HomeUncategorizedಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: '800' ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ಮುತ್ತಯ್ಯ ಮುರುಳೀದರನ್ ಒಬ್ಬ ಕ್ರೀಡಾಪಟು. ಆತ ರಾಜಕಾರಣಿಯಲ್ಲ. ಅವರ ಯಾವುದೋ ಹೇಳಿಕೆಯನ್ನೇ ಕಾರಣ ಮಾಡಿಕೊಂಡು ಈ ಚಿತ್ರವನ್ನು ಮತ್ತು ಇಲ್ಲಿ ನಟಿಸುತ್ತಿರುವವರನ್ನು ಟೀಕಿಸುವುದು ಸರಿಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಖ್ಯಾತ ಕ್ರಿಕೆಟ್ ಬೌಲರ್ ಶ್ರೀಲಂಕಾದ ಮುತ್ತಯ್ಯ ಮುರುಳೀಧರನ್ ಅವರ ಜೀವನಚರಿತ್ರೆ ಆಧಾರಿತ ಚಲನಚಿತ್ರ “800” ನಿರ್ಮಾಣವಾಗುತ್ತಿದ್ದು, ತಮಿಳಿನ ಪ್ರತಿಭಾವಂತ ನಟ ವಿಜಯ್ ಸೇತುಪತಿ ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ವಿಜಯ್ ಸೇತುಪತಿ ಮತ್ತು ಮುತ್ತಯ್ಯ ಮುರುಳೀಧರನ್ ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಆದರೆ ಇದರ ನಡುವೆಯೇ ಕೆಲವರು ಇದನ್ನು ವಿರೋಧಿಸಿ, ವಿಜಯ್ ಸೇತುಪತಿ ಈ ಸಿನಿಮಾವನ್ನು ಒಪ್ಪಿಕೊಂಡಿರುವುದಕ್ಕೆ, ಅವರನ್ನು ಮತ್ತು ಈ ಸಿನಿಮಾವನ್ನು ಬಹಿಷ್ಕರಿಸಬೇಕು ಎಂಬ ಅಭಿಯಾನವನ್ನು ಕೈಗೊಂಡಿದ್ದಾರೆ.

ನಿನ್ನೆ 800 ಚಿತ್ರದ ಫಸ್ಟ್‌ಲುಕ್ ಬಿಡುಗಡೆಯಾಗಿದ್ದು, ಇದಕ್ಕೆ ಸಾಕಷ್ಟು ಮೆಚ್ಚುಗೆಯೂ ವ್ಯಕ್ತವಾಗುತ್ತಿದೆ. ಇದನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಇದ್ದಕ್ಕಿದ್ದಂತೆ ಸಾಧ್ಯವಿಲ್ಲ: ’ಬಾಯ್ಕಾಟ್ ಚೀನಾ’ ಅಭಿಯಾನಕ್ಕೆ ಕ್ರೀಡಾ ಕ್ಷೇತ್ರದ ವಿರೋಧವೇಕೆ?

ಇದಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್‌ನಲ್ಲಿ #ShameOnVijaySethupathi ಟ್ರೆಂಡಿಂಗ್ ಆಗುತ್ತಿದ್ದು, ಇದಕ್ಕೆ ತದ್ವಿರುದ್ಧವಾಗಿ ಹಲವಾರು ಜನರು #WeSupportVijaySethupathi ಎಂದು ನಟನ ಪರವಾಗಿ ದನಿಯೆತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಇದರ ಕುರಿತು ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

“ಬ್ರಿಟಿಷರ ವಿರುದ್ಧ ತೀವ್ರ ಹೋರಾಟ ಮಾಡಿದ ಗಾಂಧಿಯವರ ಚಿತ್ರವನ್ನು ಹಾಲಿವುಡ್‌ನಲ್ಲಿ ನಿರ್ಮಿಸಲಾಗಿದೆ. ಅದಕ್ಕಿಲ್ಲದ ವಿರೋಧ ಈ ಚಿತ್ರಕ್ಕೆ ಯಾಕೆ ಎಂದು ಕೆಲವರು ಪ್ರಶ್ನಿಸಿದ್ದಾರೆ. ಶ್ರೀಲಂಕಾದ ರಾವಣನ ಪಾತ್ರವನ್ನು ಭಾರತದಲ್ಲಿ ಅನೇಕರು ಅಭಿನಯಿಸಿದ್ದಾರೆ. ಅಂದ ಮಾತ್ರಕ್ಕೆ ಅವರ ಚಿತ್ರವನ್ನು ಅಥವಾ ನಟನನ್ನು ಬಹಿಷ್ಕರಿಸಲು ಸಾಧ್ಯವೇ? ವಿಜಯ್ ಸೇತುಪತಿ ಒಬ್ಬ ನಟ ಅಷ್ಟೆ. ಆತನಿಗೆ ಎಲ್ಲಾ ಪಾತ್ರಗಳನ್ನೂ ಅಭಿನಯಿಸಲು ಸ್ವಾತಂತ್ರವಿದೆ. ಅದು ಕೇವಲ ಪಾತ್ರವಷ್ಟೆ” ಎಂದು ಇನ್ನೂ ಕೆಲವರು ವಿಜಯ್ ಸೇತುಪತಿ ಪರವಾಗಿ ಮಾತನಾಡಿದ್ದಾರೆ.

ಮುತ್ತಯ್ಯ ಮುರುಳೀಧರನ್ ಒಬ್ಬ ಕ್ರೀಡಾಪಟು. ಆತ ರಾಜಕಾರಣಿಯಲ್ಲ. ಅವರ ಯಾವುದೋ ಹೇಳಿಕೆಯನ್ನೇ ಕಾರಣ ಮಾಡಿಕೊಂಡು ಈ ಚಿತ್ರವನ್ನು ಮತ್ತು ಇಲ್ಲಿ ನಟಿಸುತ್ತಿರುವವರನ್ನು ಟೀಕಿಸುವುದು ಸರಿಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಅದಾಗ್ಯೂ, ಈ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿರುವುದೇಕೆ? ವಿಜಯ್ ಸೇತುಪತಿ ಮತ್ತು ಸಿನಿಮಾವನ್ನು ಬಹಿಷ್ಕರಿಸುವಂತೆ ಕರೆ ನೀಡುತ್ತಿರುವುದೇಕೆ? ಇದರ ಹಿಂದಿನ ರಾಜಕೀಯ ಏನಿರಬಹುದು?

ಇದನ್ನೂ ಓದಿ:“ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಮುತ್ತಯ್ಯ ಮುರುಳೀಧರನ್ ಮೂಲತಃ ತಮಿಳು ಮಾತನಾಡುವ ಶ್ರೀಲಂಕಾದವರಾಗಿದ್ದು, ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಆಫ್ ಸ್ಪಿನ್ ಬೌಲಿಂಗ್‌ ಮಾಡುವುದರಲ್ಲಿ ಯಶಸ್ವಿ ಆಟಗಾರರಾಗಿದ್ದಾರೆ. 1996ರಲ್ಲಿ ಶ್ರೀಲಂಕಾ ವಿಶ್ವಕಪ್ ಗೆದ್ದಾಗ ಆ ತಂಡದಲ್ಲಿದ್ದರು. ಟೆಸ್ಟ್‌ ಪಂದ್ಯದಲ್ಲಿ ಅತ್ಯಂತ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮುತ್ತುಯ್ಯ 2ನೇ ಸ್ಥಾನದಲ್ಲಿದ್ದಾರೆ. 2010ರಲ್ಲಿ ನಡೆದ ಐಪಿಎಲ್ 3ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರವಾಗಿ ಆಡಿದ್ದರು. ಆಗ ಚೆನ್ನೈ ಐಪಿಎಲ್‌ ಚಾಂಪಿಯನ್‌ಶಿಪ್ ಪಡೆದುಕೊಂಡಿತ್ತು. ಇಷ್ಟೇ ಅಲ್ಲದೇ ಕ್ರಿಕೆಟ್ ಇತಿಹಾಸದ ದಂತಕಥೆ ಎಂದೇ ಪ್ರಸಿದ್ಧವಾಗಿದ್ದಾರೆ.

ಇಷ್ಟೆಲ್ಲಾ ಕಾರಣಗಳಿದ್ದಾಗ್ಯೂ ತಮಿಳರು ಮುತ್ತಯ್ಯನನ್ನು ವಿರೋಧಿಸುತ್ತಿರುವುದೇಕೆ? ಮುತ್ತಯ್ಯ ಸ್ವತಃ ಶ್ರೀಲಂಕದವರಾಗಿರುವುದರಿಂದ, ತಮಿಳುನಾಡು ಮತ್ತು ಶ್ರೀಲಂಕಾ ನಡುವೆ ಹಲವು ರಾಜಕೀಯ ಬಿಕ್ಕಟ್ಟುಗಳಿರುವುದರಿಂದ ತಮಿಳರು ಈ ಚಿತ್ರವನ್ನು ಬಹಿಷ್ಕರಿಸುತ್ತಿರಬಹುದೇ?

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಟ್ವಿಟ್ಟರ್‌ನಲ್ಲಿ ಮುತ್ತಯ್ಯ ಅವರು ಮಾತನಾಡಿರುವ ಹಳೆಯ ವೀಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದ್ದು, ಅದರಲ್ಲಿ 2009ರ ಶ್ರೀಲಂಕಾದ ಯುದ್ಧ ಮುಗಿದ ದಿನವನ್ನು ತನ್ನ ಜೀವನದಲ್ಲಿ ಪ್ರಮುಖವಾದ ದಿನ ಎಂದು ಹೇಳಿಕೊಂಡಿದ್ದಾರೆ. ಮತ್ತೊಂದು ವೀಡಿಯೋದಲ್ಲಿ, “ಮೊದಲು ನಾನು ಶ್ರೀಲಂಕಾದ ಪ್ರಜೆ, ನಂತರ ತಮಿಳಿನವನು” ಎಂದು ಹೇಳಿದ್ದಾರೆ. ಜೊತೆಗೆ ಮತ್ತೊಂದು ಸಂದರ್ಶನದಲ್ಲಿ ಗೊಟಬಯ ರಾಜಪಕ್ಷೆ ಅವರ ಪರವಾಗಿ ಮುತ್ತಯ್ಯ ಮಾತನಾಡಿದ್ದು, ತಮ್ಮ ರಾಜಕೀಯ ಲಾಭಕ್ಕಾಗಿ ಶ್ರೀಲಂಕಾದಲ್ಲಿ ತಮಿಳರ ಮೇಲೆ ನಡೆದಿದ್ದ ಹತ್ಯಾಕಾಂಡವನ್ನು ಸಮರ್ಥಿಸಿಕೊಳ್ಳುವಂತೆ ಮಾತನಾಡಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಐಡಿಸಿ ಸರ್ವೇ: ಭಾರತಕ್ಕೆ ರಫ್ತಾದ 3.25 ಕೋಟಿ ಸ್ಮಾರ್ಟ್‌ಫೋನ್‌ಗಳಲ್ಲಿ 76% ಚೀನಾದವು!

ಈ ಹಿಂದೆ ಸಲ್ಮಾನ್ ಖಾನ್ ನಟಿಸಿದ್ದ ಭಜರಂಗಿ ಭಾಯ್‌ಜಾನ್ ಚಿತ್ರದಲ್ಲಿ ಮುಸ್ಲಿಂ ಒಬ್ಬ ಆಂಜನೇಯನ ಭಕ್ತನ ಪಾತ್ರ ಮಾಡಿದ್ದಕ್ಕೆ ಆ ಚಿತ್ರವನ್ನು ಬಹಿಷ್ಕರಿಸಬೇಕು ಎಂಬ ಕೂಗೆದ್ದಿತ್ತು. ವಿಶೇಷವೆಂದರೆ ಈ ರೀತಿ ವಿವಾದ ಸೃಷ್ಟಿಸುವುದರಿಂದ ಆ ಸಿನಿಮಾಗಳು ಮತ್ತಷ್ಟು ಚೆನ್ನಾಗಿಯೇ ಪ್ರದರ್ಶನಗೊಳ್ಳುತ್ತವೆ.


ಇದನ್ನೂ ಓದಿ: ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...