HomeUncategorizedಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: '800' ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ಮುತ್ತಯ್ಯ ಮುರುಳೀದರನ್ ಒಬ್ಬ ಕ್ರೀಡಾಪಟು. ಆತ ರಾಜಕಾರಣಿಯಲ್ಲ. ಅವರ ಯಾವುದೋ ಹೇಳಿಕೆಯನ್ನೇ ಕಾರಣ ಮಾಡಿಕೊಂಡು ಈ ಚಿತ್ರವನ್ನು ಮತ್ತು ಇಲ್ಲಿ ನಟಿಸುತ್ತಿರುವವರನ್ನು ಟೀಕಿಸುವುದು ಸರಿಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಖ್ಯಾತ ಕ್ರಿಕೆಟ್ ಬೌಲರ್ ಶ್ರೀಲಂಕಾದ ಮುತ್ತಯ್ಯ ಮುರುಳೀಧರನ್ ಅವರ ಜೀವನಚರಿತ್ರೆ ಆಧಾರಿತ ಚಲನಚಿತ್ರ “800” ನಿರ್ಮಾಣವಾಗುತ್ತಿದ್ದು, ತಮಿಳಿನ ಪ್ರತಿಭಾವಂತ ನಟ ವಿಜಯ್ ಸೇತುಪತಿ ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ವಿಜಯ್ ಸೇತುಪತಿ ಮತ್ತು ಮುತ್ತಯ್ಯ ಮುರುಳೀಧರನ್ ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಆದರೆ ಇದರ ನಡುವೆಯೇ ಕೆಲವರು ಇದನ್ನು ವಿರೋಧಿಸಿ, ವಿಜಯ್ ಸೇತುಪತಿ ಈ ಸಿನಿಮಾವನ್ನು ಒಪ್ಪಿಕೊಂಡಿರುವುದಕ್ಕೆ, ಅವರನ್ನು ಮತ್ತು ಈ ಸಿನಿಮಾವನ್ನು ಬಹಿಷ್ಕರಿಸಬೇಕು ಎಂಬ ಅಭಿಯಾನವನ್ನು ಕೈಗೊಂಡಿದ್ದಾರೆ.

ನಿನ್ನೆ 800 ಚಿತ್ರದ ಫಸ್ಟ್‌ಲುಕ್ ಬಿಡುಗಡೆಯಾಗಿದ್ದು, ಇದಕ್ಕೆ ಸಾಕಷ್ಟು ಮೆಚ್ಚುಗೆಯೂ ವ್ಯಕ್ತವಾಗುತ್ತಿದೆ. ಇದನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಇದ್ದಕ್ಕಿದ್ದಂತೆ ಸಾಧ್ಯವಿಲ್ಲ: ’ಬಾಯ್ಕಾಟ್ ಚೀನಾ’ ಅಭಿಯಾನಕ್ಕೆ ಕ್ರೀಡಾ ಕ್ಷೇತ್ರದ ವಿರೋಧವೇಕೆ?

ಇದಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್‌ನಲ್ಲಿ #ShameOnVijaySethupathi ಟ್ರೆಂಡಿಂಗ್ ಆಗುತ್ತಿದ್ದು, ಇದಕ್ಕೆ ತದ್ವಿರುದ್ಧವಾಗಿ ಹಲವಾರು ಜನರು #WeSupportVijaySethupathi ಎಂದು ನಟನ ಪರವಾಗಿ ದನಿಯೆತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಇದರ ಕುರಿತು ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

“ಬ್ರಿಟಿಷರ ವಿರುದ್ಧ ತೀವ್ರ ಹೋರಾಟ ಮಾಡಿದ ಗಾಂಧಿಯವರ ಚಿತ್ರವನ್ನು ಹಾಲಿವುಡ್‌ನಲ್ಲಿ ನಿರ್ಮಿಸಲಾಗಿದೆ. ಅದಕ್ಕಿಲ್ಲದ ವಿರೋಧ ಈ ಚಿತ್ರಕ್ಕೆ ಯಾಕೆ ಎಂದು ಕೆಲವರು ಪ್ರಶ್ನಿಸಿದ್ದಾರೆ. ಶ್ರೀಲಂಕಾದ ರಾವಣನ ಪಾತ್ರವನ್ನು ಭಾರತದಲ್ಲಿ ಅನೇಕರು ಅಭಿನಯಿಸಿದ್ದಾರೆ. ಅಂದ ಮಾತ್ರಕ್ಕೆ ಅವರ ಚಿತ್ರವನ್ನು ಅಥವಾ ನಟನನ್ನು ಬಹಿಷ್ಕರಿಸಲು ಸಾಧ್ಯವೇ? ವಿಜಯ್ ಸೇತುಪತಿ ಒಬ್ಬ ನಟ ಅಷ್ಟೆ. ಆತನಿಗೆ ಎಲ್ಲಾ ಪಾತ್ರಗಳನ್ನೂ ಅಭಿನಯಿಸಲು ಸ್ವಾತಂತ್ರವಿದೆ. ಅದು ಕೇವಲ ಪಾತ್ರವಷ್ಟೆ” ಎಂದು ಇನ್ನೂ ಕೆಲವರು ವಿಜಯ್ ಸೇತುಪತಿ ಪರವಾಗಿ ಮಾತನಾಡಿದ್ದಾರೆ.

ಮುತ್ತಯ್ಯ ಮುರುಳೀಧರನ್ ಒಬ್ಬ ಕ್ರೀಡಾಪಟು. ಆತ ರಾಜಕಾರಣಿಯಲ್ಲ. ಅವರ ಯಾವುದೋ ಹೇಳಿಕೆಯನ್ನೇ ಕಾರಣ ಮಾಡಿಕೊಂಡು ಈ ಚಿತ್ರವನ್ನು ಮತ್ತು ಇಲ್ಲಿ ನಟಿಸುತ್ತಿರುವವರನ್ನು ಟೀಕಿಸುವುದು ಸರಿಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಅದಾಗ್ಯೂ, ಈ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿರುವುದೇಕೆ? ವಿಜಯ್ ಸೇತುಪತಿ ಮತ್ತು ಸಿನಿಮಾವನ್ನು ಬಹಿಷ್ಕರಿಸುವಂತೆ ಕರೆ ನೀಡುತ್ತಿರುವುದೇಕೆ? ಇದರ ಹಿಂದಿನ ರಾಜಕೀಯ ಏನಿರಬಹುದು?

ಇದನ್ನೂ ಓದಿ:“ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಮುತ್ತಯ್ಯ ಮುರುಳೀಧರನ್ ಮೂಲತಃ ತಮಿಳು ಮಾತನಾಡುವ ಶ್ರೀಲಂಕಾದವರಾಗಿದ್ದು, ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಆಫ್ ಸ್ಪಿನ್ ಬೌಲಿಂಗ್‌ ಮಾಡುವುದರಲ್ಲಿ ಯಶಸ್ವಿ ಆಟಗಾರರಾಗಿದ್ದಾರೆ. 1996ರಲ್ಲಿ ಶ್ರೀಲಂಕಾ ವಿಶ್ವಕಪ್ ಗೆದ್ದಾಗ ಆ ತಂಡದಲ್ಲಿದ್ದರು. ಟೆಸ್ಟ್‌ ಪಂದ್ಯದಲ್ಲಿ ಅತ್ಯಂತ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮುತ್ತುಯ್ಯ 2ನೇ ಸ್ಥಾನದಲ್ಲಿದ್ದಾರೆ. 2010ರಲ್ಲಿ ನಡೆದ ಐಪಿಎಲ್ 3ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರವಾಗಿ ಆಡಿದ್ದರು. ಆಗ ಚೆನ್ನೈ ಐಪಿಎಲ್‌ ಚಾಂಪಿಯನ್‌ಶಿಪ್ ಪಡೆದುಕೊಂಡಿತ್ತು. ಇಷ್ಟೇ ಅಲ್ಲದೇ ಕ್ರಿಕೆಟ್ ಇತಿಹಾಸದ ದಂತಕಥೆ ಎಂದೇ ಪ್ರಸಿದ್ಧವಾಗಿದ್ದಾರೆ.

ಇಷ್ಟೆಲ್ಲಾ ಕಾರಣಗಳಿದ್ದಾಗ್ಯೂ ತಮಿಳರು ಮುತ್ತಯ್ಯನನ್ನು ವಿರೋಧಿಸುತ್ತಿರುವುದೇಕೆ? ಮುತ್ತಯ್ಯ ಸ್ವತಃ ಶ್ರೀಲಂಕದವರಾಗಿರುವುದರಿಂದ, ತಮಿಳುನಾಡು ಮತ್ತು ಶ್ರೀಲಂಕಾ ನಡುವೆ ಹಲವು ರಾಜಕೀಯ ಬಿಕ್ಕಟ್ಟುಗಳಿರುವುದರಿಂದ ತಮಿಳರು ಈ ಚಿತ್ರವನ್ನು ಬಹಿಷ್ಕರಿಸುತ್ತಿರಬಹುದೇ?

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಟ್ವಿಟ್ಟರ್‌ನಲ್ಲಿ ಮುತ್ತಯ್ಯ ಅವರು ಮಾತನಾಡಿರುವ ಹಳೆಯ ವೀಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದ್ದು, ಅದರಲ್ಲಿ 2009ರ ಶ್ರೀಲಂಕಾದ ಯುದ್ಧ ಮುಗಿದ ದಿನವನ್ನು ತನ್ನ ಜೀವನದಲ್ಲಿ ಪ್ರಮುಖವಾದ ದಿನ ಎಂದು ಹೇಳಿಕೊಂಡಿದ್ದಾರೆ. ಮತ್ತೊಂದು ವೀಡಿಯೋದಲ್ಲಿ, “ಮೊದಲು ನಾನು ಶ್ರೀಲಂಕಾದ ಪ್ರಜೆ, ನಂತರ ತಮಿಳಿನವನು” ಎಂದು ಹೇಳಿದ್ದಾರೆ. ಜೊತೆಗೆ ಮತ್ತೊಂದು ಸಂದರ್ಶನದಲ್ಲಿ ಗೊಟಬಯ ರಾಜಪಕ್ಷೆ ಅವರ ಪರವಾಗಿ ಮುತ್ತಯ್ಯ ಮಾತನಾಡಿದ್ದು, ತಮ್ಮ ರಾಜಕೀಯ ಲಾಭಕ್ಕಾಗಿ ಶ್ರೀಲಂಕಾದಲ್ಲಿ ತಮಿಳರ ಮೇಲೆ ನಡೆದಿದ್ದ ಹತ್ಯಾಕಾಂಡವನ್ನು ಸಮರ್ಥಿಸಿಕೊಳ್ಳುವಂತೆ ಮಾತನಾಡಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಐಡಿಸಿ ಸರ್ವೇ: ಭಾರತಕ್ಕೆ ರಫ್ತಾದ 3.25 ಕೋಟಿ ಸ್ಮಾರ್ಟ್‌ಫೋನ್‌ಗಳಲ್ಲಿ 76% ಚೀನಾದವು!

ಈ ಹಿಂದೆ ಸಲ್ಮಾನ್ ಖಾನ್ ನಟಿಸಿದ್ದ ಭಜರಂಗಿ ಭಾಯ್‌ಜಾನ್ ಚಿತ್ರದಲ್ಲಿ ಮುಸ್ಲಿಂ ಒಬ್ಬ ಆಂಜನೇಯನ ಭಕ್ತನ ಪಾತ್ರ ಮಾಡಿದ್ದಕ್ಕೆ ಆ ಚಿತ್ರವನ್ನು ಬಹಿಷ್ಕರಿಸಬೇಕು ಎಂಬ ಕೂಗೆದ್ದಿತ್ತು. ವಿಶೇಷವೆಂದರೆ ಈ ರೀತಿ ವಿವಾದ ಸೃಷ್ಟಿಸುವುದರಿಂದ ಆ ಸಿನಿಮಾಗಳು ಮತ್ತಷ್ಟು ಚೆನ್ನಾಗಿಯೇ ಪ್ರದರ್ಶನಗೊಳ್ಳುತ್ತವೆ.


ಇದನ್ನೂ ಓದಿ: ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...