Homeಮುಖಪುಟಹತ್ರಾಸ್ ಅತ್ಯಾಚಾರ ಸುಳ್ಳು, ಇದು ಕಾಂಗ್ರೆಸ್ ಪಿತೂರಿ: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ!

ಹತ್ರಾಸ್ ಅತ್ಯಾಚಾರ ಸುಳ್ಳು, ಇದು ಕಾಂಗ್ರೆಸ್ ಪಿತೂರಿ: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ!

ಸಂಸದರ ಹೇಳಿಕೆಗಳು ಹತ್ರಾಸ್ ಘಟನೆಯ ಬಗ್ಗೆ ಬಿಜೆಪಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಬಿಜೆಪಿಯ ಹಿರಿಯ ಮುಖಂಡರು ತಾವು ಮತ ಪಡೆದ ಪ್ರದೇಶಗಳ ಸಮಸ್ಯೆಗಳ ಬಗ್ಗೆ ಮಾತ್ರ ಮಾತನಾಡುತ್ತಾರೆ. - ಕಾಂಗ್ರೆಸ್

- Advertisement -
- Advertisement -

ಛತ್ತೀಸ್‌ಗಡದ ಬಿಜೆಪಿ ಸಂಸದರೊಬ್ಬರು ಹತ್ರಾಸ್ ಅತ್ಯಾಚಾರದ ಘಟನೆಯನ್ನು “ಸುಳ್ಳು” ಎಂದು ಕರೆದಿದ್ದು, ಇದನ್ನು ಕಾಂಗ್ರೆಸ್‌ನವರ ಪಿತೂರಿ ಎಂಬ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಧನೋರಾದಲ್ಲಿ ಬುಡಕಟ್ಟು ಮಹಿಳೆಯ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಆತ್ಮಹತ್ಯೆಯನ್ನು ಖಂಡಿಸಿ ಕಳೆದ ವಾರ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಖಾಂಕೆರ್ ಕ್ಷೇತ್ರವನ್ನು ಪ್ರತಿನಿಧಿಸುವ ಮೋಹನ್ ಮಾಂಡವಿ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂ ಓದಿ: ನಿಮ್ಮ ಸ್ವಂತ ಮಗಳ ಅಂತ್ಯಕ್ರಿಯೆ ಹೀಗೆ ಮಾಡುತ್ತೀರಾ..? ಹತ್ರಾಸ್‌ ಡಿಸಿಗೆ ಲಕ್ನೋ ಪೀಠ ಪ್ರಶ್ನೆ

“ಈ ಪ್ರಕರಣಕ್ಕೆ ಸಂಬಂಧಿಸಿದಂತೆ (ಧನೋರಾ) ಸಿಬಿಐ ತನಿಖೆ ನಡೆದರೆ, ಪ್ರತಿ ಹಳ್ಳಿಯಲ್ಲಿಯೂ (ಛತ್ತೀಸ್‌ಗಡದ ಬಸ್ತಾರ್) ಇಂತಹ 4-5 ಪ್ರಕರಣಗಳು ಪತ್ತೆಯಾಗುತ್ತವೆ. ಹತ್ರಾಸ್‌ನಲ್ಲಿ ಕಟ್ಟುಕಥೆಯನ್ನು ರೂಪಿಸಲಾಗಿದೆ. ಅಲ್ಲಿ ಯಾವುದೇ ದೌರ್ಜನ್ಯ ನಡೆದಿಲ್ಲ. ಆದರೂ ಕಾಂಗ್ರೆಸ್‌ನ ನಾಯಕರು ಅಲ್ಲಿಗೆ ಭೇಟಿ ನಿಡುತ್ತಿದ್ದಾರೆ” ಎಂದು ಮೋಹನ್ ಮಾಂಡೋವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

“ಕಾಂಗ್ರೆಸ್ ನಾಯಕರು ಇಲ್ಲಿಗೆ ಏಕೆ ಬರುವುದಿಲ್ಲ. ಬುಡಕಟ್ಟು ಜನಾಂಗದ ಹಿತೈಷಿಗಳು ಎಂದು ಕರೆಯಲ್ಪಡುವವರು ಈಗ ಎಲ್ಲಿಗೆ ಹೋಗಿದ್ದಾರೆ. ಇಲ್ಲಿನ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಿಲ್ಲವಾದ್ದರಿಂದ ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಈ ಕೂಡಲೇ ಮುಖ್ಯಮಂತ್ರಿ ಸ್ಥಾನ ತ್ಯಜಿಸಬೇಕು” ಎಂದು ಹೇಳಿದರು.

ಇದನ್ನೂ ಓದಿ: ಪ್ರಕರಣವನ್ನು ದೆಹಲಿ ಅಥವಾ ಮುಂಬೈಗೆ ವರ್ಗಾಹಿಸಲು ಹತ್ರಾಸ್ ಸಂತ್ರಸ್ತ ಕುಟುಂಬದ ಒತ್ತಾಯ

ನಂತರ ಸ್ಥಳೀಯ ಪತ್ರಕರ್ತರೊಂದಿಗೆ ಮಾತನಾಡಿದ ಸಂಸದರು, “ಹತ್ರಾಸ್ ಘಟನೆಯನ್ನು ಸುಳ್ಳು ಎಂದು ಪತ್ರಿಕೆಗಳೇ ವರದಿ ಮಾಡಿವೆ. ಆದರೆ ನಿಜವಾದ ಘಟನೆ ಧನೋರಾದಲ್ಲಿ ನಡೆದಿದೆ. ಹಾಗಾಗಿಯೇ ನಾವು ಇಲ್ಲಿ ಪ್ರತಿಭಟಿಸುತ್ತಿದ್ದೇವೆ. ಆದರೆ, ರೂಪಿತವಾದ ಪ್ರಕರಣವೊಂದನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟಿಸುತ್ತಿದೆ. ಹತ್ರಾಸ್ ಇಲ್ಲಿಂದ ಕೆಲವು ಮೈಲಿಗಳ ದೂರವಿದೆ ಅಷ್ಟೆ. ಅಲ್ಲಿ ಯಾರೂ ನಮಗೆ ಮತ ನೀಡಿಲ್ಲ ಆದರೂ ಕಾಂಗ್ರೆಸ್ ಅಲ್ಲಿ ಧರಣಿ ನಡೆಸುತ್ತಿದೆ” ಎಂದು ಹೇಳಿದರು.

ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್, ಸಂಸದರ ಹೇಳಿಕೆಗಳು ಹತ್ರಾಸ್ ಘಟನೆಯ ಬಗ್ಗೆ ಬಿಜೆಪಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಬಿಜೆಪಿಯ ಹಿರಿಯ ಮುಖಂಡರು ತಾವು ಮತ ಪಡೆದ ಪ್ರದೇಶಗಳ ಸಮಸ್ಯೆಗಳ ಬಗ್ಗೆ ಮಾತ್ರ ಮಾತನಾಡುತ್ತಾರೆ ಎಂದು ಹೇಳಿದೆ.


ಇದನ್ನೂ ಓದಿ: ಹತ್ರಾಸ್ ದಲಿತ ಹೆಣ್ಣು ಮಗಳ ನ್ಯಾಯಕ್ಕಾಗಿ ಹೋರಾಡೋಣ- ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...