Homeಎಕಾನಮಿಈ ವರ್ಷವೂ GDP ಕುಸಿತ; ಸ್ವಾತಂತ್ರ್ಯಾನಂತರದಲ್ಲಿ ಇದು ಅತ್ಯಂತ ಕಳಪೆ ಅಭಿವೃದ್ಧಿ ದರ: IMF

ಈ ವರ್ಷವೂ GDP ಕುಸಿತ; ಸ್ವಾತಂತ್ರ್ಯಾನಂತರದಲ್ಲಿ ಇದು ಅತ್ಯಂತ ಕಳಪೆ ಅಭಿವೃದ್ಧಿ ದರ: IMF

"ಭಾರತದ ಪರಿಸ್ಥಿತಿ ಹಿಂದೆಂದಿಗಿಂತಲೂ ತುಂಬಾ ಕೆಟ್ಟದಾಗಿದೆ" ಎಂದು ದಕ್ಷಿಣ ಏಷ್ಯಾದ ವಿಶ್ವಬ್ಯಾಂಕ್ ಮುಖ್ಯ ಅರ್ಥಶಾಸ್ತ್ರಜ್ಞ ಹ್ಯಾನ್ಸ್ ಟಿಮ್ಮರ್ ಕಳೆದ ವಾರ ಕಾನ್ಫರೆನ್ಸ್ ಕರೆಯೊಂದರಲ್ಲಿ ಸುದ್ದಿಗಾರರಿಗೆ ತಿಳಿಸಿದರು.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ತೀವ್ರವಾಗಿ ತತ್ತರಿಸಿರುವ ಭಾರತದ ಆರ್ಥಿಕತೆಯು ಈ ವರ್ಷ ಶೇಕಡಾ 10.3 ರಷ್ಟು ಭಾರಿ ಪ್ರಮಾಣದಲ್ಲಿ ಸಂಕುಚಿತಗೊಳ್ಳುವ ನಿರೀಕ್ಷೆಯಿದ್ದು, ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಇದು ಅತ್ಯಂತ ಕೆಟ್ಟ ಅಭಿವೃದ್ಧಿ ದರ ಇದಾಗಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ಮಂಗಳವಾರ ತಿಳಿಸಿದೆ.

ಇದನ್ನೂ ಓದಿ: ಆರ್ಥಿಕತೆ ಮೇಲೆತ್ತಲು ಹರಸಾಹಸ: ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ನೀಡಲು ಮುಂದಾದ ಕೇಂದ್ರ ಸರ್ಕಾರ

2021ರ ಮಾರ್ಚ್ 31ಕ್ಕೆ ಅಂತ್ಯವಾಗುವ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ 10.3ರಷ್ಟು ಕುಗ್ಗಲಿದ್ದು, ಅಭಿವೃದ್ಧಿಶೀಲ ರಾಷ್ಟ್ರಗಳ ಜಿಡಿಪಿಯಲ್ಲಿ ಇದು ಅತ್ಯಂತ ದೊಡ್ಡ ಇಳಿಕೆಯಾಗಲಿದೆ ಎಂದು ನ್ಯಾಷನಲ್ ಹೆರಾಲ್ಡ್‌ ವರದಿ ಮಾಡಿದೆ.

ಭಾರತ್ ಜಿಡಿಪಿ ಶೇ 1.9ರಷ್ಟು ಅಭಿವೃದ್ಧಿಯಾಗಲಿದೆ ಎಂದು ಏಪ್ರಿಲ್‌ನಲ್ಲಿ IMF ಅಂದಾಜಿಸಿತ್ತು. ಆದರೆ ಜೂನ್‌ನಲ್ಲಿ ಇದನ್ನು ಪರಿಷ್ಕರಿಸಿ, ಜಿಡಿಪಿಯಲ್ಲಿ 4.5ರಷ್ಟು ಕುಸಿತ ಕಾಣಲಿದೆ ಎಂದು ಹೇಳಿತ್ತು. ಆದರೆ ಈಗ 2021ರಲ್ಲಿ ಶೇ 5.2ಕ್ಕೆ ಏರುತ್ತದೆ ಎಂದು ವರದಿ ಹೇಳಿದೆ. 2019 ರಲ್ಲಿ ಭಾರತದ ಬೆಳವಣಿಗೆಯ ದರ ಶೇ 4.2 ರಷ್ಟಿತ್ತು. ಕಳೆದ ವಾರ, ವಿಶ್ವ ಬ್ಯಾಂಕ್ ಭಾರತದ ಜಿಡಿಪಿ ಈ ಹಣಕಾಸು ವರ್ಷದಲ್ಲಿ ಶೇ 9.6 ರಷ್ಟು ಕುಗ್ಗುವ ನಿರೀಕ್ಷೆಯಿದೆ ಎಂದು ಹೇಳಿತ್ತು.

ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ಅಮೆರಿಕದ ಆರ್ಥಿಕತೆಯು 2020 ರಲ್ಲಿ ಶೇಕಡಾ 5.8 ರಷ್ಟು ಕುಗ್ಗುತ್ತದೆ ಮತ್ತು ಮುಂದಿನ ವರ್ಷ ಶೇಕಡಾ 3.9 ರಷ್ಟು ಏರಿಕೆಯಾಗಲಿದೆ. ಪ್ರಮುಖ ಆರ್ಥಿಕತೆ ಹೊಂದಿರುವ ದೇಶಗಳಲ್ಲಿ, 2020 ರಲ್ಲಿ ಶೇಕಡಾ 1.9 ರಷ್ಟು ಸಕಾರಾತ್ಮಕ ಬೆಳವಣಿಗೆಯನ್ನು ತೋರಿಸಿರುವ ಏಕೈಕ ದೇಶ ಚೀನಾ ಎಂದು IMF ತಿಳಿಸಿದೆ.

“ಭಾರತದ ಪರಿಸ್ಥಿತಿ ಹಿಂದೆಂದಿಗಿಂತಲೂ ತುಂಬಾ ಕೆಟ್ಟದಾಗಿದೆ” ಎಂದು ದಕ್ಷಿಣ ಏಷ್ಯಾದ ವಿಶ್ವಬ್ಯಾಂಕ್ ಮುಖ್ಯ ಅರ್ಥಶಾಸ್ತ್ರಜ್ಞ ಹ್ಯಾನ್ಸ್ ಟಿಮ್ಮರ್ ಕಳೆದ ವಾರ ಕಾನ್ಫರೆನ್ಸ್ ಕರೆಯೊಂದರಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ಅಭಿವೃದ್ಧಿಶೀಲ ರಾಷ್ಟ್ರಗಳಾದ ಇಟಲಿ ಮತ್ತು  ಸ್ಪೇನ್ ಬಳಿಕದ ಅತ್ಯಂತ ಬೃಹತ್ ಜಿಡಿಪಿ ಕುಸಿತವನ್ನು ಭಾರತ ದಾಖಲಿಸಲಿದೆ. ಬ್ರಿಕ್ಸ್‌ ಗುಂಪಿನ ರಾಷ್ಟ್ರಗಳಲ್ಲಿ ಬ್ರೆಜಿಲ್‌ನ ಜಿಡಿಪಿ ಶೇ. 5.8, ರಷ್ಯಾದ ಜಿಡಿಪಿ ಶೇ. 4.1, ದ.ಆಫ್ರಿಕಾದ ಜಿಡಿಪಿ ಶೇ. 8ರಷ್ಟು ಕುಸಿತ ಕಾಣಲಿದೆ.

ಪ್ರಸಕ್ತ ವರ್ಷದ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿಯು ಶೇ -23ಕ್ಕೆ ಕುಸಿದಿತ್ತು. ಕೇಂದ್ರ ಸರ್ಕಾರದ ಅಸಮರ್ಪಕ ನೀತಿಗಳಿಂದ ಹಿಡಿದು, ಕೊರೊನಾ ಕಾಲದಲ್ಲಿ ಸರಿಯಾದ ನಿರ್ವಹಣೆ ಮತ್ತು ಮುನ್ನೆಚ್ಚರಿಕೆಯಿಲ್ಲದಿರುವುದೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...