Homeಮುಖಪುಟನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

"ಏಕತ್ವಂ ಕಲ್ಪನೆಯು ಜಾತ್ಯಾತೀತ ಭಾರತವನ್ನು ಆಧರಿಸಿದೆ. ನೀವು ಈ ಜಾಹೀರಾತಿನಲ್ಲಿ ನೋಡಿದರೆ, ಅವರು ’ಪುಲಿ ಕುಡಿ’ ತಯಾರಿಸುತ್ತಿದ್ದಾರೆ, ಇದು ಸೀಮಂತ ಸಮಾರಂಭದಲ್ಲಿ ಮಲಯಾಳಿಗಳು ತಯಾರಿಸುವ ನಿರ್ದಿಷ್ಟ ದ್ರವ"

- Advertisement -
- Advertisement -

ಅಂತರ್ ಧರ್ಮೀಯ ಕುಟುಂಬದ ಸೀಮಂತ ಕಾರ್ಯಕ್ರಮದ ಬಗ್ಗೆ ಜಾಹೀರಾತು ಮಾಡಿದ್ದ ತನಿಷ್ಕ್ ಆಭರಣ ಕಂಪನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳ ಬೆನ್ನಲ್ಲೇ ಕಂಪನಿ ಜಾಹೀರಾತನ್ನು ನಿಲ್ಲಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಮಂದಿ ತನಿಷ್ಕ್ನ ಈ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ತನಿಷ್ಕ್ ಜಾಹೀರಾತು ವಿವಾದದ ಬಗ್ಗೆ ಮೊದಲ ಬಾರಿಗೆ ಜಾಹೀರಾತು ನಿರ್ದೇಶಕಿ ಜೊಯೀತಾ ಪಟ್ಪಟಿಯಾ ಪ್ರತಿಕ್ರಿಯೆ ನೀಡಿದ್ದಾರೆ. ’ಸಾಮಾಜಿಕ ಮಾಧ್ಯಮಗಳಲ್ಲಿ ಬಹಳಷ್ಟು ಭಯಾನಕ ಸಂಗತಿಗಳು ನನ್ನ ದಾರಿಯಲ್ಲಿ ಬರುತ್ತಿವೆ. ಆದರೆ ಅವುಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲು ನಾನು ಬಯಸುವುದಿಲ್ಲ ಎಂದಿದ್ದಾರೆ.

ಏಷ್ಯಾ ಮತ್ತು ಯುಕೆಗಳಲ್ಲಿ ಜಾಹೀರಾತುಗಳು, ಮ್ಯೂಸಿಕ್ ವಿಡಿಯೋಗಳನ್ನು ನಿರ್ಮಿಸಿ ಪ್ರಶಸ್ತಿ ಪಡೆದಿರುವ ಈಕೆ, ’ ಈ ಅಭಿಯಾನಕ್ಕೆ ಬರುತ್ತಿರುವ ಪ್ರೀತಿ, ಸುಂದರವಾದ ಕಲಾಕೃತಿಗಳು ಮತ್ತು ಸುಂದರ ಟಿಪ್ಪಣಿಗಳನ್ನು ಹಂಚಿಕೊಳ್ಳುವುದು ಉತ್ತಮ ಎಂದು ಭಾವಿಸುತ್ತೇನೆ’ ಎಂದಿದ್ದಾರೆ.

ತನಿಷ್ಕ್ ಅವರ ‘ಏಕತ್ವಂ’ ಅಭಿಯಾನದ ಚಿತ್ರಕಥೆಯು ಏಕತೆಯ ಪರಿಕಲ್ಪನೆಯಾಗಿದೆ ಮತ್ತು ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಜೊಯೀತಾ ಹೇಳುತ್ತಾರೆ. “ಈ ಅಭಿಯಾನವು ಏಕತೆ ಮತ್ತು ಏಕತೆಯ ಕಲ್ಪನೆಯಿಂದ ಬಂದಿದೆ ಮತ್ತು ಅದಕ್ಕಾಗಿಯೇ ಇದನ್ನು‘ ಏಕತ್ವಂ ’ಎಂದು ಕರೆಯಲಾಗಿದೆ ಎಂದರು.

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಈ ಅಭಿಯಾನ ನಾಲ್ಕು ಚಿತ್ರಗಳ ಅಭಿಯಾನವಾಗಿತ್ತು. ಇವುಗಳ ಸ್ಕ್ರಿಪ್ಟ್‌ಗಳು ಅದ್ಭುತವಾಗಿದ್ದವು. ನಮಗೆ ಅದರಲ್ಲಿ ಯಾವುದೇ ವಿವಾದಾಸ್ಪದ ಅಂಶ ಕಾಣಿಸಲಿಲ್ಲ. ನಮ್ಮ ಧಾರಾವಾಹಿಗಳು ಕೆಲವು ಬಾರಿ ಅತ್ತೆ ಮತ್ತು ಸೊಸೆಯನ್ನು ನಕಾರಾತ್ಮಕ ಅಂಶದಲ್ಲಿ ತೋರಿಸುತ್ತವೆ. ಆದರೆ ಈ ಸ್ಕ್ರಿಪ್ಟ್ ಓದಿದಾಗ ನನಗೆ ಒಂದೇ ಭಾರಿಗೆ ಇಷ್ಟವಾಗಿತ್ತು. ಇಬ್ಬರು ಮಹಿಳೆಯರ ಕಥೆ ಇದು. ಇಬ್ಬರ ನಡುವಿನ ಪ್ರೀತಿಯ ಬಗ್ಗೆ, ಮಹಿಳೆಯ ಅತ್ತೆ ಮತ್ತು ಅತ್ತೆ ಕುಟುಂಬದ ಪ್ರೀತಿಯ ಕಥೆಯಾಗಿತ್ತು ಎನ್ನುತ್ತಾರೆ.

ಜಾಹೀರಾತು ತಯಾರಿಕೆ ಬಗ್ಗೆ ಮಾತನಾಡಿದ ಜೊಯೀತಾ, ’ಏಕತ್ವಂ ಕಲ್ಪನೆಯು ಜಾತ್ಯಾತೀತ ಭಾರತವನ್ನು ಆಧರಿಸಿದೆ. ನೀವು ಈ ಜಾಹೀರಾತಿನಲ್ಲಿ ನೋಡಿದರೆ, ಅವರು ’ಪುಲಿ ಕುಡಿ’ ತಯಾರಿಸುತ್ತಿದ್ದಾರೆ, ಇದು ಸೀಮಂತ ಸಮಾರಂಭದಲ್ಲಿ ಮಲಯಾಳಿಗಳು ತಯಾರಿಸುವ ನಿರ್ದಿಷ್ಟ ದ್ರವ. ನಾವು ಸಂಶೋಧನೆ ಮಾಡಿ ಈ ವಿಚಾರಗಳನ್ನು ತಿಳಿದುಕೊಂಡು ಸಣ್ಣ ಸಣ್ಣ ವಿವರಗಳನ್ನು ಜಾಹೀರಾತಿನಲ್ಲಿ ಇರಿಸಿದ್ದೇವೆ’ ಎಂದಿದ್ದಾರೆ.

’ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರ ನಾವು ಮುಂದೆ ಸಾಗಿದ್ದೇವೆ ಎಂದು ಭಾವಿಸಿದ್ದೇನೆ. ಹಿಂದೆ ಹೋಗುತ್ತಿದ್ದೇವೆ ಎಂದು ಹೇಳುತ್ತಿಲ್ಲ. ಆದರೆ ಕೊಂಚ ಮಟ್ಟದ ಚರ್ಚೆ, ಮಾತುಕತೆಯಾಗಬಹುದು ಎಂದು ಭಾವಿಸಿದ್ದೆವು ಆದರೆ ಈ ಮಟ್ಟದ ದ್ವೇಷ, ವಿಷವನ್ನು ಹೊರಹಾಕಲಾಗಿದೆ. ನಿಜವಾಗಿಯೂ ಇದು ಆಘಾತಕಾರಿಯಾದದ್ದು. ಇದೊಂದು ಟ್ರೋಲ್ ಸೈನ್ಯ’ ಎಂದಿದ್ದಾರೆ.

ಇದನ್ನೂ ಓದಿ: ತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ಜಾಹೀರಾತಿನ ಬಗ್ಗೆ ಕೆಲವು ಆನ್‌ಲೈನ್ ಚರ್ಚೆಗಳಲ್ಲಿ, ಜಾಹೀರಾತಿನಲ್ಲಿ ಹಿಂದೂ ಅಳಿಯನೊಂದಿಗೆ ಮುಸ್ಲಿಂ ವಧುವನ್ನು ತೋರಿಸಿದ್ದರೆ ವಿವಾದವು ನಡೆಯುತ್ತಿರಲಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೊಯೀತಾ ಧರ್ಮಗಳನ್ನು ಅದಲು-ಬದಲು ಮಾಡಿದ್ದರೂ ಈ ಪ್ರತಿಕ್ರಿಯೆಗಳು ಭಿನ್ನವಾಗಿರುತ್ತಿರಲಿಲ್ಲ ಎನ್ನುತ್ತಾರೆ.

’ತನಿಷ್ಕ್ ತಮ್ಮ ಉದ್ಯೋಗಿಗಳು ಮತ್ತು ಮಳಿಗೆಗಳ ಸುರಕ್ಷತೆಗಾಗಿ ಈ ನಿರ್ಧಾರ ತೆಗೆದುಕೊಂಡರು. ನಾವು ಆರ್ಥಿಕ ಬಿಕ್ಕಟ್ಟಿನಲ್ಲಿದ್ದೇವೆ ಮತ್ತು ತನಿಷ್ಕ್ ಹಲವು ಆಭರಣ ಮಳಿಗೆಗಳನ್ನು ಹೊಂದಿದೆ. ಇವುಗಳ ಸುರಕ್ಷತೆ ಮುಖ್ಯ ಹಾಗಾಗಿ ಜಾಹೀರಾತು ವಾಪಸ್ ಪಡೆದಿದ್ದಾರೆ’ ಎಂದರು.

ಜೊಯೀತಾ ಈ ವಿವಾದದ ನಂತರ ತಾನು ಪಡೆಯುತ್ತಿರುವ ಪ್ರೀತಿ ಮತ್ತು ಬೆಂಬಲದ ಕಡೆ ತನ್ನ ಗಮನ ಕೇಂದ್ರಿಕರಿಸಲು ಬಯಸುತ್ತಾರೆ. ಜೊತೆಗೆ ಹೇಳುತ್ತಾರೆ, ಭಾರತದಲ್ಲಿ ಮಾತ್ರವಲ್ಲ, ಪಂಚದಾದ್ಯಂತ ಯಾವಾಗಲೂ ಕೆಟ್ಟ ಸಂಗತಿಗಳು ನಡೆಯುತ್ತಿವೆ. ಪಂಚದಾದ್ಯಂತ ವರ್ಣಭೇದ ನೀತಿ ಇದೆ. ಭಾರತದಲ್ಲಿ ಹಲವಾರು ಸಮುದಾಯಗಳಿವೆ. ಇಲ್ಲಿ ಈಗ ಇದು ಚರ್ಚೆಯ ವಿಷಯವಾಗಿದೆ, ಆದರೆ ಒಂದು ದೇಶವಾಗಿ, ನಾವು ಜಗತ್ತಿಗೆ ದೇಶದ ಒಳ್ಳೆಯ ಭಾಗವನ್ನು ತೋರಿಸಲು ಬಯಸುವುದಿಲ್ಲವೇ..? ಎಂದು ಪ್ರಶ್ನಿಸುತ್ತಾರೆ.

ಜೊತೆಗೆ ನಾವು ಯಾವಾಗಲೂ ಜಾತ್ಯತೀತ ದೇಶದವರಾಗಿದ್ದೇವೆ ಮತ್ತು ನಾವು ಯಾವಾಗಲೂ ಹಾಗೇ ಇರುತ್ತೇವೆ. ಮುಂದಿನ ಪೀಳಿಗೆ ನಾವು ಮಾತನಾಡುತ್ತಿರುವ ವಿಷಯಗಳ ಬಗ್ಗೆ ಬದಲಾವಣೆ ತರುತ್ತದೆ. ಏಕೆಂದರೆ ಯುವ ಪೀಳಿಗೆಯಿಂದ ನನಗೆ ದೊರೆತ ಅದ್ಭುತ ಪ್ರೀತಿ ಮತ್ತು ಬೆಂಬಲ ಅಗಾಧವಾಗಿದೆ” ಎಂದು ಹೇಳುತ್ತಾರೆ ನಿರ್ದೇಶಕಿ.

ತನಿಷ್ಕ್ ಜಾಹೀರಾತಿಗೆ ಅನೇಕ ಜಾಹೀರಾತು ಕಂಪನಿಗಳು ಬೆಂಬಲ ಸೂಚಿಸಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕರು ಏಕತ್ವಂ ಬೆಂಬಲಿಸಿ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ:  ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...