Homeಮುಖಪುಟಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ಇನ್ನು ಮುಂದೆ ಸಾತ್ವಿಕ ಹುಲಿಗಳಿಗೆ ಹಸುವಿನ ಸಗಣಿ ಮತ್ತು ಗೋಮೂತ್ರ ನೀಡಿ, ಹುಲಿಗಳಿಗೆ ಏಕಾದಶಿ ವ್ರತ ಮಾಡಿಸಿ, ಪಾರ್ಲೇಜಿ ಬಿಸ್ಕೆಟ್ ಕೊಡಿ" ಎನ್ನುವ ತರಾವರಿ ಕಮೆಂಟ್‌ಗಳು ವ್ಯಕ್ತವಾಗಿವೆ.

- Advertisement -
- Advertisement -

ಮೃಗಾಲಯಗಳಲ್ಲಿರುವ ಮಾಂಸಾಹಾರಿ ಪ್ರಾಣಿಗಳಿಗೆ, ಅದರಲ್ಲೂ ವಿಶೇಷವಾಗಿ ಹುಲಿಗಳಿಗೆ ಗೋಮಾಂಸ ನೀಡಬಾರದೆಂದು ಅಸ್ಸಾಂನ ಬಿಜೆಪಿ ನಾಯಕ ಸತ್ಯರಂಜನ್ ಬೋರಾ ಪ್ರತಿಭಟಿಸುತ್ತಿದ್ದಾರೆ.

ಸೋಮವಾರ, ಗುವಾಹಟಿ ಮೃಗಾಲಯದ ಮುಖ್ಯ ದ್ವಾರದಲ್ಲಿ, ಹುಲಿಗಳಿಗೆ ಗೋಮಾಂಸವನ್ನು ಸಾಗಿಸುವ ವಾಹನಗಳನ್ನು ಸತ್ಯರಂಜನ್ ಬೋರಾ ನೇತೃತ್ವದ ಪ್ರತಿಭಟನಾಕಾರರ ಸಣ್ಣ ಗುಂಪೊಂದು ಗೋಮಾಂಸ ವಿರೋಧಿ ಕಾರ್ಯಕರ್ತರು ಎಂದು ಹೇಳಿಕೊಂಡು ತಡೆದಿದ್ದರು. ಆದರೆ, ಮೃಗಾಲಯದ ಅಧಿಕಾರಿಗಳು ಪೊಲೀಸರ ಸಹಾಯದಿಂದ ಅವರನ್ನು ಚದುರಿಸುವಲ್ಲಿ ಯಶಸ್ವಿಯಾದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಗೋಹತ್ಯೆಯನ್ನು ನಿಷೇಧಿಸುವಂತೆ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದ್ದಾರೆ.

ಮೃಗಾಲಯದ ಹುಲಿಗಳಿಗೆ ಗೋಮಾಂಸ ನೀಡಬಾರದು: ಅಸ್ಸಾಂ ಬಿಜೆಪಿಗರ ಪ್ರತಿಭಟನೆ
PC: Guwahati Plus

ಇದನ್ನೂ ಓದಿ: ಅದು ಗೋಮಾಂಸವಲ್ಲ ಎಂದು ಬೇಡಿಕೊಂಡೆ, ಆದರೂ ಹೊಡೆದರು: ಲುಕ್ಮನ್ ಖಾನ್

“ಹಿಂದೂ ಸಮಾಜದಲ್ಲಿ ನಾವು ಹಸುವಿನ ರಕ್ಷಣೆಗೆ ಪ್ರಾಮುಖ್ಯತೆ ನೀಡುತ್ತೇವೆ. ಆದರೆ ಮೃಗಾಲಯದಲ್ಲಿನ ಮಾಂಸಾಹಾರಿ ಪ್ರಾಣಿಗಳಿಗೆ ಪ್ರಧಾನ ಆಹಾರ ಗೋಮಾಂಸವಾಗಿದ್ದು ಸರ್ಕಾರವೇ ಪೂರೈಸುತ್ತಿದೆ. ನಮ್ಮ ಆಕ್ಷೇಪವೆಂದರೆ, ಗೋಮಾಂಸವನ್ನೇ ಏಕೆ ನೀಡಬೇಕು? ಬೇರೆ ಮಾಂಸ ಏಕಿಲ್ಲ?” ಎಂದು ಸತ್ಯರಂಜನ್ ಬೋರಾ ಸುದ್ದಿಗಾರರನ್ನು ಪ್ರಶ್ನಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: Fact Check: ಭಾರತದ ಮ್ಯಾಗಿ ನೂಡಲ್ಸ್ ನಲ್ಲಿ ಗೋಮಾಂಸವಿದೆಯೆ?

ಇದಕ್ಕೆ ಪರಿಹಾರ ನೀಡಿದ ಬಿಜೆಪಿ ಕಾರ್ಯಕರ್ತರು, “ಮೃಗಾಲಯದಲ್ಲಿರುವ ಸಾಂಬಾರ್ ಜಿಂಕೆಗಳನ್ನು ಮಾಂಸಾಹಾರಿ ಪ್ರಾಣಿಗಳಿಗೆ ಆಹಾರಕ್ಕಾಗಿ ಬಳಸಿದರೆ ಮೃಗಾಲಯವು ಸ್ವಯಂಪೂರ್ಣತೆಯನ್ನು ಸಾಧಿಸಬಹುದು” ಎಂದು ಹೇಳಿದರು.

“ಮಾಂಸವನ್ನು ಸಾಗಿಸುವ ವಾಹನಗಳನ್ನು ದುಷ್ಕರ್ಮಿಗಳು ತಡೆದಿದ್ದರು. ಅವರನ್ನು ಚದುರಿಸಲು ನಾವು ಪೊಲೀಸರನ್ನು ಕರೆಸಿದ್ದೇವೆ. ಮಾಂಸಾಹಾರಿ ಪ್ರಾಣಿಗಳಿಗೆ ಆಹಾರವನ್ನು ಕೇಂದ್ರ ಮೃಗಾಲಯ ಪ್ರಾಧಿಕಾರವು ಶಿಫಾರಸು ಮಾಡಿದೆ. ಕಾನೂನಿನ ಪ್ರಕಾರ ನಾವು ಮೃಗಾಲಯದ ಪ್ರಾಣಿಗಳ ಮಾಂಸವನ್ನು ಮಾಂಸಾಹಾರಿ ಪ್ರಾಣಿಗಳಿಗೆ ನೀಡಲು ಸಾಧ್ಯವಿಲ್ಲ. ಅಲ್ಲದೆ, ಸಾಂಬಾರ್ ಜಿಂಕೆ ಕಾಡು ಪ್ರಾಣಿಯಾಗಿದ್ದು, ನಾವು ಕಾಡು ಪ್ರಾಣಿಗಳನ್ನು ಕೊಲ್ಲಲು ಸಾಧ್ಯವಿಲ್ಲ” ಎಂದು ಮೃಗಾಲಯದ ವ್ಯಾಪ್ತಿಗೆ ಒಳಪಡುವ ವಿಭಾಗೀಯ ಅರಣ್ಯ ಅಧಿಕಾರಿ ತೇಜಸ್ ಮಾರಿಸ್ವಾಮಿ ಹೇಳಿದರು.

ಇದನ್ನೂ ಓದಿ: ಮತ್ತೆ ಶುರುವಾಯಿತು ಗೋಹತ್ಯೆ ನಿಷೇಧ ಕಾನೂನು ಚರ್ಚೆ: ಗೋಹತ್ಯೆ ಅಪರಾಧವೆಂದ ಸಚಿವ ಸುಧಾಕರ್

ಸಾಂಬಾರ್ ಜಿಂಕೆಗಳನ್ನು ಇಂಟರ್‌ನ್ಯಾಷನಲ್ ಯೂನಿಯನ್ ಫಾರ್ ಕನ್ಸರ್ವೇಶನ್ ಆಫ್ ನೇಚರ್ (ಐಯುಸಿಎನ್) ಪಟ್ಟಿಗೆ ಸೇರಿಸಿದ್ದು, 1972 ರ ವನ್ಯಜೀವಿ (ಸಂರಕ್ಷಣೆ) ಕಾಯ್ದೆಯ ಅನುಸೂಚಿ -3ರ ಅಡಿಯಲ್ಲಿ ಅವುಗಳನ್ನು ರಕ್ಷಿಸಲಾಗಿದೆ.

ಇದರ ಕುರಿತು ಅಸ್ಸಾಂ ಅರಣ್ಯ ಸಚಿವ ಪರಿಮಲ್ ಸುಕ್ಲಾಬೈದ್ಯ ಮಾತನಾಡಿ, “ಪ್ರಾಣಿಗಳಿಗೆ ಗೋಮಾಂಸವನ್ನು ನೀಡಲಾಗುತ್ತಿದೆ. ಏಕೆಂದರೆ ಅದು ಅವುಗಳ ಪೋಷಣೆಗೆ ಅಗತ್ಯವಾಗಿದೆ. ಕೆಲವು ರಾಜ್ಯಗಳು ಎಮ್ಮೆ ಮಾಂಸವನ್ನು ಮಾಂಸಾಹಾರಿ ಪ್ರಾಣಿಗಳ ಆಹಾರಕ್ಕಾಗಿ ಆರಿಸಿಕೊಂಡವು. ಆದರೆ ಅಸ್ಸಾಂನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಮ್ಮೆಗಳು ಇಲ್ಲದಿರುವುದರಿಂದ, ಕೇಂದ್ರದ ಮಾರ್ಗಸೂಚಿಯ ಪ್ರಕಾರ ಗೋಮಾಂಸವನ್ನು ನೀಡಲಾಗುತ್ತಿದೆ” ಎಂದು ಹೇಳಿದರು.

ಬಿಜೆಪಿ ಕಾರ್ಯಕರ್ತರ ಈ ವರ್ತನೆಯು ಸಾಮಾಜಿಕ ಮಾಧ್ಯಮಗಳಲ್ಲಿ ಅಪಹಾಸ್ಯಕ್ಕೊಳಗಾಗಿದ್ದು, ಫೇಸ್‌ಬುಕ್ ಬಳಕೆದಾರರೊಬ್ಬರು, “ಹೌದು, ಇನ್ನುಮುಂದೆ ಆಡಳಿತವು ಮೃಗಾಲಯದಲ್ಲಿನ ಪ್ರಾಣಿಗಳಿಗೆ ಇಡ್ಲಿ-ಸಾಂಬಾರ್-ಮಸಾಲೆವಡೆ ನೀಡಲಿ” ಎಂದು ಬರೆದುಕೊಂಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಈ ಬಿಜೆಪಿಗರ ಈ ಹೇಳಿಕೆಗೆ ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದು, “ಇನ್ನು ಮುಂದೆ ಸಾತ್ವಿಕ ಹುಲಿಗಳಿಗೆ ಹಸುವಿನ ಸಗಣಿ ಮತ್ತು ಗೋಮೂತ್ರ ನೀಡಿ, ಹುಲಿಗಳಿಗೆ ಏಕಾದಶಿ ವ್ರತ ಮಾಡಿಸಿ, ಪಾರ್ಲೇಜಿ ಬಿಸ್ಕೆಟ್ ಕೊಡಿ” ಎನ್ನುವ ತರಾವರಿ ಕಮೆಂಟ್‌ಗಳನ್ನು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.


ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...