Homeಅಂತರಾಷ್ಟ್ರೀಯಬೃಹತ್ ಪ್ರತಿಭಟನೆಗಳ ನಡುವೆ ತುರ್ತು ಪರಿಸ್ಥಿತಿ ಹೇರಿದ ಥೈಲ್ಯಾಂಡ್!

ಬೃಹತ್ ಪ್ರತಿಭಟನೆಗಳ ನಡುವೆ ತುರ್ತು ಪರಿಸ್ಥಿತಿ ಹೇರಿದ ಥೈಲ್ಯಾಂಡ್!

ಥೈಲ್ಯಾಂಡ್ ರಾಜ ಜರ್ಮನಿಯಲ್ಲಿ ವಾಸಿಸುತ್ತಿದ್ದು, ಇತ್ತೀಚೆಗೆ ಕೆಲವು ತಿಂಗಳಿನಿಂದ ಕೇವಲ ಒಂದು ದಿನ ಮಾತ್ರ ದೇಶಕ್ಕೆ ಭೇಟಿ ನೀಡಿದ್ದರು. ಈಗ ಶನಿವಾರ ಬ್ಯಾಂಕಾಕ್‌ಗೆ ಭೇಟಿ ನೀಡಿದ್ದರು.

- Advertisement -
- Advertisement -

ಪ್ರತಿಭಟನಾಕಾರರು ಗುರುವಾರ ಥೈಲ್ಯಾಂಡ್ ಪ್ರಧಾನಮಂತ್ರಿ ಕಛೇರಿಯ ಹೊರಗೆ ಭಾರಿ ಪ್ರಮಾಣದಲ್ಲಿ ಗುಂಪು ಸೇರಿದ್ದರಿಂದ ಮತ್ತು ರಾಜರ ಬೆಂಗಾವಲು ಮೇಲೆ ಮುತ್ತಿಗೆ ಹಾಕಿದ್ದರರಿಂದ ಅಲ್ಲಿನ ಸರ್ಕಾರ ರಾಜ್ಯದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದೆ. ಪೊಲೀಸರು ಮತ್ತು ಸೈನಿಕರು ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನಾ ಆಂದೋಲನವನ್ನು ದಮನಿಸಲು ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

ಮಾಜಿ ಜುಂಟಾ ನಾಯಕ ಪ್ರಧಾನ ಮಂತ್ರಿ ಪ್ರಯುತ್ ಚಾನ್-ಓಚಾ ಮತ್ತು ಹೊಸ ಸಂವಿಧಾನವನ್ನು ಉಚ್ಚಾಟಿಸಲು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ರಾಜ ಮಹಾ ವಾಜಿರಲಾಂಗ್‌ಕಾರ್ನ್‌ನ ರಾಜಪ್ರಭುತ್ವಕ್ಕೆ ಸುಧಾರಣೆಗಳನ್ನೂ ತರಬೇಕೆಂದು ಅವರು ಒತ್ತಾಯಿಸಿದ್ದಾರೆ ಎಂದು ರಾಜ್ಯ ದೂರದರ್ಶನ ವರದಿ ಮಾಡಿದೆ.

ಇದನ್ನೂ ಓದಿ: ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ಥೈಲ್ಯಾಂಡ್‌ನ ರಾಯಲ್ ಗೆಜೆಟ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಪ್ರಕಟಣೆಯಲ್ಲಿ, ರಾಜ ಮಹಾ ವಾಜಿರಲಾಂಗ್‌ಕಾರ್ನ್ ಅವರ ಕುಟುಂಬದ ಸದಸ್ಯರು ಬರುತ್ತಿದ್ದಾಗ ಪ್ರತಿಭಟನಾಕಾರರು, ಮುತ್ತಿಗೆ ಹಾಕಿದ್ದರಿಂದ ರಾಷ್ಟ್ರೀಯ ಭದ್ರತೆ ಮತ್ತು ಆರ್ಥಿಕ ಪರಿಗಣನೆಗಳ ಕಾರಣದಿಂದಾಗಿ ಈ ತುರ್ತು ಪರಿಸ್ಥಿತಿಯ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ಬುಧವಾರ, ಸುಮಾರು 10,000 ಸರ್ಕಾರಿ ವಿರೋಧಿ ಪ್ರತಿಭಟನಾಕಾರರು, ಥಾಯ್ ಸರ್ಕಾರದ ಸ್ಥಾನವಾದ ಸರ್ಕಾರಿ ಭವನಕ್ಕೆ ಮೆರವಣಿಗೆ ಹೊರಟಿದ್ದರು. ನಂತರ ಪ್ರಧಾನಿ ಪ್ರಯುತ್ ಚಾನ್-ಓಚಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಆದರೂ ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಭೇದಿಸಿ ಕಟ್ಟಡವನ್ನು ಸುತ್ತುವರೆದು, ಪ್ರಯುತ್ ಚಾನ್-ಓಚಾ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ಆಂಧ್ರ ಮುಖ್ಯಮಂತ್ರಿಯನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಸುಪ್ರೀಂನಲ್ಲಿ ಅರ್ಜಿ

ಈ ಕ್ರಮಕ್ಕೆ ಸಂಬಂಧಿಸಿದ ಎಲ್ಲಾ ಅಂತರರಾಷ್ಟ್ರೀಯ ಪ್ರಸಾರಗಳನ್ನು “ಟು ವಿಶನ್ಸ್” ಎಂದು ಕರೆಯಲ್ಪಡುವ ಥೈಲ್ಯಾಂಡ್‌ನ ಅತಿದೊಡ್ಡ ಕೇಬಲ್ ಆಪರೇಟರ್ ಸೆನ್ಸಾರ್ ಮಾಡಿರುವುದರಿಂದ ಅದಕ್ಕೆ ಸಂಬಂಧಿಸಿದ ಸುದ್ದಿಗಳು ಜನರಿಗೆ ತಲುಪುತ್ತಿಲ್ಲ.

“ಬ್ಯಾಂಕಾಕ್‌ನಲ್ಲಿ ಅನೇಕ ಗುಂಪುಗಳು ಅಕ್ರಮ ಸಾರ್ವಜನಿಕ ಸಭೆಗಳನ್ನು ಆಹ್ವಾನಿಸಿ ಪ್ರಚೋದನೆ ನೀಡಿವೆ. ರಾಜರ ವಾಹನದ ಮೇಲೆ ಪರಿಣಾಮ ಬೀರುವಂತೆ ವರ್ತಿಸಿದ್ದು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹ ಕೆಲಸಗಳನ್ನು ಮಾಡಿದೆ. ಹಾಗಾಗಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಈ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ಕೊನೆಗೊಳಿಸಲು ತುರ್ತು ಪರಿಸ್ಥಿತಿಯನ್ನು ಪರಿಚಯಿಸುವುದು ಅತ್ಯಂತ ಅವಶ್ಯಕವಾಗಿದೆ” ಎಂದು ರಾಜ್ಯ ದೂರದರ್ಶನದಲ್ಲಿ ಪ್ರಕಟಣೆ ಹೇಳಿದೆ.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣ ಸದ್ಯ ಯಾವ ಹಂತದಲ್ಲಿದೆ?

ಕಳೆದ 3 ತಿಂಗಳಿನಿಂದ ನಡೆಯುತ್ತಿರುವ ಸರ್ಕಾರದ ವಿರುದ್ಧದ ರ್ಯಾಲಿಗಳು ಉಲ್ಬಣಗೊಂಡನಂತರ ಸರ್ಕಾರ ಈ ಕ್ರಮವನ್ನು ಕೈಗೊಂಡು, ಕೆಲವು ಪ್ರತಿಭಟನಾ ನಾಯಕರನ್ನು ಇಂದು ಬಂಧಿಸಿದೆ.

ಥೈಲ್ಯಾಂಡ್ ರಾಜ ಜರ್ಮನಿಯಲ್ಲಿ ವಾಸಿಸುತ್ತಿದ್ದು, ಇತ್ತೀಚೆಗೆ ಕೆಲವು ತಿಂಗಳಿನಿಂದ ಕೇವಲ ಒಂದು ದಿನ ಮಾತ್ರ ದೇಶಕ್ಕೆ ಭೇಟಿ ನೀಡಿದ್ದರು. ಈಗ ಶನಿವಾರ ಬ್ಯಾಂಕಾಕ್‌ಗೆ ಭೇಟಿ ನೀಡಿದ್ದರು. ಆದರೆ ಅಲ್ಲಿನ ಪ್ರಜೆಗಳು ರಾಜ ಧೀರ್ಘಾವಧಿಯವರೆಗೆ ಇಲ್ಲಿಯೇ ಇರಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಉಪಚುನಾವಣೆ: 2 ವರ್ಷದಲ್ಲಿ BJP ಅಭ್ಯರ್ಥಿ ಮುನಿರತ್ನ ಆಸ್ತಿ ದುಪ್ಪಟ್ಟು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...