HomeಮುಖಪುಟTRP ಹಗರಣ: ಎಲ್ಲರಂತೆ ಹೈಕೋರ್ಟ್‌ಗೆ ಹೋಗಿ ಎಂದ ಸುಪ್ರೀಂ, ರಿಪಬ್ಲಿಕ್ ಅರ್ನಾಬ್‌ಗೆ ಮುಖಭಂಗ!

TRP ಹಗರಣ: ಎಲ್ಲರಂತೆ ಹೈಕೋರ್ಟ್‌ಗೆ ಹೋಗಿ ಎಂದ ಸುಪ್ರೀಂ, ರಿಪಬ್ಲಿಕ್ ಅರ್ನಾಬ್‌ಗೆ ಮುಖಭಂಗ!

ಎಲ್ಲಾ ಸಾಮಾನ್ಯ ನಾಗರಿಕರಂತೆ ಸಿಆರ್‌ಪಿಸಿ ಅಡಿಯಲ್ಲಿ ತನಿಖೆ ಎದುರಿಸುತ್ತಿರುವವರು ಹೈಕೋರ್ಟ್‌ಗೆ ಹೋಗಬೇಕು. ನಿಮ್ಮ ಎರಡು ಕಛೇರಿಗಳು ವರ್ಲಿಯಲ್ಲಿದೆ. ನೀವು ಅಲ್ಲಿಗೆ ಹೋಗಿ- ಸುಪ್ರೀಂ

- Advertisement -
- Advertisement -

TRP ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಬೇಕೆಂದು ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್‌ ಗೋಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. “ಸಾಮಾನ್ಯ ನಾಗರೀಕನಂತೆ ನೀವೂ ಹೈಕೋರ್ಟ್‌ಗೆ ಹೊಗಿ” ಎಂದು ಸುಪ್ರೀಂ ಹೇಳಿದೆ.

“ಹೈಕೋರ್ಟ್ ಈಗಾಗಲೇ ಈ ಪ್ರಕರಣವನ್ನು ತೆಗೆದುಕೊಂಡಿದೆ. ಹೈಕೋರ್ಟ್ ಸೂಚಿಸದೇ ಈ ಪ್ರಕರಣವನ್ನು ನಾವು ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲಾ ಸಾಮಾನ್ಯ ನಾಗರಿಕರಂತೆ ಸಿಆರ್‌ಪಿಸಿ ಅಡಿಯಲ್ಲಿ ತನಿಖೆ ಎದುರಿಸುತ್ತಿರುವವರು ಹೈಕೋರ್ಟ್‌ಗೆ ಹೋಗಬೇಕು. ನಿಮ್ಮ ಎರಡು ಕಛೇರಿಗಳು ವರ್ಲಿಯಲ್ಲಿದೆ. ನೀವು ಅಲ್ಲಿಗೆ ಹೋಗಿ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: TRP ತಿರುಚಿದ ಆರೋಪ; ರಿಪಬ್ಲಿಕ್ ಸೇರಿ 3 ಚಾನೆಲ್‌ಗಳ ಮೇಲೆ ತನಿಖೆ!

“ತನಿಖೆಯನ್ನು ವರ್ಗಾಯಿಸಬೇಕೆಂಬ ರಿಪಬ್ಲಿಕ್ ಟಿವಿಯ ಬೇಡಿಕೆ ತಪ್ಪಾಗಿದ್ದು, ಈ ಪ್ರಕರಣದಲ್ಲಿ, ಅರ್ನಾಬ್ ಗೋಸ್ವಾಮಿ (ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ) ಕಾರ್ಯಕ್ರಮಗಳನ್ನು ನಡೆಸಿ ಸಾಕ್ಷಿಯನ್ನು ಬೆದರಿಸುವ ಮೂಲಕ ರಿಪಬ್ಲಿಕ್ ಟಿವಿ ಕಾನೂನು ಪ್ರಕ್ರಿಯೆಯನ್ನು ದುರುಪಯೋಗಪಡಿಕೊಳ್ಳುತ್ತಿದೆ. TRP ಹಗರಣದ ಕುರಿತ ಪೊಲೀಸ್ ತನಿಖೆಯನ್ನು ತಡೆಯಲು ರಿಪಬ್ಲಿಕ್ ಟಿವಿ ಈ ಅರ್ಜಿ ಸಲ್ಲಿಸಿದೆ. ಮಾಧ್ಯಮದ ಈ ನಡೆ, ಮುಕ್ತ ಮತ್ತು ನ್ಯಾಯಯುತ ತನಿಖೆಗೆ ವಿರುದ್ಧವಾಗಿದೆ” ಎಂದು ಮುಂಬೈ ಪೊಲೀಸರು ಕಳೆದ ರಾತ್ರಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಮುಂಗಡ ಅರ್ಜಿಯ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: “ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಇಂದೂ ಮಲ್ಹೋತ್ರಾ ಮತ್ತು ಇಂದಿರಾ ಬ್ಯಾನರ್ಜಿ ಅವರ ಮೂವರು ನ್ಯಾಯಾಧೀಶರ ಪೀಠವು ರಿಪಬ್ಲಿಕ್ ಟಿವಿಯ ಅರ್ಜಿಯನ್ನು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಆಲಿಸಲಿದೆ.

ವಾಕ್‌ಸ್ವಾತಂತ್ರ್ಯದ ಹರಣಕ್ಕೆ ಸಂಬಂಧಿಸಿದಂತೆ ಚಾನೆಲ್ ಹೇಳಿಕೆಯನ್ನು ವಿರೋಧಿಸಿದ ಮುಂಬೈ ಪೊಲೀಸರು, ಸುಪ್ರೀಂಗೆ ಸಲ್ಲಿಸಿದ ಅಫಿಡವಿಟ್ಟಿನಲ್ಲಿ, “ಆರೋಪಿಸಲ್ಪಟ್ಟ ಅಪರಾಧದ ಸಂದರ್ಭದಲ್ಲಿ ವಾಕ್‌ಸ್ವಾತಂತ್ರ್ಯದ ಹಕ್ಕನ್ನು ಬಳಸಲು ಸಾಧ್ಯವಿಲ್ಲ. ಸಂವಿಧಾನದ ಕಲಂ 19(1)ರ ಅಡಿಯಲ್ಲಿನ ವಾಕ್‌ಸ್ವಾತಂತ್ರ್ಯವು ತನಿಖೆಯ ವಿರುದ್ಧದ ಅಸ್ತ್ರವಾಗಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ಈ ಪ್ರಕರಣದಲ್ಲಿ ಬೇರೆ-ಬೇರೆ ಚಾನೆಲ್‌ಗಳ ಹಲವಾರು ಅಧಿಕಾರಿಗಳನ್ನು ಕರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೀಕ್ಷಕರ ಸಂಖ್ಯೆಯನ್ನು ನಿರ್ವಹಿಸುವ ಖಾಸಗಿ ಕಂಪನಿಯಾದ ಹನ್ಸಾ ನೀಡಿದ ದೂರಿನ ಆಧಾರದ ಮೇಲೆ, TRP ಯನ್ನು ತಿರುಚಿದ್ದಾರೆ ಎನ್ನುವ ಪ್ರಕರಣದ ತನಿಖೆ ನಡೆಯುತ್ತಿದೆ.

ಚಾನೆಲ್‌ನ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರು ಮುಂಬೈ ಪೊಲೀಸರ ವಿರುದ್ಧ ಮೊಕದ್ದಮೆ ಹೂಡುವುದಾಗಿ ಹೇಳಿದ್ದು, “ರಿಪಬ್ಲಿಕ್ ಟಿವಿಯನ್ನು ಉಲ್ಲೇಖಿಸಿರುವ ಒಂದೇ ಒಂದು ಬಾರ್ಕ್ (ಬ್ರಾಡ್ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್) ವರದಿಯೂ ಇಲ್ಲ. ಭಾರತದ ಜನರಿಗೆ ಸತ್ಯ ತಿಳಿದಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ವಿಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಪಾರ್ಲೆ-ಜಿ ನಿರ್ಧಾರಕ್ಕೆ ನೆಟ್ಟಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...