Homeಅಂತರಾಷ್ಟ್ರೀಯಬೃಹತ್ ಪ್ರತಿಭಟನೆಗಳ ನಡುವೆ ತುರ್ತು ಪರಿಸ್ಥಿತಿ ಹೇರಿದ ಥೈಲ್ಯಾಂಡ್!

ಬೃಹತ್ ಪ್ರತಿಭಟನೆಗಳ ನಡುವೆ ತುರ್ತು ಪರಿಸ್ಥಿತಿ ಹೇರಿದ ಥೈಲ್ಯಾಂಡ್!

ಥೈಲ್ಯಾಂಡ್ ರಾಜ ಜರ್ಮನಿಯಲ್ಲಿ ವಾಸಿಸುತ್ತಿದ್ದು, ಇತ್ತೀಚೆಗೆ ಕೆಲವು ತಿಂಗಳಿನಿಂದ ಕೇವಲ ಒಂದು ದಿನ ಮಾತ್ರ ದೇಶಕ್ಕೆ ಭೇಟಿ ನೀಡಿದ್ದರು. ಈಗ ಶನಿವಾರ ಬ್ಯಾಂಕಾಕ್‌ಗೆ ಭೇಟಿ ನೀಡಿದ್ದರು.

- Advertisement -
- Advertisement -

ಪ್ರತಿಭಟನಾಕಾರರು ಗುರುವಾರ ಥೈಲ್ಯಾಂಡ್ ಪ್ರಧಾನಮಂತ್ರಿ ಕಛೇರಿಯ ಹೊರಗೆ ಭಾರಿ ಪ್ರಮಾಣದಲ್ಲಿ ಗುಂಪು ಸೇರಿದ್ದರಿಂದ ಮತ್ತು ರಾಜರ ಬೆಂಗಾವಲು ಮೇಲೆ ಮುತ್ತಿಗೆ ಹಾಕಿದ್ದರರಿಂದ ಅಲ್ಲಿನ ಸರ್ಕಾರ ರಾಜ್ಯದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದೆ. ಪೊಲೀಸರು ಮತ್ತು ಸೈನಿಕರು ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನಾ ಆಂದೋಲನವನ್ನು ದಮನಿಸಲು ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

ಮಾಜಿ ಜುಂಟಾ ನಾಯಕ ಪ್ರಧಾನ ಮಂತ್ರಿ ಪ್ರಯುತ್ ಚಾನ್-ಓಚಾ ಮತ್ತು ಹೊಸ ಸಂವಿಧಾನವನ್ನು ಉಚ್ಚಾಟಿಸಲು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ರಾಜ ಮಹಾ ವಾಜಿರಲಾಂಗ್‌ಕಾರ್ನ್‌ನ ರಾಜಪ್ರಭುತ್ವಕ್ಕೆ ಸುಧಾರಣೆಗಳನ್ನೂ ತರಬೇಕೆಂದು ಅವರು ಒತ್ತಾಯಿಸಿದ್ದಾರೆ ಎಂದು ರಾಜ್ಯ ದೂರದರ್ಶನ ವರದಿ ಮಾಡಿದೆ.

ಇದನ್ನೂ ಓದಿ: ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ಥೈಲ್ಯಾಂಡ್‌ನ ರಾಯಲ್ ಗೆಜೆಟ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಪ್ರಕಟಣೆಯಲ್ಲಿ, ರಾಜ ಮಹಾ ವಾಜಿರಲಾಂಗ್‌ಕಾರ್ನ್ ಅವರ ಕುಟುಂಬದ ಸದಸ್ಯರು ಬರುತ್ತಿದ್ದಾಗ ಪ್ರತಿಭಟನಾಕಾರರು, ಮುತ್ತಿಗೆ ಹಾಕಿದ್ದರಿಂದ ರಾಷ್ಟ್ರೀಯ ಭದ್ರತೆ ಮತ್ತು ಆರ್ಥಿಕ ಪರಿಗಣನೆಗಳ ಕಾರಣದಿಂದಾಗಿ ಈ ತುರ್ತು ಪರಿಸ್ಥಿತಿಯ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ಬುಧವಾರ, ಸುಮಾರು 10,000 ಸರ್ಕಾರಿ ವಿರೋಧಿ ಪ್ರತಿಭಟನಾಕಾರರು, ಥಾಯ್ ಸರ್ಕಾರದ ಸ್ಥಾನವಾದ ಸರ್ಕಾರಿ ಭವನಕ್ಕೆ ಮೆರವಣಿಗೆ ಹೊರಟಿದ್ದರು. ನಂತರ ಪ್ರಧಾನಿ ಪ್ರಯುತ್ ಚಾನ್-ಓಚಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಆದರೂ ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಭೇದಿಸಿ ಕಟ್ಟಡವನ್ನು ಸುತ್ತುವರೆದು, ಪ್ರಯುತ್ ಚಾನ್-ಓಚಾ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ಆಂಧ್ರ ಮುಖ್ಯಮಂತ್ರಿಯನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಸುಪ್ರೀಂನಲ್ಲಿ ಅರ್ಜಿ

ಈ ಕ್ರಮಕ್ಕೆ ಸಂಬಂಧಿಸಿದ ಎಲ್ಲಾ ಅಂತರರಾಷ್ಟ್ರೀಯ ಪ್ರಸಾರಗಳನ್ನು “ಟು ವಿಶನ್ಸ್” ಎಂದು ಕರೆಯಲ್ಪಡುವ ಥೈಲ್ಯಾಂಡ್‌ನ ಅತಿದೊಡ್ಡ ಕೇಬಲ್ ಆಪರೇಟರ್ ಸೆನ್ಸಾರ್ ಮಾಡಿರುವುದರಿಂದ ಅದಕ್ಕೆ ಸಂಬಂಧಿಸಿದ ಸುದ್ದಿಗಳು ಜನರಿಗೆ ತಲುಪುತ್ತಿಲ್ಲ.

“ಬ್ಯಾಂಕಾಕ್‌ನಲ್ಲಿ ಅನೇಕ ಗುಂಪುಗಳು ಅಕ್ರಮ ಸಾರ್ವಜನಿಕ ಸಭೆಗಳನ್ನು ಆಹ್ವಾನಿಸಿ ಪ್ರಚೋದನೆ ನೀಡಿವೆ. ರಾಜರ ವಾಹನದ ಮೇಲೆ ಪರಿಣಾಮ ಬೀರುವಂತೆ ವರ್ತಿಸಿದ್ದು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹ ಕೆಲಸಗಳನ್ನು ಮಾಡಿದೆ. ಹಾಗಾಗಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಈ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ಕೊನೆಗೊಳಿಸಲು ತುರ್ತು ಪರಿಸ್ಥಿತಿಯನ್ನು ಪರಿಚಯಿಸುವುದು ಅತ್ಯಂತ ಅವಶ್ಯಕವಾಗಿದೆ” ಎಂದು ರಾಜ್ಯ ದೂರದರ್ಶನದಲ್ಲಿ ಪ್ರಕಟಣೆ ಹೇಳಿದೆ.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣ ಸದ್ಯ ಯಾವ ಹಂತದಲ್ಲಿದೆ?

ಕಳೆದ 3 ತಿಂಗಳಿನಿಂದ ನಡೆಯುತ್ತಿರುವ ಸರ್ಕಾರದ ವಿರುದ್ಧದ ರ್ಯಾಲಿಗಳು ಉಲ್ಬಣಗೊಂಡನಂತರ ಸರ್ಕಾರ ಈ ಕ್ರಮವನ್ನು ಕೈಗೊಂಡು, ಕೆಲವು ಪ್ರತಿಭಟನಾ ನಾಯಕರನ್ನು ಇಂದು ಬಂಧಿಸಿದೆ.

ಥೈಲ್ಯಾಂಡ್ ರಾಜ ಜರ್ಮನಿಯಲ್ಲಿ ವಾಸಿಸುತ್ತಿದ್ದು, ಇತ್ತೀಚೆಗೆ ಕೆಲವು ತಿಂಗಳಿನಿಂದ ಕೇವಲ ಒಂದು ದಿನ ಮಾತ್ರ ದೇಶಕ್ಕೆ ಭೇಟಿ ನೀಡಿದ್ದರು. ಈಗ ಶನಿವಾರ ಬ್ಯಾಂಕಾಕ್‌ಗೆ ಭೇಟಿ ನೀಡಿದ್ದರು. ಆದರೆ ಅಲ್ಲಿನ ಪ್ರಜೆಗಳು ರಾಜ ಧೀರ್ಘಾವಧಿಯವರೆಗೆ ಇಲ್ಲಿಯೇ ಇರಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಉಪಚುನಾವಣೆ: 2 ವರ್ಷದಲ್ಲಿ BJP ಅಭ್ಯರ್ಥಿ ಮುನಿರತ್ನ ಆಸ್ತಿ ದುಪ್ಪಟ್ಟು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...