Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಬಿಹಾರ ಚುನಾವಣೆಗಾಗಿ ಪ್ರಿಯಾಂಕಾ ಇಂದಿರಾ ಗಾಂಧಿಯವರ ಸೀರೆ ಧರಿಸಿದ್ದಾರೆಯೇ?

ಫ್ಯಾಕ್ಟ್‌ಚೆಕ್: ಬಿಹಾರ ಚುನಾವಣೆಗಾಗಿ ಪ್ರಿಯಾಂಕಾ ಇಂದಿರಾ ಗಾಂಧಿಯವರ ಸೀರೆ ಧರಿಸಿದ್ದಾರೆಯೇ?

2020ರ ಬಿಹಾರ ವಿಧಾನ ಸಭೆ ಚುನಾವಣೆಯ ಪ್ರಯುಕ್ತ ಪ್ರಿಯಾಂಕಾ ಗಾಂಧಿ ತನ್ನ ಅಜ್ಜಿಯ ಸೀರೆಯನ್ನು ಧರಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ಪ್ರಿಯಾಂಕಾ ಗಾಂಧಿ ವಾದ್ರಾ ಕೆಂಪು ಸೀರೆಯುಟ್ಟು, ದೇವಾಲಯದ ಗಂಟೆ ಬಾರಿಸುತ್ತಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಪ್ರಿಯಾಂಕಾ ಅವರು ಬಿಹಾರ ವಿಧಾನಸಭಾ ಚುನಾವಣೆಯ ಕಾರಣಕ್ಕೆ ಇಂದಿರಾಗಾಂಧಿಯವರ ಸೀರೆ ಧರಿಸಿದ್ದಾರೆ ಎಂದು ಈ ಪೋಸ್ಟ್‌ನಲ್ಲಿ ಪ್ರತಿಪಾದಿಸಲಾಗಿದೆ.

“ಬಿಹಾರ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ, ಕಪಾಟಿನಲ್ಲಿದ್ದ ಸೀರೆ ಹೊರಗೆ ಬಂದಿದೆ” ಎಂದು ಈ ಚಿತ್ರವನ್ನು ದೇಶದಾದ್ಯಂತ ಸಾಮಾಜಿಕ ಮಾಧ್ಯಮಗಳಲ್ಲಿ ಇದೇ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತದೆ.

ಫ್ಯಾಕ್ಟ್‌ಚೆಕ್:

ಈ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ, ಇದೇ ಪ್ರತಿಪಾದನೆ ಹೊಂದಿರುವ ಇತ್ತೀಚಿನ ಪೋಸ್ಟ್‌ಗಳು ಮಾತ್ರ ಕಂಡುಬರುತ್ತವೆ. ಆದರೆ, ಪ್ರತಿಪಾದನೆಯಲ್ಲಿ ಬಳಸಲಾದ ಕೆಲವು ಕೀವರ್ಡ್‌ಗಳ ಮೂಲಕ ನಾವು ಹುಡುಕಿದಾಗ, ಇದೇ ಫೋಟೋವನ್ನು ಹಲವು ಪೋಸ್ಟ್‌ಗಳಲ್ಲಿ ಅಕ್ಟೋಬರ್ 2018 ರಲ್ಲಿ ಹಂಚಿಕೊಳ್ಳಲಾಗಿತ್ತು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ನಾವು ಇತರ ಕೀವರ್ಡ್‌ಗಳನ್ನು ಬಳಸಿ ಹುಡುಕಿದಾಗ ಮತ್ತು ಟೈಮ್ ಫಿಲ್ಟರ್ ಬಳಸಿದಾಗ, ಇದೇ ಫೋಟೋವನ್ನು ಫ್ಲಿಕರ್ ವೆಬ್‌ಸೈಟ್‌ನಲ್ಲಿ ‘ಪ್ರೆಸ್‌ಬ್ರೀಫ್.ಇನ್’ ಅಪ್‌ಲೋಡ್ ಮಾಡಿರುವುದು ಕಂಡುಬಂದಿದೆ. ಅಲ್ಲಿ ನೀಡಿರುವ ವಿವರಣೆಯಲ್ಲಿ, 2009 ರ ಏಪ್ರಿಲ್ 12 ರಂದು ಪ್ರಿಯಾಂಕಾ ಗಾಂಧಿ ಅವರು ತಮ್ಮ ಸಹೋದರ ರಾಹುಲ್ ಗಾಂಧಿಯವರ ಚುನಾವಣಾ ಕ್ಷೇತ್ರವಾದ ಅಮೇಥಿಯಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಈ ಫೋಟೋ ತೆಗೆಯಲಾಗಿದೆ. ಇದೇ ರೀತಿಯ ಇತರ ಫೋಟೋಗಳನ್ನು ಇಲ್ಲಿ ಕಾಣಬಹುದು.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಅಲ್ಲದೆ, 2009 ರಲ್ಲಿ ಅವರು ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದ ಫೋಟೋಗಳನ್ನು ‘ಗೆಟ್ಟಿ ಇಮೇಜಸ್’ ಮತ್ತು ‘ಔಟ್‌ಲುಕ್’ ವೆಬ್‌ಸೈಟ್‌ಗಳಲ್ಲಿ ಸಹ ಕಾಣಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕೇಂದ್ರ ಸರ್ಕಾರ ಪ್ರತಿ ಹೆಣ್ಣು ಮಕ್ಕಳಿಗೆ ಮಾಸಿಕ ತಲಾ 2000 ರೂ. ನೀಡುತ್ತಿರುವುದು…

ಪೋಸ್ಟ್ ಮಾಡಿದ ಈ ಫೋಟೋ ಹಳೆಯದಾಗಿದ್ದರೂ, ಪ್ರಿಯಾಂಕಾ ಗಾಂಧಿ ಇತ್ತೀಚೆಗೆ ದೆಹಲಿಯ ವಾಲ್ಮೀಕಿ ದೇವಸ್ಥಾನಕ್ಕೆ ಭೇಟಿ ನೀಡಿ, ಹತ್ರಾಸ್ ಸಂತ್ರಸ್ತರಿಗಾಗಿನ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಅವರ ದೇವಾಲಯದ ಭೇಟಿಗೆ ಸಂಬಂಧಿಸಿದ ಸುದ್ದಿ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು.

ಹಾಗಾಗಿ, ಈ ಫೋಟೊ 2019ರಲ್ಲಿ ಉತ್ತರಪ್ರದೇಶದ ಅಮೇಥಿಯಲ್ಲಿ ತೆಗೆದಿದ್ದು. ಇದಕ್ಕೂ ಮುಂಬರುವ ಬಿಹಾರ ವಿಧಾನ ಸಭಾ ಚುನಾವಣೆಗೂ ಸಂಬಂಧವಿಲ್ಲ. ಒಟ್ಟಾರೆಯಾಗಿ ಹೇಳುವುದಾದರೆ, 2009 ರ ಫೋಟೋವೊಂದನ್ನು ‘ಬಿಹಾರ ವಿಧಾನಸಭಾ ಚುನಾವಣೆಯ ಕಾರಣಕ್ಕೆ ಇಂದಿರಾ ಗಾಂಧಿಯವರ ಸೀರೆಯನ್ನು ಧರಿಸಿದ ಪ್ರಿಯಾಂಕಾ” ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...