Homeಕರೋನಾ ತಲ್ಲಣಮತ್ತೇ 12 ತಬ್ಲೀಘಿಗಳನ್ನು ದೋಷಮುಕ್ತ ಗೊಳಿಸಿದ ನ್ಯಾಯಾಲಯ

ಮತ್ತೇ 12 ತಬ್ಲೀಘಿಗಳನ್ನು ದೋಷಮುಕ್ತ ಗೊಳಿಸಿದ ನ್ಯಾಯಾಲಯ

ಆಗಸ್ಟ್ 22 ರಂದು ಹಲವು ವಿದೇಶಿ ತಬ್ಲೀಘಿಗಳ ಎಫ್‌ಐಆರ್‌ಗಳನ್ನು ರದ್ದು ಪಡಿಸಿದ್ದ ಬಾಂಬೆ ಹೈಕೋರ್ಟ್ ತಬ್ಲೀಘಿ ವಿಚಾರದಲ್ಲಿ ಅಪಪ್ರಚಾರ ಮಾಡಿದ ಮಾಧ್ಯಮಗಳನ್ನು ತೀವ್ರ ತರಾಟೆಗೆ ಪಡೆದಿತ್ತು.

- Advertisement -
- Advertisement -

ಸರ್ಕಾರದ ಆದೇಶಗಳನ್ನು ಧಿಕ್ಕರಿಸಿ ಕೊರೊನಾ ಹರಡಲು ಕಾರಣರಾಗಿದ್ದಾರೆಂಬ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ 12 ವಿದೇಶಿ ತಬ್ಲೀಘಿ ಜಮಾಅತ್ ಸದಸ್ಯರನ್ನು ಬಿಡುಗಡೆ ಮಾಡಬೇಕು ಎಂದು ಬಾಂದ್ರಾದ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶಿಸಿದೆ.

12 ಇಂಡೋನೇಷ್ಯಾ ಪ್ರಜೆಗಳ ವಿರುದ್ದ ಮುಂಬೈ ಪೊಲೀಸರು ಹೊರಿಸಿರುವ ಆರೋಪಗಳಿಗೆ ಯಾವುದೇ ದಾಖಲೆಯಿಲ್ಲ ಎಂದು ನ್ಯಾಯಾಧೀಶ ಜಯದೇವ್ ವೈ ಗುಲೆ ಕಂಡುಕೊಂಡರು. ಆದ್ದರಿಂದ ತಬ್ಲಿಘಿ ಜಮಾಅತ್ ಸದಸ್ಯರನ್ನು ಬಿಡುಗಡೆ ಮಾಡಿ, ಅವರ ಪಾಸ್‌ಪೋರ್ಟ್‌ಗಳನ್ನು ಹಿಂದಿರುಗಿಸುವಂತೆ ನಿರ್ದೇಶಿಸಿದ್ದಾರೆ ಹಾಗೂ ಅವರ ವಿರುದ್ಧದ ಜಾಮೀನು ಬಾಂಡ್‌ಗಳನ್ನು ರದ್ದುಪಡಿಸಿದ್ದಾರೆ.

ಇದನ್ನೂ ಓದಿ: ’ನೀವು ಭಾರತದಲ್ಲಿ ವಾಸಿಸಲು ಯೋಗ್ಯರಲ್ಲ’ ಎಂದು ತಬ್ಲೀಘಿ ಸದಸ್ಯರಿಗೆ ಥಳಿಸಿದ ಗುಂಪು

ಇತ್ತೀಚೆಗೆ 35 ತಬ್ಲೀಘಿ ಜಮಾತ್ ಸದಸ್ಯರ ವಿರುದ್ಧದ ಎಫ್‍ಐಆರ್ ರದ್ದುಗೊಳಿಸಿದ್ದ ಬಾಂಬೆ ಹೈಕೋರ್ಟ್‌‌ನ ಔರಂಗಾಬಾದ್ ಪೀಠ ಹೊರಡಿಸಿದ್ದ ಆದೇಶವನ್ನು ಆಧಾರವಾಗಿಟ್ಟುಗೊಡು ನ್ಯಾಯಾಲಯ ಈ ತೀರ್ಪನ್ನು ನೀಡಿದೆ.

ಆರೋಪಿಗಳನ್ನು ಬಂಧಿಸಿದಾಗ ಮಾನ್ಯವಾಗುವ ವೀಸಾಗಳನ್ನು ಹೊಂದಿದ್ದರು ಮತ್ತು ವೀಸಾ ಷರತ್ತುಗಳಲ್ಲಿ ಯಾವುದೇ ಉಲ್ಲಂಘನೆ ಕಂಡುಬಂದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಅವರ ಮೇಲೆ ನಕಲಿ ಪಾಸ್‌ಪೋರ್ಟ್‌ಗಳು ಮತ್ತು ವೀಸಾಗಳೊಂದಿಗೆ ಭಾರತಕ್ಕೆ ಬಂದಿದ್ದಾರೆ ಎಂಬ ಆರೋಪ ಇತ್ತು.

ಈ ಹಿಂದೆ ಆಗಸ್ಟ್ 22 ರಂದು ಹಲವು ವಿದೇಶಿ ತಬ್ಲೀಘಿಗಳ ಎಫ್‌ಐಆರ್‌ಗಳನ್ನು ರದ್ದು ಪಡಿಸಿದ್ದ ಬಾಂಬೆ ಹೈಕೋರ್ಟ್ ತಬ್ಲೀಘಿ ವಿಚಾರದಲ್ಲಿ ಅಪಪ್ರಚಾರ ಮಾಡಿದ ಮಾಧ್ಯಮಗಳನ್ನು ತೀವ್ರ ತರಾಟೆಗೆ ಪಡೆದಿತ್ತು.

ಇದನ್ನೂ ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...