Homeಕರ್ನಾಟಕಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

2008ರಲ್ಲಿ ಜೆಡಿಎಸ್‍ನಿಂದ ಸ್ಪರ್ಧೆ ಮಾಡಿದ್ದ ಹನುಮಂತರಾಯಪ್ಪ ಅವರ ಮಗಳು ಕುಸುಮಾ ಕಾಂಗ್ರೆಸ್ ಅಭ್ಯರ್ಥಿ! ಇದು ಕಾಂಗ್ರೆಸ್‍ಗೆ ತನ್ನ ಓಟಿನ ಬೇಟೆಯನ್ನು ಮತ್ತಷ್ಟು ಹೆಚ್ಚಿಸಲು ಉಪಯೋಗ ಆಗಬಹುದು ಎಂಬ ಲೆಕ್ಕಾಚಾರ ಕೂಡಾ ಇದೆ.

- Advertisement -
- Advertisement -

ರಾಜ್ಯದ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ವ್ಯಾಪ್ತಿಗೆ ಬರುವ ರಾಜರಾಜೇಶ್ವರಿ ನಗರದಲ್ಲಿ (ಆರ್‌ಆರ್ ನಗರ) ಉಪ ಚುನಾವಣೆ ಘೋಷಣೆಯಾಗಿದೆ. ಮುಂದಿನ ತಿಂಗಳು ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು ನವೆಂಬರ್ 10ಕ್ಕೆ ಫಲಿತಾಂಶ ಘೋಷಣೆಯಾಗಲಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ – ರಾಜ್ಯದ ಮೂರೂ ಪ್ರಮುಖ ಪಕ್ಷಗಳಿಗೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ.

ರಾಜ್ಯದಲ್ಲಿ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿರುವುದಕ್ಕೆ ಕಾರಣ ಬೇರೆಬೇರೆ. ಶಿರಾ ಕ್ಷೇತ್ರದ ಶಾಸಕರಾಗಿದ್ದ ಸತ್ಯನಾರಾಯಣ ಅವರ ಸಾವಿನಿಂದಾಗಿ ಉಪಚುನಾವಣೆ ನಡೆಯುತ್ತಿದ್ದರೆ, ಆರ್‌ಆರ್ ನಗರ ಕ್ಷೇತ್ರದ ಚುನಾವಣೆ ಆಪರೇಷನ್ ಕಮಲದ ಕೃಪೆಯಿಂದ ನಡೆಯುತ್ತಿದೆ. ಹಾಗಾಗಿಯೇ ಆರ್‌ಆರ್ ನಗರ ಕ್ಷೇತ್ರದ ಉಪಚುನಾವಣೆ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ.

ಭೌಗೋಳಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಆರ್‌ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ 2018ರ ಮಾಹಿತಿಯಂತೆ 4,71,459 ಮತದಾರರಿದ್ದಾರೆ. ಕ್ಷೇತ್ರದೊಳಗೆ ಬಿಬಿಎಂಪಿಯ ಒಟ್ಟು ಒಂಬತ್ತು ವಾರ್ಡ್‍ಗಳಿವೆ; ಅದರಲ್ಲಿ ಐದು ವಾರ್ಡ್‍ಗಳನ್ನು ಕಾಂಗ್ರೆಸ್ ಗೆದ್ದಿತ್ತು, ಬಿಜೆಪಿ ಮೂರು ಹಾಗೂ ಜೆಡಿಎಸ್ ಒಂದನ್ನು ಕೊನೆಯ ಬಾರಿ ನಡೆದ ಬಿಬಿಎಂಪಿ ಚುನಾವಣೆಯಲ್ಲಿ ಗೆದ್ದುಕೊಂಡಿದ್ದವು. (ಈಗ ಬಿಬಿಎಂಪಿ ಅವಧಿ ಪೂರ್ಣಗೊಂಡಿದ್ದು ಹೊಸದಾಗಿ ಚುನಾವಣೆ ನಡೆಯಬೇಕಿದೆ)

2008ರಲ್ಲಿ ಬಿಜೆಪಿಯ ಎಂ ಶ್ರೀನಿವಾಸ್ ಇಲ್ಲಿ ಗೆದ್ದಿದ್ದರಾದರೂ ನಂತರ ನಡೆದ ಎರಡು ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ವಿಜಯ ಪತಾಕೆಯನ್ನು ಹಾರಿಸುತ್ತಲೇ ಬಂದಿದೆ. ಕಾಂಗ್ರೆಸ್‍ನಿಂದ ವಿಜಯಿಯಾಗಿದ್ದು ಸಿನಿಮೋದ್ಯಮಿ ಮುನಿರತ್ನ ನಾಯ್ಡು ಅವರೇ ಆರ್‌ಆರ್ ನಗರ ಕ್ಷೇತ್ರದ ಈ ಬಾರಿಯ ಉಪಚುನಾವಣೆಗೆ ನೇರ ಕಾರಣಕರ್ತರು ಎನ್ನಬಹುದು.

ಮೇ 12, 2018ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಜಾಲಹಳ್ಳಿಯ ಅಪಾರ್ಟ್‍ಮೆಂಟ್ ಒಂದರಲ್ಲಿ 10 ಸಾವಿರ ಮತದಾರರ ಗುರುತಿನ ಚೀಟಿ ಸಿಕ್ಕಿ, ಚುನಾವಣಾ ಆಯೋಗ ಆರ್‌ಆರ್ ನಗರ ಕ್ಷೇತ್ರದ ಚುನಾವಣೆಯನ್ನು ಮುಂದೂಡಿತ್ತು. ಇದಾದ ಕೆಲವೇ ದಿನಗಳ ನಂತರ ಚುನಾವಣೆ ನಡೆದು (ಮೇ 28) ಕಾಂಗ್ರೆಸ್‍ನಿಂದ ಮುನಿರತ್ನ ಗೆದ್ದಿದ್ದರೂ, ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಕೆಡವಲು ನಡೆದ ರಾಜಕೀಯ ಆಟದಲ್ಲಿ ಮುನಿರತ್ನ ಬಿಜೆಪಿಗೆ ಗುಳೆ ಹೋಗಿದ್ದರು. ಆಗ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ ಶಾಸಕರಲ್ಲಿ ಮುನಿರತ್ನ ಕೂಡಾ ಒಬ್ಬರು. ಇದರಿಂದಾಗಿ ಇಲ್ಲಿ ಮತ್ತೆ ಚುನಾವಣೆ ನಡೆಯುತ್ತಿದೆ.

88% ಸಾಕ್ಷರತೆಯಿರುವ ಇಲ್ಲಿ ಸಾಮಾನ್ಯವಾಗಿ ಮಧ್ಯಮವರ್ಗದ ಮತ್ತು ಬಡಜನ ಹೆಚ್ಚಿದ್ದಾರೆ ಹಾಗು ಸ್ಲಂಗಳೇ ಅತ್ಯಧಿಕವಾಗಿರುವ ಕ್ಷೇತ್ರ ಇದಾಗಿದೆ. ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ 50% ಆಸುಪಾಸಿನಲ್ಲೇ ಮತದಾನ ಆಗಿರುವ ಈ ಕ್ಷೇತ್ರದಲ್ಲಿ ಈ ಬಾರಿ ಕೊರೊನಾ ಭಯದಿಂದ 30% ರಿಂದ 35% ದಷ್ಟು ಆಸುಪಾಸು ಮತ ಚಲಾವಣೆಯಾಗಬಹುದು ಎನ್ನುತ್ತಾರೆ ರಾಜಕೀಯ ಪರಿಣಿತರು. ಮೊದಲು ಉತ್ತರಹಳ್ಳಿ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿಕೊಂಡಿತ್ತಾದರೂ ಕ್ಷೇತ್ರ ವಿಭಜನೆಯ ನಂತರ ಆರ್‌ಆರ್ ನಗರ ಸ್ವತಂತ್ರ ವಿಧಾನಸಭಾ ಕ್ಷೇತ್ರವಾಗಿದೆ.

ಈಗಾಗಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಕುಸುಮಾ ಹನುಮಂತರಾಯಪ್ಪ ಅವರನ್ನು ಆಯ್ಕೆಮಾಡಿಕೊಂಡು ಪ್ರಚಾರದಲ್ಲಿ ತೊಡಗಿಕೊಂಡಿದೆ. ಬಿಜೆಪಿಯಲ್ಲಿ ಅಭ್ಯರ್ಥಿ ಯಾರೆಂಬ ಗೊಂದಲಗಳು ಮುಗಿದು ಮುನಿರತ್ನ ಅವರಿಗೆ ಕೊನೆಗೂ ಟಿಕೆಟ್ ನೀಡಿದೆ. ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬಣ ಮತ್ತು ಆರೆಸ್ಸೆಸ್ ನಿಯಂತ್ರಿತ ಬಿಎಲ್ ಸಂತೋಷ್ ಬಣಗಳ ನಡುವೆ ಮುನಿರತ್ನ ಅವರಿಗೆ ಟಿಕೆಟ್ ಕೊಡುವುದೆ ಬೇಡವೆ ಎನ್ನುವ ಬಗ್ಗೆ ಮಂಗಳವಾರ ಸಂಜೆಯವರೆಗೂ ಕುತೂಹಲವಿತ್ತು. ಯಡಿಯೂರಪ್ಪನವರು ತಮ್ಮ ಅಭ್ಯರ್ಥಿಯಾಗಿ ಮುನಿರತ್ನರನ್ನು ಶಿಫಾರಸ್ಸು ಮಾಡಿದ್ದರೆ, ಬಿಎಲ್ ಸಂತೋಷ್ ಬಣ ಮುನಿರಾಜು ಗೌಡರನ್ನು ಶಿಫಾರಸ್ಸು ಮಾಡಿದ್ದವು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಬಿಜೆಪಿಯ ಇಬ್ಬರೂ ಟಿಕೆಟ್ ಆಕಾಂಕ್ಷಿಗಳನ್ನು ಕರೆಸಿ, ಯಾರಿಗೆ ನಾಮಪತ್ರ ಒಲಿದರೂ ಪಕ್ಷಕ್ಕಾಗಿ ದುಡಿಯಬೇಕು ಎಂಬ ಕಿವಿಮಾತು ಹೇಳಿ ರಾಜಿಗೆ ಪ್ರಯತ್ನಪಟ್ಟಿರುವ ಸುದ್ದಿಯೂ ಹೊರಹೊಮ್ಮಿತ್ತು.

ಮುನಿರತ್ನ ಕಾಂಗ್ರೆಸ್‌ನಲ್ಲಿ ಶಾಸಕನಾಗಿದ್ದಾಗ ಬಿಬಿಎಂಪಿಯ ಬಿಜೆಪಿ ಕಾರ್ಪೋರೇಟರ್‌ಗಳಿಗೆ ಇನ್ನಿಲ್ಲದಂತೆ ಕಾಡಿದ್ದರು ಎನ್ನುವ ಆರೋಪ ಕೂಡಾ ಇದ್ದವು. 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮುನಿರಾಜು ಗೌಡ ಪಿ.ಎಂ 82,572 ಮತಗಳನನ್ನು ಗಳಿಸಿದ್ದರು. ಆಗ ಮುನಿರತ್ನ 1,08,064 ಮತಗಳನ್ನೂ, ಜೆಡಿಎಸ್ ಅಭ್ಯರ್ಥಿ ಜಿ ಎಚ್ ರಾಮಚಂದ್ರ 60,360 ಮತಗಳನ್ನು ಗಳಿಸಿದ್ದರು. ಬಿಜೆಪಿಯಿಂದ ಮುನಿರತ್ನ ಅವರಿಗೆ ಕೊಟ್ಟರೆ ಬಿಜೆಪಿ ಕಾರ್ಪೋರೇಟರ್‌ಗಳ ಕೆಂಗಣ್ಣಿಗೆ ಗುರಿಯಾಗುವ ಭಯ ಬಿಜೆಪಿ ಹೈಕಮಾಂಡ್ ಗಿತ್ತಾದರೂ ಕೊನೆಗೂ ಯಡಿಯೂರಪ್ಪರ ಕೈಮೇಲಾಗಿದೆ. ಅಷ್ಟೇ ಅಲ್ಲದೆ ಬಿಜೆಪಿಯು ಅತೃಪ್ತರಿಗೆ ಜೆಡಿಎಸ್ ಟಿಕಟ್ ನೀಡುತ್ತದೆ ಎನ್ನುವ ವದಂತಿಗೂ ತೆರೆಬಿದ್ದಿದೆ.

ಜೆಡಿಎಸ್ ಬಿಜೆಪಿಯ ಅಭ್ಯರ್ಥಿಯ ಆಧಾರದಲ್ಲಿ ತನ್ನ ಅಭ್ಯರ್ಥಿ ಆಯ್ಕೆ ಮಾಡುತ್ತದೆ ಎಂಬ ವದಂತಿ ಹರಡಿತ್ತು. ಒಂದು ವೇಳೆ ಬಿಜೆಪಿ ಮುನಿರಾಜು ಅವರಿಗೆ ಟಿಕೆಟ್ ನೀಡಿದರೆ ಜೆಡಿಎಸ್‍ನಿಂದ ಮುನಿರತ್ನ ಅವರಿಗೆ ಟಿಕೆಟ್ ನೀಡಲು ತುದಿಗಾಲಲ್ಲಿ ನಿಂತಿದೆ, ಅದಕ್ಕಾಗಿಯೇ ಜೆಡಿಎಸ್ ತನ್ನ ಅಭ್ಯರ್ಥಿಯ ಹೆಸರು ಘೋಷಿಸಿರಲಿಲ್ಲ ಎನ್ನಲಾಗಿತ್ತು. ಇದೀಗ ಅದಕ್ಕೆ ತೆರೆಬಿದ್ದಿದ್ದು ವಿ. ಕೃಷ್ಣಮೂರ್ತಿ ಅವರಿಗೆ ಜೆಡಿಎಸ್ ಟಿಕೆಟ್ ನೀಡಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ “ನನ್ನ ಹಾಗೂ ಮುನಿರತ್ನ ಮಧ್ಯೆ ಸ್ನೇಹ ಇದೆ. ಆದರೆ ಸ್ನೇಹವೇ ಬೇರೆ, ಚುನಾವಣೆ ಬೇರೆ. ನಾನು ಮತ್ತು ಮುನಿರತ್ನ ಸಿನಿಮಾ ಕ್ಷೇತ್ರದವರು. ಹೀಗಾಗಿ ನಮ್ಮ ನಡುವಿನ ಸ್ನೇಹ ಚುನಾವಣೆ ಸಂದರ್ಭದಲಿ ಅನ್ವಯಿಸಲ್ಲ” ಎಂದು ಹೇಳಿದ್ದಾರೆ.

ಈ ಬಾರಿಯ ವಿಶೇಷವೇನೆಂದರೆ 2008ರಲ್ಲಿ ಜೆಡಿಎಸ್‍ನಿಂದ ಸ್ಪರ್ಧೆ ಮಾಡಿದ್ದ ಹನುಮಂತರಾಯಪ್ಪ ಅವರ ಮಗಳು ಕುಸುಮಾ ಕಾಂಗ್ರೆಸ್ ಅಭ್ಯರ್ಥಿ! ಇದು ಕಾಂಗ್ರೆಸ್‍ಗೆ ತನ್ನ ಓಟಿನ ಬೇಟೆಯನ್ನು ಮತ್ತಷ್ಟು ಹೆಚ್ಚಿಸಲು ಉಪಯೋಗ ಆಗಬಹುದು ಎಂಬ ಲೆಕ್ಕಾಚಾರ ಕೂಡಾ ಇದೆ. ಅಷ್ಟೇ ಅಲ್ಲದೆ ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳು ನಿರ್ಣಾಯಕವಾಗಿದ್ದು, ಕುಸುಮಾ ಅವರು ತಮ್ಮ ಇತ್ತೀಚೆಗಿನ ಸಂದರ್ಶನದಲ್ಲಿ ‘ಒಕ್ಕಲಿಗ ಹೆಣ್ಣು ಮಗಳಾಗಿರುವುದರ ಬಗ್ಗೆ ಹೆಮ್ಮಯಿದೆ’ ಎಂದು ಕೂಡ ಹೇಳಿದ್ದರು.

ಅಲ್ಲದೆ ಕುಸುಮ ಅವರು ದಿವಂಗತ ಜಿಲ್ಲಾಧಿಕಾರಿ ಡಿಕೆ ರವಿಯವರ ಪತ್ನಿಯಾಗಿದ್ದು, ರವಿ ಅವರ ಹೆಸರಿನಲ್ಲಿ ಈ ಹಿಂದೆ ಬಿಜೆಪಿ ರಾಜಕೀಯ ಮಾಡಿತ್ತು. ಅಷ್ಟೇ ಅಲ್ಲದೆ ಸಂಸದೆ ಶೋಭ ಕರಂದ್ಲಾಜೆ, ಕುಸುಮಾ ತಮ್ಮ ಪತಿಯ ಹೆಸರನ್ನು ಬಳಸಬಾರದು ಎಂದು ಡಿಕೆ ರವಿಯ ಬಗೆಗಿನ ಚರ್ಚೆಯನ್ನು ಈಗಾಗಲೇ ಮತ್ತೆ ಮುನ್ನಲೆಗೆ ತಂದಿದ್ದಾರೆ. ಅಕ್ಟೋಬರ್ 16 ರೊಳಗೆ ನಾಮಪತ್ರ ಸಲ್ಲಿಸಬೇಕಾಗಿದ್ದು, ಅ.19 ನಾಮಪತ್ರ ವಾಪಾಸು ಪಡೆಯಲು ಕೊನೆಯ ದಿನಾಂಕವಾಗಿದೆ. ಒಟ್ಟಿನಲ್ಲಿ ಪಕ್ಷಾಂತರದಿಂದ ಸೃಷ್ಟಿಯಾಗಿರುವ ಈ ಉಪಚುನಾವಣೆ ಪ್ರತಿಷ್ಟೆಯ ಕಣವಾಗಿದ್ದು ಇಡೀ ರಾಜ್ಯದ ಗಮನ ಸೆಳೆದಿರುವುದು ನಿಜ.


ಇದನ್ನೂ ಓದಿ: ಉಪಚುನಾವಣೆ: ಆರ್‌.ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...