Homeಅಂತರಾಷ್ಟ್ರೀಯಬೃಹತ್ ಪ್ರತಿಭಟನೆಗಳ ನಡುವೆ ತುರ್ತು ಪರಿಸ್ಥಿತಿ ಹೇರಿದ ಥೈಲ್ಯಾಂಡ್!

ಬೃಹತ್ ಪ್ರತಿಭಟನೆಗಳ ನಡುವೆ ತುರ್ತು ಪರಿಸ್ಥಿತಿ ಹೇರಿದ ಥೈಲ್ಯಾಂಡ್!

ಥೈಲ್ಯಾಂಡ್ ರಾಜ ಜರ್ಮನಿಯಲ್ಲಿ ವಾಸಿಸುತ್ತಿದ್ದು, ಇತ್ತೀಚೆಗೆ ಕೆಲವು ತಿಂಗಳಿನಿಂದ ಕೇವಲ ಒಂದು ದಿನ ಮಾತ್ರ ದೇಶಕ್ಕೆ ಭೇಟಿ ನೀಡಿದ್ದರು. ಈಗ ಶನಿವಾರ ಬ್ಯಾಂಕಾಕ್‌ಗೆ ಭೇಟಿ ನೀಡಿದ್ದರು.

- Advertisement -
- Advertisement -

ಪ್ರತಿಭಟನಾಕಾರರು ಗುರುವಾರ ಥೈಲ್ಯಾಂಡ್ ಪ್ರಧಾನಮಂತ್ರಿ ಕಛೇರಿಯ ಹೊರಗೆ ಭಾರಿ ಪ್ರಮಾಣದಲ್ಲಿ ಗುಂಪು ಸೇರಿದ್ದರಿಂದ ಮತ್ತು ರಾಜರ ಬೆಂಗಾವಲು ಮೇಲೆ ಮುತ್ತಿಗೆ ಹಾಕಿದ್ದರರಿಂದ ಅಲ್ಲಿನ ಸರ್ಕಾರ ರಾಜ್ಯದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದೆ. ಪೊಲೀಸರು ಮತ್ತು ಸೈನಿಕರು ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನಾ ಆಂದೋಲನವನ್ನು ದಮನಿಸಲು ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

ಮಾಜಿ ಜುಂಟಾ ನಾಯಕ ಪ್ರಧಾನ ಮಂತ್ರಿ ಪ್ರಯುತ್ ಚಾನ್-ಓಚಾ ಮತ್ತು ಹೊಸ ಸಂವಿಧಾನವನ್ನು ಉಚ್ಚಾಟಿಸಲು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ರಾಜ ಮಹಾ ವಾಜಿರಲಾಂಗ್‌ಕಾರ್ನ್‌ನ ರಾಜಪ್ರಭುತ್ವಕ್ಕೆ ಸುಧಾರಣೆಗಳನ್ನೂ ತರಬೇಕೆಂದು ಅವರು ಒತ್ತಾಯಿಸಿದ್ದಾರೆ ಎಂದು ರಾಜ್ಯ ದೂರದರ್ಶನ ವರದಿ ಮಾಡಿದೆ.

ಇದನ್ನೂ ಓದಿ: ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ಥೈಲ್ಯಾಂಡ್‌ನ ರಾಯಲ್ ಗೆಜೆಟ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಪ್ರಕಟಣೆಯಲ್ಲಿ, ರಾಜ ಮಹಾ ವಾಜಿರಲಾಂಗ್‌ಕಾರ್ನ್ ಅವರ ಕುಟುಂಬದ ಸದಸ್ಯರು ಬರುತ್ತಿದ್ದಾಗ ಪ್ರತಿಭಟನಾಕಾರರು, ಮುತ್ತಿಗೆ ಹಾಕಿದ್ದರಿಂದ ರಾಷ್ಟ್ರೀಯ ಭದ್ರತೆ ಮತ್ತು ಆರ್ಥಿಕ ಪರಿಗಣನೆಗಳ ಕಾರಣದಿಂದಾಗಿ ಈ ತುರ್ತು ಪರಿಸ್ಥಿತಿಯ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ಬುಧವಾರ, ಸುಮಾರು 10,000 ಸರ್ಕಾರಿ ವಿರೋಧಿ ಪ್ರತಿಭಟನಾಕಾರರು, ಥಾಯ್ ಸರ್ಕಾರದ ಸ್ಥಾನವಾದ ಸರ್ಕಾರಿ ಭವನಕ್ಕೆ ಮೆರವಣಿಗೆ ಹೊರಟಿದ್ದರು. ನಂತರ ಪ್ರಧಾನಿ ಪ್ರಯುತ್ ಚಾನ್-ಓಚಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಆದರೂ ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಭೇದಿಸಿ ಕಟ್ಟಡವನ್ನು ಸುತ್ತುವರೆದು, ಪ್ರಯುತ್ ಚಾನ್-ಓಚಾ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ಆಂಧ್ರ ಮುಖ್ಯಮಂತ್ರಿಯನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಸುಪ್ರೀಂನಲ್ಲಿ ಅರ್ಜಿ

ಈ ಕ್ರಮಕ್ಕೆ ಸಂಬಂಧಿಸಿದ ಎಲ್ಲಾ ಅಂತರರಾಷ್ಟ್ರೀಯ ಪ್ರಸಾರಗಳನ್ನು “ಟು ವಿಶನ್ಸ್” ಎಂದು ಕರೆಯಲ್ಪಡುವ ಥೈಲ್ಯಾಂಡ್‌ನ ಅತಿದೊಡ್ಡ ಕೇಬಲ್ ಆಪರೇಟರ್ ಸೆನ್ಸಾರ್ ಮಾಡಿರುವುದರಿಂದ ಅದಕ್ಕೆ ಸಂಬಂಧಿಸಿದ ಸುದ್ದಿಗಳು ಜನರಿಗೆ ತಲುಪುತ್ತಿಲ್ಲ.

“ಬ್ಯಾಂಕಾಕ್‌ನಲ್ಲಿ ಅನೇಕ ಗುಂಪುಗಳು ಅಕ್ರಮ ಸಾರ್ವಜನಿಕ ಸಭೆಗಳನ್ನು ಆಹ್ವಾನಿಸಿ ಪ್ರಚೋದನೆ ನೀಡಿವೆ. ರಾಜರ ವಾಹನದ ಮೇಲೆ ಪರಿಣಾಮ ಬೀರುವಂತೆ ವರ್ತಿಸಿದ್ದು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹ ಕೆಲಸಗಳನ್ನು ಮಾಡಿದೆ. ಹಾಗಾಗಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಈ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ಕೊನೆಗೊಳಿಸಲು ತುರ್ತು ಪರಿಸ್ಥಿತಿಯನ್ನು ಪರಿಚಯಿಸುವುದು ಅತ್ಯಂತ ಅವಶ್ಯಕವಾಗಿದೆ” ಎಂದು ರಾಜ್ಯ ದೂರದರ್ಶನದಲ್ಲಿ ಪ್ರಕಟಣೆ ಹೇಳಿದೆ.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣ ಸದ್ಯ ಯಾವ ಹಂತದಲ್ಲಿದೆ?

ಕಳೆದ 3 ತಿಂಗಳಿನಿಂದ ನಡೆಯುತ್ತಿರುವ ಸರ್ಕಾರದ ವಿರುದ್ಧದ ರ್ಯಾಲಿಗಳು ಉಲ್ಬಣಗೊಂಡನಂತರ ಸರ್ಕಾರ ಈ ಕ್ರಮವನ್ನು ಕೈಗೊಂಡು, ಕೆಲವು ಪ್ರತಿಭಟನಾ ನಾಯಕರನ್ನು ಇಂದು ಬಂಧಿಸಿದೆ.

ಥೈಲ್ಯಾಂಡ್ ರಾಜ ಜರ್ಮನಿಯಲ್ಲಿ ವಾಸಿಸುತ್ತಿದ್ದು, ಇತ್ತೀಚೆಗೆ ಕೆಲವು ತಿಂಗಳಿನಿಂದ ಕೇವಲ ಒಂದು ದಿನ ಮಾತ್ರ ದೇಶಕ್ಕೆ ಭೇಟಿ ನೀಡಿದ್ದರು. ಈಗ ಶನಿವಾರ ಬ್ಯಾಂಕಾಕ್‌ಗೆ ಭೇಟಿ ನೀಡಿದ್ದರು. ಆದರೆ ಅಲ್ಲಿನ ಪ್ರಜೆಗಳು ರಾಜ ಧೀರ್ಘಾವಧಿಯವರೆಗೆ ಇಲ್ಲಿಯೇ ಇರಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಉಪಚುನಾವಣೆ: 2 ವರ್ಷದಲ್ಲಿ BJP ಅಭ್ಯರ್ಥಿ ಮುನಿರತ್ನ ಆಸ್ತಿ ದುಪ್ಪಟ್ಟು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...