Homeಮುಖಪುಟಜ್ಞಾನಪೀಠ ವಿಜೇತ ಮಲಯಾಳಂ ಸಾಹಿತಿ ಅಕ್ಕಿತಂ ಅಚ್ಯುತನ್ ನಂಬೂದಿರಿ (94) ನಿಧನ

ಜ್ಞಾನಪೀಠ ವಿಜೇತ ಮಲಯಾಳಂ ಸಾಹಿತಿ ಅಕ್ಕಿತಂ ಅಚ್ಯುತನ್ ನಂಬೂದಿರಿ (94) ನಿಧನ

ಕೇರಳದ ಪಾಲಕ್ಕಾಡ್ ಜಿಲ್ಲೆಯ ಕುಮಾರನಲ್ಲೂರ್ ಮೂಲದ ಅಕ್ಕಿತಂ, ಬ್ರಿಟಿಷ್ ಆಳ್ವಿಕೆಯ ವಿರುದ್ಧ ಮಹಾತ್ಮ ಗಾಂಧಿ ನೇತೃತ್ವದ ರಾಷ್ಟ್ರೀಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು.

- Advertisement -
- Advertisement -

ಖ್ಯಾತ ಮಲಯಾಳಂ ಕವಿ, ಜ್ಞಾನಪೀಠ ಪ್ರಶಸ್ತಿ ವಿಜೇತ ಅಕ್ಕಿತಂ ಅಚ್ಯುತನ್ ನಂಬೂದಿರಿ ಇಂದು ಬೆಳಿಗ್ಗೆ ನಿಧನರಾದರು. ಅವರ 94 ವಯಸ್ಸಾಗಿತ್ತು. ಅವರು ಕಳೆದ ಕೆಲವು ದಿನಗಳಿಂದ ತ್ರಿಶೂರ್‌ನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು.

ಕೇರಳದ ಪಾಲಕ್ಕಾಡ್ ಜಿಲ್ಲೆಯ ಕುಮಾರನಲ್ಲೂರ್ ಮೂಲದ ಅಕ್ಕಿತಂ, ಬ್ರಿಟಿಷ್ ಆಳ್ವಿಕೆಯ ವಿರುದ್ಧ ಮಹಾತ್ಮ ಗಾಂಧಿ ನೇತೃತ್ವದ ರಾಷ್ಟ್ರೀಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ಅವರು ಕವನ, ಸಣ್ಣ ಕಥೆಗಳು, ನಾಟಕಗಳು, ಅನುವಾದಗಳು ಮತ್ತು ಪ್ರಬಂಧಗಳು ಸೇರಿದಂತೆ 40 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

ಇದನ್ನೂ ಓದಿ: ಈ ಸಲ ಜ್ಞಾನಪೀಠಕ್ಕೆ ಕಾದೈತೆ ಗಂಡಾಂತರ

ಅಕ್ಕಿತಂಗೆ ಕಳೆದ ಸೆಪ್ಟೆಂಬರ್‌ನಲ್ಲಿ ದೇಶದ ಅತ್ಯುನ್ನತ ಸಾಹಿತ್ಯ ಗೌರವವಾದ ಜ್ಞಾನಪೀಠ ಪ್ರಶಸ್ತಿಯನ್ನು ನೀಡಲಾಗಿತ್ತು. ಅವರು ಮಲಯಾಳಂ ಸಾಹಿತ್ಯಕ್ಕಾಗಿ ಜ್ಞಾನಪೀಠ ಪ್ರಶಸ್ತಿ ಪಡೆದ ಆರನೇ ಸಾಹಿತಿಯಾಗಿದ್ದರು.  ಅಷ್ಟೇ ಅಲ್ಲದೆ ಅವರಿಗೆ ಪದ್ಮಶ್ರೀ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ಎಳುತಚ್ಚನ್ ಪ್ರಶಸ್ತಿಗಳನ್ನು ಪಡೆದಿದ್ದರು.

ಅಕ್ಕಿತಂ ಅವರ ಕೃತಿಗಳಲ್ಲಿ ’ಇರುವತಾಮ್ ನೂಟಾಡಿಂಡೆ ಇತಿಹಾಸಂ’, ’ಬಲಿದರಾಶನಂ’ ಮತ್ತು ‘ಧರ್ಮ ಸೂರ್ಯನ್’ ಪ್ರಮುಖವಾಗಿದೆ. ಮಲಯಾಳಂ ಕಾವ್ಯದಲ್ಲಿ ಆಧುನಿಕತಾವಾದವನ್ನು ತಿಳಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ಆನ್ ಮನೋರಮ ಬರೆದಿದೆ.

ಸಾಂಪ್ರದಾಯಿಕ ನಂಬೂದಿರಿ (ಬ್ರಾಹ್ಮಣ) ಕುಟುಂಬದಲ್ಲಿ ಮಾರ್ಚ್ 18, 1926 ರಂದು ಜನಿಸಿದ ಅಕ್ಕಿತಂ ತನ್ನ ಎಂಟನೇ ವಯಸ್ಸಿನಲ್ಲಿ ಮಲಯಾಳಂ ಸಾಹಿತ್ಯಕ್ಕೆ ತನ್ನ ಮೊದಲ ಕವಿತೆಯನ್ನು ಬರೆಯುವ ಮೂಲಕ ಸಾಹಿತ್ಯ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು. ಬಾಲ್ಯದಲ್ಲಿ ಚಿತ್ರಕಲೆ ಮತ್ತು ಸಂಗೀತದಲ್ಲಿ ಆಸಕ್ತಿ ಹೊಂದಿದ್ದರು. ಅವರು ವೇದ, ಇಂಗ್ಲಿಷ್, ಗಣಿತ ಮತ್ತು ತಮಿಳು ಭಾಷೆಯನ್ನು ಅಧ್ಯಯನ ಮಾಡಿದ್ದಾರೆ.

ಕೋಯಿಕೋಡ್‌ನ ಝಾಮೊರಿನ್ ಗುರುವಾಯೂರಪ್ಪನ್ ಕಾಲೇಜಿಗೆ ಸೇರಿಕೊಂಡಿದ್ದ ಅವರು, ಅನಾರೋಗ್ಯದ ಕಾರಣ ಅಧ್ಯಯನ ಕೈಬಿಟ್ಟರು. ನಂತರ ಅವರು ತ್ರಿಶೂರ್ ಮಂಗಳೋದಯಂ ಪ್ರೆಸ್ ಬಿಡುಗಡೆ ಮಾಡುವ ”ಉಣ್ಣಿ ನಂಬೂದಿರಿ”ಗೆ ಮುದ್ರಕ ಮತ್ತು ಪ್ರಕಾಶಕರಾದರು. ನಂತರ ಸಾಮಾಜಿಕ ಸುಧಾರಣೆ ಮತ್ತು ನವೋದಯ ಚಳುವಳಿಗಳಲ್ಲಿ ಪಾಲ್ಗೊಳ್ಳುವುದರ ಜೊತೆಜೊತೆಗೆ ಕವಿ, ಪ್ರಬಂಧಕಾರ ಮತ್ತು ಸಂಪಾದಕರಾಗಿ ಮಾನ್ಯತೆ ಪಡೆದರು. ಅಷ್ಟೇ ಅಲ್ಲದೆ ಯೋಗಕ್ಷೆಮಂ ಮತ್ತು ಮಂಗಳೋದಯಂ ನಿಯತಕಾಲಿಕೆಗಳ ಸಂಪಾದಕೀಯ ಮಂಡಳಿಯ ಸದಸ್ಯರಾಗಿದ್ದರು.

ಅಕ್ಕಿತಂ ಆಲ್ ಇಂಡಿಯಾ ರೇಡಿಯೊದಲ್ಲಿ ಕೆಲಸ ಮಾಡಿ 1985 ರಲ್ಲಿ ನಿವೃತ್ತರಾದರು. ಕೇರಳ ಸಾಹಿತ್ಯ ಅಕಾಡೆಮಿಯ ಉಪಾಧ್ಯಕ್ಷರಾಗಿ ಕೂಡಾ ಇವರು ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ’ಲಂಕೇಶ್ ಮೋಹಕ ರೂಪಕಗಳ ನಡುವೆ’: ಪುಸ್ತಕ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...