾರ್ ಜಿಂಕೆ ಕಾಡು ಪ್ರಾಣಿಯಾಗಿದ್ದು, ನಾವು ಕಾಡು ಪ್ರಾಣಿಗಳನ್ನು ಕೊಲ್ಲಲು ಸಾಧ್ಯವಿಲ್ಲ” ಎಂದು ಮೃಗಾಲಯದ ವ್ಯಾಪ್ತಿಗೆ ಒಳಪಡುವ ವಿಭಾಗೀಯ ಅರಣ್ಯ ಅಧಿಕಾರಿ ತೇಜಸ್ ಮಾರಿಸ್ವಾಮಿ ಹೇಳಿದರು.

ಇದನ್ನೂ ಓದಿ: ಮತ್ತೆ ಶುರುವಾಯಿತು ಗೋಹತ್ಯೆ ನಿಷೇಧ ಕಾನೂನು ಚರ್ಚೆ: ಗೋಹತ್ಯೆ ಅಪರಾಧವೆಂದ ಸಚಿವ ಸುಧಾಕರ್

ಸಾಂಬಾರ್ ಜಿಂಕೆಗಳನ್ನು ಇಂಟರ್‌ನ್ಯಾಷನಲ್ ಯೂನಿಯನ್ ಫಾರ್ ಕನ್ಸರ್ವೇಶನ್ ಆಫ್ ನೇಚರ್ (ಐಯುಸಿಎನ್) ಪಟ್ಟಿಗೆ ಸೇರಿಸಿದ್ದು, 1972 ರ ವನ್ಯಜೀವಿ (ಸಂರಕ್ಷಣೆ) ಕಾಯ್ದೆಯ ಅನುಸೂಚಿ -3ರ ಅಡಿಯಲ್ಲಿ ಅವುಗಳನ್ನು ರಕ್ಷಿಸಲಾಗಿದೆ.

ಇದರ ಕುರಿತು ಅಸ್ಸಾಂ ಅರಣ್ಯ ಸಚಿವ ಪರಿಮಲ್ ಸುಕ್ಲಾಬೈದ್ಯ ಮಾತನಾಡಿ, “ಪ್ರಾಣಿಗಳಿಗೆ ಗೋಮಾಂಸವನ್ನು ನೀಡಲಾಗುತ್ತಿದೆ. ಏಕೆಂದರೆ ಅದು ಅವುಗಳ ಪೋಷಣೆಗೆ ಅಗತ್ಯವಾಗಿದೆ. ಕೆಲವು ರಾಜ್ಯಗಳು ಎಮ್ಮೆ ಮಾಂಸವನ್ನು ಮಾಂಸಾಹಾರಿ ಪ್ರಾಣಿಗಳ ಆಹಾರಕ್ಕಾಗಿ ಆರಿಸಿಕೊಂಡವು. ಆದರೆ ಅಸ್ಸಾಂನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಮ್ಮೆಗಳು ಇಲ್ಲದಿರುವುದರಿಂದ, ಕೇಂದ್ರದ ಮಾರ್ಗಸೂಚಿಯ ಪ್ರಕಾರ ಗೋಮಾಂಸವನ್ನು ನೀಡಲಾಗುತ್ತಿದೆ” ಎಂದು ಹೇಳಿದರು.

ಬಿಜೆಪಿ ಕಾರ್ಯಕರ್ತರ ಈ ವರ್ತನೆಯು ಸಾಮಾಜಿಕ ಮಾಧ್ಯಮಗಳಲ್ಲಿ ಅಪಹಾಸ್ಯಕ್ಕೊಳಗಾಗಿದ್ದು, ಫೇಸ್‌ಬುಕ್ ಬಳಕೆದಾರರೊಬ್ಬರು, “ಹೌದು, ಇನ್ನುಮುಂದೆ ಆಡಳಿತವು ಮೃಗಾಲಯದಲ್ಲಿನ ಪ್ರಾಣಿಗಳಿಗೆ ಇಡ್ಲಿ-ಸಾಂಬಾರ್-ಮಸಾಲೆವಡೆ ನೀಡಲಿ” ಎಂದು ಬರೆದುಕೊಂಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಈ ಬಿಜೆಪಿಗರ ಈ ಹೇಳಿಕೆಗೆ ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದು, “ಇನ್ನು ಮುಂದೆ ಸಾತ್ವಿಕ ಹುಲಿಗಳಿಗೆ ಹಸುವಿನ ಸಗಣಿ ಮತ್ತು ಗೋಮೂತ್ರ ನೀಡಿ, ಹುಲಿಗಳಿಗೆ ಏಕಾದಶಿ ವ್ರತ ಮಾಡಿಸಿ, ಪಾರ್ಲೇಜಿ ಬಿಸ್ಕೆಟ್ ಕೊಡಿ” ಎನ್ನುವ ತರಾವರಿ ಕಮೆಂಟ್‌ಗಳನ್ನು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.


ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...