Homeಮುಖಪುಟಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ಇನ್ನು ಮುಂದೆ ಸಾತ್ವಿಕ ಹುಲಿಗಳಿಗೆ ಹಸುವಿನ ಸಗಣಿ ಮತ್ತು ಗೋಮೂತ್ರ ನೀಡಿ, ಹುಲಿಗಳಿಗೆ ಏಕಾದಶಿ ವ್ರತ ಮಾಡಿಸಿ, ಪಾರ್ಲೇಜಿ ಬಿಸ್ಕೆಟ್ ಕೊಡಿ" ಎನ್ನುವ ತರಾವರಿ ಕಮೆಂಟ್‌ಗಳು ವ್ಯಕ್ತವಾಗಿವೆ.

- Advertisement -
- Advertisement -

ಮೃಗಾಲಯಗಳಲ್ಲಿರುವ ಮಾಂಸಾಹಾರಿ ಪ್ರಾಣಿಗಳಿಗೆ, ಅದರಲ್ಲೂ ವಿಶೇಷವಾಗಿ ಹುಲಿಗಳಿಗೆ ಗೋಮಾಂಸ ನೀಡಬಾರದೆಂದು ಅಸ್ಸಾಂನ ಬಿಜೆಪಿ ನಾಯಕ ಸತ್ಯರಂಜನ್ ಬೋರಾ ಪ್ರತಿಭಟಿಸುತ್ತಿದ್ದಾರೆ.

ಸೋಮವಾರ, ಗುವಾಹಟಿ ಮೃಗಾಲಯದ ಮುಖ್ಯ ದ್ವಾರದಲ್ಲಿ, ಹುಲಿಗಳಿಗೆ ಗೋಮಾಂಸವನ್ನು ಸಾಗಿಸುವ ವಾಹನಗಳನ್ನು ಸತ್ಯರಂಜನ್ ಬೋರಾ ನೇತೃತ್ವದ ಪ್ರತಿಭಟನಾಕಾರರ ಸಣ್ಣ ಗುಂಪೊಂದು ಗೋಮಾಂಸ ವಿರೋಧಿ ಕಾರ್ಯಕರ್ತರು ಎಂದು ಹೇಳಿಕೊಂಡು ತಡೆದಿದ್ದರು. ಆದರೆ, ಮೃಗಾಲಯದ ಅಧಿಕಾರಿಗಳು ಪೊಲೀಸರ ಸಹಾಯದಿಂದ ಅವರನ್ನು ಚದುರಿಸುವಲ್ಲಿ ಯಶಸ್ವಿಯಾದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಗೋಹತ್ಯೆಯನ್ನು ನಿಷೇಧಿಸುವಂತೆ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದ್ದಾರೆ.

ಮೃಗಾಲಯದ ಹುಲಿಗಳಿಗೆ ಗೋಮಾಂಸ ನೀಡಬಾರದು: ಅಸ್ಸಾಂ ಬಿಜೆಪಿಗರ ಪ್ರತಿಭಟನೆ
PC: Guwahati Plus

ಇದನ್ನೂ ಓದಿ: ಅದು ಗೋಮಾಂಸವಲ್ಲ ಎಂದು ಬೇಡಿಕೊಂಡೆ, ಆದರೂ ಹೊಡೆದರು: ಲುಕ್ಮನ್ ಖಾನ್

“ಹಿಂದೂ ಸಮಾಜದಲ್ಲಿ ನಾವು ಹಸುವಿನ ರಕ್ಷಣೆಗೆ ಪ್ರಾಮುಖ್ಯತೆ ನೀಡುತ್ತೇವೆ. ಆದರೆ ಮೃಗಾಲಯದಲ್ಲಿನ ಮಾಂಸಾಹಾರಿ ಪ್ರಾಣಿಗಳಿಗೆ ಪ್ರಧಾನ ಆಹಾರ ಗೋಮಾಂಸವಾಗಿದ್ದು ಸರ್ಕಾರವೇ ಪೂರೈಸುತ್ತಿದೆ. ನಮ್ಮ ಆಕ್ಷೇಪವೆಂದರೆ, ಗೋಮಾಂಸವನ್ನೇ ಏಕೆ ನೀಡಬೇಕು? ಬೇರೆ ಮಾಂಸ ಏಕಿಲ್ಲ?” ಎಂದು ಸತ್ಯರಂಜನ್ ಬೋರಾ ಸುದ್ದಿಗಾರರನ್ನು ಪ್ರಶ್ನಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: Fact Check: ಭಾರತದ ಮ್ಯಾಗಿ ನೂಡಲ್ಸ್ ನಲ್ಲಿ ಗೋಮಾಂಸವಿದೆಯೆ?

ಇದಕ್ಕೆ ಪರಿಹಾರ ನೀಡಿದ ಬಿಜೆಪಿ ಕಾರ್ಯಕರ್ತರು, “ಮೃಗಾಲಯದಲ್ಲಿರುವ ಸಾಂಬಾರ್ ಜಿಂಕೆಗಳನ್ನು ಮಾಂಸಾಹಾರಿ ಪ್ರಾಣಿಗಳಿಗೆ ಆಹಾರಕ್ಕಾಗಿ ಬಳಸಿದರೆ ಮೃಗಾಲಯವು ಸ್ವಯಂಪೂರ್ಣತೆಯನ್ನು ಸಾಧಿಸಬಹುದು” ಎಂದು ಹೇಳಿದರು.

“ಮಾಂಸವನ್ನು ಸಾಗಿಸುವ ವಾಹನಗಳನ್ನು ದುಷ್ಕರ್ಮಿಗಳು ತಡೆದಿದ್ದರು. ಅವರನ್ನು ಚದುರಿಸಲು ನಾವು ಪೊಲೀಸರನ್ನು ಕರೆಸಿದ್ದೇವೆ. ಮಾಂಸಾಹಾರಿ ಪ್ರಾಣಿಗಳಿಗೆ ಆಹಾರವನ್ನು ಕೇಂದ್ರ ಮೃಗಾಲಯ ಪ್ರಾಧಿಕಾರವು ಶಿಫಾರಸು ಮಾಡಿದೆ. ಕಾನೂನಿನ ಪ್ರಕಾರ ನಾವು ಮೃಗಾಲಯದ ಪ್ರಾಣಿಗಳ ಮಾಂಸವನ್ನು ಮಾಂಸಾಹಾರಿ ಪ್ರಾಣಿಗಳಿಗೆ ನೀಡಲು ಸಾಧ್ಯವಿಲ್ಲ. ಅಲ್ಲದೆ, ಸಾಂಬಾರ್ ಜಿಂಕೆ ಕಾಡು ಪ್ರಾಣಿಯಾಗಿದ್ದು, ನಾವು ಕಾಡು ಪ್ರಾಣಿಗಳನ್ನು ಕೊಲ್ಲಲು ಸಾಧ್ಯವಿಲ್ಲ” ಎಂದು ಮೃಗಾಲಯದ ವ್ಯಾಪ್ತಿಗೆ ಒಳಪಡುವ ವಿಭಾಗೀಯ ಅರಣ್ಯ ಅಧಿಕಾರಿ ತೇಜಸ್ ಮಾರಿಸ್ವಾಮಿ ಹೇಳಿದರು.

ಇದನ್ನೂ ಓದಿ: ಮತ್ತೆ ಶುರುವಾಯಿತು ಗೋಹತ್ಯೆ ನಿಷೇಧ ಕಾನೂನು ಚರ್ಚೆ: ಗೋಹತ್ಯೆ ಅಪರಾಧವೆಂದ ಸಚಿವ ಸುಧಾಕರ್

ಸಾಂಬಾರ್ ಜಿಂಕೆಗಳನ್ನು ಇಂಟರ್‌ನ್ಯಾಷನಲ್ ಯೂನಿಯನ್ ಫಾರ್ ಕನ್ಸರ್ವೇಶನ್ ಆಫ್ ನೇಚರ್ (ಐಯುಸಿಎನ್) ಪಟ್ಟಿಗೆ ಸೇರಿಸಿದ್ದು, 1972 ರ ವನ್ಯಜೀವಿ (ಸಂರಕ್ಷಣೆ) ಕಾಯ್ದೆಯ ಅನುಸೂಚಿ -3ರ ಅಡಿಯಲ್ಲಿ ಅವುಗಳನ್ನು ರಕ್ಷಿಸಲಾಗಿದೆ.

ಇದರ ಕುರಿತು ಅಸ್ಸಾಂ ಅರಣ್ಯ ಸಚಿವ ಪರಿಮಲ್ ಸುಕ್ಲಾಬೈದ್ಯ ಮಾತನಾಡಿ, “ಪ್ರಾಣಿಗಳಿಗೆ ಗೋಮಾಂಸವನ್ನು ನೀಡಲಾಗುತ್ತಿದೆ. ಏಕೆಂದರೆ ಅದು ಅವುಗಳ ಪೋಷಣೆಗೆ ಅಗತ್ಯವಾಗಿದೆ. ಕೆಲವು ರಾಜ್ಯಗಳು ಎಮ್ಮೆ ಮಾಂಸವನ್ನು ಮಾಂಸಾಹಾರಿ ಪ್ರಾಣಿಗಳ ಆಹಾರಕ್ಕಾಗಿ ಆರಿಸಿಕೊಂಡವು. ಆದರೆ ಅಸ್ಸಾಂನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಮ್ಮೆಗಳು ಇಲ್ಲದಿರುವುದರಿಂದ, ಕೇಂದ್ರದ ಮಾರ್ಗಸೂಚಿಯ ಪ್ರಕಾರ ಗೋಮಾಂಸವನ್ನು ನೀಡಲಾಗುತ್ತಿದೆ” ಎಂದು ಹೇಳಿದರು.

ಬಿಜೆಪಿ ಕಾರ್ಯಕರ್ತರ ಈ ವರ್ತನೆಯು ಸಾಮಾಜಿಕ ಮಾಧ್ಯಮಗಳಲ್ಲಿ ಅಪಹಾಸ್ಯಕ್ಕೊಳಗಾಗಿದ್ದು, ಫೇಸ್‌ಬುಕ್ ಬಳಕೆದಾರರೊಬ್ಬರು, “ಹೌದು, ಇನ್ನುಮುಂದೆ ಆಡಳಿತವು ಮೃಗಾಲಯದಲ್ಲಿನ ಪ್ರಾಣಿಗಳಿಗೆ ಇಡ್ಲಿ-ಸಾಂಬಾರ್-ಮಸಾಲೆವಡೆ ನೀಡಲಿ” ಎಂದು ಬರೆದುಕೊಂಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಈ ಬಿಜೆಪಿಗರ ಈ ಹೇಳಿಕೆಗೆ ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದು, “ಇನ್ನು ಮುಂದೆ ಸಾತ್ವಿಕ ಹುಲಿಗಳಿಗೆ ಹಸುವಿನ ಸಗಣಿ ಮತ್ತು ಗೋಮೂತ್ರ ನೀಡಿ, ಹುಲಿಗಳಿಗೆ ಏಕಾದಶಿ ವ್ರತ ಮಾಡಿಸಿ, ಪಾರ್ಲೇಜಿ ಬಿಸ್ಕೆಟ್ ಕೊಡಿ” ಎನ್ನುವ ತರಾವರಿ ಕಮೆಂಟ್‌ಗಳನ್ನು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.


ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...